Homeಮುಖಪುಟಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು

- Advertisement -
- Advertisement -

ಕಳೆದ 45 ದಿನಗಳಿಂದ ಮಹಾರಾಷ್ಟ್ರದ ನವಿ ಮುಂಬೈನ ವಾಸಿ ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಲ್ಲಿ ಕರ್ನಾಟಕದ 180ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಗುರುವಾರ ಮಧ್ಯಾಹ್ನದಿಂದ ಉಪವಾಸ ಧರಣಿ ಆರಂಭಿಸಿದ್ದಾರೆ. ಈಗ ಅದೇ ಶಿಬಿರವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸುತ್ತಿರುವುದರಿಂದ ನಮ್ಮನ್ನು ಯಾವಾಗ ನಮ್ಮ ಊರುಗಳಿಗೆ ಕಳಿಸುಲಾಗುತ್ತದೆ ಎಂಬ ಮಾಹಿತಿ ನೀಡಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.

ನಮ್ಮನ್ನು ಚಿಡ್ಕೊ ವಸ್ತುಪ್ರದರ್ಶನ ಕೇಂದ್ರದ ನಿರಾಶ್ರಿತ ಶಿಬಿರದಿಂದ ಬೇರೆಡೆಗೆ ವರ್ಗಾಹಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸರಿಯಲ್ಲಿ. ಬದಲಿಗೆ ಬಸ್‌ ಅಥವಾ ರೈಲು ವ್ಯವಸ್ಥೆ ಮಾಡಿ ನಮ್ಮನ್ನು ನಮ್ಮ ಊರುಗಳಿಗೆ ಕಳಿಸಿಕೊಡಬೇಕು. ನಾವು ಇಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ಲಾಕ್‌ಡೌನ್‌ ಘೋಷಣೆಯಾದಾಗ ಪೊಲೀಸರು ನಮ್ಮನ್ನು ಇಲ್ಲಿಗೆ ಕರೆತಂದಿದ್ದಾರೆ ಎಂದು ಕೆ ರಾಥೋಡ್‌ ಎಂಬುವ ಕಾರ್ಮಿಕರೊಬ್ಬರೂ ಆರೋಪಿಸಿದ್ದಾರೆ ಎಂದು ಟೈಮ್ಸ್‌ ಆಪ್‌ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ವಲಸೆ ಕಾರ್ಮಿಕರಾದ ಹರಿಶ್ಚಂದ್ರ ಜಾಧವ್‌ ಮಾತನಾಡಿ, ಕೆಲ ಆರೋಗ್ಯ ಅಧಿಕಾರಿಗಳು ಈಗಾಗಲೇ ಇಲ್ಲಿ ಕೆಲವು ವೈದ್ಯಕೀಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ನಮ್ಮನ್ನು ನಮ್ಮ ಊರಿಗೆ ಯಾವಾಗ ಕರೆದೊಯ್ಯುತ್ತೇವೆ ಎಂದು ಯಾರೂ ಹೇಳುತ್ತಿಲ್ಲ. ಹಾಗಾಗಿ ನಾವು ಊಟ ಮಾಡುವುದನ್ನು ಬಿಟ್ಟಿದ್ದೇವೆ. ಅವರಿಂದ ಸಮರ್ಪಕ ಉತ್ತರ ಬರುವವರೆಗೂ ಊಟ ಮಾಡುವುದಿಲ್ಲ, ಉಪವಾಸ ಮಾಡುತ್ತೇವೆ ಎಂದಿದ್ದಾರೆ.

ಇಲ್ಲಿರುವ ವಲಸೆ ಕಾರ್ಮಿಕರಿಗೆ ದಿನನಿತ್ಯ ಊಟ ಸರಬರಾಜು ಮಾಡುವ ಇನ್ಫೋಟೆಕ್‌ ಎಂಟರ್‌ಪ್ರೀನರ್‌ ಅಂಡ್‌ ಮ್ಯಾನೇಜಿಂಗ್‌ ಡೈರಕ್ಟರ್‌ ಆಫ್‌ ಇಂಟರ್‌ನೆಟ್‌ ಬ್ರಾಡ್‌ಬ್ಯಾಂಡ್‌ನ ಭೂಪೇಶ್‌ ಗುಪ್ತ ಪ್ರತಿಕ್ರಿಯಿಸಿ, “ಸದ್ಯಕ್ಕೆ 200 ಜನ ಇಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಕರ್ನಾಟಕದವರೆ ಹೆಚ್ಚು. ಅವರು ಸಹಜವಾಗಿ ಯಾವಾಗ ತಮ್ಮೂರಿಗೆ ಹೋಗಬಹುದೆಂಬ ಭರವಸೆಯಲ್ಲಿದ್ದಾರೆ. ಅವರ ಭವಿಷ್ಯ ಅಭದ್ರವಾಗಿದೆ” ಎಂದಿದ್ದಾರೆ.

ಈ ಕಾರ್ಮಿಕರನ್ನು ನವೀ ಮುಂಬೈನ ಮುನಿಸಿಪಲ್‌ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗುತ್ತಿದೆ. ಆದರೆ ಅದರ ಬದಲಿಗೆ ಇವರನ್ನು ತಮ್ಮ ತಮ್ಮ ಸ್ವಗ್ರಾಮಗಳಿಗೆ ಏಕೆ ಕಳಿಸಬಾರದೆಂದು ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಬಹಳ ಚಿಂತಿತರಾಗಿದ್ದಾರೆ ಎಂದು ಭೂಪೇಶ್ ಗುಪ್ತ ತಿಳಿಸಿದ್ದಾರೆ.

ನವಿಮುಂಬೈ ಮುನಿಸಿಪಲ್‌ ಕಾರ್ಪೋರೇಷನ್‌ನ ಕಮಿಷನರ್‌ ಎ.ಬಿ ಮಿಶಲ್‌ “ನಾವು ಇಲ್ಲಿ ಕೋವಿಡ್‌ ಕೇರೆ ಆಸ್ಪತ್ರೆ ಕಟ್ಟುತ್ತೇವೆ. ಇಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಕಾನೂನುರಿತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅನಾರ್ಜಿತ್‌ ಚೌವಾಣ್‌ ಮಾತನಾಡಿ “ಇಲ್ಲಿರುವ ವಲಸೆ ಕಾರ್ಮಿಕರು ಬಡವರು. ಆದಷ್ಟು ಬೇಗ ಅವರನ್ನು ತಮ್ಮ ತಮ್ಮ ಸ್ವಂತ ಊರುಗಳಿಗೆ ಕಳಿಸಿಕೊಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಮೂರನೇ ಬಾರಿ ಲಾಕ್‌ಡೌನ್‌ ಘೋಷಣೆಯಾದಾಗ ಇಲ್ಲಿರುವ ಕಾರ್ಮಿಕರಿಗೆ ತಮಗೆ ಮೋಸ ಮಾಡಲಾಗುತ್ತಿದೆ ಎಂಬ ಭಾವನೆ ಬೆಳೆದಿದೆ. ಇವರನ್ನು ಆದಷ್ಟು ಬೇಗ ಅವರ ಸ್ವಂತ ಊರುಗಳಿಗೆ ಕಳಿಸಕೊಡಬೇಕೆಂದು ನಾನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...