Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

- Advertisement -
- Advertisement -

ಸುಳ್ಳು ಸುದ್ದಿಗಳ ಹರಡವಿಕೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲಿಯೂ ಕೊರೊನಾ ಸೋಂಕಿನ ನಂತರವಂತು ಅವುಗಳ ಸಂಖ್ಯೆ ದ್ವಿಗುಣವಾಗಿದೆ. ಈ ನಿಟ್ಟಿನಲ್ಲಿ ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ವಾಸ್ತವಾಂಶಗಳು ಇಲ್ಲಿವೆ.

  1. ಐಸಿಎಂಆರ್ ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ನಿಜವೇ?

ಐಸಿಎಂಆರ್ ನವದೆಹಲಿ ಕೊರೊನಾ ತಡೆಯಲು ನೀಡಿದ ಪ್ರಮುಖ ಮುನ್ನೆಚ್ಚರಿಕೆಗಳು ಎಂಬ ಬರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಐಸಿಎಂಆರ್ ನಿರ್ದೇಶಕರಾದ ಡಾ.ರಜನಿಕಾಂತ್‌ರವರ ಸ್ಪಷ್ಟನೆ ನೀಡಿ ವೈರಲ್ ಬರಹ ಸಂಪೂರ್ಣ ಸುಳ್ಳು ಎಂದಿದ್ದಾರೆ. ನಾವು ಆ ರೀತಿಯ ಯಾವುದೇ ಮುನ್ನೆಚ್ಚರಿಕೆಗಳನ್ನು ನೀಡಿಲ್ಲ. ನಮ್ಮ ಪತ್ರಿಕಾ ಹೇಳಿಕೆಗಳು ವೆಬ್‌ಸೈಟ್‌ನಲ್ಲಿ ಮೀಡಿಯಾ ವಿಭಾಗದಲ್ಲಿದ್ದು ಅವು ಮಾತ್ರ ಸತ್ಯ ಎಂದು ಸ್ಪಷ್ಟಪಡಿಸಿದ್ದಾರೆ.

2 ಕೊರೊನಾ ಕಾಲದಲ್ಲಿಯೂ ತೆಲಂಗಾಣದಲ್ಲಿ ಸರ್ಕಾರದಿಂದ ಈದ್ ಮುಬಾರಕ್ ಗಿಫ್ಟ್ ಹಂಚಿಕೆ?

ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವಾಂಕೆಯವರು ಕಳೆದ ಭಾನುವಾರ ಟ್ವೀಟ್ ಮಾಡಿ “ತೆಲಗಾಂಣ ಸರ್ಕಾರ ಈದ್ ಹಬ್ಬಕ್ಕಾಗಿ ಮುಸ್ಲಿಮರಿಗೆ ಗಿಫ್ಟ್ ನೀಡುತ್ತಿದೆ. ಆದರೆ ಹಿಂದೂಗಳ ಹಬ್ಬವಾದ ರಾಮನವಮಿ, ಯುಗಾದಿ, ಹನುಮಾನ್ ಜಯಂತಿಯ ದಿನ ಹಿಂದೂಗಳನ್ನು ಮನೆಯಿಂದ ಹೊರಗೆ ಬರಲು ಸಹ ಬಿಡಲಿಲ್ಲ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಗಾಳಿಸುದ್ದಿಗಳು ಹಬ್ಬಿದಾಗ ತೆಲಂಗಾಣ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿ “ಕೊರೊನಾ ಕಾರಣದಿಂದ ಈ ವರ್ಷ ರಂಜಾನ್ ಹಬ್ಬಕ್ಕೆ ಸರ್ಕಾರದಿಂದ ಯಾವುದೇ ಗಿಫ್ಟ್ ನೀಡುತ್ತಿಲ್ಲ” ಎಂದು ಸ್ಪಷ್ಟೀಕರಣ ನೀಡಿದೆ.

ಹಾಗಾದರೆ ಸುರೇಶ್ ಚವಾಂಕೆಯವರು ಮಾಡಿರುವ ಟ್ವೀಟ್‌ನಲ್ಲಿ ಫೋಟೊ ಯಾವುದೆಂದು ಹುಡುಕಿದಾಗ ಅದು 5 ವರ್ಷದ ಹಳೆಯ ಫೋಟೊ ಎಂದು ತಿಳಿದುಬಂದಿದೆ. ಜೊತೆಗೆ ಅವರು ಹೇಳಿದಂತೆ ಕೇವಲ ಮುಸ್ಲಿಮರ ಹಬ್ಬಕ್ಕೆ ಮಾತ್ರ ಸರ್ಕಾರ ಗಿಫ್ಟ್ಗಳನ್ನು ನೀಡದೇ ಹಿಂದೂಗಳ ಭತುಕಮ್ಮ ಹಬ್ಬ ಮತ್ತು ಕ್ರಿಶ್ಚಿಯನ್ನರ ಕ್ರಿಸ್‌ಮಸ್ ಹಬ್ಬಕ್ಕೂ ಸರ್ಕಾರ ಗಿಫ್ಟ್ಗಳನ್ನು ನೀಡಿದೆ. ಈ ಕೆಳಗಿನ ಪತ್ರಿಕಾ ವರದಿಗಳನ್ನು ಗಮನಿಸಿ.

