Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

- Advertisement -
- Advertisement -

ಸುಳ್ಳು ಸುದ್ದಿಗಳ ಹರಡವಿಕೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲಿಯೂ ಕೊರೊನಾ ಸೋಂಕಿನ ನಂತರವಂತು ಅವುಗಳ ಸಂಖ್ಯೆ ದ್ವಿಗುಣವಾಗಿದೆ. ಈ ನಿಟ್ಟಿನಲ್ಲಿ ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ವಾಸ್ತವಾಂಶಗಳು ಇಲ್ಲಿವೆ.

  1. ಐಸಿಎಂಆರ್ ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ನಿಜವೇ?

ಐಸಿಎಂಆರ್ ನವದೆಹಲಿ ಕೊರೊನಾ ತಡೆಯಲು ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ಎಂಬ ಬರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಐಸಿಎಂಆರ್ ನಿರ್ದೇಶಕರಾದ ಡಾ.ರಜನಿಕಾಂತ್‌ರವರ ಸ್ಪಷ್ಟನೆ ನೀಡಿ ವೈರಲ್ ಬರಹ ಸಂಪೂರ್ಣ ಸುಳ್ಳು ಎಂದಿದ್ದಾರೆ. ನಾವು ಆ ರೀತಿಯ ಯಾವುದೇ ಮುನ್ನೆಚ್ಚರಿಕೆಗಳನ್ನು ನೀಡಿಲ್ಲ. ನಮ್ಮ ಪತ್ರಿಕಾ ಹೇಳಿಕೆಗಳು ವೆಬ್‌ಸೈಟ್‌ನಲ್ಲಿ ಮೀಡಿಯಾ ವಿಭಾಗದಲ್ಲಿದ್ದು ಅವು ಮಾತ್ರ ಸತ್ಯ ಎಂದು ಸ್ಪಷ್ಟಪಡಿಸಿದ್ದಾರೆ.

2 ಕೊರೊನಾ ಕಾಲದಲ್ಲಿಯೂ ತೆಲಂಗಾಣದಲ್ಲಿ ಸರ್ಕಾರದಿಂದ ಈದ್ ಮುಬಾರಕ್ ಗಿಫ್ಟ್ ಹಂಚಿಕೆ?

ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವಾಂಕೆಯವರು ಕಳೆದ ಭಾನುವಾರ ಟ್ವೀಟ್ ಮಾಡಿ “ತೆಲಗಾಂಣ ಸರ್ಕಾರ ಈದ್ ಹಬ್ಬಕ್ಕಾಗಿ ಮುಸ್ಲಿಮರಿಗೆ ಗಿಫ್ಟ್ ನೀಡುತ್ತಿದೆ. ಆದರೆ ಹಿಂದೂಗಳ ಹಬ್ಬವಾದ ರಾಮನವಮಿ, ಯುಗಾದಿ, ಹನುಮಾನ್ ಜಯಂತಿಯ ದಿನ ಹಿಂದೂಗಳನ್ನು ಮನೆಯಿಂದ ಹೊರಗೆ ಬರಲು ಸಹ ಬಿಡಲಿಲ್ಲ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಗಾಳಿಸುದ್ದಿಗಳು ಹಬ್ಬಿದಾಗ ತೆಲಂಗಾಣ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿ “ಕೊರೊನಾ ಕಾರಣದಿಂದ ಈ ವರ್ಷ ರಂಜಾನ್ ಹಬ್ಬಕ್ಕೆ ಸರ್ಕಾರದಿಂದ ಯಾವುದೇ ಗಿಫ್ಟ್ ನೀಡುತ್ತಿಲ್ಲ” ಎಂದು ಸ್ಪಷ್ಟೀಕರಣ ನೀಡಿದೆ.

ಹಾಗಾದರೆ ಸುರೇಶ್ ಚವಾಂಕೆಯವರು ಮಾಡಿರುವ ಟ್ವೀಟ್‌ನಲ್ಲಿ ಫೋಟೊ ಯಾವುದೆಂದು ಹುಡುಕಿದಾಗ ಅದು 5 ವರ್ಷದ ಹಳೆಯ ಫೋಟೊ ಎಂದು ತಿಳಿದುಬಂದಿದೆ. ಜೊತೆಗೆ ಅವರು ಹೇಳಿದಂತೆ ಕೇವಲ ಮುಸ್ಲಿಮರ ಹಬ್ಬಕ್ಕೆ ಮಾತ್ರ ಸರ್ಕಾರ ಗಿಫ್ಟ್ಗಳನ್ನು ನೀಡದೇ ಹಿಂದೂಗಳ ಭತುಕಮ್ಮ ಹಬ್ಬ ಮತ್ತು ಕ್ರಿಶ್ಚಿಯನ್ನರ ಕ್ರಿಸ್‌ಮಸ್ ಹಬ್ಬಕ್ಕೂ ಸರ್ಕಾರ ಗಿಫ್ಟ್ಗಳನ್ನು ನೀಡಿದೆ. ಈ ಕೆಳಗಿನ ಪತ್ರಿಕಾ ವರದಿಗಳನ್ನು ಗಮನಿಸಿ.

