Homeಮುಖಪುಟಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಕಚೇರಿ ತರಾತುರಿ ಮಾಡಿದ್ದೇಕೆ? ಈಗ ಹಿಂದಕ್ಕೆ ಕಳಿಸಿದ್ದು ನಿಜವಾ?

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಕಚೇರಿ ತರಾತುರಿ ಮಾಡಿದ್ದೇಕೆ? ಈಗ ಹಿಂದಕ್ಕೆ ಕಳಿಸಿದ್ದು ನಿಜವಾ?

ಇಂದು ರಾಜ್ಯಸರ್ಕಾರವು ಕಾಯ್ದೆಗೆ ತಿದ್ದುಪಡಿ ತರುವುದಕ್ಕಾಗಿ ಸುಗ್ರಿವಾಜ್ಞೆ ವಿಧೇಯಕದ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಕಳಿಸಿದ್ದು ಆಶ್ಚರ್ಯಕರ ರೀತಿಯಲ್ಲಿ ರಾಜ್ಯಪಾಲರು ಅದಕ್ಕೆ ಸಹಿ ಹಾಕದೇ ವಾಪಸ್‌ ಕಳಿಸಿದ್ದಾರೆ ಎಂಬು ಸುದ್ದಿ ತಿಳಿದುಬಂದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ತಾನೇ ಕಾಯ್ದೆಯನ್ನು ತರಲು ಹೊರಟುಬಿಟ್ಟಿದ್ದ ಒಕ್ಕೂಟ ಸರ್ಕಾರವು ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಈ ನಡುವೆ ಕರ್ನಾಟಕದ ರಾಜ್ಯಪಾಲರ ಕಚೇರಿಯು ಸರ್ಕಾರಕ್ಕೆ ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿಯು ತಡವಾಗಿ ಹೊರಬಿದ್ದಿದೆ. ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ರಾಜ್ಯಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಈಗಾಗಲೇ ಸಾಕಷ್ಟು ಓಡಾಡಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿದೆ.

ರಾಜ್ಯಪಾಲರ ಕಚೇರಿಯು ಈ ಕುರಿತು ಬೇಗ ಸುಗ್ರಿವಾಜ್ಞೆ ವಿಧೇಯಕ ಕಳಿಸಬೇಕೆಂದು ಪಟ್ಟು ಹಿಡಿದಿದ್ದಕ್ಕೂ ಕೇಂದ್ರ ಸರ್ಕಾರದ ಒತ್ತಡವೇ ಕಾರಣ ಎನ್ನಲಾಗಿದೆ. ಎಪಿಎಂಸಿ ರಾಜ್ಯಪಟ್ಟಿಯಲ್ಲಿರುವುದರಿಂದ ಕೇಂದ್ರವು ತುಂಬಾ ಒತ್ತಡ ಹೇರಲು ಸಾಧ್ಯವಿಲ್ಲದ್ದರಿಂದ ರಾಜ್ಯಪಾಲರ ಕಚೇರಿಯನ್ನು ಬಳಸಿಕೊಂಡು ಒತ್ತಡ ಹೇರಿರುವ ಸಾಧ್ಯತೆಯಿದೆ.

ವಾಪಸ್‌ ಕಳಿಸಿದರೇ ರಾಜ್ಯಪಾಲರು?

ಇನ್ನು ಇಂದು ರಾಜ್ಯಸರ್ಕಾರವು ಕಾಯ್ದೆಗೆ ತಿದ್ದುಪಡಿ ತರುವುದಕ್ಕಾಗಿ ಸುಗ್ರಿವಾಜ್ಞೆ ವಿಧೇಯಕದ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಕಳಿಸಿದ್ದು ಆಶ್ಚರ್ಯಕರ ರೀತಿಯಲ್ಲಿ ರಾಜ್ಯಪಾಲರು ಅದಕ್ಕೆ ಸಹಿ ಹಾಕದೇ ವಾಪಸ್‌ ಕಳಿಸಿದ್ದಾರೆ ಎಂಬು ಸುದ್ದಿ ತಿಳಿದುಬಂದಿದೆ.

ವಿಧೇಯಕಕ್ಕಾಗಿ ತರಾತುರಿ ಮಾಡಿದ ರಾಜ್ಯಪಾಲರು ಈಗ ಏಕಾಏಕಿ ವಿಧೇಯಕಕ್ಕೆ ಸಹಿ ಮಾಡದೇ ವಾಪಸ್‌ ಕಳಿಸಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ. ಇಂದು ಬೆಳಿಗ್ಗೆಯಿಂದಲೇ ರೈತ ಸಂಘಟನೆಗಳ ಪ್ರಬಲ ವಿರೋಧ, ವಿರೋಧ ಪಕ್ಷಗಳ ಟೀಕೆಗೆ ಬೆದರಿ ರಾಜ್ಯಪಾಲರು ವಿಧೇಯಕಕ್ಕೆ ಸಹಿ ಮಾಡಿಲ್ಲ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಅದು ಎಷ್ಟರ ಮಟ್ಟಿಗೆ ನಿಜ ಎಂದು ಗೊತ್ತಾಗಲು ನಾಳೆಯವರೆಗೆ ಕಾಯಬೇಕು. ಅಂತಿಮವಾಗಿ ಎಪಿಎಂಸಿ ಕಾಯ್ದೆಯ ತಿದ್ದುಪಡಿ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಕಾರ್ಮಿಕರ ಮತ್ತು ರೈತರ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...