Homeಮುಖಪುಟಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ ಎಂದು ಪಿ. ಚಿದಂಬರಂ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಮತ್ತು ಲಾಕ್ ಡೌನ್‌ನಿಂದಾಗಿ ಆರ್ಥಿಕತೆಯೆಯ ಮೇಲಾದ ಪರಿಣಾಮವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜಿನ ಮಾಹಿತಿಯನ್ನು ಇಂದು ಸಂಜೆ 4 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.

ನಿನ್ನೆ ರಾತ್ರಿ 8 ಗಂಟೆಗೆ  ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಭಾರತದ ಜಿಡಿಪಿಯ ಶೇಕಡಾ 10 ರಷ್ಟು ಅಂದರೆ 20 ಲಕ್ಷ ಕೋಟಿ ರೂ.ಗಳನ್ನು ಆರ್ಥಿಕ ಮತ್ತು ವಿತ್ತೀಯ ಕ್ರಮಗಳಲ್ಲಿ 50 ದಿನಗಳ ಕೊರೊನಾ ಲಾಕ್‌ಡೌನ್‌ನಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ಬೆಂಬಲಿಸಲು ಘೋಷಿಸಿದರು.

ಈ ಪ್ಯಾಕೇಜ್‌ನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶವು ಲಾಕ್‌ಡೌನ್‌ಗೆ ಮೊರೆಹೋದ ಕೆಲವು ದಿನಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಘೋಷಿಸಿದ್ದ 1.74 ಲಕ್ಷ ಕೋಟಿ ರೂ.ಗಳ ನಿಧಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ನಿನ್ನೆ ರಾತ್ರಿಯೇ ಪ್ಯಾಕೇಜಿನ ವಿವರಗಳನ್ನು ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ ಎಂದು ಹೇಳಿದ್ದರು. ಪ್ರಧಾನಿಯ ಭಾಷಣದ ನಂತರದ ಸರಣಿ ಟ್ವೀಟ್‌ಗಳಲ್ಲಿ, ಹಣಕಾಸು ಸಚಿವರು ಇದನ್ನು ಕೇವಲ ಹಣಕಾಸಿನ ಪ್ಯಾಕೇಜ್ ಮಾತ್ರವಲ್ಲದೆ “ಸುಧಾರಣಾ ಪ್ರಚೋದನೆ ಮತ್ತು ಮನಸ್ಥಿತಿಯ ಕೂಲಂಕುಷ ಪರೀಕ್ಷೆ” ಎಂದು ಕರೆದಿದ್ದಾರೆ.

“#ಆತ್ಮನಿರ್ಭರಭಾರತ್ ಅಭಿಯಾನ ಕೇವಲ ಹಣಕಾಸಿನ ಪ್ಯಾಕೇಜ್ ಆಗಿರಬಾರದು, ಅದು ಸುಧಾರಣಾ ಪ್ರಚೋದನೆ, ಮನಸ್ಥಿತಿ ಕೂಲಂಕುಷ ಪರೀಕ್ಷೆ ಮತ್ತು ಆಡಳಿತದಲ್ಲಿ ಹೆಚ್ಚಿನ ಒತ್ತು ನೀಡಲಿದೆ”ಎಂದು ಸೀತಾರಾಮನ್ ಪೋಸ್ಟ್ ಮಾಡಿದ್ದಾರೆ.

ಶಿರ್ಷಿಕೆಯೊಂದಿಗೆ ಖಾಲಿ ಪುಟ ಕೊಟ್ಟ ಪ್ರಧಾನಿ: ಪಿ. ಚಿದಂಬರಂ 

ಪ್ರಧಾನಿ ಶೀರ್ಷಿಕೆಯೊಂದಿಗೆ ಖಾಲಿ ಪುಟವನ್ನು ನಮಗೆ ಕೊಟ್ಟಿದ್ದಾರೆ, ಖಾಲಿ ಬಿಟ್ಟ ಪುಟವನ್ನು ಇಂದು ಹಣಕಾಸು ಸಚಿವರು ಭರ್ತಿ ಮಾಡುವುದನ್ನು ನಾವು ಎದುರುನೋಡುತ್ತಿದ್ದೇವೆ. ಸರ್ಕಾರವು ಆರ್ಥಿಕತೆಗೆ ಹೆಚ್ಚುವರಿಯಾಗಿ ನೀಡುವ ಪ್ರತಿಯೊಂದು ರೂಪಾಯಿಯನ್ನೂ ನಾವು ಎಚ್ಚರಿಕೆಯಿಂದ ಎಣಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಯಾರಿಗೆ ಏನು ಸಿಗುತ್ತದೆ ಎಂಬುದನ್ನೂ ನಾವು ಎಚ್ಚರಿಕೆಯಿಂದ ಪರಿಶೀಲಿಸುತ್ತೇವೆ. ಬಡವರು, ಹಸಿವಿನಿಂದ ಕಂಗೆಟ್ಟಿರುವವರು ಮತ್ತು ಕೆಲಸದ ಸ್ಥಳಗಳಿಂದ ಬೇರ್ಪಟ್ಟು ನೂರಾರು ಕಿಲೋ ಮೀಟರ್ ದೂರ ನಡೆದು ತವರು ರಾಜ್ಯಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಏನು ಸಿಗಬಹುದು ಎಂಬುದನ್ನು ಮೊದಲು ಗಮನಿಸುತ್ತೇವೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.


ಓದಿ: ಯಡಿಯೂರಪ್ಪನವರು ಮೋದಿ ಬಳಿ ಕೋವಿಡ್‌ ಪ್ಯಾಕೇಜ್‌ ಕೇಳಬೇಕು – ಕುಮಾರಸ್ವಾಮಿ


ವಿಡಿಯೋ ನೋಡಿ: ಈಡೇರದ ಭರವಸೆಗಳು, ಮುಚ್ಚಿ ಹೋದ ಹಗರಣಗಳು, ಕರ್ನಾಟಕಕ್ಕಾದ ಅನ್ಯಾಯ ಮತ್ತು ಕೊರೊನಾ. ಸದ್ದು…… ಈ ಸುದ್ದಿಗಳೇನಾದವು?-8 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...