3 ಗಿಲ್ಗಿಟ್-ಬಾಲ್ಟಿಸ್ತಾನ್ ಸ್ವತಂತ್ರ ಅಫಿಶಿಯಲ್ ಟ್ವಿಟ್ಟರ್ ಅಕೌಂಟ್ ಹೊಂದಿದೆಯೇ?

ಮೇ 4 ರಂದು ವಿದೇಶಾಂಗ ಸಚಿವಾಲಯ (ಎಂಎಚ್‌ಎ) ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ “ಭಾರತದ ಭೂಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನ ಆಕ್ರಮಿತ ಪ್ರದೇಶಗಳನ್ನು” ಖಾಲಿ ಮಾಡುವಂತೆ ಪಾಕಿಸ್ತಾನವನ್ನು ಕೇಳಿದೆ. ಮೇ 12 ರಂದು, ಗಿಲ್ಗಿಟ್-ಬಾಲ್ಟಿಸ್ತಾನ್, ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಧಿಕೃತ ಖಾತೆಯನ್ನು ಸರ್ಕಾರವು ಸ್ಥಾಪಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ನಡೆದಿತ್ತು.

 

ಮೋದಿ ಸರ್ಕಾರವೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶವನ್ನು ವಾಪಸ್ ಪಡೆದಿದೆ ಎಂದೆಲ್ಲಾ ಸಂಭ್ರಮಿಸಲಾಗಿತ್ತು.

ಪಿಐಬಿ (ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್ ವಿಂಗ್) ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ. ಅಲ್ಲದೇ ವಿದೇಶಾಂಗ ಸಚಿವಾಲಯವು ಕೂಡ ಸ್ಪಷ್ಟನೆ ನೀಡಿದ್ದು, ಲಡಾಖ್ ಪ್ರದೇಶವು ಕೇವಲ 2 ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳನ್ನು ಹೊಂದಿದೆ, ಅಂದರೆ @DIPR_Leh & @ InformationDep4. ಗಿಲ್ಗಿಟ್-ಬಾಲ್ಟಿಸ್ತಾನ್ ಖಾತೆಯೂ ನಕಲಿ ಖಾತೆಯಾಗಿದೆ ಎಂದಿದೆ.

4. ಈ ವೈರಲ್ ಫೋಟೊ ವಲಸೆ ಕಾರ್ಮಿಕರದ್ದಲ್ಲ. ಮತ್ತೆ?

ಲಾಕ್‌ಡೌನ್ ಘೋಷಣೆಯಾದಾಗಿನಿಂದ ವಲಸೆ ಕಾರ್ಮಿಕರು ಬೀದಿಗೆ ಬಿದ್ದಿದ್ದು, ನೂರಾರು, ಸಾವಿರಾರು ಕಿ.ಮೀ ಗಟ್ಟಲೇ ನಡೆದು ಸಾಗುತ್ತಿರುವ ಮನಕಲಕುವ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ. ಅದರಲ್ಲಿಯೂ ರೈಲು ಸೇವೆ ಪ್ರಾರಂಭಿಸುತ್ತೇವೆ ಎಂದು ಹೇಳಿ ಸಮರ್ಪಕ ವ್ಯವಸ್ಥೆ ಮಾಡದೇ ಹೋದಾಗ ಮತ್ತಷ್ಟು ಕಾರ್ಮಿಕರು ನಡೆದು ಹೊರಟಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ತುಂಬಿ ಹೋಗಿವೆ. ಈ ನಡಿಗೆಯಲ್ಲಿ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಕೂಡ.

