Homeಮುಖಪುಟಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ - ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸದಿದ್ದರೆ ಹೋರಾಟ – ಕಾರ್ಮಿಕ ಸಂಘಟನೆಗಳ ಎಚ್ಚರಿಕೆ

- Advertisement -
- Advertisement -

ಕೈಗಾರಿಕೆಗಳ ಮಾಲಿಕರ ಲಾಬಿಗೆ ಮಣಿದ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ವರ್ಗಾವಣೆ ಮಾಡಿರುವುದಕ್ಕೆ ಕಾರ್ಮಿಕ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ತಪ್ಪು ಮಾಡದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಕೊರೊನ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಮಣಿವಣ್ಣನ್ ನೆರವಾಗಿದ್ದರು. ಅವರ ಸಮಸ್ಯೆಗಳಿಗೆ ಕೈಲಾದ ಮಟ್ಟಿಗೆ ಸ್ಪಂದಿಸುತ್ತಿದ್ದರು. ಇಂಥ ಸಮಯದಲ್ಲಿ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉದ್ದಿಮೆಗಳ ಮಾಲಿಕರು ಹಾಕಿದ ಒತ್ತಡದಿಂದಲೇ ಮಣಿವಣ್ಣನ್ ಅವರನ್ನು ಬಿ.ಎಸ್. ಯಡಿಯೂರಪ್ಪ ನೇತೃತೃತ್ವದ ಸರ್ಕಾರ ವರ್ಗಾವಣೆ ಮಾಡಿದೆ. ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರ ಮನಬಂದಂತೆ ಅಧಿಕಾರಿಗಳ ವರ್ಗಾವಣೆಯಲ್ಲಿ ತೊಡಗಿದೆ. ಇದು ಬಿಜೆಪಿ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಜನರು ಕಿಡಿಕಾರಿದ್ದಾರೆ.

ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ  ಸೈಯದ್ ಮುಜೀಬ್ ಮಾತನಾಡಿ, “ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಒತ್ತಡಕ್ಕೆ ಮಣಿದಿರುವುದು ಸ್ವಷ್ಟವಾಗಿದೆ. ಕಾರ್ಮಿಕರ ಪರ, ಸಂವಿಧಾನಬದ್ದವಾಗಿ ಕೆಲಸ ನಿರ್ವಹಿಸುತ್ತಿದ್ದ ಮಣಿವಣ್ಣನ್, ಕೊರೊನ ಸಂದರ್ಭದಲ್ಲಿ ಕಾರ್ಮಿಕರಿಗೆ ಸಂಬಳ ನೀಡದ ಕೈಗಾರಿಕೆಗಳ ಆಡಳಿತ ಮಂಡಳಿ/ಮಾಲಿಕರಿಗೆ ನೋಟಿಸ್ ನೀಡಲು ಮುಂದಾಗಿದ್ದರು. ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದ ಅವರು ಬಡವರ ಪರ ಇದ್ದರು. ಕುಂಟು ನೆಪವೊಡ್ಡಿ ಮಾಲಿಕರ ಸಂಘ ಸರ್ಕಾರದ ಮೇಲೆ ಒತ್ತಡ ಹೇರಿ ವರ್ಗಾವಣೆ ಮಾಡಿದೆ. ವರ್ಗಾವಣೆ ರದ್ದುಪಡಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಲಸೆ ಕಾರ್ಮಿಕರನ್ನು ತವರಿಗೆ ಕಳುಹಿಸುವ ಸಂದರ್ಭದಲ್ಲಿ ಬಿಲ್ಡರ್ ಗಳ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ರೈಲು ಸೇವೆಯನ್ನು ರದ್ದುಗೊಳಿಸಿತ್ತು. ಈಗ ಮಣಿವಣ್ಣನ್ ವರ್ಗಾವಣೆಯಲ್ಲಿ ಮಾಲಿಕರ ಲಾಬಿಗೆ ಸರ್ಕಾರ ಮಣೆ ಹಾಕಿದ್ದು ಬಂಡವಾಳಗಾರರ ಹಿತ ಕಾಯಲು ಬದ್ದತೆ ಪ್ರದರ್ಶಿಸುತ್ತಿದೆ. ಇಂತಹ ತೀರ್ಮಾನಗಳು ಒಳ್ಳೆಯವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿ “ಕೊರೊನ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಅರ್ಥವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳಿಂದ ಹೇಗೆ ಕೆಲಸ ತೆಗೆಸಿಕೊಳ್ಳಬೇಕೆಂಬ ಬಗ್ಗೆ ಸರ್ಕಾರ ಯೋಚಿಸಬೇಕೇ ಹೊರತು ವರ್ಗಾವಣೆ ಪರಿಹಾರವಲ್ಲ. ಯಾವುದೋ ಹಿತಾಸಕ್ತಿಗೆ ವರ್ಗಾವಣೆ ಮಾಡಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಕಾರ್ಮಿಕರಿಗೆ ಬಂದ ಭಾಗ್ಯವೇನು? ಕೊನೊನ ಆಪತ್ಕಾಲದ. ಹಣ ಕಾರ್ಮಿಕರಿಗೆ ಬಂದಿಲ್ಲ. ಕಾರ್ಮಿಕರಿಗೆ ಪರಿಹಾರ ನೀಡಬೇಕಾದ ಹಣಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಕ್ಕಟ್ಟು ಉದ್ಭವಿಸಿರುವ ಸಂದರ್ಭ ಅಧಿಕಾರಿಗಳು ತಪ್ಪು ಮಾಡಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ಇಂತಹ ವೇಳೆ ಸಮಸ್ಯೆ ಬಗೆಹರಿಸುವುದು ಮೊದಲ ಆದ್ಯತೆ ಆಗಬೇಕು. ಆದರೆ ಹೊಸದಾಗಿ ಗೆದ್ದುಬಂದಿರುವವರು ಹಣ ಮಾಡಿಕೊಳ್ಳಲು ಅಧಿಕಾರಿಗಳ ವರ್ಗಾವಣೆಗೆ ಇಳಿದಿದ್ದಾರೆ. ಕಾರ್ಮಿಕ, ಅರಣ್ಯ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕಾರ್ಮಿಕರು ಬೀದೀಲಿ ಇದ್ದಾರೆ ಅವರಿಗೆ ನೆರವು ನೀಡಬೇಕು. ಈ ದಿಕ್ಕಿನತ್ತ ಸಚಿವರು ಯೋಚಿಸಬೇಕು ಎಂದಿದ್ದಾರೆ.

