Homeಮುಖಪುಟಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’

- Advertisement -
- Advertisement -

ದಶಕಗಳ ಹಿಂದೆ ಅಮ್ಮ ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇರುವಂತಹ ಸಿನಿಮಾಗಳು ತಯಾರಾಗುತ್ತಿದ್ದವು. ಅಂತಹ ಪಾತ್ರಗಳು ಇಂದಿಗೂ ನಮಗೆ ನೆನಪಾಗುತ್ತವೆ. ಇದೀಗ ಗ್ಲಾಮರ್ ಮಧ್ಯೆ ಅಮ್ಮನ ಪಾತ್ರಗಳು ಕಣ್ಮರೆ ಆಗುತ್ತಿವೆ. ಅಮ್ಮನ (10) ದಿನದ ನಿಮಿತ್ತ ಒಂದು ವಿಶೇಷ ಲೇಖನ.

ಮೊನ್ನೆಯವರೆಗೂ ಸ್ಯಾಂಡಲ್‍ವುಡ್‍ನಲ್ಲಿ ಮಚ್ಚು ಮತ್ತು ಮದರ್ ಸೆಂಟಿಮೆಂಟ್ ಚಿತ್ರಗಳು ಚಾಲ್ತಿಯಲ್ಲಿದ್ದವು. ಬಾಲಿವುಡ್‍ಗೆ ಹೋಲಿಸಿದಲ್ಲಿ ಇಲ್ಲಿ ಅಮ್ಮನ ಪಾತ್ರಕ್ಕೆ ಹೆಚ್ಚಿನ ನಷ್ಟವಾಗಿಲ್ಲ ನಿಜ. ಆದರೆ ಪಾತ್ರದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿರಾಸೆಯಾಗುವುದು ಹೌದು. ವರ್ಷದಲ್ಲಿ ತೆರೆಕಾಣುವ ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಮ್ಮ ಕಾಣಿಸುವುದು ಬೆರಳೆಣಿಕೆಯ ಪಾತ್ರಗಳಲ್ಲಿ ಮಾತ್ರ. ಅವೂ ಕೂಡ ಬಹುಕಾಲ ನೆನಪಿನಲ್ಲುಳಿಯುವುದಿಲ್ಲ ಎನ್ನುವುದು ವಿಪರ್ಯಾಸ.

ದಕ್ಷಿಣ ಭಾರತದ ಇತರೆ ಪ್ರಾದೇಶಿಕ ಭಾಷಾ ಚಿತ್ರಗಳೂ ಇದಕ್ಕೆ ಹೊರತಲ್ಲ. ದೊಡ್ಡ ಸದ್ದು ಮಾಡಿದ ‘ಕೆಜಿಎಫ್’ನಲ್ಲಿ ಅಮ್ಮನ ಕುರಿತಾದ ಸುಂದರ ಗೀತೆ, ಚಿತ್ರಣವಿದ್ದರೂ ಪಾತ್ರ ಬಹುಕಾಲ ನೆನಪಿನಲ್ಲುಳಿಯದು. ಆದರೆ ಕಳೆದ ದಶಕದಿಂದೀಚಿನ ಕೆಲವು ತಮಿಳು, ಮಲಯಾಳಂ ಸಿನಿಮಾಗಳಲ್ಲಿ ‘ತಾಯಿ’ಗೆ ಮಹತ್ವದ ಪಾತ್ರಗಳಿದ್ದವು. ಗಟ್ಟಿಗಿತ್ತಿಯಾಗಿ ನೆಲದ ಗುಣದ ಜೊತೆ ಬೆಸೆದುಕೊಂಡಂತಹ ಚಿತ್ರಣಗಳು ಅಲ್ಲಿ ಕಾಣಿಸಿದವು.

