Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...