Homeಮುಖಪುಟನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

ನಾಳೆಯಿಂದ ರೈಲುಗಳ ಓಡಾಟ ಆರಂಭ : ದರ ಮಾತ್ರ ದುಬಾರಿ!

- Advertisement -
- Advertisement -

ಭಾರತೀಯ ರೈಲ್ವೆ ನಾಳೆ (ಮೇ-12)ಯಿಂದ ದೇಶಾದ್ಯಂತ ರೈಲುಗಳನ್ನು ಓಡಿಸಲು ಯೋಜಿಸಿದೆ. ಮೊದಲ ಬಾರಿಗೆ 15 ರೈಲುಗಳು ಓಡಾಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕಾಯ್ದಿರಿಸಿದ ಟಿಕೆಟ್‌ ಉಳ್ಳವರಿಗೆ ಮಾತ್ರ ಪ್ರಯಾಣ ಅವಕಾಶವಿದ್ದು, ಇಂದು ಸಂಜೆ 04 ಗಂಟೆಯಿಂದ ಟಿಕೆಟ್ ಕಾಯ್ದಿರಿಸಲು ಭಾರತೀಯ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ಲಾಕ್ ಡೌನ್ ಘೋಷಣೆ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ರೈಲುಗಳು ನವದೆಹಲಿಯಿಂದ ದೇಶದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಲಿವೆ.

ನವದೆಹಲಿಯಿಂದ ದಿಬುಘಡ್, ಅಗರ್ತಲ, ಹೌರಾ, ಪಾಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ್, ಸಿಕಿಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್, ಜಮ್ಮು ತಾರಿ ರೈಲ್ವೆ ನಿಲ್ದಾಣಗಳಿಗೆ ರೈಲುಗಳು ಸಂಚರಿಸಲಿವೆ.

ಭಾರತೀಯ ರೈಲ್ವೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಕರೆದೊಯ್ಯಲು 300 ಶ್ರಮಿಕ್ ರೈಲುಗಳನ್ನು ಮೀಸಲಿಡಲಾಗಿದ್ದು ನಿತ್ಯವೂ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿವೆ. ಇದಕ್ಕಾಗಿ 20000 ಕೋಚ್ ಗಳನ್ನು ಮೀಸಲಿಡಲಾಗಿದೆ.

ಹೊಸ ಮಾರ್ಗಗಳಲ್ಲಿ ರೈಲು ಓಡಿಸಲು ಸಿದ್ದತೆ ನಡೆದಿದ್ದು ಹೆಚ್ಚುವರಿ ಭೋಗಿಗಳು ಲಭ್ಯವಾದರೆ ಶೀಘ್ರವೇ ಹೊಸ ಮಾರ್ಗದಲ್ಲೂ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಒಂದು ರೈಲಿನ ಬೋಗಿಯಲ್ಲಿ 72 ಆಸನ ಇರುತ್ತದೆ. ಆದರೆ, ಶ್ರಮಿಕ್ ರೈಲಿನಲ್ಲಿ ಕೇವಲ 54 ಪ್ರಯಾಣಿಕರನ್ನು ಮಾತ್ರ ಅನುಮತಿಸಲಾಗಿತ್ತು. ಈ ವಿಶೇಷ ರೈಲು ಶ್ರಮಿಕ್ ರೈಲಿನಂತಲ್ಲದೆ 72 ಜನ ಪ್ರಯಾಣಿಕರೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಶುಲ್ಕದಲ್ಲೂ ಯಾವುದೇ ರಿಯಾಯಿತಿ ಇರುವುದಿಲ್ಲ.

ರೈಲು ನಿರ್ಗಮನಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಕಾಗುತ್ತದೆ. ಆರಂಭದಲ್ಲಿ, ಎಲ್ಲಾ ಹವಾನಿಯಂತ್ರಿತ ಸೇವೆಗಳು 15 ರಾಜಧಾನಿ ಮಾರ್ಗಗಳಲ್ಲಿ ಪ್ರಾರಂಭವಾಗಲಿದ್ದು, ಶುಲ್ಕವು ಸೂಪರ್-ಫಾಸ್ಟ್ ರೈಲಿಗೆ ಸಮನಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಪ್ರಯಾಣಿಕರಿಗೆ ನೀಡುವ ಟಿಕೆಟ್‌ನಲ್ಲಿ ಏನು ಮಾಡಬೇಕು? ಮತ್ತು ಏನು ಮಾಡಬಾರದು? ಎಂಬ ಸಂಪೂರ್ಣ ವಿವರವನ್ನು ಮುದ್ರಿಸಲಾಗಿರುತ್ತದೆ.- ಉದಾಹರಣೆಗೆ:- ಸ್ಕ್ರೀನಿಂಗ್ ಮತ್ತು ಇತರ ಕರೋನವೈರಸ್ ಪ್ರೋಟೋಕಾಲ್‌ಗಳಿಗಾಗಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಆಗಮಿಸುವುದು, ಮಾಸ್ಕ್‌ಗಳ ಕಡ್ಡಾಯ ಬಳಕೆ ಮತ್ತು ಆರೋಗ್ಯಾ ಸೇತು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳುಬೇಕು ಎಂದು ಸೂಚಿಸಲಾಗುತ್ತದೆ.

ಪ್ರಯಾಣಿಕರು ಮಾಸ್ಕ್ ಧರಿಸಬೇಕು ಮತ್ತು ನಿರ್ಗಮನದ ಸಮಯದಲ್ಲಿ ಸ್ಕ್ರೀನಿಂಗ್‌ಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ರೋಗ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪ್ರಯಾಣದ ಸಮಯದಲ್ಲಿ ಕೆಲವು ನಿಲುಗಡೆಗಳಲ್ಲಿ ಮಾತ್ರ ರೈಲನ್ನು ನಿಲ್ಲಿಸಲಾಗುವುದು.

ದೃಢಪಡಿಸಿದ ರೈಲ್ವೆ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿರುತ್ತದೆ. ನಿಲ್ದಾಣಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗಳನ್ನು ಕ್ರಮೇಣ ವಿಸ್ತರಿಸಲಾಗುವುದು ಮತ್ತು ಹೊಸ ಮಾರ್ಗಗಳಲ್ಲಿ ಹೆಚ್ಚಿನ ವಿಶೇಷ ಸೇವೆಗಳನ್ನು ಘೋಷಿಸಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...