Homeಚಳವಳಿಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು

ಮೇ 16 ನ್ಯಾಯದ ದಿನ : ಡಾ. ಆನಂದ್ ತೇಲ್ತುಂಬ್ಡೆ ಪರ ದನಿಯೆತ್ತಿದ ಚಿಂತಕರು

ನ್ಯಾಯದ ದಿನವನ್ನು ಆಚರಿಸುವುದರ ಮೂಲಕ ನಮ್ಮ ಸಂವಿಧಾನದ ಮೌಲ್ಯಗಳನ್ನು ಸಮರ್ಥಿಸೋಣ ಮತ್ತು ಪ್ರಜೆಯಾಗಿ ನಮ್ಮ ಕರ್ತವ್ಯವನ್ನು ನೆರವೇರಿಸೋಣ ಎಂದು ಹೇಳಿಕೆಯಲ್ಲಿ ದೇವನೂರು ಮಹಾದೇವರವರು ತಿಳಿಸಿದ್ದಾರೆ.

- Advertisement -
- Advertisement -

ಮೇ 16ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ, ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಆನಂದ್ ತೇಲ್ತುಂಬ್ಡೆ ಮತ್ತಿತರ ಚಿಂತಕರ ಬೆಂಬಲಕ್ಕೆ ನಿಲ್ಲೋಣ ಎಂದು ದೇವನೂರು ಮಹಾದೇವರವರು ಕರೆ ನೀಡಿದ್ದಾರೆ.

ಈ ಕುರಿತು 35 ಚಿಂತಕರ, ಹೋರಾಟಗಾರರ, ಪತ್ರಕರ್ತರ ಸಹಿಯುಳ್ಳ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ಒಂದು ತಿಂಗಳಾಗುತ್ತದೆ. ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕ. ಅವರೊಂದಿಗೆ ಹಾಗು ಭೀಮಾಕೋರೆಗಾವ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿಂತಕರೊಂದಿಗೆ ನಾವಿದ್ದೀವಿ ಎನ್ನುವುದನ್ನು ವ್ಯಕ್ತಪಡಿಸಲು ಮೇ 16 ರಂದು ನಾವೆಲ್ಲರೂ ನ್ಯಾಯ ದಿನವನ್ನಾಗಿ ಆಚರಿಸೋಣ ಎಂದು ಮನವಿ ಮಾಡಿಕೊಳ್ಳುತ್ತೇವೆ.

ಡಾ. ತೆಲ್ತುಂಬ್ಡೆಯವರು ಇಂದು ನ್ಯಾಯದ ಒಂದು ರಾಷ್ಟ್ರೀಯ ಸಂಕೇತವಾಗಿದ್ದಾರೆ. ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಬಡ ದಲಿತ ಕುಟುಂಬದಲ್ಲಿ ಹುಟ್ಟಿದರು. ಪೇಂಟರ್ ಆಗಿ ದುಡಿದು ವಿದ್ಯಾಭ್ಯಾಸ ಮಾಡಿದರು. ನಂತರ ಮೆಕಾನಿಕಲ್‌ ಇಂಜಿನಿಯರ್ ಆದವರು. ಆಮೇಲೆ ಸೈಬರ್‌ ನೆಟಿಕ್ಸ್‌ನಲ್ಲಿ ಡಾಕ್ಟರೇಟ್ ಮಾಡಿದರು. ಅಹಮದಾಬಾದಿನ ಐಐಎಂನಲ್ಲಿ ಎಂಬಿಎ ಮುಗಿಸಿದರು. ದೇಶದಲ್ಲಿ ಡೇಟಾ ಅನಾಲಿಸಿಸ್ ಪ್ರಾರಂಭಿಸಿದ ಪ್ರಮುಖರಲ್ಲಿ ಅವರೂ ಒಬ್ಬರು. ಸಾರ್ವಜನಿಕ ಸ್ವಾಮ್ಯದ ಪೆಟ್ರೊನೆಟ್ ಇಂಡಿಯ ಕಂಪೆನಿಯಲ್ಲಿ ನಿರ್ವಾಹಕ ನಿರ್ದೇಶಕರು ಮತ್ತು ಸಿಇಒ ಆಗಿದ್ದರು. ಐಐಟಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಬಂಧನವಾಗುವ ಸಮಯದಲ್ಲಿ ಗೋವಾ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟಿನಲ್ಲಿ ಬಿಗ್ ಡೇಟಾ ಅನಲಿಟಿಕ್ಸ್‌ನಲ್ಲಿ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿದ್ದರು. ಇವರು, ಬಾಬಾಸಾಹೇಬರ ಮೊಮ್ಮಗಳನ್ನು ಮದುವೆ ಆಗಿದ್ದಾರೆ.  ಜೊತೆಗೆ ತೇಲ್ತುಂಬ್ಡೆಯವರ ಬದುಕೂ ಕೂಡ ಬಾಬಾಸಾಹೇಬ್ ಅಂಬೇಡ್ಕರರ ಬದುಕನ್ನೇ ನೆನಪಿಸುತ್ತದೆ.

