Homeಮುಖಪುಟವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?

ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?

ಕರ್ನಾಟಕದ ಗಂಗಮ್ಮದಿಂದ ಹಿಡಿದು ಮಹಾರಾಷ್ಟ್ರದ ಕನ್ನಡಿಗ ಕಾರ್ಮಿಕರವರೆಗೂ ಜನ ಸಾಯುತ್ತಿದ್ದರೂ ಸರ್ಕಾರ ಕಣ್ಣೆತ್ತಿ ನೋಡುತ್ತಿಲ್ಲ ಏಕೆ? ಇವರು ಈ ಸ್ಥಿತಿಗೆ ಬರಲು ಕಾರಣವೇನು?

- Advertisement -
- Advertisement -

ನಿನ್ನೆ ಒಂದು ಧಾರುಣ ಘಟನೆ ಜರುಗಿತು. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಕಾಲ್ನಡಿಗೆಯಲ್ಲಿ ತಮ್ಮೂರಿಗೆ ಹೊರಟಿದ್ದ 16 ಜನ ವಲಸೆ ಕಾರ್ಮಿಕರು ವಿಶ್ರಾಂತಿಗಾಗಿ ರೈಲ್ವೆ ಹಳಿಯ ಮೇಲೆ ಮಲಗಿದ್ದಾಗ ರೈಲು ಹರಿದು ಎಲ್ಲರ ಪ್ರಾಣ ತೆಗೆಯಿತು. ಲಾಕ್‌ಡೌನ್‌ ಕಾರಣಕ್ಕೆ ರೈಲುಗಳಿಲ್ಲ ಎಂದು ತಿಳಿದು ಕಾಲ್ನಡಿಗೆಯಲ್ಲಿ ಹೊರಟಿದ್ದ ಅವರನ್ನು ಅದೇ ರೈಲು ಹರಿದು ಕೊಂದಿರುವುದು ದುರಾದೃಷ್ಟಕರ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ಭುಗಿಲೆದ್ದಿವೆ. ಕೆಲವು ಜನರು ಅವರೇಕೆ ರೈಲು ಹಳಿಗಳ ಮೇಲೆ ಮಲಗಬೇಕಿತ್ತು? ಎಂಬ ಪ್ರಶ್ನೆಗೆ ಅವರು ನಡೆದು ಹೋಗಬೇಕಾದ ಪರಿಸ್ಥಿತಿ ಏಕೆ ಬಂತು ಎಂಬ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಅವರ ಬಳಿ ಉತ್ತರಗಳಿಲ್ಲ.

ಇನ್ನು ಇವರ ಸಾವು ಆಳುವ ಸರ್ಕಾರಗಳಿಗೆ ದೊಡ್ಡ ಪ್ರಮಾದ ಎನ್ನಿಸಲೇ ಇಲ್ಲ. ಅವರ ಜೀವಕ್ಕೆ ತಲಾ 5 ಲಕ್ಷ ಬೆಲೆ ಕಟ್ಟಿ ಕೈತೊಳೆದುಕೊಂಡಿವೆ. ಅವರ ಸಾವಿಗೆ ಮಮ್ಮಲ ಮರುಗಿದ ನಾವು ಕೂಡ ಒಂದೆರೆಡು ದಿನಗಳಲ್ಲಿ ಅವರನ್ನು ಮರೆತು ಮುಂದಕ್ಕೆ ಹೋಗುತ್ತೇವೆ. ಏಕೀಗೆ? ಅವರ ನೋವು ಆಳುವವರಿಗೆ ತಟ್ಟುವುದಿಲ್ಲ ಏಕೆ? ಈ ಕುರಿತು ಕನಿಷ್ಠ ಯೋಚಿಸಬೇಕಲ್ಲವೇ?

ಇದೊಂದೆ ಘಟನೆಯಲ್ಲ. ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ದೇಶದಲ್ಲಿರುವ ಕೋಟ್ಯಾಂತರ ವಲಸೆ ಕಾರ್ಮಿಕರನ್ನು ಶೋಷಿಸಲಾಗುತ್ತಿದೆ. ಅವರಿಗೆ ಸಮರ್ಪಕ ದಿನಸಿಗಳು, ಊಟ ಸಿಕ್ಕಿಲ್ಲ. ಸರಿ ತಮ್ಮ ಊರಿಗೆ ಹೋಗಲು ಸಾರಿಗೆ ಇಲ್ಲ. ಕರ್ನಾಟಕದ ಗಂಗಮ್ಮದಿಂದ ಹಿಡಿದು ಮಹಾರಾಷ್ಟ್ರದ ಕನ್ನಡಿಗ ಕಾರ್ಮಿಕರವರೆಗೂ ಜನ ಸಾಯುತ್ತಿದ್ದರೂ ಸರ್ಕಾರ ಕಣ್ಣೆತ್ತಿ ನೋಡುತ್ತಿಲ್ಲ ಏಕೆ? ಇವರು ಈ ಸ್ಥಿತಿಗೆ ಬರಲು ಕಾರಣವೇನು?

