Homeಮುಖಪುಟ'ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ' : ಭಗವಾನ್

‘ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ’ : ಭಗವಾನ್

ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

- Advertisement -
- Advertisement -

ದೊರೆ – ಭಗವಾನ್, ಕನ್ನಡ ಚಿತ್ರರಂಗದ ಪ್ರಭಾವಿ ನಿರ್ದೇಶಕದ್ವಯರು. ಸದಭಿರುಚಿಯ ಮತ್ತು ಕಾದಂಬರಿ ಆಧರಿಸಿದ ಚಿತ್ರಗಳ ಟ್ರೆಂಡ್ ಭದ್ರಗೊಳಿಸಿದ ಖ್ಯಾತಿ ಇವರದು. ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

***

ನಿರೂಪಣೆ: ಶಶಿಧರ ಚಿತ್ರದುರ್ಗ

ದೊರೆ ರಾಜ್ ನನಗೆ ಪರಿಚಯವಾಗಿದ್ದು 1956ರಲ್ಲಿ. ಅವರು ಪರಿಚಯದ ನಂತರ ನನ್ನ ಸಿನಿಮಾ ಬದುಕಿಗೆ ಹೊಸ ದಿಕ್ಕು ಸಿಕ್ಕಿತು. ಅಲ್ಲಿಂದ ಮುಂದೆ ಸುಮಾರು ಐದು ದಶಕಗಳ ಕಾಲ ನಾವಿಬ್ಬರು ಆತ್ಮೀಯ ಸ್ನೇಹಿತರಾಗಿದ್ದೆವು. ಸಾಕಷ್ಟು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದರೂ ಎಂದೂ ಇಬ್ಬರ ಮಧ್ಯೆ ಒಡಕು ಬಂದಿಲ್ಲ. ಮೂಲತಃ ಛಾಯಾಗ್ರಾಹಕರಾದ ಅವರಿಗೆ ಕ್ಯಾಮರಾ ಬಗ್ಗೆ ಉತ್ತಮ ಸೆನ್ಸ್ ಇತ್ತು. ಮಿತಭಾಷಿಯಾದ ಅವರಿಗೆ ಓದು ಪ್ರಮುಖ ಹವ್ಯಾಸ. ನಮ್ಮಿಬ್ಬರ ಮಧ್ಯೆ ಸೂಕ್ತ ಹೊಂದಾಣಿಕೆ ಇದ್ದುದರಿಂದಲೇ ನಮ್ಮಿಂದ ಉತ್ತಮ ಮತ್ತು ಯಶಸ್ವೀ ಚಿತ್ರಗಳನ್ನು ನೀಡಲು ಸಾಧ್ಯವಾಯ್ತು ಎಂದು ನಾನು ಭಾವಿಸುತ್ತೇನೆ. 2000ದಲ್ಲಿ ಅವರು ಅಗಲಿದರೂ ನನ್ನ ಭಾಗಕ್ಕೆ ಅವರು ಹೋಗಿಲ್ಲ. ಸದಾ ಜೊತೆಯಲ್ಲೇ ಇದ್ದಾರೆ.

