Homeಚಳವಳಿ12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು 8 ಗಂಟೆಗಳಿಂದ 12 ಗಂಟೆಗಳಿಗೆ ಏರಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಹಲವು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾರ್ಮಿಕ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೂರಾರು ವರ್ಷಗಳಿಂದ ಕಾರ್ಮಿಕರ ಹೋರಾಟದ ಫಲವಾಗಿ ಬಂದ ಕಾರ್ಮಿಕ ಕಾಯ್ದೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಆ ಮೂಲಕ ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಹರಡುತ್ತಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌ನ ರಾಜ್ಯ ಉಪಾಧ್ಯಕ್ಷರು ಮಾತನಾಡಿ, “ಇದು ಕಾರ್ಮಿಕರ ಇತಿಹಾಸದಲ್ಲಿ ಕರಾಳ ದಿನಗಳಾಗಿವೆ. ಇಂದು ನಮ್ಮ ಪಾಲಿಗೆ ಬ್ಲಾಕ್‌ ಫ್ರೈಡೆ ಆಗಿದೆ. ಸುಗ್ರಿವಾಜ್ಞೆಯ ಮೂಲಕ ಈಗಾಗಲೇ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಾಗಿವೆ. ನಮ್ಮ ರಾಜ್ಯದಲ್ಲಿ ಇದು ಜಾರಿಯಾಗಬಾರದು. ಒಂದು ವೇಳೆ ಜಾರಿಯಾದಲ್ಲಿ ಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಾರೆ, ಮಹಿಳೆಯರ ಮಾತೃತ್ವ ರಜೆ ರದ್ದುಗೊಳ್ಳುತ್ತದೆ, ಕೆಲಸದ ಅವಧಿ ಹೆಚ್ಚಳವಾಗುತ್ತದೆ ಆದರೆ ಸಂಬಳ ಕಡಿಮೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

Labor unions protesting against kanrataka government decision for labour law relaxation

Posted by Gauri Lankesh News on Thursday, May 14, 2020

ಕರ್ನಾಟಕ ಜನಶಕ್ತಿಯ ಸಂಚಾಲಕರಾದ ಮಲ್ಲಿಗೆ ಸಿರಿಮನೆಯವರು ಮಾತನಾಡಿ “ಕೊರೊನಾ ಸಂಕಷ್ಟದ ಕಾಲದಲ್ಲಿ ಕಾರ್ಮಿಕರು ಪತ್ರಿಭಟನೆ ಮಾಡಲಿಕ್ಕೆ ಅವಕಾಶವಿಲ್ಲದಿದ್ದಾಗ ಕಾರ್ಮಿಕರ ಶೋಷಣೆ ಮಾಡುವ ತಿದ್ದುಪಡಿಗಳನ್ನು ತರಲಾಗುತ್ತಿದೆ. ಮಾಲೀಕರು, ಬಂಡವಾಳಶಾಹಿಗಳಿಗೆ ಲಾಕ್‌ಡೌನ್‌ನಿಂದ ತೊಂದರೆಯಾಗಿಲ್ಲ. ಆದರೆ ವಲಸೆ ಕಾರ್ಮಿಕರು ಮಾತ್ರ ಸಾರಿಗೆ, ಊಟ, ವಸತಿ,ಕೂಲಿ ಇಲ್ಲದೇ ಪರದಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಡವರ ಬದುಕು ಮುಖ್ಯವಲ್ಲ ಬದಲಿಗೆ ಬಂಡವಾಳಶಾಹಿಗಳ ಹಿತಾಸಕ್ತಿಯೇ ಮುಖ್ಯ” ಎಂದು ಕಿಡಿಕಾರಿದರು.

ವೈಟ್‌ ಕಾಲರ್‌ ಉದ್ಯೋಗಿಗಳಿಗೆ ಮಾತ್ರವೇ ನೂರು ವರ್ಷಗಳ ಹಿಂದೆ ಕಾರ್ಮಿಕರು ನಡೆಸಿದ ಹೋರಾಟದ ಲಾಭ ಸಿಗುತ್ತಿದೆ. ಆದರೆ ಕಾರ್ಮಿಕರಿಗೆ ಇನ್ನು ಶೋಷಣೆ ನಡೆಯುತ್ತಿದೆ. ಇರುವ ಕಾರ್ಮಿಕ ಕಾಯ್ದೆಗಳನ್ನೇ ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಇರುವ ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಇಡೀ ದೇಶದ ಬಡಜನರ ಬದುಕು ಬೀದಿಗೆ ಬರಲಿದೆ. ಇದರ ವಿರುದ್ಧ ಐಕ್ಯತೆಯ ಹೋರಾಟ ಮುಖ್ಯವಾಗಿದೆ. ಇಂದು ನಾವು ನಡೆಸುತ್ತಿರುವುದು ಸಾಂಕೇತಕ ಹೋರಾಟವಾಗಿದ್ದು, ಲಾಕ್‌ಡೌನ್‌ ನಂತರ ಬೃಹತ್‌ ಹೋರಾಟಕ್ಕೆ ಸಜ್ಜಾಗೋಣ ಎಂದು ಕರೆ ನೀಡಿದರು.

ಹಿರಿಯ ಕಾರ್ಮಿಕ ಮುಖಂಡರಾದ ಎಸ್‌. ಬಾಲನ್‌, ಬಿಬಿಎಂಪಿ ಪೌರಕಾರ್ಮಿಕ ಸಂಘಟನೆ, ಪೌರಕಾರ್ಮಿಕ  ಬಿಡಬ್ಲುಎಸ್‌ಎಸ್ಬಿ‌ ಕಾಂಟ್ರಾಕ್ಟ್‌ ವರ್ಕರ್ಸ್‌ ಯೂನಿಯನ್‌, ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌, ಮೈಕೋ ಅಂಡ್‌ ಬಾಷ್‌ ಯೂನಿಯನ್‌, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವರ್ಕರ್ಸ್‌ ಯೂನಿಯನ್‌, ನ್ಯೂ ಸೋಷಿಯಲಿಷ್ಟ್‌ ಆಲ್ಟರ್‌ನೇಟಿವ್‌, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮನೆಕೆಲಸದ ಕಾರ್ಮಿಕರ ಯೂನಿಯನ್‌ನ ಪದಾಧಿಕಾರಿಗಳು, ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...