HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...