ದೊರೆ ಮೂಲತಃ ಮೈಸೂರಿನವರು. ಅವರ ತಂದೆ ಬಾಬು ನಾಯ್ಡು ದೊಡ್ಡ ಚಿತ್ರಕಲಾವಿದ. ನಗರದ ಮಂಡಿ ಮೊಹಲ್ಲಾದಲ್ಲಿ ಅವರ ಮನೆ. ಗುಬ್ಬಿ ಕಂಪನಿ ಸೇರಿದಂತೆ ಹಲವು ಪ್ರಮುಖ ನಾಟಕ ಕಂಪನಿಗಳಿಗೆ ಅವರು ನಾಟಕದ ಪರದೆಗಳನ್ನು ಬರೆಯುತ್ತಿದ್ದರು. ಅಪ್ಪನ ಚಿತ್ರಕಲೆ ಪುತ್ರ ದೊರೆಗೂ ಬಂದಿತ್ತು. ಓದಿನ ಜೊತೆ ಚಿತ್ರಕಲೆಯಲ್ಲೂ ಅವರು ಪಳಗಿದ್ದರು. ಆರ್ಥಿಕ ಅನುಕೂಲತೆಗಳು ಇಲ್ಲದ್ದರಿಂದ ದೊರೆ ಇಂಟರ್‍ಮೀಡಿಯಟ್‍ಗೆ ಓದು ನಿಲ್ಲಿಸಿದರು. ಆಗ ಅದೇಕೆ ಅವರಿಗೆ ಹಾಗನ್ನಿಸಿತೋ, ಮೈಸೂರಿನಲ್ಲಿದ್ದ ನವಜ್ಯೋತಿ ಶೂಟಿಂಗ್ ಸ್ಟುಡಿಯೋದಲ್ಲಿ ಕೆಲಸ ಕೇಳಲೆಂದು ಹೋದರು. ಅದೃಷ್ಟಕ್ಕೆ ಅಲ್ಲಿ ಛಾಯಾಗ್ರಾಹಕ ಜಾನಕಿರಾಮ್ ತಮ್ಮ ಸಹಾಯಕನಾಗಿ ಕೆಲಸ ಮಾಡುವಂತೆ ದೊರೆ ಅವರಿಗೆ ಅವಕಾಶ ಕಲ್ಪಿಸಿದರು.

ಒಮ್ಮೆ ಪ್ರೇಮ್‍ನಜೀರ್ ಹೀರೋ ಆಗಿ ನಟಿಸುತ್ತಿದ್ದ ಮಲಯಾಳಂ ಚಿತ್ರಕ್ಕೆ ಜಾನಕಿರಾಮ್ ಅವರು ಛಾಯಾಗ್ರಾಹಕರಾಗಿ ಕೆಲಸ ಮಾಡಬೇಕಿತ್ತು. ಆಗ ಜಾನಕಿರಾಮ್ ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಆ ವೇಳೆಗಾಗಲೇ ಕ್ಯಾಮರಾ ಕಲೆಗಳನ್ನು ಅರಗಿಸಿಕೊಂಡಿದ್ದ ದೊರೆ ಅವರನ್ನು ಮಲಯಾಳಂ ಸಿನಿಮಾಗೆ ಕೆಲಸ ಮಾಡಲು ಕಳುಹಿಸಿಕೊಟ್ಟರು. ಅಲ್ಲಿಂದ ಮುಂದೆ ದೊರೆ ಸ್ವತಂತ್ರ್ಯ ಛಾಯಾಗ್ರಾಹಕನಾಗಿ ಗುರುತಿಸಿಕೊಂಡರು. ಮೈಸೂರಿನಲ್ಲಿ ನವಜ್ಯೋತಿ ಸ್ಟುಡಿಯೋದಲ್ಲಿ ಶೂಟಿಂಗ್ ಚಟುವಟಿಕೆಗಳು ಕಡಿಮೆಯಾಗುತ್ತಿದ್ದಂತೆ ದೊರೆ ಮದರಾಸಿಗೆ ತೆರಳಿದರು. ಕನ್ನಡದವರು ಎನ್ನುವ ಅಭಿಮಾನದಿಂದ ಜಿ.ವಿ.ಅಯ್ಯರ್ ತಮ್ಮ ‘ಸೋದರಿ’ ಚಿತ್ರದ ಛಾಯಾಗ್ರಹಣದ ಹೊಣೆಯನ್ನು ದೊರೆ ಹೆಗಲಿಗೆ ಹೊರಿಸಿದರು. ಈ ಚಿತ್ರದೊಂದಿಗೆ ದೊರೆಗೆ ರಾಜಕುಮಾರ್ ಅವರು ಆತ್ಮೀಯರಾದರು.