ಗ್ಲ್ಯಾಮರ್ ಅಮ್ಮ

ಮಚ್ಚಿನ ಚಿತ್ರಗಳಿಗೆ ಮದರ್ ಸೆಂಟಿಮೆಂಟ್ ಜೋಡಿಸಿದ ಕೀರ್ತಿ, ನಿರ್ದೇಶಕ ಪ್ರೇಮ್‍ಗೆ ಸಲ್ಲುತ್ತದೆ. ಅವರ ಸೂಪರ್‌‌‌ಹಿಟ್ `ಜೋಗಿ’ ಚಿತ್ರದಲ್ಲಿ ಅಮ್ಮನ (ಆರುಂಧತಿ ನಾಗ್) ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇತ್ತು. ಅಮ್ಮನ ಪ್ರೀತಿಯ ಜೊತೆಗೆ ಮಚ್ಚಿನ ಆರ್ಭಟಕ್ಕೂ ಅಲ್ಲಿ ಸಮಪಾಲು. ಅಮ್ಮನನ್ನು ನೆನಪಿಸುವಲ್ಲಿ ಪ್ರೇಮ್ ಯಶಸ್ವಿಯಾದರೂ, ಪ್ರೇಕ್ಷಕರು ಮಚ್ಚಿನ ಕಥೆಯೆಂದೇ ಮಾತನಾಡಿಕೊಂಡರು. ಇದಕ್ಕೂ ಮುನ್ನ ಅವರೇ ನಿರ್ದೇಶಿಸಿದ್ದ `ಎಸ್‌ಕ್ಯೂಸ್ ಮಿ’ ಚಿತ್ರದಲ್ಲೂ ಅಮ್ಮ (ಸುಮಲತಾ) ಇದ್ದಳು. ಮಾತೃಭಾವಕ್ಕಿಂತ ಮಿಗಿಲಾಗಿ ಅಲ್ಲಿ ನಟಿಯ ಲಿಪ್‍ಸ್ಟಿಕ್ ಮಿರುಗಿದ್ದು ಬದಲಾದ ಚಿತ್ರಣಕ್ಕೆ ಕೈಗನ್ನಿಡಿ!

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಮಲತ

`ಜೋಗಿ’ ಚಿತ್ರದ ಯಶಸ್ಸಿನೊಂದಿಗೆ `ಮಚ್ಚು ಮತ್ತು ಮದರ್ ಸೆಂಟಿಮೆಂಟ್’ ಕಾಂಬಿನೇಷನ್‍ನಲ್ಲಿ ಸಾಕಷ್ಟು ಚಿತ್ರಗಳು ತೆರೆಕಂಡವು. ಮಚ್ಚು ಬೀಸುವ ಭರದಲ್ಲಿ ನಿರ್ದೇಶಕರು ಅಮ್ಮನ ಪಾತ್ರಗಳನ್ನು ಜೋಕರ್‌ಗಳಂತೆ ಚಿತ್ರಿಸಿ ಪ್ರೇಕ್ಷಕರಿಗೆ ಬೇಸರ ಉಂಟುಮಾಡಿದ್ದೂ ಇದೆ. ನಾಯಕನ ಇಮೇಜು ಹೆಚ್ಚಿಸಲು ಅಮ್ಮನನ್ನು ಅತಿ ಭಾವುಕತನ, ಕಣ್ಣೀರಧಾರೆಯಲ್ಲಿ ತೋರಿಸುವ ಪರಿಪಾಠ ಜಾರಿಗೆ ಬಂತು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಅರುಂದತಿ ನಾಗ್

