Homeಅಂಕಣಗಳುಮೋದಿ ಬುದ್ದಿವಂತನಲವಂತೆ ನಿಜವೆ! - ಚಂದ್ರೇಗೌಡರ ಕಟ್ಟೆಪುರಾಣ

ಮೋದಿ ಬುದ್ದಿವಂತನಲವಂತೆ ನಿಜವೆ! – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ.
“ಯಕ್ಕಾ, ಯಕ್ಕವ್, ಕೊರೋನಾ ವಿಷಯದಲ್ಲಿ ಒಂದಿಷ್ಟು ಹ್ವಸಾ ರೂಲ್ಸು ಬಂದವೆ ಹೇಳ್ಳ” ಎಂದ.
“ಏನು ಬ್ಯಾಡ. ನೀನು ಆ ಟಿವಿ ಸೂಳೆ ಮಕ್ಕಳಂಗೆ ಆಗಿದ್ದಿ.”
“ಯಕ್ಕವ್ ಟಿವಿ ಮುಂಡೆ ಮಕ್ಕಳಿಗೆ ಓಲುಸಬ್ಯಾಡ. ಹುಟ್ಟು ಭಯೋತ್ಪಾದಕರ ತರ ಆಗ್ಯವುರೆ ಅ ನನ್ ಮಕ್ಕಳು”.
“ಊ ಕಣೊ ವಾಟಿಸ್ಸೆ. ಆ ಮೈಸೂರು ಬಗ್ಗೆ ಒಸಿ ಸುಳ್ಳೆಳಿದರೇನೊ, ನಡುಗ್ತಾಯಿದೆ ಮೈಸೂರು ಅಂದ್ರು ಮೈಸೂರ ಮ್ಯಾಲೆ ಬರಸಿಡ್ಳು ಅಂದ್ರು. ನಾನು ಪೋನು ಮಾಡಿ ಕೇಳಿದ್ರೆ ಕರೋನಾ ಆದೊರ್ಯಲ್ಲ ಉಸರಾಗಿ ಮನಿಗೆಹೋಯ್ತಾ ಅವುರಂತೆ” ಎಂದ ಉಗ್ರಿ.
“ಅದ್ಯಾಕ್ಲ ಅಂಗೆ ಸುಳ್ಳೇಳತವೆ” ಎಂದಳು ಜುಮ್ಮಿ.
“ಅವುಕೆ ಸಂಬಳ ಕೊಡದೆ ಸುಳ್ಳೇಳಕ್ಕೆ ಕಣಕ್ಕ. ಬ್ಯಾರೆ ಟಿವಿಯೋರಿಗಿಂತ ನಾವೇ ಜಾಸ್ತಿ ಸುಳ್ಳೇಳಬೇಕು ಅಂತ ಪೈಪೋಟಿ ನ್ಯಡುಸ್ತವೆ”.
“ಅಯ್ಯೋ ಅವು ಬಾಯಿಗೆ ತನ್ನ ತೊಂಬ್ಲ ಹಾಕ ಹೋಗು”.
“ತೊಂಬಲ ಅನ್ನಬ್ಯಾಡ ಕಣಕ್ಕ. ಅದು ಸೆಕ್ಸ್ ಮ್ಯಾಟ್ರಾಯ್ತದೆ”.
“ಅದ್ಯಂಗಾಯ್ತದೊ ಎಂದ ಉಗ್ರಿ”.
“ತೊಂಬಲ ಅಂದ್ರೆ ಯಲೆ ಅಡಕೆ ಹದವಾಗಿ ಅಗದದ್ದು. ಒಂಥರ ವಳ್ಳೆ ಬೀಡಾತರ ಆಗಿರತದೆ ಅಂತದ್ನ ಟಿವಿ ಆಂಕರ್ ಬಾಯಿಗಾಕಿದ್ರೆ ಮಜವಾಗಿ ಬಾಯಾಡುಸ್ತರೆ ಬ್ಯಾರೆ ಹೇಳಕ್ಕ”.
“ಅವುರ ಬಾಯಿಗೆ ನನ್ನ ಎಂಜಲಾಕ ಅನ್ಲ”.
“ಅವುರ ಬಾಯಿಗೆ ಕೊರೋನಾ ಎಂಜಲಾಕ ಅನ್ನು”.
“ಅವುರುದು ವಟ್ಟೆ ಪಾಡು ಕಣಕ್ಕ. ನೀನೇನೊ ಮನೆವಳಗೆ ಮಜ್ಜಗೆ ಕಡಕಂಡು ತಂಪಾಗಿದ್ದಿ. ಅವು ನೋಡು ಇಡೀ ದಿನ ಕರೋನಾ, ಕರೋನಾ ಅಂತ ಗೊಬಳಿ ಮರದ ಮ್ಯಾಲೆ ಕುಂತ ಕಾಗೆತರ ಬಡಕತ್ತವೆ. ಕನಸು ಮಸನಲ್ಲೂ ಕರೋನಾ ಅಂತವೆ ಪಾಪ ಅಲವೆ”.
“ಅದ್ರು ಟಿವಿಗಳಿರದು ಕರೋನಾದಿಂದ ಆಗಿರೊ ಅನಾಹುತ ಹೇಳಕ್ಕೆ. ಸರಕಾರ ಹೊಗಳಕ್ಕಲ್ಲ ಕಣೊ” ಎಂದ ಉಗ್ರಿ.
