HomeUncategorizedಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

ಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

- Advertisement -
- Advertisement -

ಮೇ 8 ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆದ ಹಿಂಸಾಚಾರದ ನಂತರ ತಾನು ಗರ್ಭಿಣಿ ಎಂದು ಹೇಳಿದರೂ ಗುಜರಾತ್ ಪೊಲೀಸರು ನನ್ನನ್ನು ದೂಡಿ ಹೊಟ್ಟೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮೇ 8 ರಂದು ಗುಜರಾತ್ ಪೊಲೀಸರು ಅಹಮದಾಬಾದ್‌ನ ಶಹಪುರ್ ಪ್ರದೇಶದಲ್ಲಿ 29 ಜನರನ್ನು ಇದೇ ರೀತಿಯ ದೌರ್ಜನ್ಯ ನಡೆಸಿ ಬಂಧಿಸಿದ್ದಾರೆ. ಹಿಂಸಾಚಾರದಲ್ಲಿ ಗರ್ಭಿಣಿ ಮಹಿಳೆ, 62 ವರ್ಷದ ವ್ಯಕ್ತಿ ಮತ್ತು ವಿಕಲಾಂಗ ಮಗು ಗಾಯಗೊಂಡಿದ್ದಾರೆ ಎನ್ನಲಾಗಿದೆ.

“ಮೇ 8 ರಂದು ಸಂಜೆ 7 ಗಂಟೆಗೆ ಮನೆಯಲ್ಲಿ ಇಫ್ತಾರ್‌ಗೆ ಹಣ್ಣುಗಳನ್ನು ಕತ್ತರಿಸುತ್ತಿದ್ದಾಗ, ಮನೆಯೊಳಗೆ ಅಡ್ಡಾದಿಡ್ಡಿಯಾಗಿ ನುಗ್ಗಿದ ಕೆಲವು ಪೊಲೀಸರು, ನನ್ನ ಪತಿಯನ್ನು ಹೊರಗೆ ಎಳೆದುಕೊಂಡು ನಿರ್ದಯವಾಗಿ ಥಳಿಸಿದರು” ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸುತ್ತಾರೆ.

ಇ
ಇಫ್ಥಾರಿಗೆ ಸಜ್ಜುಗೊಳಿಸಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿರುವುದು

ತನ್ನ ಬಲಕೆನ್ನೆಯಲ್ಲಿರುವ ಬೆರಳಿನ ಗುರುತನ್ನು ತೋರಿಸುತ್ತಾ “ನನ್ನ ತಂದೆ ಮತ್ತು ಸಹೋದರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿರುವಾಗ ತಡೆಯಲು ಮನೆಯ ಹೊರಗೆ ಹೋದಾಗ ಪೊಲೀಸರು ನನ್ನ ಕಪಾಲಕ್ಕೆ ಹೊಡೆಯಲು ಶುರು ಮಾಡಿದರು, ಆಗ ನಾನು ಗರ್ಭಿಣಿ ಎಂದು ಹೇಳಿದ ಹೊರತಾಗಿಯೂ ನನ್ನನ್ನು ದೂಡಿ ನನ್ನ ಹೊಟ್ಟೆಗೆ ಲಾಠಿಯಿಂದ ಹೊಡೆದರು, ನಂತರ ನೆರೆಹೊರೆಯವರು ಬಂದು ಅವರನ್ನು ತಡೆದರು” ಎಂದು ಮಹಿಳೆ ಆರೋಪಿಸುತ್ತಾರೆ.

ಇನ್ನೊಬ್ಬ ಮಹಿಳೆಯ ತನ್ನ ಗಂಡನನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ತಮ್ಮ ಮನೆಗಳಿಗೆ ಅಡ್ಡಗಟ್ಟಿದಾಗ ತನ್ನ ಅಂಗವಿಕಲ ಮಗನನ್ನು ಸಹ ಮನೆಯಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ಗುಜರಾತ್ ಪೊಲೀಸರು

ಗುಜರಾತ್ ಪೊಲೀಸರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ವಲಯ 2 ರ ಪೊಲೀಸ್ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಮಾತನಾಡಿ “ಪೊಲೀಸರು ಮಹಿಳೆಯರನ್ನು ಹಿಂಸಿದ್ದಾರೆ ಎಂಬ ಆರೋಪ ಸಂಪೂರ್ಣವಾಗಿ ಸುಳ್ಳು” ಎಂದು ಹೇಳಿದರು.