ಕಳೆದ ಎರಡು ದಶಕಗಳಲ್ಲಿ ತೆಲ್ತುಂಬ್ಡೆ ಭಾರತದ ಸಾಮಾಜಿಕ ನ್ಯಾಯದ ವಿಷಯದಲ್ಲಿ ಸುಸಂಬದ್ಧ ಹಾಗೂ ಗೌರವಯುತ ದನಿಯಾಗಿದ್ದಾರೆ. ತಮ್ಮ ಬರಹಗಳು ಹಾಗೂ ಸಾಮಾಜಿಕ ಮುಖಾಮುಖಿಯ ಮೂಲಕ ಜಾತಿ  ಹಾಗೂ ಇನ್ನಿತರ ಶೋಷಣೆಯ ಸ್ವರೂಪಗಳ ವಿರುದ್ಧ ಧ್ವನಿಯೆತ್ತಿದ್ದಾರೆ. ಅದರ ಜೊತೆಯಲ್ಲೇ ಎಲ್ಲಾ ರೀತಿಯ ಕುರುಡು ನಂಬಿಕೆಗಳು ಹಾಗೂ ಸಾಂಪ್ರದಾಯಿಕತೆಯನ್ನು ಪ್ರಶ್ನಿಸುತ್ತಿದ್ದಾರೆ. ತಮ್ಮ ಚಿಂತನೆಗಳ ಮೂಲಕ ಬಾಬಾಸಾಹೇಬರ ವಿಚಾರಗಳನ್ನು ಪ್ರತಿಪಾದಿಸುತ್ತಾ ಮತ್ತು ಅವುಗಳನ್ನು ವಿಸ್ತರಿಸುತ್ತಾ ಸಾಗಿದ್ದಾರೆ. ಅದರ ಜೊತೆಗೆ ಅವರು ಡಾ.ಅಂಬೇಡ್ಕರರನ್ನು ದೇವರನ್ನಾಗಿ ಮಾಡುವ ಪ್ರಯತ್ನದ ವಿರುದ್ಧವು ನಮ್ಮನ್ನು ಎಚ್ಚರಿಸುತ್ತಿದ್ದಾರೆ. ಸಾಮಾಜಿಕ ನ್ಯಾಯವನ್ನು ಕುರಿತಂತೆ ನಮ್ಮ ಚಿಂತನೆಯ ಪರಿಧಿಯನ್ನೇ ಅವರು ವಿಸ್ತರಿಸಿದ್ದಾರೆ ಎನ್ನಬಹುದು. ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಮಾನವ ಹಕ್ಕುಗಳ ಬಗ್ಗೆ ಅವರದು ಉತ್ಕಟವಾದ ಬದ್ಧತೆ. ಆ ಬದ್ಧತೆಯಿಂದಾಗಿಯೇ ಅವರು ಈಗಿರುವ ಸರ್ಕಾರವೂ ಸೇರಿದಂತೆ ಎಲ್ಲಾ ಸರ್ಕಾರಗಳ ನೀತಿಗಳನ್ನು ನಿಷ್ಠುರವಾಗಿ ಪ್ರಶ್ನಿಸಿತ್ತಾ ಬಂದಿದ್ದಾರೆ. ಬಾಬಾಸಾಹೇಬರ ಹುಟ್ಟುಹಬ್ಬದಂದೇ ಅವರು ಬಂಧನಕ್ಕೆ ಒಳಗಾಗಿರುವುದು ಇಂದಿನ ಶೋಷಕ ವ್ಯವಸ್ಥೆಯ ಮೂಲವನ್ನು ಅವರು ಅಂಬೇಡ್ಕರ್‌ರಂತೆಯೇ ಕಟುವಾಗಿ ಟೀಕಿಸುತ್ತಿರುವುದೆ ಕಾರಣ ಎಂಬ ತೀರ್ಮಾನಕ್ಕೆ ನಾವು ಬರುವಂತಾಗಿದೆ.