ಸ್ನೇಹಿತೆಯಂಥ ಅಮ್ಮ

`ಮುಂಗಾರುಮಳೆ’ ಸ್ಯಾಂಡಲ್‍ವುಡ್‍ನ ಟ್ರೆಂಡ್ ಸೆಟರ್ ಸಿನೆಮಾ. ಇಲ್ಲಿ ನಿರ್ದೇಶಕ ಯೋಗರಾಜ್ ಭಟ್, ಅಮ್ಮನ ಪಾತ್ರವನ್ನು ವಾಸ್ತವಕ್ಕೆ ಕರೆತಂದಿದ್ದರು. ಬೇರೊಬ್ಬನನ್ನು ಮದುವೆಯಾಗುತ್ತಿರುವ ಹುಡುಗಿಯನ್ನು ಪ್ರೀತಿಸುವ ಮಗನ ಕೆನ್ನೆಗೆ ಹೊಡೆದು ಬುದ್ಧಿ ಹೇಳುವ ಅಮ್ಮನ ಪಾತ್ರವದು. ಆಧುನಿಕ ಮನೋಭಾವದ ಸ್ನೇಹಿತೆಯಂಥ ಅಮ್ಮನನ್ನು ಪ್ರೇಕ್ಷಕರೂ ಪ್ರೀತಿಯಿಂದ ಒಪ್ಪಿಕೊಂಡರು. ಆದರೆ `ಮಳೆ’ ಸ್ಪೂರ್ತಿಯಿಂದ ನಂತರದಲ್ಲಿ ತಯಾರಾದ ಹಲವಾರು ಚಿತ್ರಗಳಲ್ಲಿ ಅಮ್ಮನ ಪಾತ್ರಗಳು ಸೊರಗಿದವು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಧಾ ಬೆಳವಾಡಿ

 

`ವಂಶಿ’ (ಅಮ್ಮನಾಗಿ ಲಕ್ಷ್ಮಿ ನಟಿಸಿದ್ದರು) ಸೇರಿದಂತೆ ಒಂದೆರಡು ಚಿತ್ರಗಳನ್ನು ಹೊರತುಪಡಿಸಿದರೆ ಇತ್ತೀಚಿನ ಚಿತ್ರಗಳಲ್ಲಿ ಅಮ್ಮ ಪ್ರೇಕ್ಷಕರನ್ನು ತಲುಪಲೇ ಇಲ್ಲ. ನಂತರ ಒಂದಷ್ಟು ವರ್ಷ ನಿರ್ದೇಶಕ ಅಪ್ಪ-ಮಗನ ಸೆಂಟಿಮೆಂಟಿಗೆ ಹೊರಳಿದ್ದರು! `ಮುಂಗಾರುಮಳೆ’ಯ ಅಮ್ಮ ಸುಧಾ ಬೆಳವಾಡಿ ಬದಲಾದ ಟ್ರೆಂಡ್ ಬಗ್ಗೆ ಬೇಸರದಿಂದಲೇ ಮಾತನಾಡುತ್ತಾರೆ.

`ಯೋಗರಾಜ್ ಭಟ್ಟರ ಚಿತ್ರದಲ್ಲಿ ಅಮ್ಮನ ಪಾತ್ರಕ್ಕೊಂದು ಭದ್ರ ನೆಲೆಯಿತ್ತು. ಇಲ್ಲಿಯವರೆಗೂ ನನಗೆ ಅಂಥ ಮತ್ತೊಂದು ಪಾತ್ರ ಸಿಕ್ಕಿಲ್ಲ. ಈಗಿನವರು ಸೃಷ್ಟಿಸುವ ಅಮ್ಮನ ಪಾತ್ರಕ್ಕೆ ಸ್ವಂತ ನಿಲುವು, ವ್ಯಕ್ತಿತ್ವವೇ ಇರೋಲ್ಲ. ಹೊಸ ಟ್ರೆಂಡ್‍ನ ಪ್ರೇಕ್ಷಕರಿಗೆ ಇಷ್ಟವಾಗುವಂಥ ಸತ್ವಯುತ ಅಮ್ಮನ ಪಾತ್ರ ಸೃಷ್ಟಿಸುವಲ್ಲಿ ನಮ್ಮವರು ವಿಫಲರಾಗುತ್ತಿದ್ದಾರೆ’ ಎನ್ನುತ್ತಾರೆ ಅವರು.

