Homeಮುಖಪುಟಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’

- Advertisement -
- Advertisement -

ದಶಕಗಳ ಹಿಂದೆ ಅಮ್ಮ ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇರುವಂತಹ ಸಿನಿಮಾಗಳು ತಯಾರಾಗುತ್ತಿದ್ದವು. ಅಂತಹ ಪಾತ್ರಗಳು ಇಂದಿಗೂ ನಮಗೆ ನೆನಪಾಗುತ್ತವೆ. ಇದೀಗ ಗ್ಲಾಮರ್ ಮಧ್ಯೆ ಅಮ್ಮನ ಪಾತ್ರಗಳು ಕಣ್ಮರೆ ಆಗುತ್ತಿವೆ. ಅಮ್ಮನ (10) ದಿನದ ನಿಮಿತ್ತ ಒಂದು ವಿಶೇಷ ಲೇಖನ.

ಮೊನ್ನೆಯವರೆಗೂ ಸ್ಯಾಂಡಲ್‍ವುಡ್‍ನಲ್ಲಿ ಮಚ್ಚು ಮತ್ತು ಮದರ್ ಸೆಂಟಿಮೆಂಟ್ ಚಿತ್ರಗಳು ಚಾಲ್ತಿಯಲ್ಲಿದ್ದವು. ಬಾಲಿವುಡ್‍ಗೆ ಹೋಲಿಸಿದಲ್ಲಿ ಇಲ್ಲಿ ಅಮ್ಮನ ಪಾತ್ರಕ್ಕೆ ಹೆಚ್ಚಿನ ನಷ್ಟವಾಗಿಲ್ಲ ನಿಜ. ಆದರೆ ಪಾತ್ರದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿರಾಸೆಯಾಗುವುದು ಹೌದು. ವರ್ಷದಲ್ಲಿ ತೆರೆಕಾಣುವ ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಮ್ಮ ಕಾಣಿಸುವುದು ಬೆರಳೆಣಿಕೆಯ ಪಾತ್ರಗಳಲ್ಲಿ ಮಾತ್ರ. ಅವೂ ಕೂಡ ಬಹುಕಾಲ ನೆನಪಿನಲ್ಲುಳಿಯುವುದಿಲ್ಲ ಎನ್ನುವುದು ವಿಪರ್ಯಾಸ.

ದಕ್ಷಿಣ ಭಾರತದ ಇತರೆ ಪ್ರಾದೇಶಿಕ ಭಾಷಾ ಚಿತ್ರಗಳೂ ಇದಕ್ಕೆ ಹೊರತಲ್ಲ. ದೊಡ್ಡ ಸದ್ದು ಮಾಡಿದ ‘ಕೆಜಿಎಫ್’ನಲ್ಲಿ ಅಮ್ಮನ ಕುರಿತಾದ ಸುಂದರ ಗೀತೆ, ಚಿತ್ರಣವಿದ್ದರೂ ಪಾತ್ರ ಬಹುಕಾಲ ನೆನಪಿನಲ್ಲುಳಿಯದು. ಆದರೆ ಕಳೆದ ದಶಕದಿಂದೀಚಿನ ಕೆಲವು ತಮಿಳು, ಮಲಯಾಳಂ ಸಿನಿಮಾಗಳಲ್ಲಿ ‘ತಾಯಿ’ಗೆ ಮಹತ್ವದ ಪಾತ್ರಗಳಿದ್ದವು. ಗಟ್ಟಿಗಿತ್ತಿಯಾಗಿ ನೆಲದ ಗುಣದ ಜೊತೆ ಬೆಸೆದುಕೊಂಡಂತಹ ಚಿತ್ರಣಗಳು ಅಲ್ಲಿ ಕಾಣಿಸಿದವು.

