Homeಅಂತರಾಷ್ಟ್ರೀಯಭಾರತಕ್ಕೆ ಮತ್ತೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್

ಭಾರತಕ್ಕೆ ಮತ್ತೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್

- Advertisement -
- Advertisement -

ಕೋವಿಡ್-19 ವಿರುದ್ಧ ಹೋರಾಡಲು ಬೆಂಬಲವಾಗಿ ಮತ್ತು ಬಡವರಿಗೆ, ದುರ್ಬಲ ಕುಟುಂಬಗಳಿಗೆ ಸಹಾಯಹಸ್ತ ಚಾಚುವ ಉದ್ದೇಶದಿಂದ ಭಾರತಕ್ಕೆ ವಿಶ್ವಬ್ಯಾಂಕ್ ಒಂದು ಬಿಲಿಯನ್ ಡಾಲರ್ ಅನುಮೋದನೆ ನೀಡಿದೆ. ಶುಕ್ರವಾರ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ವಿಶ್ವಬ್ಯಾಂಕ್  ಭಾರತಕ್ಕೆ ಹಣಕಾಸು ನೆರವು ನೀಡಿರುವುದಾಗಿ ತಿಳಿಸಿದೆ.

ಕಳೆದ ತಿಂಗಳು ಭಾರತಕ್ಕೆ ಕೋವಿಡ್-19ರ ವಿರುದ್ದ ಹೋರಾಡಲು ವಿಶ್ವಬ್ಯಾಂಕ್ ತುರ್ತಾಗಿ ಒಂದು ಬಿಲಿಯನ್ ಡಾಲರ್ ಬಿಡುಗಡೆ ಮಾಡಿತ್ತು. ಈಗ ಮತ್ತೆ ಒಂದು ಬಿಲಿಯನ್ ಡಾಲರ್ ಬಿಡುಗಡೆ ಮಾಡಿದ್ದು ಬಾರತಕ್ಕೆ ವಿಶ್ವಬ್ಯಾಂಕ್ 2 ಬಿಲಿಯನ್ ಡಾಲರ್ ಬಿಡುಗಡೆ ಮಾಡಿದಂತಾಗಿದೆ.

ವಿಶ್ವಬ್ಯಾಂಕ್ ನಿರ್ದೇಶಕ ಜುನೈದ್ ಅಹಮದ್ ಮಾತನಾಡಿ, ಭಾರತದೊಂದಿಗೆ ಮೂರು ಕ್ಷೇತ್ರಗಳಲ್ಲಿ ಪಾಲುದಾರನಾಗಿ ವಿಶ್ವಬ್ಯಾಂಕ್ ಕೆಲಸ ಮಾಡುತ್ತಿದೆ. ಆರೋಗ್ಯ, ಸಾಮಾಜಿಕ ರಕ್ಷಣೆ ಹಾಗೂ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕ್ಷೇತ್ರದಲ್ಲಿ ವಿಶ್ವಬ್ಯಾಂಕ್ ಪಾಲುದಾರನಾಗಿದ್ದು ಈ ಕಾರಣಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಸಾಮಾಜಿಕ ರಕ್ಷಣೆಗೆ ಅಂದರೆ ವಲಸೆ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರನ್ನು ವ್ಯವಸ್ಥೆಯೊಂದಿಗೆ ಸಂಯೋಜಿಸುವುದು ವಿಶ್ವಬ್ಯಾಂಕ್ ಉದ್ದೇಶವಾಗಿದೆ. ದೇಶದಲ್ಲಿ ಆಧಾರ್ ಮತ್ತು ಮೊಬೈಲ್ ಸಂಪರ್ಕ ಹೊಂದಿರುವ ಸಾರ್ವಜನಿಕ ವತರಣಾ ವ್ಯವಸ್ಥೆ, ಜನ್ ಧನ್ ಯೋಜನೆಗೆ ಸೌಲಭ್ಯವನ್ನು ಹೆಚ್ಚಿಸುವುದು ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿ ರೋಗ ವಿಶ್ವವ್ಯಾಪಿ ಹರಡಿದ್ದು ಪ್ರತಿಯೊಂದು ದೇಶದ ಸರ್ಕಾರಗಳು ಕೂಡ ಲಾಕ್ ಡೌನ್ ಮುಂದುವರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಜುನೈದ್ ಅಹಮದ್ ಅಭಿಪ್ರಾಯಪಟ್ಟಿದ್ದಾರೆ.

ಕೊರೊನ ಸೋಂಕು ಆರ್ಥಿಕತೆ ಮತ್ತು ಅನೌಪಚಾರಿಕ ವಲಯದ ಉದ್ಯೋಗಗಳ ಮೇಲೆ ಭಾರೀ ಪರಿಣಾಮ ಬೀರಿದ್ದು ಲಾಕ್ ಡೌನ್ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವ ಕ್ರಮಗಳಿಂದ ಸ್ವಲ್ಪಮಟ್ಟಿಗೆ ತಡೆಯಬಹುದು. ಭಾರತವು ದೊಡ್ಡ ಪ್ರಮಾಣದಲ್ಲಿ ಲಾಕ್ ಡೌನ್ ಮಾಡಿದ್ದು ಇದರಿಂದ ಹೊರತಾಗಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮೋದಿಯವರ 20 ಲಕ್ಷ ಕೋಟಿ ರೂ ಪ್ಯಾಕೇಜ್‌ನಲ್ಲಿ 65% ಈ ಮೊದಲೇ ಘೋಷಿಸಿದ್ದು ಸೇರಿದೆ! 

ಇಂಗ್ಲಿಷ್‌ ನ್ಯೂಸ್‌ಗಳಿಗಾಗಿ ಫಾಲೋ ಮಾಡಿ: GauriLankeshNews

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...