ತುಮಕೂರಿನಲ್ಲಿ ನಗರಸಭೆ ಆಯುಕ್ತರಾಗಿದ್ದಾಗ ಪಿ.ಮಣಿವಣ್ಣನ್ ಉತ್ತಮ ಕೆಲಸ ಮಾಡಿದ್ದರು. ಜನರ ಮೆಚ್ಚುಗೆ ಗಳಿಸಿದ್ದರು. ಇಲ್ಲಿಯೂ ರಾಜಕೀಯ ಮುಖಂಡರ ಲಾಬಿಗೆ ಮಣಿದ ಯಡಿಯೂರಪ್ಪ ಸರ್ಕಾರವೇ ಅಂದು ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿತ್ತು. ಈಗಲೂ ಅದೇ ಯಡಿಯೂರಪ್ಪ ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ. ತಾನು ದಕ್ಷ ಅಧಿಕಾರಿಗಳ ಪರ ಎಂದು ಹೇಳಿಕೊಳ್ಳುವ ಬಿಜೆಪಿ ನಾಯಕರು ಇದೀಗ ತುಟಿ ಹೊಲಿದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ “ಇಂಥ ಸಮಯದಲ್ಲಿ ವರ್ಗಾವಣೆ ಸರಿಯಲ್ಲ. ಕಾರ್ಮಿಕರು ಕೆಲಸ ಕಳೆದುಕೊಂಡಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ 2005ರಲ್ಲಿ ಜಾರಿಗೆ ತಂದಿರುವ ಕಾನೂನುಗಳನ್ನು ಮಣಿವಣ್ಣನ್ ಪಾಲಿಸುತ್ತಿದ್ದರು. ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು. ಕಾರ್ಮಿಕರಿಗೆ  ಸೌಲಭ್ಯ ಕೊಡಿಸುತ್ತಿದ್ದರು. ಅವರ ವರ್ಗಾವಣೆ ಸರ್ಕಾರದ ಲೋಪಕ್ಕೆ ಹಿಡಿದ
ಕನ್ನಡಿ. ಕೂಡಲೇ ವರ್ಗಾವಣೆ ರದ್ದುಗೊಳಿಸಿ ಕಾರ್ಮಿಕ ಪ್ರದಾನ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರಿಸಬೇಕು. ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಐಎಎಸ್ ಅಧಿಕಾರಿ ರವಿ ಸಾವಿನ ಪ್ರಕರಣ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಮುಂದಿಟ್ಟುಕೊಂಡು ಬಿಜೆಪಿ ದಕ್ಷ, ಪ್ರಾಮಾಣಿಕ ಪಾರದರ್ಶಕ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಇಲ್ಲ. ಬಿಜೆಪಿ ಸದಾ ಉತ್ತಮ ಅಧಿಕಾರಿಗಳ ಜೊತೆಗೆ ಇರುತ್ತದೆ ಎಂದು ಹೇಳಿ ರಾಜ್ಯದ್ಯಾಂತ ಪ್ರತಿಭಟನೆ ನಡೆಸಿತ್ತು. ಈಗ ಅದೇ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಮಾಲೀಕರ ಪರವೇ ಹೊರತು ಕಾರ್ಮಿಕರ ಪರ ಅಲ್ಲ. ಇದನ್ನು ಈ ದೇಶದ ಜನಸಾಮಾನ್ಯರು ಮೊದಲು ತಿಳಿದುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...