ಗ್ಲ್ಯಾಮರ್ ಅಮ್ಮ

ಮಚ್ಚಿನ ಚಿತ್ರಗಳಿಗೆ ಮದರ್ ಸೆಂಟಿಮೆಂಟ್ ಜೋಡಿಸಿದ ಕೀರ್ತಿ, ನಿರ್ದೇಶಕ ಪ್ರೇಮ್‍ಗೆ ಸಲ್ಲುತ್ತದೆ. ಅವರ ಸೂಪರ್‌‌‌ಹಿಟ್ `ಜೋಗಿ’ ಚಿತ್ರದಲ್ಲಿ ಅಮ್ಮನ (ಆರುಂಧತಿ ನಾಗ್) ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇತ್ತು. ಅಮ್ಮನ ಪ್ರೀತಿಯ ಜೊತೆಗೆ ಮಚ್ಚಿನ ಆರ್ಭಟಕ್ಕೂ ಅಲ್ಲಿ ಸಮಪಾಲು. ಅಮ್ಮನನ್ನು ನೆನಪಿಸುವಲ್ಲಿ ಪ್ರೇಮ್ ಯಶಸ್ವಿಯಾದರೂ, ಪ್ರೇಕ್ಷಕರು ಮಚ್ಚಿನ ಕಥೆಯೆಂದೇ ಮಾತನಾಡಿಕೊಂಡರು. ಇದಕ್ಕೂ ಮುನ್ನ ಅವರೇ ನಿರ್ದೇಶಿಸಿದ್ದ `ಎಸ್‌ಕ್ಯೂಸ್ ಮಿ’ ಚಿತ್ರದಲ್ಲೂ ಅಮ್ಮ (ಸುಮಲತಾ) ಇದ್ದಳು. ಮಾತೃಭಾವಕ್ಕಿಂತ ಮಿಗಿಲಾಗಿ ಅಲ್ಲಿ ನಟಿಯ ಲಿಪ್‍ಸ್ಟಿಕ್ ಮಿರುಗಿದ್ದು ಬದಲಾದ ಚಿತ್ರಣಕ್ಕೆ ಕೈಗನ್ನಿಡಿ!

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಮಲತ

`ಜೋಗಿ’ ಚಿತ್ರದ ಯಶಸ್ಸಿನೊಂದಿಗೆ `ಮಚ್ಚು ಮತ್ತು ಮದರ್ ಸೆಂಟಿಮೆಂಟ್’ ಕಾಂಬಿನೇಷನ್‍ನಲ್ಲಿ ಸಾಕಷ್ಟು ಚಿತ್ರಗಳು ತೆರೆಕಂಡವು. ಮಚ್ಚು ಬೀಸುವ ಭರದಲ್ಲಿ ನಿರ್ದೇಶಕರು ಅಮ್ಮನ ಪಾತ್ರಗಳನ್ನು ಜೋಕರ್‌ಗಳಂತೆ ಚಿತ್ರಿಸಿ ಪ್ರೇಕ್ಷಕರಿಗೆ ಬೇಸರ ಉಂಟುಮಾಡಿದ್ದೂ ಇದೆ. ನಾಯಕನ ಇಮೇಜು ಹೆಚ್ಚಿಸಲು ಅಮ್ಮನನ್ನು ಅತಿ ಭಾವುಕತನ, ಕಣ್ಣೀರಧಾರೆಯಲ್ಲಿ ತೋರಿಸುವ ಪರಿಪಾಠ ಜಾರಿಗೆ ಬಂತು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಅರುಂದತಿ ನಾಗ್

