Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...