Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...