Homeಅಂತರಾಷ್ಟ್ರೀಯಭಾರತಕ್ಕೆ ಮತ್ತೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್

ಭಾರತಕ್ಕೆ ಮತ್ತೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್

- Advertisement -
- Advertisement -

ಕೋವಿಡ್-19 ವಿರುದ್ಧ ಹೋರಾಡಲು ಬೆಂಬಲವಾಗಿ ಮತ್ತು ಬಡವರಿಗೆ, ದುರ್ಬಲ ಕುಟುಂಬಗಳಿಗೆ ಸಹಾಯಹಸ್ತ ಚಾಚುವ ಉದ್ದೇಶದಿಂದ ಭಾರತಕ್ಕೆ ವಿಶ್ವಬ್ಯಾಂಕ್ ಒಂದು ಬಿಲಿಯನ್ ಡಾಲರ್ ಅನುಮೋದನೆ ನೀಡಿದೆ. ಶುಕ್ರವಾರ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ವಿಶ್ವಬ್ಯಾಂಕ್  ಭಾರತಕ್ಕೆ ಹಣಕಾಸು ನೆರವು ನೀಡಿರುವುದಾಗಿ ತಿಳಿಸಿದೆ.

ಕಳೆದ ತಿಂಗಳು ಭಾರತಕ್ಕೆ ಕೋವಿಡ್-19ರ ವಿರುದ್ದ ಹೋರಾಡಲು ವಿಶ್ವಬ್ಯಾಂಕ್ ತುರ್ತಾಗಿ ಒಂದು ಬಿಲಿಯನ್ ಡಾಲರ್ ಬಿಡುಗಡೆ ಮಾಡಿತ್ತು. ಈಗ ಮತ್ತೆ ಒಂದು ಬಿಲಿಯನ್ ಡಾಲರ್ ಬಿಡುಗಡೆ ಮಾಡಿದ್ದು ಬಾರತಕ್ಕೆ ವಿಶ್ವಬ್ಯಾಂಕ್ 2 ಬಿಲಿಯನ್ ಡಾಲರ್ ಬಿಡುಗಡೆ ಮಾಡಿದಂತಾಗಿದೆ.

ವಿಶ್ವಬ್ಯಾಂಕ್ ನಿರ್ದೇಶಕ ಜುನೈದ್ ಅಹಮದ್ ಮಾತನಾಡಿ, ಭಾರತದೊಂದಿಗೆ ಮೂರು ಕ್ಷೇತ್ರಗಳಲ್ಲಿ ಪಾಲುದಾರನಾಗಿ ವಿಶ್ವಬ್ಯಾಂಕ್ ಕೆಲಸ ಮಾಡುತ್ತಿದೆ. ಆರೋಗ್ಯ, ಸಾಮಾಜಿಕ ರಕ್ಷಣೆ ಹಾಗೂ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕ್ಷೇತ್ರದಲ್ಲಿ ವಿಶ್ವಬ್ಯಾಂಕ್ ಪಾಲುದಾರನಾಗಿದ್ದು ಈ ಕಾರಣಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಸಾಮಾಜಿಕ ರಕ್ಷಣೆಗೆ ಅಂದರೆ ವಲಸೆ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರನ್ನು ವ್ಯವಸ್ಥೆಯೊಂದಿಗೆ ಸಂಯೋಜಿಸುವುದು ವಿಶ್ವಬ್ಯಾಂಕ್ ಉದ್ದೇಶವಾಗಿದೆ. ದೇಶದಲ್ಲಿ ಆಧಾರ್ ಮತ್ತು ಮೊಬೈಲ್ ಸಂಪರ್ಕ ಹೊಂದಿರುವ ಸಾರ್ವಜನಿಕ ವತರಣಾ ವ್ಯವಸ್ಥೆ, ಜನ್ ಧನ್ ಯೋಜನೆಗೆ ಸೌಲಭ್ಯವನ್ನು ಹೆಚ್ಚಿಸುವುದು ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿ ರೋಗ ವಿಶ್ವವ್ಯಾಪಿ ಹರಡಿದ್ದು ಪ್ರತಿಯೊಂದು ದೇಶದ ಸರ್ಕಾರಗಳು ಕೂಡ ಲಾಕ್ ಡೌನ್ ಮುಂದುವರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಜುನೈದ್ ಅಹಮದ್ ಅಭಿಪ್ರಾಯಪಟ್ಟಿದ್ದಾರೆ.

ಕೊರೊನ ಸೋಂಕು ಆರ್ಥಿಕತೆ ಮತ್ತು ಅನೌಪಚಾರಿಕ ವಲಯದ ಉದ್ಯೋಗಗಳ ಮೇಲೆ ಭಾರೀ ಪರಿಣಾಮ ಬೀರಿದ್ದು ಲಾಕ್ ಡೌನ್ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವ ಕ್ರಮಗಳಿಂದ ಸ್ವಲ್ಪಮಟ್ಟಿಗೆ ತಡೆಯಬಹುದು. ಭಾರತವು ದೊಡ್ಡ ಪ್ರಮಾಣದಲ್ಲಿ ಲಾಕ್ ಡೌನ್ ಮಾಡಿದ್ದು ಇದರಿಂದ ಹೊರತಾಗಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮೋದಿಯವರ 20 ಲಕ್ಷ ಕೋಟಿ ರೂ ಪ್ಯಾಕೇಜ್‌ನಲ್ಲಿ 65% ಈ ಮೊದಲೇ ಘೋಷಿಸಿದ್ದು ಸೇರಿದೆ! 

ಇಂಗ್ಲಿಷ್‌ ನ್ಯೂಸ್‌ಗಳಿಗಾಗಿ ಫಾಲೋ ಮಾಡಿ: GauriLankeshNews

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...