“ಆದರೆ, ಕೆಲವು ದುಷ್ಕರ್ಮಿಗಳು ಪಲಾಯನ ಮಾಡಲು ಪ್ರಯತ್ನಿಸಿದಾಗ, ನಾವು ಅವರನ್ನು ಬೆನ್ನಟ್ಟಿದೆವು. ಅವರಲ್ಲಿ ಕೆಲವರು ಮನೆಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು, ಆದ್ದರಿಂದ ನಾವು ಅವರನ್ನು ಹೊರಗೆ ಎಳೆದು ಬಂಧಿಸಬೇಕಾಯಿತು.” ಎಂದು ಶರ್ಮ ಹೇಳಿದ್ದಾರೆ.

ಕಲ್ಲು ತೂರಾಟ, ಅಶ್ರುವಾಯು ಸಿಡಿತ: ಹಿಂಸಾಚಾರ ಹೇಗೆ ಪ್ರಾರಂಭವಾಯಿತು

ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಕಳೆದ ವಾರ ಎಲ್ಲಾ ತರಕಾರಿ ಮತ್ತು ಹಣ್ಣಿನ ಅಂಗಡಿಗಳನ್ನು ಮುಚ್ಚುವ ಹಾಗೂ ಹಾಲು ಮತ್ತು ಔಷಧಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಲಾಕ್‌ಡೌನ್ ಅನ್ನು ಬಲಪಡಿಸಲಾಗಿತ್ತು.

ಕೋಮು ಸೂಕ್ಷ್ಮ ಪ್ರದೇಶವೆಂದು ಕರೆಯಲ್ಪಡುವ ಅಹಮದಾಬಾದ್‌ನ ಶಹಪುರವನ್ನು ಕೊರೊನಾ ಧಾರಕ ವಲಯವೆಂದು ಘೋಷಿಸಲಾಗಿದೆ.

ಮೇ 8 ರಂದು ಇಲ್ಲಿ ಕೆಲವು ಮಹಿಳೆಯರು ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಹಾಲು ತರಲು ಹೊರಟಾಗ, ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡ ಅವರನ್ನು ತಡೆದಿದೆ. ಅಲ್ಲಿ ಅಸಹ್ಯವಾದ ವಾಗ್ವಾದ ನಡೆದ  ಪರಿಣಾಮ ಕಲ್ಲು ತೂರಾಟ ನಡೆದದ್ದರಿಂದ ಆಶ್ರುವಾಯು ಸಿಡಿಸಲಾಗಿತ್ತು.

ವಲಯ 2 ರ ಉಪ ಪೊಲೀಸ್ ಆಯುಕ್ತ ಧರ್ಮೇಂದ್ರ ಶರ್ಮಾ ಹೇಳಿದಂತೆ “ಪೊಲೀಸರು ಲಾಕ್ಡೌನ್ ಅನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದರು ಆದರೆ ಕೆಲವರು ಬೀದಿಗಿಳಿದು ಸಾಮಾಜಿಕ ಅಂತರವನ್ನು ಕಾಪಾಡಿರಲಿಲ್ಲ. ಪೊಲೀಸರು ಅವರನ್ನು ಹೋಗಲು ಕೇಳಿಕೊಂಡರೂ ಅವರು ಕೇಳದ್ದರಿಂದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಶರ್ಮಾ ಅವರು, “ಕೆಲವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ, ಇನ್ನೂ ಅನೇಕ ಜನರು ಬೀದಿಗಿಳಿದು ಅವರ ಬಂಧನವನ್ನು ವಿರೋಧಿಸಿದರು. ಒಂದು ಮನೆಯಿಂದ, ಕಲ್ಲು ತೂರಾಟ ನಡೆದ ಕಾರಣ ನಮ್ಮ ಪೊಲೀಸ್ ಅಧಿಕಾರಿಯೊಬ್ಬರು ಅದರಲ್ಲಿ ಗಾಯಗೊಂಡಿದ್ದಾರೆ. ಅದರ ನಂತರ ಪ್ರದೇಶದಾದ್ಯಂತ ಕಲ್ಲು ತೂರಾಟ ತೀವ್ರಗೊಂಡಿದೆ. ನಡುವೆ ಪೊಲೀಸರು ಸಿಕ್ಕಿಬಿದ್ದರು.” ಎಂದು ಹೇಳಿದ್ದಾರೆ.