ಸ್ನೇಹಿತೆಯಂಥ ಅಮ್ಮ

`ಮುಂಗಾರುಮಳೆ’ ಸ್ಯಾಂಡಲ್‍ವುಡ್‍ನ ಟ್ರೆಂಡ್ ಸೆಟರ್ ಸಿನೆಮಾ. ಇಲ್ಲಿ ನಿರ್ದೇಶಕ ಯೋಗರಾಜ್ ಭಟ್, ಅಮ್ಮನ ಪಾತ್ರವನ್ನು ವಾಸ್ತವಕ್ಕೆ ಕರೆತಂದಿದ್ದರು. ಬೇರೊಬ್ಬನನ್ನು ಮದುವೆಯಾಗುತ್ತಿರುವ ಹುಡುಗಿಯನ್ನು ಪ್ರೀತಿಸುವ ಮಗನ ಕೆನ್ನೆಗೆ ಹೊಡೆದು ಬುದ್ಧಿ ಹೇಳುವ ಅಮ್ಮನ ಪಾತ್ರವದು. ಆಧುನಿಕ ಮನೋಭಾವದ ಸ್ನೇಹಿತೆಯಂಥ ಅಮ್ಮನನ್ನು ಪ್ರೇಕ್ಷಕರೂ ಪ್ರೀತಿಯಿಂದ ಒಪ್ಪಿಕೊಂಡರು. ಆದರೆ `ಮಳೆ’ ಸ್ಪೂರ್ತಿಯಿಂದ ನಂತರದಲ್ಲಿ ತಯಾರಾದ ಹಲವಾರು ಚಿತ್ರಗಳಲ್ಲಿ ಅಮ್ಮನ ಪಾತ್ರಗಳು ಸೊರಗಿದವು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಧಾ ಬೆಳವಾಡಿ

 

`ವಂಶಿ’ (ಅಮ್ಮನಾಗಿ ಲಕ್ಷ್ಮಿ ನಟಿಸಿದ್ದರು) ಸೇರಿದಂತೆ ಒಂದೆರಡು ಚಿತ್ರಗಳನ್ನು ಹೊರತುಪಡಿಸಿದರೆ ಇತ್ತೀಚಿನ ಚಿತ್ರಗಳಲ್ಲಿ ಅಮ್ಮ ಪ್ರೇಕ್ಷಕರನ್ನು ತಲುಪಲೇ ಇಲ್ಲ. ನಂತರ ಒಂದಷ್ಟು ವರ್ಷ ನಿರ್ದೇಶಕ ಅಪ್ಪ-ಮಗನ ಸೆಂಟಿಮೆಂಟಿಗೆ ಹೊರಳಿದ್ದರು! `ಮುಂಗಾರುಮಳೆ’ಯ ಅಮ್ಮ ಸುಧಾ ಬೆಳವಾಡಿ ಬದಲಾದ ಟ್ರೆಂಡ್ ಬಗ್ಗೆ ಬೇಸರದಿಂದಲೇ ಮಾತನಾಡುತ್ತಾರೆ.

`ಯೋಗರಾಜ್ ಭಟ್ಟರ ಚಿತ್ರದಲ್ಲಿ ಅಮ್ಮನ ಪಾತ್ರಕ್ಕೊಂದು ಭದ್ರ ನೆಲೆಯಿತ್ತು. ಇಲ್ಲಿಯವರೆಗೂ ನನಗೆ ಅಂಥ ಮತ್ತೊಂದು ಪಾತ್ರ ಸಿಕ್ಕಿಲ್ಲ. ಈಗಿನವರು ಸೃಷ್ಟಿಸುವ ಅಮ್ಮನ ಪಾತ್ರಕ್ಕೆ ಸ್ವಂತ ನಿಲುವು, ವ್ಯಕ್ತಿತ್ವವೇ ಇರೋಲ್ಲ. ಹೊಸ ಟ್ರೆಂಡ್‍ನ ಪ್ರೇಕ್ಷಕರಿಗೆ ಇಷ್ಟವಾಗುವಂಥ ಸತ್ವಯುತ ಅಮ್ಮನ ಪಾತ್ರ ಸೃಷ್ಟಿಸುವಲ್ಲಿ ನಮ್ಮವರು ವಿಫಲರಾಗುತ್ತಿದ್ದಾರೆ’ ಎನ್ನುತ್ತಾರೆ ಅವರು.

