Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್ : ಟ್ವಿಟ್ಟರ್‌ನಲ್ಲಿ ಪರ-ವಿರೋಧ ಸಮರ

20 ಲಕ್ಷ ಕೋಟಿ ಪ್ಯಾಕೇಜ್ : ಟ್ವಿಟ್ಟರ್‌ನಲ್ಲಿ ಪರ-ವಿರೋಧ ಸಮರ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ಘೋಷಿಸಿದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಬಗ್ಗೆ ಟ್ವಿಟ್ಟರ್‌ನಲ್ಲಿ ನೆಟ್ಟಿಗರು ಪರ-ವಿರೋಧ ಸಮರದಲ್ಲಿ ತೊಡಗಿದ್ದಾರೆ.

ನಿನ್ನೆ ರಾತ್ರಿ ಪ್ರಧಾನಿ ಪ್ಯಾಕೇಜ್‌ ಅನ್ನು ಘೋಷಿಸುತ್ತಿದ್ದಂತೆ ಟ್ವಿಟ್ಟರ್‌ನಲ್ಲಿ ಪರವಿರೋಧದ ಸಮರಗಳು ಪ್ರಾರಂಭವಾಗಿದೆ. ವಿರೋಧಿಸುವವರು ಪ್ರಧಾನಿ ಇದುವರೆಗೂ ಘೋಷಿಸಿದ ಘೋಷಣೆಗಳೇ ಈಡೇರಿಲ್ಲ, ಇದು ಕೂಡಾ ಹಿಂದಿನಂತೆಯೆ ಘೋಷಣೆಯಾಗಿಯೇ ಉಳಿಯಲಿದೆ ಎಂದು ಹೇಳಿದರೆ, ಪರವಿರುವವರು ಪ್ರಧಾನಿ ಮೋದಿಯವರಿಗೆ ಅಭಿನಂಧನೆ ಸಲ್ಲಿಸಿ, ಸ್ವದೇಶಿ ವಸ್ತುಗಳನ್ನು ಬಳಸುವಂತೆ ಅಭಿಯಾನ ನಡೆಸುತ್ತಿದ್ದಾರೆ.

ಗೌರವ್ ಕಪೂರ್ ಎಂಬವರು ಕಾರ್ಟೂನೊಂದನ್ನು ಹಾಕಿ ಮೋದಿ ಘೋಷಿಸಿದ ಪ್ಯಾಕೇಜ್ ಕೇವಲ ಒಂದು ಹಾಸ್ಯ ಎಂಬಂತೆ ತೋರಿಸಿದ್ದಾರೆ.

ಅನಸ್ ಖುರೇಸಿ ಎಂಬವರು 20 ಲಕ್ಷಕ್ಕೆ ಎಷ್ಟು ಸೊನ್ನೆ ಇದೆಯೆಂದು ಹಣಕಾಸು ಸಚಿವರಿಗೆ ಕೂಡಾ ತಿಳಿದಿರಲಿಕ್ಕಿಲ್ಲ, ಸಂಬಿತ್ ಪಾತ್ರಾ ಅವರೇ ಇದರ ಬಗ್ಗೆ ಅದಾದುದ್ದೀನ್ ಅವರಿಗೆ ತರಗತಿ ತಗೆದುಕೊಳ್ಳಿ ಎಂದು ಹೇಳಿದ್ದಾರೆ.

ಗೌತಮ್ ತ್ರಿವೇದಿ ಅವರು ಟ್ವೀಟ್ ಮಾಡಿ “ಬಿಹಾರದಲ್ಲಿ ಚುನಾವಣೆಯಯ ಕಾಲದಲ್ಲಿ 1.25 ಲಕ್ಷದ ಬಗ್ಗೆ ಹೇಳಲಾಗಿತ್ತು, ಈಗ 20 ಲಕ್ಷ ಕೋಟಿ” ಎಂದು ಹೇಳಿದ್ದಾರೆ.

ಹಾಗೆಯೆ ಮೋದಿಯ ಪರ ಕೂಡಾ ಹಲವರು ಟ್ವೀಟ್ ಮಾಡಿದ್ದು, ಸ್ವದೇಶಿ ವಸ್ತುಗಳನ್ನು ಬಳಸುವಂತೆ ಅಭಿಯಾನ ನಡೆಸುತ್ತಿದ್ದಾರೆ.

ಬಿಪುಲ್ ಎನ್ನುವವರು ಕಾಂಗ್ರೇಸಿನ ಉದಿತ್ ರಾಜ್ ಅವರ ದ್ವಂದ್ವತೆಯ ಬಗ್ಗೆ ಗಮನ ಸೆಳೆದಿದ್ದು, ಈ ಹಿಂದೆ ಉದಿತ್ ಅವರು ಈ ಹಿಂದೆ ಹಾಗೂ ಈಗಿನ ಹೇಳಿಕೆಯನ್ನು ಹಾಕಿ, ವಿರೋಧಿಗಳು ಹೀಗಿರುತ್ತಾರೆ ಎಂದು ಹೇಳಿದ್ದಾರೆ.

ಪುಷ್ಪೇಂದ್ರ ಎಂಬವರು, ಇತಿಹಾಸದಲ್ಲೇ ಅತೀ ದೊಡ್ಡ ಪ್ಯಾಕೇಜನ್ನು ನರೇಂದ್ರ ಮೋದಿ ಘೋಷಿಸಿದ್ದಾರೆ, ಇದು ಭಾರತದ ಜಿಡಿಪಿಯ 10% ಆಗಿದೆ. ಮೋದಿ ಉತ್ತಮ ಪ್ರಧಾನ ಮಂತ್ರಿ ಎಂದು ನಾವು ಒಪ್ಪಿಕೊಳ್ಳುತ್ತೇವೆ ಬರೆದುಕೊಂಡಿದ್ದಾರೆ.


ಓದಿ:  ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ರಿಂದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಣೆ


ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...