ನ್ಯಾಯದ ಸಂಕೇತವಾಗಿದ್ದ ಇಂತಹ ವ್ಯಕ್ತಿ ಇಂದು ಅನ್ಯಾಯದ ವ್ಯವಸ್ಥೆಯ ಬಂಧಿಯಾಗಿರುವುದು ಒಂದು ದೊಡ್ಡ ದುರಂತ. ತೇಲ್ತುಂಬ್ಡೆಯವರು ಬದುಕಿಡೀ ಹಿಂಸೆ ಮತ್ತು ಬಲಪ್ರಯೋಗವನ್ನು ವಿರೋಧಿಸುತ್ತಾ ಬಂದವರು. ಆದರೀಗ ಅವರ ಮೇಲೆಯೇ ರಾಜಕೀಯ ಹಿಂಸೆಯನ್ನು ಯೋಜಿಸಿದರು ಎಂಬ ಆರೋಪ ಹೊರಿಸಲಾಗಿದೆ.  ಇದಕ್ಕೆ ನೆಪವಾದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಕರೆ ನೀಡಿದ್ದವರು ಉನ್ನತ ನ್ಯಾಯಾಲಯದ ಇಬ್ಬರು ನ್ಯಾಯಾಧೀಶರು. ತೆಲ್ತುಂಬ್ಡೆಯವರು ಅದರಲ್ಲಿ ಭಾಗವಹಿಸಿಯೂ ಇರಲಿಲ್ಲ. ವಸ್ತುಸ್ಥಿತಿ ಹೀಗಿದ್ದಾಗಲೂ ಇವರು ಸಮಾವೇಶದ ಮೂಲಕ ರಾಜಕೀಯ ಹಿಂಸೆಯನ್ನು ಯೋಜಿಸಿದರು ಎನ್ನುವ ಆರೋಪ ಹೊರಿಸಲಾಗಿದೆ. ಇದು ನಿಜಕ್ಕೂ ತುಂಬಾ ಆತಂಕದ ವಿಷಯ. ಅಷ್ಟೇ  ಅಲ್ಲ ಅದು ಒಂದು ಸಣ್ಣ ಪುರಾವೆಯೂ ಇಲ್ಲದೆ ಕೆಲವು ಕ್ಷುಲಕ ಆರೋಪಗಳ ಜೊತೆಗೆ ಪ್ರಧಾನ ಮಂತ್ರಿಯ ಕೊಲೆಯ ಸಂಚಿನ ಆರೋಪವನ್ನೂ ತೇಲ್ತುಂಬ್ಡೆಯವರ ಮೇಲೆ ಹೊರಿಸಲಾಗಿದೆ. ಇದು ನಿಜಕ್ಕೂ ಹಾಸ್ಯಾಸ್ಪದ. ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಿ, ನ್ಯಾಯಯುತ ವಿಚಾರಣೆಯ ಸಾಧ್ಯತೆ ತೆರೆದುಕೊಳ್ಳುತ್ತಿದ್ದಂತಯೇ ಆ ವಿಚಾರಣೆಯನ್ನೇ ಡಿಢೀರನೇ ಮಹಾರಾಷ್ಟ್ರ ಪೋಲಿಸರಿಂದ ರಾಷ್ಟ್ರೀಯ ವಿಚಾರಣಾ ಏಜೆನ್ಸಿಗೆ (ಎನ್.ಐ.ಎ.) ಏಕಪಕ್ಷಿಯವಾಗಿ ಕೈಗೆತ್ತಿಕೊಂಡಿರುವ ಪ್ರಕ್ರಿಯೆ ತೀರ ಅನುಮಾನಸ್ಪದಾಗಿದೆ.  ಈ ಹಿನ್ನಲೆಯಲ್ಲಿ, ಡಾ. ತೇಲ್ತುಂಬ್ಡೆ ಮತ್ತಿತರ ಕಾರ್ಯಕರ್ತರಿಗೆ ನ್ಯಾಯಯುತ ಮುಕ್ತ ವಿಚಾರಗಳಿಂದ ಅವರನ್ನು ವಂಚಲಿಸಕ್ಕಾಗಿಯೇ ಜಾಮೀನು ಸಿಗದ ಹಾಗೂ ನ್ಯಾಯಯುತ ವಿಚಾರಣೆಯೂ ಜರುಗದ ಪೈಶಾಚಿಕ ಯು.ಎ.ಪಿ.ಎ. (UAPA) ಕಾಯ್ದೆಯಡಿ ಬಂಧಿಸಿರುವುದು ಸ್ವಯಂ ಸ್ಪಷ್ಟವಾಗಿದೆ.