ದೊರೆ ಛಾಯಾಗ್ರಹಣ ಮಾಡುತ್ತಿದ್ದ ಚಿತ್ರಗಳಿಗೆ ನಾನು ಸಹ ನಿರ್ದೇಶಕನಾಗಿರುತ್ತಿದ್ದೆ. ಸಾಮಾನ್ಯವಾಗಿ ಚಿತ್ರದ ಛಾಯಾಗ್ರಾಹಕ ಮತ್ತು ಸಹನಿರ್ದೇಶಕನ ಮಧ್ಯೆ ಒಳ್ಳೆಯ ಒಡನಾಟ ಇರುತ್ತದೆ. ಅದರಲ್ಲೂ ನಮ್ಮಿಬ್ಬರ ಅಭಿರುಚಿ, ಹವ್ಯಾಸಗಳಲ್ಲೂ ಸಾಮ್ಯತೆಯಿತ್ತು. ಇಬ್ಬರೂ ಸಾಹಿತ್ಯಾಸಕ್ತರೇ. ಇದು ನಮ್ಮಿಬ್ಬರ ಬಾಂಧವ್ಯ ಹೆಚ್ಚಿಸಿತು. ‘ಸಂಧ್ಯಾರಾಗ’, ‘ರಾಜದುರ್ಗದ ರಹಸ್ಯ’ ಚಿತ್ರಗಳಿಗೆ ನಾನು ಸಹನಿರ್ದೇಶಕನಾದರೆ, ಅವರು ಛಾಯಾಗ್ರಾಹಕ. ಮುಂದೆ ಇಬ್ಬರೂ ಸೇರಿ ಏನಾದರೂ ಮಾಡಬೇಕು ಎಂದು ನಿರ್ಧರಿಸಿದೆವು.

ಶೂಟಿಂಗ್ ಇಲ್ಲದಿದ್ದಾಗ ಮದರಾಸಿನಲ್ಲಿ ನಾವಿಬ್ಬರೂ ಸಿನಿಮಾಗಳನ್ನು ವೀಕ್ಷಿಸಲು ಹೋಗುತ್ತಿದ್ದೆವು. ರಾಜಕುಮಾರ್ ಮತ್ತು ವರದಪ್ಪ ಇಬ್ಬರೂ ನಮಗೆ ಜೊತೆಯಾಗುತ್ತಿದ್ದರು. ಒಮ್ಮೆ ಶಾನ್ ಕಾನರಿ ನಟಿಸಿದ್ದ ‘ಡಾ.ನೋ’ ಬಾಂಡ್ ಸಿನಿಮಾ ನೋಡಿದೆವು. ಸಿನಿಮಾ ವೀಕ್ಷಣೆ ನಂತರ ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಮಸಾಲೆ ದೋಸೆ ತಿನ್ನುತ್ತಿದ್ದಾಗ, “ನಾವೇಕೆ ಕನ್ನಡದಲ್ಲಿ ರಾಜಕುಮಾರ್ ಅವರಿಗೆ ಬಾಂಡ್ ಸಿನಿಮಾ ಮಾಡಬಾರದು?” ಎಂದು ಪ್ರಸ್ತಾಪಿಸಿದೆವು. ರಾಜಕುಮಾರ್ ಜೋರಾಗಿ ನಗುತ್ತಾ, “ಇಂಗ್ಲಿಷ್ ಸಿನಿಮಾ ನೋಡಿ ಕನ್ನಡ ಸಿನಿಮಾ ಮಾಡೋಕೆ ಆಗುತ್ತದೆಯೇ? ಎಲ್ಲಾದರೂ ಸಾಧ್ಯವೇ?” ಎಂದರು. “ನೀವು ಹೂ ಅನ್ನಿ. ನಾವು ಮಾಡುತ್ತೀವಿ” ಎಂದು ಆತ್ಮವಿಶ್ವಾಸದಿಂದ ಹೇಳುತ್ತಿದ್ದಂತೆ ರಾಜ್ ಓಕೆ ಎಂದರು. ಆಗ ರೂಪುಗೊಂಡಿದ್ದೇ ‘ಜೇಡರ ಬಲೆ’ ಸಿನಿಮಾ.

ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ,”ಬಾಡದ ಹೂವು’ ಚಿತ್ರೀಕರಣ ಸಂದರ್ಭದಲ್ಲಿ…