ರಾಜಕೀಯ ಭಾಗವಹಿಸುವಿಕೆ ತೀರಾ ಕಡಿಮೆ.

ಈ ಕುರಿತು ಯೋಚಿಸಿದಾಗ ನಮಗೆ ಕಾಡುವ ಒಂದು ಪದವೆಂದರೆ ಅದು ವಲಸಿಗ ಎಂಬುದಾಗಿದೆ. ವಲಸಿಗ ಎಂಬ ಪದದ ಅರ್ಥವೇ ನಮ್ಮವನಲ್ಲ ಎಂಬುದಾಗಿದೆ. ವಲಸೆ ಕಾರ್ಮಿಕರ ಈ ಪರಿಸ್ಥಿತಿಯನ್ನ ರಾಜ್ಯಶಾಸ್ತ್ರ ದೃಷ್ಟಿಯಿಂದ ಇಂದ ಅಧ್ಯಯನ ಮಾಡಿದರೆ ಇವರಿಗೆ ನಾವು stateless population ಎಂದು ಕರೆಯುತ್ತೇವೆ. ಅಂದರೆ ಈ ಕಾರ್ಮಿಕರು ನಮ್ಮದೇ ದೇಶದಲ್ಲಿ ಪರಕೀಯರಾಗಿ ಉಳಿದಿದ್ದಾರೆ.

ಈ ಕಾರ್ಮಿಕರು ನಮ್ಮ ದೇಶ ಕಟ್ಟುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿದ್ದಾರೆ. ಇವರಿಲ್ಲದೇ ಅಭಿವೃದ್ದಿ ಎಂಬುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬಡತನದ ಕಾರಣಕ್ಕಾಗಿ ಉದ್ಯೋಗ ಸಿಗದೇ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಬಂದಿರುವ ಇವರು ತಮ್ಮ ರಾಜ್ಯಕ್ಕೂ ಬೇಡವಾಗಿರುತ್ತಾರೆ ಮತ್ತು ತಾವಿರುವ ರಾಜ್ಯದಲ್ಲಿಯೂ ಸಹ ಅನ್ಯರಾಗಿರುತ್ತಾರೆ.

ಇನ್ನು ಬಹುಮುಖ್ಯ ಕಾರಣ ಇವರ ರಾಜಕೀಯ ಭಾಗವಹಿಸುವಿಕೆ ತೀರಾ ಕಡಿಮೆಯಿದೆ. ಇವರುಗಳ ಮತದಾನದ ಗುರುತಿನ ಚೀಟಿ ತಮ್ಮ ಸ್ವಂತ ರಾಜ್ಯದಲ್ಲಿರುತ್ತದೆ. ಆದರೆ ದೂರದ ಇನ್ಯಾವುದೋ ರಾಜ್ಯದಲ್ಲಿ ಕೂಲಿ ಮಾಡಿಕೊಂಡು ಸ್ಲಂಗಳಲ್ಲಿ ವಾಸಿಸುತ್ತಿರುತ್ತಾರೆ. ಚುನಾವಣೆ ಬಂದಾಗ ತಮ್ಮ ಸ್ವಂತ ರಾಜ್ಯಕ್ಕೆ ತೆರಳಿ ಮತದಾನ ಮಾಡುವಷ್ಟ ಶಕ್ತಿ ಅವರಿಗೆ ಇರುವುದಿಲ್ಲ. ಇನ್ನು ಅವರಿರುವ ರಾಜ್ಯಗಳಲ್ಲಿ ಸಹ ಮತದಾನ ಮಾಡಲಾಗುವುದಿಲ್ಲ. ದೇಶದಲ್ಲಿ ಓಟು ಹಾಕುವ ರೈತರ ಬಗ್ಗೆಯೇ ಕಾಳಜಿ ವಹಿಸದ ಸರ್ಕಾರ ಇನ್ನು ಓಟೇ ಹಾಕದ ಇವರ ಮೇಲೆ ನಮ್ಮ ರಾಜಕಾರಣಿಗಳಿಗೆ, ಆಳುವವರಿಗೆ ಕಾಳಜಿ ಬರಲು ಹೇಗೆ ಸಾಧ್ಯ?