ಸೂಕ್ಷ್ಮ ಆರೋಗ್ಯ ಪರಿಸ್ಥಿತಿಯ ತೇಲ್ತುಂಬ್ಡೆಯವರನ್ನು ಕೋವಿಡ್-19ರ ಸೋಂಕು ತಗಲುವ ಸಾಧ್ಯತೆಯಿರುವ ಇಂದಿನ ಸಂದರ್ಭದಲ್ಲಿ, ಜೈಲಲ್ಲಿರುವ ಅಪರಾಧಿಗಳನ್ನೇ ಕೋವಿಡ್-19 ರ ಸೋಂಕಿನ ವಾತಾವರಣದಿಂದಾಗಿ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ 69 ವರ್ಷದ ಹಿರಿಯರಾದ ತೇಲ್ತುಂಬ್ಡೆಯವರನ್ನು ಜೈಲಿಗೆ ಕಳುಹಿಸಿದ್ದು ಕ್ರೌರ್ಯದ ಪರಮಾವಧಿ ಎನ್ನಬೇಕಾಗುತ್ತದೆ.

ಸಮಾಜದ ಅನ್ಯಾಯದ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸೆರೆಯಲ್ಲಿರುವ ಡಾ. ತೆಲ್ತುಂಬ್ಡೆ, ಜಗತ್ತಿನಾದ್ಯಂತ ಶೋಷಣೆ ಹಾಗೂ ಅನ್ಯಾಯದ ವಿರುದ್ಧದ ದನಿಯನ್ನು ಪ್ರತಿನಿಧಿಸುತ್ತಾರೆ. ಅದರಿಂದಾಗಿಯೇ ಜಿಜ್ಞಾಸುಗಳು, ಚಿಂತಕರು, ಕಲಾವಿದರು, ಕಾರ್ಯಕರ್ತರು, ಮುಖಂಡರು, ಮತ್ತು ನಾಗರಿಕ ಹಕ್ಕುಗಳ ಸಂಘಟನೆಗಳು ಭಾರತದಲ್ಲಿ ಮತ್ತು ವಿದೇಶಗಳಲ್ಲಿ ಅವರ ಬಂಧನದ ವಿರುದ್ಧ ಧ್ವನಿಯೆತ್ತಿದ್ದಾರೆ. ಅವರಲ್ಲಿ ಪ್ರಮುಖರಾದವರು ಅಮ್ನೆಸ್ಟಿ ಇಂಟರ್ ನ್ಯಾಷನಲ್, ಇಂಡಿಯಾ ಸಿವಿಲ್ ವಾಚ್, ರಿಸ್ಕ್ ನೆಟ್ ವರ್ಕನ ವಿದ್ವಾಂಸರುಗಳು, ಪ್ರೊಫೆಸರ್ ಅಮರ್ತ್ಯ ಸೇನ್, ನೋಮ್‌ಚಾಮ್ಸ್ಕಿ, ಜೀನ್‌ಡ್ರೇಜ್, ಬಿ ಎಲ್ ಮುಂಗೇಕರ್, ಅರುಂಧತಿರಾಯ್, ಅಪರ್ಣಾ ಸೇನ್, ರೋಮಿಲಾಥಾಪರ್, ಪ್ರಭಾತ್ ಪಟ್ನಾಯಕ್, ದೇವಕಿಜೈನ್, ಪ್ರಕಾಶ್‌ಅಂಬೇಡ್ಕರ್, ಮಜದಾರೂವಾಲ  ಮುಂತಾದವರು ಸೇರಿದಂತೆ 5000ಕ್ಕೂ ಹೆಚ್ಚು ಪ್ರಜ್ಘಾವಂತ ನಾಗರಿಕರು ದನಿಯೆತ್ತಿದ್ದಾರೆ.

