Homeಮುಖಪುಟದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

- Advertisement -
- Advertisement -

ಗುಜರಾತ್ ರಾಜಧಾನಿ ಅಹಮದಾಬಾದ್ ನಗರದಲ್ಲಿ ಹಲವಾರು ನಿವಾಸಿಗಳು ಕೊರೊನ ಲಾಕ್ ಡೌನ್ ಸಂಕಷ್ಟದಿಂದ ಊಟವನ್ನು ಕಡಿಮೆ ಮಾಡಿರುವ ಆತಂಕಕಾರಿ ಅಂಶ ಐಐಎಂಎ ನಡೆಸಿರುವ ಸರ್ವೇಯೊಂದರಿಂದ ಹೊರ ಬಿದ್ದಿದೆ.

ಇಂಡಿಯನ್ ಇನ್ಸ್ಟಿಟೂಟ್ ಆಫ್ ಮ್ಯಾನೇಜ್ಮೆಂಟ್ ಅಹಮದಾಬಾದ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಏಪ್ರಿಲ್ 23 ರಿಂದ ಮೇ 2ರವರೆಗೆ 130 ನಿವಾಸಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸರ್ವೇ ನಡೆಸಿದ್ದು ಶೇಕಡ 60ರಷ್ಟು ನಿವಾಸಿಳಿಗೆ ಆಹಾರ ಪೂರೈಕೆ ಸಮರ್ಪಕವಾಗಿ ಆಗಿಲ್ಲ ಎಂದು ಸರ್ವೇ ಹೇಳಿದೆ.

ಸ್ಯಾಂಪಲ್‌ ಸರ್ವೇಯಲ್ಲಿ ಪಾಲ್ಗೊಂಡ 130 ಜನರಲ್ಲಿ ಶೇಕಡ 54ರಷ್ಟು ನಿವಾಸಿಗಳು ಎರಡು ಹೊತ್ತು ಊಟವನ್ನು ಬಿಡಬೇಕಾಗಿ ಬಂದಿದೆ. ಒಂದು ದಿನದಲ್ಲಿ ಒಂದು ಹೊತ್ತು ಅದು ಮಧ್ಯಾಹ್ನದ ವೇಳೆ ಮಾತ್ರ ಊಟ ಮಾಡುತ್ತಿರುವುದಾಗಿ ಸರ್ವೇಯಲ್ಲಿ ಬಹಿರಂಗವಾಗಿದೆ.

ನಗರದಲ್ಲಿ ಶೇಕಡ 90ರಷ್ಟು ಜನರ ತಿಂಗಳ ಆದಾಯ 19,500 ರೂ ಒಳಗಿದೆ. ಶೇಕಡ 85ರಷ್ಟು ನಿವಾಸಿಗಳಿಗೆ ನಿರಂತರ ಗಳಿಕೆಯೂ ಇಲ್ಲ. ನಿರಂತರ ಆದಾಯವೂ ಇಲ್ಲ. ಅವರ ತಿಂಗಳ ಆದಾಯ 10 ಸಾವಿರ, 15 ಸಾವಿರ ಇದೆ ಎಂದು ವರದಿ ಹೇಳಿದೆ.

ಬಹುತೇಕ ನಿವಾಸಿಗಳು ಬಾಡಿಗೆ, ಶಾಲಾ ಶುಲ್ಕ, ದೂರವಾಣಿ ಶುಲ್ಕ ಮತ್ತು ವಿದ್ಯುತ್ ಶುಲ್ಕ ಪಾವತಿಸುವುದು ಕಷ್ಟವಾಗಿದೆ. ಅಷ್ಟೇ ಅಲ್ಲ ಆಹಾರ ಪದಾರ್ಥಗಳು, ಹಾಲು ತರಕಾರಿ ಸಂಗ್ರಹವೂ ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ವೇ ತಿಳಿಸಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಶೇಕಡ 64ರಷ್ಟು ಆಹಾರ ಧಾನ್ಯಗಳ ಪೂರೈಕೆಯಾಗಿದ್ದರೂ ಅವರೂ ಕೂಡ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ನೆರವಿಗೆ ಯಾರೂ ಬಂದಿಲ್ಲ ಎಂಬುದನ್ನು ಸರ್ವೆ ಬೆಟ್ಟು ಮಾಡಿ ತೋರಿಸಿದೆ.

ಕಳೆದ 8 ವರ್ಷಗಳ ಹಿಂದೆ ಇಡೀ ದೇಶ ಗುಜರಾತ್ ಮಾದರಿ ಅನುಸರಿಸಬೇಕು. ಅಭಿವೃದ್ಧಿಯಲ್ಲಿ ಗುಜರಾತ್ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಬಿಂಬಿಸಲಾಗಿತ್ತು. ಆಗ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಈಗ ಗುಜರಾತ್ ರಾಜಧಾನಿಯಲ್ಲೇ ಸಮಸ್ಯೆಗಳು ಇರುವುದನ್ನು ಸರ್ವೇ ಬಹಿರಂಗಪಡಿಸಿದೆ.


ಇದನ್ನೂ ಓದಿ: ಹಸಿವು, ನೋವಿನಿಂದ ಬಳಲಿದ ಬಿಟ್ಟು ಎಂಬ ಬಾಲಕ ಕೊನೆಗೂ ಮನೆ ಸೇರಿದ ಕತೆ


ಇಂಗ್ಲಿಷ್ ವೆಬ್ಸೈಟ್ ಓದಲು ಇಲ್ಲಿ ಭೇಟಿ ನೀಡಿ

https://gaurilankeshnews.com/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...