3 ಗಿಲ್ಗಿಟ್-ಬಾಲ್ಟಿಸ್ತಾನ್ ಸ್ವತಂತ್ರ ಅಫಿಶಿಯಲ್ ಟ್ವಿಟ್ಟರ್ ಅಕೌಂಟ್ ಹೊಂದಿದೆಯೇ?

ಮೇ 4 ರಂದು ವಿದೇಶಾಂಗ ಸಚಿವಾಲಯ (ಎಂಎಚ್‌ಎ) ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ “ಭಾರತದ ಭೂಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನ ಆಕ್ರಮಿತ ಪ್ರದೇಶಗಳನ್ನು” ಖಾಲಿ ಮಾಡುವಂತೆ ಪಾಕಿಸ್ತಾನವನ್ನು ಕೇಳಿದೆ. ಮೇ 12 ರಂದು, ಗಿಲ್ಗಿಟ್-ಬಾಲ್ಟಿಸ್ತಾನ್, ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಧಿಕೃತ ಖಾತೆಯನ್ನು ಸರ್ಕಾರವು ಸ್ಥಾಪಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ನಡೆದಿತ್ತು.

 

ಮೋದಿ ಸರ್ಕಾರವೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶವನ್ನು ವಾಪಸ್ ಪಡೆದಿದೆ ಎಂದೆಲ್ಲಾ ಸಂಭ್ರಮಿಸಲಾಗಿತ್ತು.

ಪಿಐಬಿ (ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್ ವಿಂಗ್) ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ. ಅಲ್ಲದೇ ವಿದೇಶಾಂಗ ಸಚಿವಾಲಯವು ಕೂಡ ಸ್ಪಷ್ಟನೆ ನೀಡಿದ್ದು, ಲಡಾಖ್ ಪ್ರದೇಶವು ಕೇವಲ 2 ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳನ್ನು ಹೊಂದಿದೆ, ಅಂದರೆ @DIPR_Leh & @ InformationDep4. ಗಿಲ್ಗಿಟ್-ಬಾಲ್ಟಿಸ್ತಾನ್ ಖಾತೆಯೂ ನಕಲಿ ಖಾತೆಯಾಗಿದೆ ಎಂದಿದೆ.

4. ಈ ವೈರಲ್ ಫೋಟೊ ವಲಸೆ ಕಾರ್ಮಿಕರದ್ದಲ್ಲ. ಮತ್ತೆ?

ಲಾಕ್‌ಡೌನ್ ಘೋಷಣೆಯಾದಾಗಿನಿಂದ ವಲಸೆ ಕಾರ್ಮಿಕರು ಬೀದಿಗೆ ಬಿದ್ದಿದ್ದು, ನೂರಾರು, ಸಾವಿರಾರು ಕಿ.ಮೀ ಗಟ್ಟಲೇ ನಡೆದು ಸಾಗುತ್ತಿರುವ ಮನಕಲಕುವ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ. ಅದರಲ್ಲಿಯೂ ರೈಲು ಸೇವೆ ಪ್ರಾರಂಭಿಸುತ್ತೇವೆ ಎಂದು ಹೇಳಿ ಸಮರ್ಪಕ ವ್ಯವಸ್ಥೆ ಮಾಡದೇ ಹೋದಾಗ ಮತ್ತಷ್ಟು ಕಾರ್ಮಿಕರು ನಡೆದು ಹೊರಟಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ತುಂಬಿ ಹೋಗಿವೆ. ಈ ನಡಿಗೆಯಲ್ಲಿ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ ಕೂಡ.

ಅದೇ ರೀತಿಯಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ನಡೆಯುತ್ತಿರುವ ಚಿತ್ರ ಎಲ್ಲರ ಮನಕರಗಿಸಿತ್ತು. ಇದು ವಲಸೆ ಕಾರ್ಮಿಕರ ಸ್ಥಿತಿಗತಿಯೆಂದು ಸಾವಿರಾರು ಜನ ಅದನ್ನು ಹಂಚಿಕೊಂಡಿದ್ದರು.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಅದು ವಲಸೆ ಕಾರ್ಮಿಕರ ಫೋಟೊ ಅಲ್ಲ ಎಂದು ತಿಳಿದುಬಂದಿದೆ. ಅದು 2017ರ ಚಿತ್ರವಾಗಿದ್ದು ಬಾಂಗ್ಲಾದೇಶದ ರೋಹಿಂಗ್ಯ ಮುಸ್ಲಿಂ ನಿರಾಶ್ರಿತರ ಫೋಟೊ ಆಗಿದೆ. ರೋಹಿಂಗ್ಯಾ ಮುಸ್ಲಿಂ ಒಸಿಯೂರ್ ರೆಹಮಾನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯು ತನ್ನ ತಾಯಿಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಹೊರಟಾಗಿನ ಫೋಟೊ ಇದಾಗಿದೆ. ಈ ಕುರಿತ ವಿಡಿಯೋ ಸಾಕ್ಷ್ಯ ಇಲ್ಲಿದೆ.