ಅದೇ ರೀತಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ನಡೆಯುತ್ತಿರುವ ಚಿತ್ರ ಎಲ್ಲರ ಮನಕರಗಿಸಿತ್ತು. ಇದು ವಲಸೆ ಕಾರ್ಮಿಕರ ಸ್ಥಿತಿಗತಿಯೆಂದು ಸಾವಿರಾರು ಜನ ಅದನ್ನು ಹಂಚಿಕೊಂಡಿದ್ದರು.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ವಲಸೆ ಕಾರ್ಮಿಕರ ಫೋಟೊ ಅಲ್ಲ ಎಂದು ತಿಳಿದುಬಂದಿದೆ. ಅದು 2017ರ ಚಿತ್ರವಾಗಿದ್ದು ಬಾಂಗ್ಲಾದೇಶದ ರೋಹಿಂಗ್ಯ ಮುಸ್ಲಿಂ ನಿರಾಶ್ರಿತರ ಫೋಟೊ ಆಗಿದೆ. ರೋಹಿಂಗ್ಯಾ ಮುಸ್ಲಿಂ ಒಸಿಯೂರ್ ರೆಹಮಾನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯು ತನ್ನ ತಾಯಿಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಹೊರಟಾಗಿನ ಫೋಟೊ ಇದಾಗಿದೆ. ಈ ಕುರಿತ ವಿಡಿಯೋ ಸಾಕ್ಷ್ಯ ಇಲ್ಲಿದೆ.

#টেকনাফ সীমান্তের হোয়াইক্যং লম্বাবিল সীমান্ত দিয়ে মা'কে কাঁধে নিয়ে বাংলাদেশে প্রবেশ করা এক রোহিঙ্গার কান্না। #লম্বাবিল সীমান্ত থেকে সরওয়ার আলম শাহীন।

Posted by UkhiyaNews.Com on Wednesday, September 6, 2017

5. ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದರೆ? ಈ ಸುದ್ದಿ ನಿಜವಲ್ಲ..

ತಮಿಳುನಾಡಿನ ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದು ಅವಮಾನಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಆ ವಿಡಿಯೋದಲ್ಲಿ ಬಿಳಿಅಂಗಿ ಮತ್ತು ಬಿಳಿ ಪಂಚೆ ತೊಟ್ಟ ವ್ಯಕ್ತಿಯೊಬ್ಬ ಮಹಿಳೆಗೆ ಒದೆಯುತ್ತಿರುವ ದೃಶ್ಯಗಳನ್ನು ವೈದ್ಯೆಯ ಮೇಲೆ ಹಲ್ಲೆ ಎಂದು ಸುದ್ದಿ ಹರಡಲಾಗಿದೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಹಲ್ಲೆನಡೆಸಿದ ವ್ಯಕ್ತಿ ಡಿಎಂಕೆ ಪಕ್ಷದ ಕೌನ್ಸಿಲರ್ ಸೆಲ್ವಕುಮಾರ್ ಎಂದು ತಿಳಿದುಬಂದಿದೆ. ಆದರೆ ಹಲ್ಲೆಗೊಳಗಾದ ಮಹಿಳೆ ವೈದ್ಯಳಲ್ಲ ಬದಲಿಗೆ ಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿರುವ ಬ್ಯೂಟಿಪಾರ್ಲರ್ ನಡೆಸುವ ಮಹಿಳೆಯಾಗಿದ್ದಾರೆ. ಅಲ್ಲದೇ ಇದು ಎರಡು ವರ್ಷಗಳಷ್ಟು ಹಿಂದಿನ ಹಳೆಯ ವಿಡಿಯೋವಾಗಿದೆ. ಇವರಿರ್ವರ ನಡುವೆ ವಯಕ್ತಿಕ ಹಣಕಾಸಿನ ವಿಷಯಕ್ಕೆ ಜಗಳವಿದ್ದ ಕಾರಣ ಹಲ್ಲೆ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ಮತ್ತು ಎಎನ್‌ಐ 2018ರಲ್ಲಿಯೇ ವರದಿ ಮಾಡಿವೆ.

ಇವಿಷ್ಟು ಈ ವಾರದವು. ನಾವು ಮೋಸ ಹೋಗಬಾರದು. ಯಾವುದೇ ಸುದ್ದಿ ಹಂಚುವ ಮುನ್ನ ಪರಿಶೀಲಿಸಿ ಹಂಚಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿ.ಕಾಂ ನಲ್ಲಿ ಬರುತ್ತಿರುವ ಸುದ್ದಿಗಳು ಎಲ್ಲವೂ ನೂರಕ್ಕೆ 98 ಭಾಗ BJP ಪಕ್ಷ ದವರು ವಿರುದ್ಧ ಆರೋಪಗಳನ್ನು ಮಾಡುತ್ತಿದಿರಿ ಇದು ಸರಿ ಯಗಿ ಇಲ್ಲ ನೀವು ನಿಮ್ಮ ನಡುವಳಿಕೆ ಬದಲಾಯಿಸ ಬೇಕು ಇಲ್ಲ ಅಂದ್ರೆ ನಿಮ್ಮ ಭವಿಷ್ಯ ನೋಡಲು ಯಾರು ಕಾಣಿಸಲಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...