ಅದೊಂದು ಕಾಲವಿತ್ತು…

ಈ ಕ್ಷಣವೂ ಅಮ್ಮನ ಪಾತ್ರವೆಂದರೆ ಕನ್ನಡಿಗರ ಕಣ್ತುಂಬುವುದು ಪಂಡರೀಭಾಯಿ. ಸುಂದರ, ಸೌಮ್ಯ ಮುಖದ ಕರುಣಾಮಯಿ ಭಾವದ ಕಲಾವಿದೆ ಅಮ್ಮನ ಪಾತ್ರಕ್ಕೆ ವಿಶೇಷ ಮೆರುಗು ತಂದುಕೊಟ್ಟರು. ಸ್ವಭಾವತಃ ಮಾತೃಹೃದಯಿ ಪಂಡರೀಭಾಯಿ ತೆರೆಯ ಮೇಲೆ ಕೂಡ ಹಾಗೆಯೇ ಕಾಣಿಸಿದರು ಎಂದು ಅವರನ್ನು ಬಲ್ಲ ಕಲಾವಿದರು, ತಂತ್ರಜ್ಞರು `ಅಮ್ಮ’ನನ್ನು ನೆನಪುಮಾಡಿಕೊಳ್ಳುತ್ತಾರೆ. ಆದವಾನಿ ಲಕ್ಷ್ಮಿದೇವಿ, ಸಾವಿತ್ರಿ, ಎಂ.ವಿ.ರಾಜಮ್ಮ, ಸಾಹುಕಾರ ಜಾನಕಿ ಇತರರು ಅಮ್ಮನ ಪಾತ್ರಗಳಿಗೆ ಜೀವ ತುಂಬಿದ ಅಂದಿನ ಶ್ರೇಷ್ಠ ಕಲಾವಿದೆಯರು. ನಟಿ ಲೀಲಾವತಿ ವೈವಿಧ್ಯಮಯ ತಾಯಿ ಪಾತ್ರಗಳನ್ನು ಪೊರೆದವರು. ಕೆಲವು ಚಿತ್ರಗಳಲ್ಲಿ ಗಯ್ಯಾಳಿ, ಹಠಮಾರಿ ಅಮ್ಮನಾಗಿ ಪ್ರೇಕ್ಷಕರ ನೆನಪಿನಲ್ಲುಳಿದಿದ್ದಾರೆ.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ಅಮ್ಮ
ಪಂಡರಿ ಭಾಯಿ

80ರ ದಶಕದ ಅಂತ್ಯಕ್ಕೆ ಕನ್ನಡ ಚಿತ್ರಗಳಲ್ಲಿ ಹಲವಾರು ಮಾರ್ಪಾಡುಗಳಾಗಿದ್ದವು. ಕೌಟುಂಬಿಕ ಕಥೆಗಳ ಜೊತೆಗೆ ಆಗ ರಾಜಕೀಯ ಸಿನೆಮಾಗಳೂ ತಯಾರಾಗುತ್ತಿದ್ದವು. ಚಿತ್ರದ ನಾಯಕನನ್ನು ಮಣಿಸುವ ಸಲುವಾಗಿ ಖಳನಾಯಕರು ಅಮ್ಮನನ್ನು ಬಂಧನದಲ್ಲಿಟ್ಟು ಹಿಂಸಿಸುತ್ತಿದ್ದರು. ಕಾಂಚನ, ಲೀಲಾವತಿ, ಸರೋಜಾದೇವಿ, ಜಯಂತಿ, ಆರತಿ ಇತರರು ಈ ಪಾತ್ರಗಳಿಗೆ ಜೀವ ತುಂಬಿದರು. ರಮಾದೇವಿ, ಉಮಾಶಿವಶಂಕರ್, ಸತ್ಯಭಾಮಾ, ಕಮಿನಿಧರನ್, ಆಶಾಲತಾ, ಶೋಭಾ ಶಿವಶಂಕರ್, ಹೇಮಾಚೌಧರಿ ಗಯ್ಯಾಳಿ ಅಮ್ಮಂದಿರಾಗಿ ಪ್ರೇಕ್ಷಕರ ಹುಸಿಕೋಪಕ್ಕೆ ಗುರಿಯಾಗುತ್ತಿದ್ದರು.