#টেকনাফ সীমান্তের হোয়াইক্যং লম্বাবিল সীমান্ত দিয়ে মা'কে কাঁধে নিয়ে বাংলাদেশে প্রবেশ করা এক রোহিঙ্গার কান্না। #লম্বাবিল সীমান্ত থেকে সরওয়ার আলম শাহীন।

Posted by UkhiyaNews.Com on Wednesday, September 6, 2017

5. ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದರೆ? ಈ ಸುದ್ದಿ ನಿಜವಲ್ಲ..

ತಮಿಳುನಾಡಿನ ಡಿಎಂಕೆ ಮುಖಂಡ ವೈದ್ಯೆಯೊಬ್ಬಳಿಗೆ ಕಾಲಿನಿಂದ ಒದ್ದು ಅವಮಾನಿಸಿದ್ದಾರೆ ಎಂಬ ವಿಡಿಯೋ ವೈರಲ್ ಆಗಿದೆ.

ಆ ವಿಡಿಯೋದಲ್ಲಿ ಬಿಳಿಅಂಗಿ ಮತ್ತು ಬಿಳಿ ಪಂಚೆ ತೊಟ್ಟ ವ್ಯಕ್ತಿಯೊಬ್ಬ ಮಹಿಳೆಗೆ ಒದೆಯುತ್ತಿರುವ ದೃಶ್ಯಗಳನ್ನು ವೈದ್ಯೆಯ ಮೇಲೆ ಹಲ್ಲೆ ಎಂದು ಸುದ್ದಿ ಹರಡಲಾಗಿದೆ.

ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಹಲ್ಲೆನಡೆಸಿದ ವ್ಯಕ್ತಿ ಡಿಎಂಕೆ ಪಕ್ಷದ ಕೌನ್ಸಿಲರ್ ಸೆಲ್ವಕುಮಾರ್ ಎಂದು ತಿಳಿದುಬಂದಿದೆ. ಆದರೆ ಹಲ್ಲೆಗೊಳಗಾದ ಮಹಿಳೆ ವೈದ್ಯಳಲ್ಲ ಬದಲಿಗೆ ಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಹೊಂದಿರುವ ಬ್ಯೂಟಿಪಾರ್ಲರ್ ನಡೆಸುವ ಮಹಿಳೆಯಾಗಿದ್ದಾರೆ. ಅಲ್ಲದೇ ಇದು ಎರಡು ವರ್ಷಗಳಷ್ಟು ಹಿಂದಿನ ಹಳೆಯ ವಿಡಿಯೋವಾಗಿದೆ. ಇವರಿರ್ವರ ನಡುವೆ ವಯಕ್ತಿಕ ಹಣಕಾಸಿನ ವಿಷಯಕ್ಕೆ ಜಗಳವಿದ್ದ ಕಾರಣ ಹಲ್ಲೆ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ಮತ್ತು ಎಎನ್‌ಐ 2018ರಲ್ಲಿಯೇ ವರದಿ ಮಾಡಿವೆ.

ಇವಿಷ್ಟು ಈ ವಾರದವು. ನಾವು ಮೋಸ ಹೋಗಬಾರದು. ಯಾವುದೇ ಸುದ್ದಿ ಹಂಚುವ ಮುನ್ನ ಪರಿಶೀಲಿಸಿ ಹಂಚಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿ.ಕಾಂ ನಲ್ಲಿ ಬರುತ್ತಿರುವ ಸುದ್ದಿಗಳು ಎಲ್ಲವೂ ನೂರಕ್ಕೆ 98 ಭಾಗ BJP ಪಕ್ಷ ದವರು ವಿರುದ್ಧ ಆರೋಪಗಳನ್ನು ಮಾಡುತ್ತಿದಿರಿ ಇದು ಸರಿ ಯಗಿ ಇಲ್ಲ ನೀವು ನಿಮ್ಮ ನಡುವಳಿಕೆ ಬದಲಾಯಿಸ ಬೇಕು ಇಲ್ಲ ಅಂದ್ರೆ ನಿಮ್ಮ ಭವಿಷ್ಯ ನೋಡಲು ಯಾರು ಕಾಣಿಸಲಿಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...