ಅದೊಂದು ಕಾಲವಿತ್ತು…

ಈ ಕ್ಷಣವೂ ಅಮ್ಮನ ಪಾತ್ರವೆಂದರೆ ಕನ್ನಡಿಗರ ಕಣ್ತುಂಬುವುದು ಪಂಡರೀಭಾಯಿ. ಸುಂದರ, ಸೌಮ್ಯ ಮುಖದ ಕರುಣಾಮಯಿ ಭಾವದ ಕಲಾವಿದೆ ಅಮ್ಮನ ಪಾತ್ರಕ್ಕೆ ವಿಶೇಷ ಮೆರುಗು ತಂದುಕೊಟ್ಟರು. ಸ್ವಭಾವತಃ ಮಾತೃಹೃದಯಿ ಪಂಡರೀಭಾಯಿ ತೆರೆಯ ಮೇಲೆ ಕೂಡ ಹಾಗೆಯೇ ಕಾಣಿಸಿದರು ಎಂದು ಅವರನ್ನು ಬಲ್ಲ ಕಲಾವಿದರು, ತಂತ್ರಜ್ಞರು `ಅಮ್ಮ’ನನ್ನು ನೆನಪುಮಾಡಿಕೊಳ್ಳುತ್ತಾರೆ. ಆದವಾನಿ ಲಕ್ಷ್ಮಿದೇವಿ, ಸಾವಿತ್ರಿ, ಎಂ.ವಿ.ರಾಜಮ್ಮ, ಸಾಹುಕಾರ ಜಾನಕಿ ಇತರರು ಅಮ್ಮನ ಪಾತ್ರಗಳಿಗೆ ಜೀವ ತುಂಬಿದ ಅಂದಿನ ಶ್ರೇಷ್ಠ ಕಲಾವಿದೆಯರು. ನಟಿ ಲೀಲಾವತಿ ವೈವಿಧ್ಯಮಯ ತಾಯಿ ಪಾತ್ರಗಳನ್ನು ಪೊರೆದವರು. ಕೆಲವು ಚಿತ್ರಗಳಲ್ಲಿ ಗಯ್ಯಾಳಿ, ಹಠಮಾರಿ ಅಮ್ಮನಾಗಿ ಪ್ರೇಕ್ಷಕರ ನೆನಪಿನಲ್ಲುಳಿದಿದ್ದಾರೆ.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ಅಮ್ಮ
ಪಂಡರಿ ಭಾಯಿ

80ರ ದಶಕದ ಅಂತ್ಯಕ್ಕೆ ಕನ್ನಡ ಚಿತ್ರಗಳಲ್ಲಿ ಹಲವಾರು ಮಾರ್ಪಾಡುಗಳಾಗಿದ್ದವು. ಕೌಟುಂಬಿಕ ಕಥೆಗಳ ಜೊತೆಗೆ ಆಗ ರಾಜಕೀಯ ಸಿನೆಮಾಗಳೂ ತಯಾರಾಗುತ್ತಿದ್ದವು. ಚಿತ್ರದ ನಾಯಕನನ್ನು ಮಣಿಸುವ ಸಲುವಾಗಿ ಖಳನಾಯಕರು ಅಮ್ಮನನ್ನು ಬಂಧನದಲ್ಲಿಟ್ಟು ಹಿಂಸಿಸುತ್ತಿದ್ದರು. ಕಾಂಚನ, ಲೀಲಾವತಿ, ಸರೋಜಾದೇವಿ, ಜಯಂತಿ, ಆರತಿ ಇತರರು ಈ ಪಾತ್ರಗಳಿಗೆ ಜೀವ ತುಂಬಿದರು. ರಮಾದೇವಿ, ಉಮಾಶಿವಶಂಕರ್, ಸತ್ಯಭಾಮಾ, ಕಮಿನಿಧರನ್, ಆಶಾಲತಾ, ಶೋಭಾ ಶಿವಶಂಕರ್, ಹೇಮಾಚೌಧರಿ ಗಯ್ಯಾಳಿ ಅಮ್ಮಂದಿರಾಗಿ ಪ್ರೇಕ್ಷಕರ ಹುಸಿಕೋಪಕ್ಕೆ ಗುರಿಯಾಗುತ್ತಿದ್ದರು.