ಹೀಗಾಗಿಯೇ ಬೆಂಗಳೂರಿನಲ್ಲಿ ನಡೆದ ಒಂದೆರೆಡು ಘಟನೆಗಳನ್ನು ನೋಡಬೇಕಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಕೋವಿಡ್‌ ಪರಿಹಾರಕ್ಕಾಗಿ ಬಳಸಬಹುದೆಂದು ಸರ್ಕಾರ ತೀರ್ಮಾನಿಸಿತು. ಅದಾದ ನಂತರ ಶಾಸಕರುಗಳ ನೇತೃತ್ವದಲ್ಲಿ ದಿನಸಿ ಮತ್ತಿತರ ಕಿಟ್‌ಗಳನ್ನು ಕೊಡಲು ನಿರ್ಧರಿಸಿದಾಗ ಬೆಂಗಳೂರಿನ ಮಹಾದೇವಪುರದ ಶಾಸಕ ಅರವಿಂದ ಲಿಂಬಾವಳಿಯವರು ಕಿಟ್‌ಗಳ ಮೇಲೆ ತಮ್ಮ ಮತ್ತು ಬಿಜೆಪಿಯ ಭಾವಚಿತ್ರವನ್ನು ಹಾಕಿಸಿಕೊಂಡರು. ಅಷ್ಟು ಮಾತ್ರವಲ್ಲದೇ ಅದನ್ನು ನಿಜಕ್ಕೂ ಅಗತ್ಯವಿದ್ದ ವಲಸೆ ಕಾರ್ಮಿಕರಿಗೆ ಕೊಡುವ ಬದಲು ತಮ್ಮ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಹಂಚಿದರು. ಏಕೆಂದರೆ ಅವರಿಗೆ ಸ್ಪಷ್ಟತೆಯಿದೆ ತನಗೆ ಓಟು ಹಾಕಿರುವವರು ಬಿಜೆಪಿ ಕಾರ್ಯಕರ್ತರೇ ಹೊರತು, ವಲಸೆ ಕಾರ್ಮಿಕರಲ್ಲ ಎಂಬುದಾಗಿದೆ.

ಹಾಗಾಗಿಯೇ ಈ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಹೋಗಲು ರೈಲು ವ್ಯವಸ್ಥೆ ಮಾಡಿದಾಗಲೂ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿತ್ತು. ಆನಂತರ ಉಚಿತವಾದರೂ ಅದೇ ಸಮಯಕ್ಕೆ ಕರ್ನಾಟಕ ಸರ್ಕಾರ ಅವರು ಹೊರಟುಬಿಟ್ಟರೆ ಇಲ್ಲಿ ಚಟುವಟಿಕೆ ನಡೆಸುವುದು ಕಷ್ಟ ಎಂದು ರೈಲುಸೇವೆಯನ್ನೇ ರದ್ದುಗೊಳಿಸಿದರು. ಜನರ ಒತ್ತಡಕ್ಕೆ ಮಣಿದು ಅವರು ರೈಲುಸೇವೆಯನ್ನು ಪುನರ್‌ ಆರಂಭಿಸಿದಾಗ ಜಾರ್ಖಂಡ್‌, ಬಿಹಾರ, ಪಶ್ಚಿಮ ಬಂಗಾಳ ಮತ್ತು ಓಡಿಸ್ಸಾದಂತಹ ರಾಜ್ಯಗಳು ವಲಸೆ ಕಾರ್ಮಿಕರು ಸದ್ಯಕ್ಕೆ ನಮ್ಮ ರಾಜ್ಯಗಳಿಗೆ ಬರುವುದು ಬೇಡ ಎಂದು ರೈಲುಗಳಿಗೆ ಅನುಮತಿ ನಿರಾಕರಿಸಿವೆ.

