Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...