Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...