ಇದಕ್ಕೆ ನಾವೂ ಜತೆಗೂಡಬೇಕಾಗಿದೆ. ಅದಕ್ಕಾಗಿ ಮೇ 16 ನೇ ದಿನವನ್ನು ನ್ಯಾಯ ದಿನವನ್ನಾಗಿ ಆಚರಿಸೋಣ ಎಂದು ಸಲಹೆ ನೀಡುತ್ತೇವೆ. ಡಾ.ತೇಲ್ತುಂಬ್ಡೆ ಮತ್ತು ಅವರೊಡನೆ ಆರೋಪ ಎದುರಿಸುತ್ತಿರುವ ಕಾರ್ಯಕರ್ತರಿಗೆ ನ್ಯಾಯ ದೊರಕಿಸಲು ಒತ್ತಾಯಿಸಲು ಹಾಗೂ ಅವರು ಎತ್ತಿಹಿಡಿದ ಒಂದು ನ್ಯಾಯಯುತ ಸಮಾಜದ ವಿಚಾರವನ್ನು ಬೆಂಬಲಿಸಲು ಮೇ 16 ರಂದು ನ್ಯಾಯದ ದಿನವನ್ನಾಗಿ ಆಚರಿಸೋಣ.

ಇಂದು ಕೊರೋನಾ ವೈರಾಣುವಿನ ಪಿಡುಗಿನ ಕಾರಣದಿಂದಾಗಿ ಸಾರ್ವಜನಿಕವಾಗಿ ಸೇರುವುದಕ್ಕೆ ನಿರ್ಬಂಧವಿರುವುದರಿಂದ ಮೇ 16 ರ ನ್ಯಾಯದ ದಿನ ವನ್ನು ಕೆಳಕಂಡಂತೆ ಆಚರಿಸಬಹುದೆಂದು ನಾವು ಪ್ರಸ್ತಾಪಿಸುತ್ತೇವೆ:

1.            ನಮ್ಮ ಎಲ್ಲ ಸಾಮಾಜಿಕ ಮಾಧ್ಯಮದ ಪ್ರೊಫೈಲ್ (ಡಿ.ಪಿ.) ಚಿತ್ರವನ್ನು ಮೇ 16 ರಂದು ಡಾ. ತೇಲ್ತುಂಬ್ಡೆಯವರ ಚಿತ್ರವನ್ನು ಹಾಕಿಕೊಳ್ಳೋಣ.

2.            ನಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಎರಡು ಗಂಟೆಗಳ ಕಾಲ ಸಂಜೆ 4ರಿಂದ 6ರವರೆಗೆ #ಜಸ್ಟಿಸ್4 ತೆಲ್ತುಂಬ್ಡೆ ಆಂದೋಲನವನ್ನು ನಡೆಸೋಣ.

