Homeಮುಖಪುಟಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

ಕೆಲಸವಿಲ್ಲ, ಕೂಲಿ ಇಲ್ಲ, ಹಾಲೂ ಇಲ್ಲ ಎಂದು ಪ್ರತಿಭಟನೆಗಿಳಿದ ತುಮಕೂರಿನ ಮಹಿಳೆಯರು

- Advertisement -
- Advertisement -

ಲಾಕ್ ಡೌನ್ ನಿಂದ ಕೆಲಸವಿಲ್ಲ, ಕೂಲಿ ಇಲ್ಲ, ಹಣವಿಲ್ಲ ಏನ್ ಮಾಡೋದು? ಕೇವಲ ಪಡಿತರ ದಾನ್ಯಗಳನ್ನು ನೀಡಿದರೆ ಸಾಕೇ? ಹಾಲು, ತರಕಾರಿಗೆ ಹಣ ಬೇಡವೇ, ನಮ್ಮ ಏರಿಯಾದ ಸೀಲ್‌ಡೌನ್‌ ತೆರವುಗೊಳಿಸಿ ಎಂದು ಪ್ರಶ್ನಿಸಿದ ನೂರಾರು ಮಹಿಳೆಯರು ಮನೆಗಳಿಂದ ಹೊರಬಂದು ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.

ನಗರದ ಪೂರ್ ಹೌಸ್  ಕಾಲೋನಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಪಿಎಚ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಸೋಂಕಿತ ವ್ಯಕ್ತಿ ಇದೀಗ ಗುಣಮುಖನಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದು ಕಾಲೋನಿಯಲ್ಲಿ ಕ್ವಾರಂಟೈನ್ ನಲ್ಲಿಟ್ಟಿದ್ದ ಎಲ್ಲರಿಗೂ ನೆಗೆಟೀವ್ ಬಂದಿದೆ. ಹೀಗಾಗಿ ಲಾಕ್ ಡೌನ್ ತೆರವುಗೊಳಿಸಿ ಕೆಲಸ ಮಾಡಲು ಅವಕಾಶ ಕೊಡುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದರು.

10ನೇ ವಾರ್ಡ್ ಸೇರಿದಂತೆ ಎಲ್ಲೆಡೆಯೂ ಮೇ 1 ರಿಂದ ಹಾಲು ನಿಲ್ಲಿಸಲಾಗಿದೆ. ಕಾರ್ಪೋರೇಟರ್ ತಮ್ಮ ಸ್ವಂತ ಹಣದಲ್ಲೂ ಕೆಲ ದಿನಗಳು ಹಾಲು ವಿತರಣೆ ಮಾಡಿದರು. ಮನೆಯಲ್ಲಿ ಮಕ್ಕಳಿದ್ದಾರೆ. ಅವರಿಗೆ ಹಾಲು ಇಲ್ಲದೆ ಸುಮ್ಮನಿರಿಸಲು ಆಗುತ್ತಿಲ್ಲ. ಮೊದಲು ಗಂಡಸರಿಗೆ ಕೆಲಸ ಕೊಡಿ. ಅವರು ದುಡಿದು ತಂದು ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾರೆ. ಮನೆಯಲ್ಲಿ ತರಕಾರಿ, ಹಾಲಿಗೂ ದುಡ್ಡಿಲ್ಲ ಎಂದು ನೊಂದ ಮಹಿಳೆಯರು ದೂರಿದರು.

‌ಇದರಿಂದ ಕೆರಳಿದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನವೀನ್‌ ಪ್ರತಿಭಟನಾಕಾರರ ಮೇಲೆ ಹರಿಹಾಯ್ದಿದ್ದಾರೆ. ನೀವು ಗುಂಪುಗೂಡಲು ಅವಕಾಶ ಕೊಟ್ಟಿದ್ಯಾರು? ಒಬ್ಬರಿಗೆ ಪಾಸಿಟಿವ್‌ ಬಂದರೂ ನೀವೆಲ್ಲರೂ ಜವಾಬ್ದಾರರಾಗುತ್ತೀರಿ. ನಿಮಗೇನು ಬೇಕು ನನಗೆ ಹೇಳಿ ಕೊಡಿಸುತ್ತೇನೆ ಎಂದು ಧಮಕಿ ಹಾಕಿದ್ದಾರೆ. ಆದರೆ ಮಹಿಳೆಯರು ಕೇಳುವ ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರ ಇರಲಿಲ್ಲ. ಆಗ ಪೊಲೀಸರು ನೀವು ದಿಢೀರ್ ಪ್ರತಿಭಟನೆ ಮಾಡುತ್ತಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಬೆದಿರಿಸುವ ತಂತ್ರ ಮಾಡಿದರು. ಆದರೂ ಮಹಿಳೆಯರು ತಮ್ಮ ನೋವನ್ನು ತೋಡಿಕೊಂಡರು. ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು. ಹಾಗಾಗಿ ಪೊಲೀಸರು ಕೂಡ ಮೌನಕ್ಕೆ ಶರಣಾದರು.

ಈ ಕುರಿತು ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್, “ತುಮಕೂರು ನಗರದೆಲ್ಲಡೆ ಲಾಕ್ ಡೌನ್ ಸಡಿಲಗೊಳಿಸಲಾಗಿದೆ. ಎಂ.ಜಿ.ರಸ್ತೆಯಲ್ಲಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೂ ಪಿ.ಎಚ್.ಕಾಲೋನಿಯನ್ನು ಸೀಲ್ ಡೌನ್ ಮಾಡಿ ತಾರತಮ್ಯ ಮಾಡಲಾಗುತ್ತಿದೆ. ಹಾಗಾಗಿ ಮಹಿಳೆಯರು ಪ್ರತಿಭಟಿಸುವ ಅನಿವಾರ್ಯತೆ ಎದುರಾಗಿದೆ” ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಪಿ ಎಚ್ ಕಾಲೋನಿಯಲ್ಲಿ ವಾಸಿಸುವ ಕುಟುಂಬಗಳಿಗೆ ರೆಡ್ ಕ್ರಾಸ್ ನಿಂದ ಬಂದಿರುವ ಬೇಳೆ ಮತ್ತು ಆಹಾರದ ಕಿಟ್ ಗಳನ್ನು ಕೊಡುತ್ತೇನೆಂದು ಖಚಿತ ಭರವಸೆ ನೀಡಿದ್ದರು. ಆದರೆ ಈಗ ಮೌನ ವಹಿಸಿದ್ದಾರೆ. ಬೇರೆಯವರು ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ, ಇಲ್ಲಿನ ಜನರನ್ನು ಕತ್ತಲೆಯಲ್ಲಿಡಲಾಗಿದೆ. ಈಗ ಪಿ.ಎಚ್. ಕಾಲೋನಿಯಲ್ಲಿ ಸೋಂಕಿತರು ಇಲ್ಲ. ಹೀಗಾಗಿ ಅವರಿಗೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ಕಳೆದ 14 ದಿನಗಳಿಂದ ತುಮಕೂರು ನಗರದಲ್ಲಿ ಒಂದೂ ಕೊರೊನ ಸೋಂಕಿತ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ದೈಹಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವ್ಯಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....