ಮುಂದೆ ನಾನು ಮತ್ತು ದೊರೆ ಇಬ್ಬರೂ ಸಾಲು, ಸಾಲು ಚಿತ್ರಗಳನ್ನು ಮಾಡಿದೆವು. ರಾಜಕುಮಾರ್ ಅವರಿಗೇ ಹದಿನಾರು ಸಿನಿಮಾಗಳನ್ನು ಮಾಡಿದೆವು. ದೊರೆ ಅವರ ಬಗ್ಗೆ ರಾಜ್ ಅವರಿಗಂತೂ ವಿಶೇಷ ಅಭಿಮಾನ. ನಮ್ಮ ನಿರ್ದೇಶನದ ಚಿತ್ರವೆಂದರೆ ಅವರು ನಿರಾಳವಾಗಿರುತ್ತಿದ್ದರು. ನಮ್ಮಿಬ್ಬರ ನಿರ್ದೇಶನ, ನಿರ್ಮಾಣದಲ್ಲಿ ನಲವತ್ತು ಸಿನಿಮಾಗಳು ತಯಾರಾಗಿವೆ. ಯಾವುದೇ ಹಂತದಲ್ಲೂ ನಮ್ಮಿಬ್ಬರ ಮಧ್ಯೆ ಮನಸ್ತಾಪ ತಲೆದೋರಿಲ್ಲ. ಪ್ರತಿಯೊಂದು ವಿಚಾರದಲ್ಲಿಯೂ ಪರಸ್ಪರ ಸಲಹೆ, ಸೂಚನೆಗಳೊಂದಿಗೆ ಮುಂದುವರಿಯುತ್ತಿದ್ದೆವು. ಇದರಿಂದಾಗಿ ಒಳ್ಳೆಯ ಸಿನಿಮಾಗಳನ್ನು ಮಾಡಲು ಸಾಧ್ಯವಾಯ್ತು. ಅವರು ಈಗಲೂ ನನ್ನೊಂದಿಗಿದ್ದಾರೆ ಎಂದೇ ನಾನು ಭಾವಿಸಿದ್ದೇನೆ.

ದೊರೆ ಲವ್‍ಸ್ಟೋರಿ

ಎಚ್.ಎಲ್.ಎನ್.ಸಿಂಹ ನಿರ್ದೇಶನದ ’ಅಬ್ಬಾ ಆ ಹುಡುಗಿ’ (1959) ಸಿನಿಮಾ ತಯಾರಾಗುತ್ತಿದ್ದ ಸಂದರ್ಭ. ಮದ್ರಾಸ್‍ನ ವಾಹಿನಿ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಿರ್ದೇಶಕ ಸಿಂಹ ಅವರಿಗೆ ನಾನು ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದೆ. ದೊರೆರಾಜ್ ಚಿತ್ರದ ಕ್ಯಾಮರಾಮನ್. ಈ ಚಿತ್ರದೊಂದಿಗೆ ರಾಜಾಶಂಕರ್ ಮತ್ತು ಲೀಲಾಂಜಲಿ, ನಾಯಕ – ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಆಗಿನ್ನೂ ಛಾಯಾಗ್ರಾಹಣ ಮಾಡುತ್ತಿದ್ದ ದೊರೆ ತಮ್ಮದೇ ಆದ ವಿಶಿಷ್ಟ ಕ್ಯಾಮರಾ ತಂತ್ರಗಳಿಗೆ ಹೆಸರಾಗಿದ್ದರು. ಸ್ಪೆಷಲ್ ಲೈಟಿಂಗ್‍ನಲ್ಲಿ ಅವರು ಸೆರೆಹಿಡಿಯುತ್ತಿದ್ದ ಕ್ಲೋಸ್‍ಅಪ್ ಶಾಟ್‍ಗಳು ಗಮನ ಸೆಳೆಯುತ್ತಿದ್ದವು.