`ಪುಟ್ನಂಜಿ’ ಚಿತ್ರದ ಉಮಾಶ್ರೀ ಪಾತ್ರಕ್ಕೆ `ಒಡಲಾಳ’ ನಾಟಕದ ಸಾಕವ್ವ ಪ್ರೇರಣೆ. ಇಲ್ಲಿ ಅಮ್ಮನ ಪಾತ್ರಕ್ಕೆ ಮತ್ತೊಂದು ಆಯಾಮ ಸಿಕ್ಕಿದ್ದು ಹೌದು. `ಅಣ್ಣಯ್ಯ’ ಸಿನೆಮಾದಲ್ಲಿ ಹಿಂದಿ ನಟಿ ಅರುಣಾ ಇರಾನಿ ನೆಗೆಟಿವ್ ಶೇಡ್‍ನಲ್ಲಿ ಗಮನ ಸೆಳೆದಿದ್ದರು. ಈ ಮಧ್ಯೆ ತಾಯಿಯ ಆಂತರ್ಯದ ಹೋರಾಟದ ಕಥಾವಸ್ತುವಿನ ಕೆಲವು ಭಿನ್ನ ಅಲೆಯ ಚಿತ್ರಗಳು ತಯಾರಾದವು. `ತಾಯಿಸಾಹೇಬ’, `ತಾಯಿ’, `ಅವ್ವ’ ಕೆಲವು ಉದಾಹರಣೆ. ಎಂದಿನಂತೆ ಈ ಚಿತ್ರಗಳು ಕಲೆಯ ಚೌಕಟ್ಟನ್ನು ದಾಟಲಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ ಕನ್ನಡ ಚಿತ್ರಗಳಲ್ಲಿ `ಅಮ್ಮ’ ಸೊರಗುತ್ತಿದ್ದಾಳೆ. ಕಾಲದ ತಿರುಗಣೆಯಲ್ಲಿ ಮತ್ತೆ ಅಮ್ಮ ನಗೆ ಬೀರುವಳೇ?

ಸ್ಯಾಂಡಲ್‍ವುಡ್‍ನ ಜನಪ್ರಿಯ ಅಮ್ಮಂದಿರು

ಪಂಡರೀಭಾಯಿ (ಪುರಂದರದಾಸ, ಸತ್ಯಹರಿಶ್ಚಂದ್ರ, ಅನುರಾಗ ಅರಳಿತು), ಆದವಾನಿ ಲಕ್ಷ್ಮಿದೇವಿ (ಗಂಧದ ಗುಡಿ), ಎಂ.ವಿ.ರಾಜಮ್ಮ (ಬಂಗಾರದ ಪಂಜರ), ಲೀಲಾವತಿ (ತಾಯಿಯ ಮಡಿಲಲ್ಲಿ, ನಾಗರಹಾವು, ಯಾರದು), ಕಾಂಚನ (ಶಂಕರ್‍ಗುರು, ದಾರಿ ತಪ್ಪಿದ ಮಗ), ಸರೋಜಾದೇವಿ (ಭಾಗ್ಯವಂತರು), ಆರತಿ (ಕಲಿಯುಗ), ಅರುಣಾ ಇರಾನಿ (ಅಣ್ಣಯ್ಯ), ಉಮಾಶ್ರೀ (ಪುಟ್ನಂಜಿ), ಭಾರತಿ (ದೊರೆ), ಸುಮಿತ್ರಾ (ರಾಮಾಚಾರಿ), ಸುಮಲತಾ (ಎಕ್ಸ್‍ಕ್ಯೂಸ್ ಮಿ), ಅರುಂಧತಿ ನಾಗ್ (ಜೋಗಿ), ಲಕ್ಷ್ಮಿ (ಅಮ್ಮ, ಹೂವು-ಹಣ್ಣು, ವಂಶಿ), ಸುಧಾ ಬೆಳವಾಡಿ (ಮುಂಗಾರು ಮಳೆ), ತಾರಾ (ಡೆಡ್ಲಿ ಸೋಮ), ರ‍್ಚನಾ ಜೋಯಿಸ್ (ಕೆಜಿಎಫ್)


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್


ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...