Homeಕರೋನಾ ತಲ್ಲಣಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

ಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

- Advertisement -
- Advertisement -

ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆಂದು ಉದ್ಯಮಿ ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ಬಾಬಾ ರಾಮದೇವ್ ವಿರುದ್ಧ ಕೇಸು ದಾಖಲಿಸಿದ್ದಾರೆ.

ಕೊರೊನಾ ವೈರಸಿನ ವಿರುದ್ದದ ಹೋರಾಟವನ್ನು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆಜ್ ತಕ್ ಸುದ್ದಿವಾಹಿನಿ ಮತ್ತು ರಾಮ‌ದೇವ್ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಮ‌ದೇವ್ ಅವರನ್ನು ಮಾಧ್ಯಮಗಳಿಂದ ದೂರವಿಡಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಏಪ್ರಿಲ್ 25 ರಂದು ಆಜ್ ತಕ್ ಸುದ್ದಿ ಮಾಧ್ಯಮದ “#Covid19 ಗೆ ಏನು ಪರಿಹಾರ” ಎಂಬ ಕಾರ್ಯಕ್ರಮದಲ್ಲಿ ರಾಮ‌ದೇವ್ ಅವರು ಮೂಗಿನ ಮೂಲಕ ಸಾಸಿವೆ ಎಣ್ಣೆಯನ್ನು ಸುರಿದರೆ ಕೊರೊನಾ ವೈರಸ್ ಸಾಯುತ್ತದೆ ಎಂದು ಸಲಹೆ ನೀಡಿದ್ದರು.

ಅಲ್ಲದೆ ಉಸಿರಾಟವನ್ನು ಒಂದು ನಿಮಿಷ ಹಿಡಿದಿಟ್ಟುಕೊಳ್ಳುವುದರಿಂದ ಒಬ್ಬರಿಗೆ ಕೊರೊನಾ ವೈರಸ್ ಇದೆಯೋ ಇಲ್ಲವೋ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದು ಅವರು ಹೇಳಿದ್ದರು. ಹೀಗೆ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ ವೈರಸ್ ಇಲ್ಲ ಎಂದರ್ಥ, ಪ್ರಾಣಾಯಾಮ ಮಾಡುವುದರಿಂದ ವೈರಸ್ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಲಹೆ ನೀಡಿದ್ದರು.

ಇದಕ್ಕೆ ವಿರುದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ರಾಮದೇವ್ ಬಾಬಾ ವಿರುದ್ಧ ಅರ್ಜಿ ಸಲ್ಲಿಸಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 52 ಮತ್ತು 54 ರ ಅಡಿಯಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 401 (1) (ಬಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ರ ಅಡಿಯಲ್ಲಿ ರಾಮ‌ದೇವ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ವಿನಂತಿಸಿದ್ದರು.

ಬಾಬಾ ರಾಮದೇವ್

ವೆಜಲ್‌ಪುರದ ನಿವಾಸಿಯಾದ ಹಿತೇಂದ್ರ ಪಿಥಾಡಿಯಾ ಅರ್ಜಿಯಲ್ಲಿ, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್, ಸಾಸಿವೆ ಎಣ್ಣೆಯನ್ನು ಬಳಸುವ ಪ್ರಿಸ್ಕ್ರಿಪ್ಷನ್ ಅನ್ನು ಆಧಾರರಹಿತ ಎಂದು ವಿವರಿಸಲಾಗಿದೆ ಎಂದು ಹೇಳಿದ್ದಾರೆ. ಉಸಿರಾಟವನ್ನು ಹಿಡಿದಿಟ್ಟುಕೊಳ್ಳುವುದರಿಂದ ಕೊರೊನಾ ಲಕ್ಷಣಗಳು ಇದೆಯೇ ಎಂದು ಕಂಡುಹಿಡಿಯಲು ಆಗುವುದಿಲ್ಲ. ಈ ಫ್ಯಾಕ್ಟ್ ಚೆಕ್ ಏಪ್ರಿಲ್ 1 ರಂದು ಮಾಡಲಾಗಿದ್ದು, ರಾಮ‌ದೇವ್ ಇನ್ನೂ ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡುವ ಮೂಲಕ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳುತ್ತಲೇ ಇದ್ದಾರೆ ಎಂದು ಹೇಳಲಾಗಿದೆ.

ವೈರಸ್‌ಗೆ ಪರಿಹಾರ ಕಂಡುಕೊಳ್ಳಲು ತಜ್ಞರು, ಸಂಶೋಧಕರು ಮತ್ತು ವೈರಾಲಜಿಸ್ಟ್‌ಗಳು ಕೆಲಸ ಮಾಡುತ್ತಿದ್ದಾರೆ ಎಂಬ ಅಂಶದ ಬಗ್ಗೆ ಅವರು ಗಮನ ಸೆಳೆದಿದ್ದಾರೆ. ಆಜ್ ತಕ್ ಮತ್ತು ರಾಮ‌ದೇವ್ ಈ ವಿಷಯದ ಬಗ್ಗೆ ಯಾವುದೇ ಸಂಶೋಧನೆ ನಡೆಸಿಲ್ಲ ಮತ್ತು ವೈರಸ್‌ಗೆ ಪರಿಹಾರವನ್ನು ಕಂಡುಹಿಡಿಯುವ ಕೆಲಸವನ್ನೂ ಮಾಡುತ್ತಿಲ್ಲ.

ಇದಕ್ಕಾಗಿ ಸುಳ್ಳು ಹಬ್ಬಿಸುತ್ತಿರುವ ಆಜ್ತಕ್ ಮತ್ತು ಬಾಬಾ ರಾಮದೇವ್ ಇಬ್ಬರ ವಿರುದ್ಧವೂ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಕೇಳಿದ್ದಾರೆ. ದಾರಿತಪ್ಪಿಸುವ ಮತ್ತು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆಜ್ ತಕ್ ಸಾರ್ವಜನಿಕ ಕ್ಷಮೆಯಾಚಿಸಬೇಕು ಹಾಗೂ ಬಾಬಾ ರಾಮದೇವ್ ಅವರನ್ನು ಸುಳ್ಳು ಪ್ರಚಾರ ಮಾಡದಂತೆ ಮಾಧ್ಯಮಗಳಿಂದ ದೂರವಿಡಬೇಕು ಎಂದು ಕೇಳಿಕೊಳ್ಳಲಾಗಿದೆ.


ಓದಿ: ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ: ರಾಮ್‌ ದೇವ್


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(Facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...