“ಟಿವಿ ನ್ಯಡಸೊವಷ್ಟು ದುಡ್ಡು ಮೋದಿನೆ ಕೊಟ್ಟಿರುವಾಗ ಹೋಗಳಲೇಬೇಕಲ್ಲೊ ಅದ್ಕೆ ಕರೋನಾ ಸುದ್ದಿ ಹೇಳುವಾಗ ಅವುನ ಪೋಟಾ ಹಾಕದು” ಎಂದ ವಾಟಿಸ್ಸೆ.
“ಅವುನೇನೊ ಅಂತ ಬುದ್ದಿವಂತಲವಂತಲ್ಲಾ” ಎಂದಳು ಜುಮ್ಮಿ.
“ಅವುನು ಬುದ್ದಿವಂತ ಅಂತ ಯಾರಕ್ಕ ಹೇಳಿದ್ದು”.
“ಆ ಸುಳ್ಳೇಗೌಡ್ರು ಅನಂತ ಅಂಗಂದಿದ್ದ”.
“ಸುಳ್ಳೇಗೌಡರ ಅನಂತ ನಿಜ ಹೇಳಕ್ಕಾಯ್ತದೇನಕ್ಕ ಈ ಮೋದಿ ಯಾವತ್ತು ಅರ್ಧ ರಾತ್ರಿಲಿ ನೋಟ ಬ್ಯಾನು ಮಾಡಿದ್ನೋ ಅವತ್ತೆ ಇವುನೆಷ್ಟು ಮಟ್ಟಿಗೆ ಬುದ್ದಿವಂತ ಅಂತ ಇಡೀ ಜಗತ್ತಿಗೆ ಗೊತ್ತಾಯ್ತು. ದೇಸ ಅದೋಗತಿಗೆ ಹ್ಹಂಡಕ್ಕೆ ಸುರುಮಾಡಿದ್ದು ಅವತ್ತೆಯ. ಇನ್ಯಾವ ಡಿಗ್ರಿ ಸರ್ಟಿಫಿಕೇಟ್ ತೊರಿದ್ರು ಜನ ನಂಬದಿಲ್ಲ ಬುಡು”.
“ನೀನಂಗಂತಿ ಕಣೊ ಜನ ಮೋದಿ ಮೋದಿ ಅಂತವೆ”.
“ಯಾಕಗಂತರೆ ಗೊತ್ತೇನೊ ಅವುನೆದ್ರಿಗ್ಯಾರು ಇಲ್ಲ ಅದಕೆ”.
“ಅದು ನಿಜ ಬುಡು”.
“ಆ ಡೆಲ್ಲಿಗೆ ಒಂದು ಚರಿತ್ರೆ ಅದೆ. ಅಲ್ಲೊಬ್ಬ ತುಘಲಕ್ ಅಂತ ದ್ವರೆ ಇದ್ದ. ವಿಪರೀತ ಬುದ್ದಿವಂತ. ಅವುನು ಈ ಡೆಲ್ಲಿ ಇಲ್ಲಿದ್ರೆ ವೈರಿಗಾಳ ದಾಳಿ ನ್ಯಡಿತಾಯಿರತದೆ ಅಂತ ಯಲ್ಲ ದೇವಗಿರಿಗೆ ವಂಡಿ ಅಂದ. ಸರಿ ಇಡೀ ಡೆಲ್ಲಿ ದೇವಗಿರಿಗೋಯ್ತು. ಆ ಊರು ರಾಜಾದಾನಿ ಅಗಕ್ಕೆ ಸರಿಲ್ಲ ತಿರಗ ಯಲ್ಲ ಡೆಲ್ಲಿಗೆ ಹೊಂಡಿ ಅಂದ. ಆಗ ತಿರಗ ಡೆಲ್ಲಿ ಹಾದಿಲಿ ನ್ಯಡಕಂಡು ವಂಟ್ರು ಹೋಗುವಾಗ ಕಾಲುಬಾಗ ಸತ್ತಿದ್ರು. ಬರುವಾಗ ಅದ್ರ ಜನ ಸತೃ. ದೊರೆ ತಿಕ್ಕಲ ಪ್ರತಿಭಟಿಸಕ್ಕೆ ಜನಗಳೆ ಇರಲಿಲ್ಲ ಈಗ್ಲು ಕೊರೋನಾ ವಿಷಯದಲ್ಲಿ ಅಂಗೆ ಆಗ್ಯದೆ ನೋಡು”.
“ನೀನೇಳಿದ್ದು ನಿಜ ಕಣೊ ಉಗ್ರಿ ದೇಶಕಟ್ಟೊ ಜನ ಬಿದಿಲಿ, ದಾರಿಲಿ, ರೈಲ್ವೆಹಳಿ ಮ್ಯಾಲೆ ಸಾಯ್ತಾ ಅವುರೆ ಪಾಪ ಅವರಿಗೆ ನಮ್ಮನ್ನ ಕಾಪಾಡೋರು ಯಾರೂ ಇಲ್ಲ ಅನ್ನಸ್ಯದೆ ಇದು ಮೋದಿಗೆ ಗೊತ್ತಾಗದಿಲ್ಲ ಅಂದ್ರೆ ಅವುನು ದಡ್ಡನೇ ಸರಿ”.
“ಅದೇನಾರ ಆಗ್ಲಿ ಜನಗಳ್ಯಲ್ಲ ಸತ್ತೋದ್ರಲ್ಲ ಹೇಳೂ” ಅಂದಳು ಜುಮ್ಮಿ.
“ !?


ಇದನ್ನೂ ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...