Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...