Homeಮುಖಪುಟಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

ಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

- Advertisement -
- Advertisement -

ಲಾಕ್ ಡೌನ್ ನಿಂದ ಕೆಲಸವಿಲ್ಲ, ಕೂಲಿ ಇಲ್ಲ, ಹಣವಿಲ್ಲ ಏನ್ ಮಾಡೋದು? ಕೇವಲ ಪಡಿತರ ದಾನ್ಯಗಳನ್ನು ನೀಡಿದರೆ ಸಾಕೇ? ಹಾಲು, ತರಕಾರಿಗೆ ಹಣ ಬೇಡವೇ, ನಮ್ಮ ಏರಿಯಾದ ಸೀಲ್‌ಡೌನ್‌ ತೆರವುಗೊಳಿಸಿ ಎಂದು ಪ್ರಶ್ನಿಸಿದ ನೂರಾರು ಮಹಿಳೆಯರು ಮನೆಗಳಿಂದ ಹೊರಬಂದು ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.

ನಗರದ ಪೂರ್ ಹೌಸ್  ಕಾಲೋನಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಪಿಎಚ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಸೋಂಕಿತ ವ್ಯಕ್ತಿ ಇದೀಗ ಗುಣಮುಖನಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದು ಕಾಲೋನಿಯಲ್ಲಿ ಕ್ವಾರಂಟೈನ್ ನಲ್ಲಿಟ್ಟಿದ್ದ ಎಲ್ಲರಿಗೂ ನೆಗೆಟೀವ್ ಬಂದಿದೆ. ಹೀಗಾಗಿ ಲಾಕ್ ಡೌನ್ ತೆರವುಗೊಳಿಸಿ ಕೆಲಸ ಮಾಡಲು ಅವಕಾಶ ಕೊಡುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದರು.

10ನೇ ವಾರ್ಡ್ ಸೇರಿದಂತೆ ಎಲ್ಲೆಡೆಯೂ ಮೇ 1 ರಿಂದ ಹಾಲು ನಿಲ್ಲಿಸಲಾಗಿದೆ. ಕಾರ್ಪೋರೇಟರ್ ತಮ್ಮ ಸ್ವಂತ ಹಣದಲ್ಲೂ ಕೆಲ ದಿನಗಳು ಹಾಲು ವಿತರಣೆ ಮಾಡಿದರು. ಮನೆಯಲ್ಲಿ ಮಕ್ಕಳಿದ್ದಾರೆ. ಅವರಿಗೆ ಹಾಲು ಇಲ್ಲದೆ ಸುಮ್ಮನಿರಿಸಲು ಆಗುತ್ತಿಲ್ಲ. ಮೊದಲು ಗಂಡಸರಿಗೆ ಕೆಲಸ ಕೊಡಿ. ಅವರು ದುಡಿದು ತಂದು ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಮನೆಯಲ್ಲಿ ತರಕಾರಿ, ಹಾಲಿಗೂ ದುಡ್ಡಿಲ್ಲ ಎಂದು ನೊಂದ ಮಹಿಳೆಯರು ದೂರಿದರು.

‌ಇದರಿಂದ ಕೆರಳಿದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನವೀನ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದಾರೆ. ನೀವು ಗುಂಪುಗೂಡಲು ಅವಕಾಶ ಕೊಟ್ಟಿದ್ಯಾರು? ಒಬ್ಬರಿಗೆ ಪಾಸಿಟಿವ್‌ ಬಂದರೂ ನೀವೆಲ್ಲರೂ ಜವಾಬ್ದಾರರಾಗುತ್ತೀರಿ. ನಿಮಗೇನು ಬೇಕು ನನಗೆ ಹೇಳಿ ಕೊಡಿಸುತ್ತೇನೆ ಎಂದು ಧಮಕಿ ಹಾಕಿದ್ದಾರೆ. ಆದರೆ ಮಹಿಳೆಯರು ಕೇಳುವ ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರ ಇರಲಿಲ್ಲ. ಆಗ ಪೊಲೀಸರು ನೀವು ದಿಢೀರ್ ಪ್ರತಿಭಟನೆ ಮಾಡುತ್ತಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಬೆದಿರಿಸುವ ತಂತ್ರ ಮಾಡಿದರು. ಆದರೂ ಮಹಿಳೆಯರು ತಮ್ಮ ನೋವನ್ನು ತೋಡಿಕೊಂಡರು. ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು. ಹಾಗಾಗಿ ಪೊಲೀಸರು ಕೂಡ ಮೌನಕ್ಕೆ ಶರಣಾದರು.

ಈ ಕುರಿತು ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್, “ತುಮಕೂರು ನಗರದೆಲ್ಲಡೆ ಲಾಕ್ ಡೌನ್ ಸಡಿಲಗೊಳಿಸಲಾಗಿದೆ. ಎಂ.ಜಿ.ರಸ್ತೆಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೂ ಪಿ.ಎಚ್.ಕಾಲೋನಿಯನ್ನು ಸೀಲ್ ಡೌನ್ ಮಾಡಿ ತಾರತಮ್ಯ ಮಾಡಲಾಗುತ್ತಿದೆ. ಹಾಗಾಗಿ ಮಹಿಳೆಯರು ಪ್ರತಿಭಟಿಸುವ ಅನಿವಾರ್ಯತೆ ಎದುರಾಗಿದೆ” ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಪಿ ಎಚ್ ಕಾಲೋನಿಯಲ್ಲಿ ವಾಸಿಸುವ ಕುಟುಂಬಗಳಿಗೆ ರೆಡ್ ಕ್ರಾಸ್ ನಿಂದ ಬಂದಿರುವ ಬೇಳೆ ಮತ್ತು ಆಹಾರದ ಕಿಟ್ ಗಳನ್ನು ಕೊಡುತ್ತೇನೆಂದು ಖಚಿತ ಭರವಸೆ ನೀಡಿದ್ದರು. ಆದರೆ ಈಗ ಮೌನ ವಹಿಸಿದ್ದಾರೆ. ಬೇರೆಯವರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ, ಇಲ್ಲಿನ ಜನರನ್ನು ಕತ್ತಲೆಯಲ್ಲಿಡಲಾಗಿದೆ. ಈಗ ಪಿ.ಎಚ್. ಕಾಲೋನಿಯಲ್ಲಿ ಸೋಂಕಿತರು ಇಲ್ಲ. ಹೀಗಾಗಿ ಅವರಿಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ಕಳೆದ 14 ದಿನಗಳಿಂದ ತುಮಕೂರು ನಗರದಲ್ಲಿ ಒಂದೂ ಕೊರೊನ ಸೋಂಕಿತ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ದೈಹಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವ್ಯಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...