ಐಪಿಸಿಯ ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಕನಿಷ್ಠ 29 ಜನರನ್ನು ವಶಕ್ಕೆ ಪಡೆಯಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಎಚ್‌ಬಿ ಚೌಧರಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ 17 ಮಂದಿಯನ್ನು ಹೆಸರಿಸಲಾಗಿದೆ, ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಕೆ.ಅಮಿನ್ ಮತ್ತು ಇತರ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಶರ್ಮ ತಿಳಿಸಿದ್ದಾರೆ.

ಜನಸಮೂಹವನ್ನು ಚದುರಿಸಲು 40 ಅಶ್ರುವಾಯು ಸೆಲ್ಲುಗಳನ್ನು ಹಾರಿಸಲಾಯಿತು ಮತ್ತು ಒಂದು ರಬ್ಬರ್ ಗುಂಡು ಹಾರಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪೊಲೀಸರು ಕಲ್ಲೆಸೆಯುತ್ತಿರುವುದು ಹಾಗೂ ವಾಹನಗಳನ್ನು ಪುಡಿಗೈಯ್ಯುತ್ತಿರುವುದು ದಾಖಲು

ಘಟನೆ ನಡೆದ ಸ್ಥಳದಿಂದ ಅನೇಕ ವಿಡಿಯೊಗಳು ಹೊರಬಂದಿದ್ದು, ಇದು ಪೊಲೀಸರ ಕ್ರಮದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಒಂದು ಕ್ಲಿಪ್‌ನಲ್ಲಿ, ಪೊಲೀಸರು ಗುಂಪಿನ ಮೇಲೆ ವಸ್ತುವನ್ನು ಎಸೆಯುತ್ತಿರುವುದು ಕಂಡುಬರುತ್ತಿದೆ. ಪೊಲೀಸರು ಕಲ್ಲು ತೂರಾಟವನ್ನು ಸಹ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ, ಆದರೆ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಇದನ್ನು ನಿರಾಕರಿಸಿ “ಇದು ಸ್ಟನ್ ಗ್ರೆನೇಡ್ ಅಥವಾ ಶೆಲ್ ಆಗಿರಬಹುದು. ಇದು ತುಂಬಾ ಸ್ಪಷ್ಟವಾಗಿಲ್ಲ. ” ಎಂದು ಹೇಳಿದ್ದಾರೆ.

ಮನೆಯ ಕಿಟಕಿಯ ಗಾಜು ಹುಡಿಯಾಗಿರುವುದು

ಮತ್ತೊಂದು ವೀಡಿಯೊದಲ್ಲಿ ಪೊಲೀಸರು ವಸ್ತುಗಳನ್ನು ಎಸೆಯುವುದು, ಅಶ್ರುವಾಯು ಶೆಲ್ ಮಾಡುವುದು ಮತ್ತು ನಿಲ್ಲಿಸಿದ ಬೈಕುಗಳನ್ನು ತಮ್ಮ ಲಾಠಿಗಳಿಂದ ಒಡೆಯುವುದು ತೋರಿಸುತ್ತದೆ. ಅವರಲ್ಲಿ ಕೆಲವರು ಸಮವಸ್ತ್ರದಲ್ಲಿ ಇರಲಿಲ್ಲ. ಈ ವಿಡಿಯೋ ಕುರಿತು ಡಿಸಿಪಿ ಶರ್ಮಾ ಸ್ಪಷ್ಟೀಕರಣ ಇನ್ನೂ ನೀಡಲಿಲ್ಲ.

ಘಟನೆಯ ಮತ್ತೊಂದು ವಿಡಿಯೋದಲ್ಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ರಸ್ತೆಯ ಮಧ್ಯದಲ್ಲಿ ನಿರ್ದಯವಾಗಿ ಥಳಿಸುತ್ತಿರುವುದು ಕಾಣಬಹುದಾಗಿದೆ.

ಈ ಮಧ್ಯೆ, ಗುಜರಾತ್ ಮುಸ್ಲಿಂ ನಾಗರಿಕ ವೇಧಿಕೆಗಳು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಕೃಪೆ: ದಿ ಕ್ವಿಂಟ್


ಓದಿ: ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಪ್ರಕಟಿಸಿದ ಸಂಪಾದಕನ ಮೇಲೆ ದೇಶದ್ರೋಹದ ಕೇಸು ದಾಖಲಿಸಿದ ಗುಜರಾತ್ ಪೊಲೀಸರು !


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...