ಇಲ್ಲಿಯೂ ಅದೇ ವಲಸೆ ನೀತಿ ಕೆಲಸ ಮಾಡಿದೆ. ಇಷ್ಟೊಂದು ದೊಡ್ಡ ಸಂಖ್ಯೆಯ ಕಾರ್ಮಿಕರು ಬಹಳಷ್ಟು ರಾಜ್ಯಗಳಿಂದ ತಮ್ಮ ರಾಜ್ಯಕ್ಕೆ ಒಟ್ಟಿಗೆ ಬಂದರೆ ಅವರನ್ನು ನಿಭಾಯಿಸುವುದು ಹೇಗೆ? ಮೊದಲನೇಯದು ಕೊರೊನಾ ಹರಡುವ ಭಯ. ಎರಡನೆಯದು ಕೊರೊನಾ ನಿಂತರೂ ಅವರಿಗೆ ಅನ್ನ ಆಹಾರ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂಬ ಭಯ ಅವರನ್ನು ಕಾಡುತ್ತಿದೆ. ಅವರೇನಿದ್ದರೂ ನಮಗೆ ಓಟು ಹಾಕುವವರಲ್ಲವಲ್ಲ ಎಂಬ ಅಸಡ್ಡೆ ಬೇರೆ.

ಇದು ರಾಜ್ಯಸರ್ಕಾರಗಳ ಕಥೆಯಾದರೆ ಕೇಂದ್ರ ಸರ್ಕಾರದ್ದು ಅದಕ್ಕಿಂತ ಕ್ರೂರವಾದುದ್ದು. ಲಾಕ್‌ಡೌನ್‌ ಮಾಡಿದಾಗ ಕೇವಲ 4 ಗಂಟೆ ಸಮಯ ಕೊಟ್ಟ ಸರ್ಕಾರ ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ಬಿಡಿಗಾಸನ್ನೂ ಬಿಚ್ಚಲಿಲ್ಲ. ಆಗಲೇ ಹೇಳಿದ ಹಾಗೆ ರೈಲು ದರಕ್ಕೂ ಕಾರ್ಮಿಕರಿಂದ ವಸೂಲಿಗಿಳಿದ ಕೇಂದ್ರ, ಅವರನ್ನು ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ನಯಾಪೈಸೆ ಕೊಡಲಿಲ್ಲ. ಪಿಎಂ ಕೇರ್ಸ್‌‌ಗೆ 30 ಸಾವಿರ ಕೋಟಿಗೂ ಅಧಿಕ ಹಣ ಹರಿದುಬಂದಿದ್ದರೂ ಅದರಿಂದ ಪ್ರಧಾನಿಗಳು ಒಂದು ರೂಪಾಯಿ ಸಹ ಖರ್ಚು ಮಾಡಿದ ಉದಾಹರಣೆಯಿಲ್ಲ. ಕೋವಿಡ್‌ಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಹಸಿವಿನಿಂದ ಕಾರ್ಮಿಕರು ಸಾಯುತ್ತಿರುವಾಗ ಖರ್ಚು ಮಾಡದೇ ಇನ್ಯಾವಾಗ ಮಾಡುತ್ತಾರೆ?

ಪರಿಹಾರವೇನು?

ವಲಸೆ ಕಾರ್ಮಿಕರು ಅಸಂಘಟಿತ ವಲಯಕ್ಕೆ ಬರುತ್ತಾರೆ. ಕಾರ್ಮಿಕ ಸಂಘಟನೆಗಳು ಇವರನ್ನು ಸಂಘಟಿಸಲು ಪ್ರಯತ್ನಸಿದರೂ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಿಲ್ಲ. ಇವರನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿ ಅವರೊಂದು ರಾಜಕೀಯ ಶಕ್ತಿಯನ್ನಾಗಿ ಮಾಡಬೇಕಾದ ಅನಿವಾರ್ಯತೆ ಇದೆ. ಅದು ಮಾತ್ರವೇ ಈ ಸಂಕಷ್ಟದಿಂದ ವಲಸೆ ಕಾರ್ಮಿಕರನ್ನು ಪಾರು ಮಾಡುತ್ತದೆ. ಕಾರ್ಲ್‌‌ಮಾರ್ಕ್ಸ್‌‌ರವರು ಹೇಳಿದಂತೆ ಕಾರ್ಮಿಕರು ಈಗ ಕಳೆದುಕೊಳ್ಳಲು ಸಂಕೋಲೆಯನ್ನು ಹೊರತಪಡಿಸಿ ಕಳೆದುಕೊಳ್ಳಲು ಮತ್ತೇನೂ ಇಲ್ಲ. ಅದೇ ರೀತಿ ಬುದ್ದ ನಮ್ಮ ಅಂದರೆ ಕಾರ್ಮಿಕರ ವಿಮೋಚನೆ ನಮ್ಮಿಂದಲೇ ಸಾಧ್ಯ ಹೊರತು ಮತ್ಯಾರಿಂದಲೂ ಅಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...