3.            ವೆಬಿನಾರ್ ಮತ್ತು ವರ್ಚುಯಲ್ ಸಭೆಗಳನ್ನು ಸಂಘಟಿಸಿ ಮೇ ತಿಂಗಳ ಎಲ್ಲಾ ದಿನಗಳಲ್ಲೂ ಡಾ. ತೆಲ್ತುಂಬ್ಡೆಯವರ ಹಾಗೂ ಬಾಬಾಸಾಹೇಬ ಅಂಬೇಡ್ಕರರನ್ನು ಓದೋಣ ಮತ್ತು ಚರ್ಚಿಸೋಣ.

ನ್ಯಾಯದ ದಿನ ವನ್ನು ಆಚರಿಸುವುದರ ಮೂಲಕ ನಮ್ಮ ಸಂವಿಧಾನದ ಮೌಲ್ಯಗಳನ್ನು ಸಮರ್ಥಿಸೋಣ ಮತ್ತು ಪ್ರಜೆಯಾಗಿ ನಮ್ಮ ಕರ್ತವ್ಯವನ್ನು ನೆರವೇರಿಸೋಣ.

ಸಹಿ

ಜಸ್ಟೀಸ್‌ ಗೋಪಾಲಗೌಡ, (ಸುಪ್ರೀಂ ಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿಗಳು)

ರಾಜ್‌ಮೋಹನ್‌ ಗಾಂಧಿ (ಲೇಖಕರು ಮತ್ತು ಸಂಶೋಧನಾ ಪ್ರಾಧ್ಯಾಪಕರು)

ಪ್ರಶಾಂತ್‌ ಭೂಷಣ್‌ (ಸುಪ್ರೀಂ ಕೋರ್ಟ್‌ ವಕೀಲರು)

ಅಡ್ಮಿರಲ್‌ ರಾಮ್‌ದಾಸ್‌ (ನಿವೃತ್ತ ಭಾರತೀಯ ನೌಕದಳದ ಮುಖ್ಯಸ್ಥರು)

ಅಜಯ್‌ಕುಮಾರ್‌ ಸಿಂಗ್‌ (ಕರ್ನಾಟಕದ ಮಾಜಿ ಪೊಲೀಸ್‌ ಮಹಾನಿರ್ದೇಶಕರು)

ಪ್ರೊ.ಆನಂದ್‌ ಕುಮಾರ್‌ (ಜೆಎನ್‌ಯು ಪ್ರಾಧ್ಯಾಪಕರು)

ಎ.ಎನ್‌ ಯೆಲ್ಲಪ್ಪ ರೆಡ್ಡಿ (ಪರಿಸರವಾದಿಗಳು)

ಅರುಣಾ ರಾಯ್‌ (ಮಜ್ದೂರ್‌ ಕಿಸಾನ್‌ ಶಕ್ತಿ ಸಂಘಟನ್‌ನ ಸ್ಥಾಪಕರು)

ಏಕಾಂತಯ್ಯ (ಕರ್ನಾಟಕದ ಮಾಜಿ ಸಚಿವರು)

ಜಸ್ಟಿಸ್‌ ಎ.ಪಿ ಶಾ (ನಿವೃತ್ತ ಮುಖ್ಯ ನ್ಯಾಯಾಧೀಶರು, ದೆಹಲಿ ಹೈಕೋರ್ಟ್‌)

ಜಸ್ಟಿಸ್‌ ಎಚ್‌.ಎನ್‌ ನಾಗಮೋಹನ್‌ದಾಸ್‌ (ನಿವೃತ್ತ ಮುಖ್ಯ ನ್ಯಾಯಾಧೀಶರು, ಕರ್ನಾಟಕ ಹೈಕೋರ್ಟ್)

ಕೆ.ಸಿ ರಘು (ಉದ್ಯಮಿಗಳು)