`ಪುಟ್ನಂಜಿ’ ಚಿತ್ರದ ಉಮಾಶ್ರೀ ಪಾತ್ರಕ್ಕೆ `ಒಡಲಾಳ’ ನಾಟಕದ ಸಾಕವ್ವ ಪ್ರೇರಣೆ. ಇಲ್ಲಿ ಅಮ್ಮನ ಪಾತ್ರಕ್ಕೆ ಮತ್ತೊಂದು ಆಯಾಮ ಸಿಕ್ಕಿದ್ದು ಹೌದು. `ಅಣ್ಣಯ್ಯ’ ಸಿನೆಮಾದಲ್ಲಿ ಹಿಂದಿ ನಟಿ ಅರುಣಾ ಇರಾನಿ ನೆಗೆಟಿವ್ ಶೇಡ್‍ನಲ್ಲಿ ಗಮನ ಸೆಳೆದಿದ್ದರು. ಈ ಮಧ್ಯೆ ತಾಯಿಯ ಆಂತರ್ಯದ ಹೋರಾಟದ ಕಥಾವಸ್ತುವಿನ ಕೆಲವು ಭಿನ್ನ ಅಲೆಯ ಚಿತ್ರಗಳು ತಯಾರಾದವು. `ತಾಯಿಸಾಹೇಬ’, `ತಾಯಿ’, `ಅವ್ವ’ ಕೆಲವು ಉದಾಹರಣೆ. ಎಂದಿನಂತೆ ಈ ಚಿತ್ರಗಳು ಕಲೆಯ ಚೌಕಟ್ಟನ್ನು ದಾಟಲಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ ಕನ್ನಡ ಚಿತ್ರಗಳಲ್ಲಿ `ಅಮ್ಮ’ ಸೊರಗುತ್ತಿದ್ದಾಳೆ. ಕಾಲದ ತಿರುಗಣೆಯಲ್ಲಿ ಮತ್ತೆ ಅಮ್ಮ ನಗೆ ಬೀರುವಳೇ?

ಸ್ಯಾಂಡಲ್‍ವುಡ್‍ನ ಜನಪ್ರಿಯ ಅಮ್ಮಂದಿರು

ಪಂಡರೀಭಾಯಿ (ಪುರಂದರದಾಸ, ಸತ್ಯಹರಿಶ್ಚಂದ್ರ, ಅನುರಾಗ ಅರಳಿತು), ಆದವಾನಿ ಲಕ್ಷ್ಮಿದೇವಿ (ಗಂಧದ ಗುಡಿ), ಎಂ.ವಿ.ರಾಜಮ್ಮ (ಬಂಗಾರದ ಪಂಜರ), ಲೀಲಾವತಿ (ತಾಯಿಯ ಮಡಿಲಲ್ಲಿ, ನಾಗರಹಾವು, ಯಾರದು), ಕಾಂಚನ (ಶಂಕರ್‍ಗುರು, ದಾರಿ ತಪ್ಪಿದ ಮಗ), ಸರೋಜಾದೇವಿ (ಭಾಗ್ಯವಂತರು), ಆರತಿ (ಕಲಿಯುಗ), ಅರುಣಾ ಇರಾನಿ (ಅಣ್ಣಯ್ಯ), ಉಮಾಶ್ರೀ (ಪುಟ್ನಂಜಿ), ಭಾರತಿ (ದೊರೆ), ಸುಮಿತ್ರಾ (ರಾಮಾಚಾರಿ), ಸುಮಲತಾ (ಎಕ್ಸ್‍ಕ್ಯೂಸ್ ಮಿ), ಅರುಂಧತಿ ನಾಗ್ (ಜೋಗಿ), ಲಕ್ಷ್ಮಿ (ಅಮ್ಮ, ಹೂವು-ಹಣ್ಣು, ವಂಶಿ), ಸುಧಾ ಬೆಳವಾಡಿ (ಮುಂಗಾರು ಮಳೆ), ತಾರಾ (ಡೆಡ್ಲಿ ಸೋಮ), ರ‍್ಚನಾ ಜೋಯಿಸ್ (ಕೆಜಿಎಫ್)


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್


ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...