ಚಿತ್ರೀಕರಣ ಆರಂಭವಾಗಿ ಕೆಲವು ದಿನಗಳಾಗಿತ್ತಷ್ಟೆ. ಛಾಯಾಗ್ರಾಹಕ ದೊರೆ, ನೂತನ ನಟಿ ಲೀಲಾಂಜಲಿ ಅವರಲ್ಲಿ ಅನುರಕ್ತರಾಗಿದ್ದರು! ಆಗ ಅವರು ನಟಿಯ ಕ್ಲೋಸ್‍ಅಪ್ ಶಾಟ್‍ಗಳನ್ನು ತೆಗೆದದ್ದೇ ತೆಗೆದದ್ದು!  ನಟಿ ಲೀಲಾಂಜಲಿ ಅವರ ಮನೆ ಮದರಾಸಿನ ಪಟೇಲ್ ಸ್ಟ್ರೀಟ್‍ನಲ್ಲಿತ್ತು. ಸಂಜೆ ಶೂಟಿಂಗ್ ಮುಗಿಯುತ್ತಲೇ ದೊರೆ, ಪಟೇಲ್ ಸ್ಟ್ರೀಟ್‍ನತ್ತ ಹೆಜ್ಜೆ ಹಾಕುತ್ತಿದ್ದರು! ಒಂದಷ್ಟು ದಿನ ಈ ಒನ್‍ವೇ ಪ್ರೀತಿ ಹೀಗೇ ಮುಂದುವರೆಯಿತು. ಅದೊಂದು ದಿನ ದೊರೆ ಧೈರ್ಯ ಮಾಡಿ ಲೀಲಾಂಜಲಿ ಅವರಿಗೆ ತಮ್ಮ ಪ್ರೀತಿ ನಿವೇದಿಸಿಕೊಂಡರು. ಮೈಸೂರಿನ ಸಂಪ್ರದಾಯಸ್ಥ ಕುಟುಂಬದಲ್ಲಿ ಬೆಳೆದವರು ಲೀಲಾಂಜಲಿ. ಅವರಿಗೆ ಕೂಡ ಸಿನಿಮಾದಲ್ಲಿ ಮುಂದುವರೆಯುವುದು ಇಷ್ಟವಿರಲಿಲ್ಲ. ಅಲ್ಲದೆ ದೊರೆಗೆ ಆಗ ಒಳ್ಳೆಯ ಹೆಸರಿತ್ತು. ಒಳ್ಳೆಯ ಘಳಿಗೆಯೊಂದರಲ್ಲಿ ದೊರೆ ಪ್ರೀತಿಯನ್ನು ಲೀಲಾಂಜಲಿ ಒಪ್ಪಿಕೊಂಡರು. ಹಾಗೆ, ಚಿತ್ರೀಕರಣ ಪೂರ್ಣಗೊಳ್ಳುವ ವೇಳೆಗೆ ದೊರೆ ಲವ್‍ಸ್ಟೋರಿಯೂ ಸುಖಾಂತ್ಯಗೊಂಡಿತು.

ಮುಂದೆ ಇವರಿಬ್ಬರಿಗೂ ಮದುವೆ ಮಾಡಿಸಬೇಕಾದ ಜವಾಬ್ದಾರಿ ನಮ್ಮ ಹೆಗಲೇರಿತು. ದೊರೆಗೆ ಮದುವೆ ಮಾಡಿಕೊಳ್ಳುವ ಧೈರ್ಯವೇನೋ ಇತ್ತು. ಆದರೆ ಹಣಕಾಸಿನ ಅನುಕೂಲತೆ ಇರಲಿಲ್ಲ. ಆಗ ನಮಗೆಲ್ಲಾ ಮಾರ್ಗದರ್ಶಕರಾಗಿದ್ದ ನಿರ್ದೇಶಕ ಜಿ.ವಿ.ಅಯ್ಯರ್ ನೆರವಿಗೆ ಧಾವಿಸಿದರು. ಅವರ ನೇತೃತ್ವದಲ್ಲಿ ತಿರುಪತಿಯಲ್ಲಿ ಮದುವೆ ಮಾಡಿಸುವುದೆಂದು ತೀರ್ಮಾನವಾಯ್ತು. ತಿರುಪತಿಯ ಛತ್ರದಲ್ಲಿ ಪುರೋಹಿತರ ಸಮಕ್ಷಮದೊಂದಿಗೆ ದೊರೆ – ಲೀಲಾಂಜಲಿ ವಿವಾಹ ನೆರವೇರಿತು. ’ಅಬ್ಬಾ ಆ ಹುಡುಗಿ’, ನಟಿ ಲೀಲಾಂಜಲಿ ಅವರ ಮೊದಲ ಮತ್ತು ಕಡೆಯ ಚಿತ್ರವಾಯ್ತು. ಮುಂದೆ ದೊರೆ-ಲೀಲಾಂಜಲಿ ಆದರ್ಶ ದಂಪತಿಯಾಗಿ ಬಾಳ್ವೆ ನಡೆಸಿದರು.


ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...