ಕೋದಂಡರಾಮಯ್ಯ (ಮಾಜಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌)

ಕೃಷ್ಣ ಕೆ.ಆರ್‌ ಪೇಟೆ (ಮಾಜಿ ವಿಧಾನಸಭಾ ಸ್ಪೀಕರ್‌)

ಕುಮಾರ್‌ ಪ್ರಶಾಂತ್‌ (ಅಧ್ಯಕ್ಷರು, ಗಾಂಧೀ ಪೀಸ್‌ ಫೌಂಡೇಶನ್‌)

ಮರಿಸ್ವಾಮಿ (ಮಾಜಿ ಡೈರಕ್ಟರ್‌ ಜನರಲ್‌ ಆಫ್‌ ಪೊಲೀಸ್‌, ಕರ್ನಾಟಕ)

ಎಸ್‌.ಕೆ ಕಾಂತ (ಕಾರ್ಮಿಕ ಮುಖಂಡರು ಮತ್ತು ಮಾಜಿ ಸಚಿವರು)

ಸುಹಾಸ್‌ ಪಲ್ಸಿಕರ್‌ (ನಿವೃತ್ತ ಪ್ರಾಧ್ಯಾಪಕರು, ಸಾಹಿತ್ಯ ಅಕಾಡೆಮಿ ವಿಜೇತರು)

ವಾಜಹತ್‌ ಹಬೀಬುಲ್ಲ (ಮಾಜಿ ಮುಖ್ಯ ಮಾಹಿತಿ ಆಯುಕ್ತರು)

ಯೋಗೇಂದ್ರ ಯಾದವ್‌ (ಅಧ್ಯಕ್ಷರು, ಸ್ವರಾಜ್‌ ಇಂಡಿಯಾ)

ಜಸ್ಟೀಸ್‌ ಎ.ಜೆ ಸದಾಶಿವ (ನಿವೃತ್ತ ನ್ಯಾಯಾಧೀಶರು, ಕರ್ನಾಟಕ ಹೈಕೋರ್ಟ್)

ಪ್ರೊ.ರವಿವರ್ಮಕುಮಾರ್‌ (ಮಾಜಿ ಅಡ್ವೋಕೇಟ್‌ ಜನರಲ್‌, ಕರ್ನಾಟಕ)

ಸುಗತ ರಾಜು (ಹಿರಿಯ ಪತ್ರಕರ್ತರು)

ಮಲೈ ಭಟ್ಟಾಚಾರ್ಯ (ಪ್ರಾಧ್ಯಾಪಕರು, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌, ಬೆಂಗಳೂರು)

ಬೆಜವಾಡ ವಿಲ್ಸನ್‌ (ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರು)

ತ್ರಿಲೋಚನಾ ಶಾಸ್ತ್ರಿ (ಪ್ರಾಧ್ಯಾಪಕರು, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌, ಬೆಂಗಳೂರು)

ದಿನೇಶ್‌ ಅಮೀನ್‌ ಮಟ್ಟು (ಹಿರಿಯ ಪತ್ರಕರ್ತರು)

ಅಭಯ್‌ (ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ)

ಇಂಧೂದರ ಹೊನ್ನಾಪುರ (ಹಿರಿಯ ಪತ್ರಕರ್ತರು)

ಬಿ.ಟಿ ವೆಂಕಟೇಶ್‌ (ಹಿರಿಯ ವಕೀಲರು)

ಸೈಲ್‌ ಶೆಟ್ಟಿ (ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಮಾಜಿ ಕಾರ್ಯದರ್ಶಿಗಳು)

ಎಸ್‌.ಆರ್‌ ಹೀರೇಮಠ್‌ (ಅಧ್ಯಕ್ಷರು, ಸಿಟಿಜನ್ ಡೆಮಾಕ್ರಸಿ)

ದೇವನೂರು ಮಹಾದೇವ (ಹಿರಿಯ ಬರಹಗಾರರು, ಪದ್ಮಶ್ರೀ ಪುರಸ್ಕೃತರು)


ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...