Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

ಲಾಕ್‌ಡೌನ್‌ ಸಮಯದಲ್ಲಿ ತನ್ನ ನೌಕರರ ಸಂಬಳ ಹೆಚ್ಚಿಸಿ ಮನೋಸ್ಥೈರ್ಯ ತುಂಬಿದ ಏಷ್ಯನ್‌ ಪೇಂಟ್ಸ್‌!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಮತ್ತುಷ್ಟು ಪಾತಾಳಕ್ಕೆ ತಳ್ಳಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಲಕ್ಷಾಂತರ ಕಂಪನಿಗಳು ತನ್ನ ನೌಕರರನ್ನು ಕೆಲಸದಿಂದ ಕಿತ್ತೆಸೆದಿವೆ. ಇನ್ನಷ್ಟು ಕಂಪನಿಗಳು ಸಂಬಳ ನಿಲ್ಲಿಸಿವೆ ಅಥವಾ ಸಂಬಳ ಕಡಿತ ಮಾಡಿವೆ. ಆದರೆ ಏಷ್ಯನ್‌ ಪೇಂಟ್ಸ್‌ ಕಂಪನಿ ಮಾತ್ರ ಕಷ್ಟಕರ ಸಂದರ್ಭದಲ್ಲಿಯೂ ತನ್ನ ನೌಕರರ ಸಂಬಳ ಹೆಚ್ಚಿಸಿ ಅವರಿಗೆ ಮನೋಸ್ಥೈರ್ಯ ತುಂಬುವ ಮಾದರಿ ಕೆಲಸ ಮಾಡಿದೆ.

ಭಾರತದ ದೊಡ್ಡ ಮತ್ತು ಬ್ರಾಂಡ್‌ ಕಂಪನಿಯಾದ ಏಷ್ಯನ್‌ ಪೇಂಟ್ಸ್‌ ಪ್ರವಾಹದ ವಿರುದ್ಧ ಈಜಲು ಹೊರಟಿದೆ. ಕೆಲಸ ಕಳೆದುಕೊಂಡು ಭವಿಷ್ಯದ ಬಗ್ಗೆ ಚಿಂತಿತರಾಗಿರುವ ಕೋಟ್ಯಾಂತರ ನೌಕರರ ನಡುವೆ ಅದು ತನ್ನ ನೌಕರರಿಗೆ ನಾನಿದ್ದೇನೆ ಭಯಪಡಬೇಡಿ ಎಂಬ ಭರವಸೆ ನೀಡಿದೆ.

ಕಂಪನಿಯ ತನ್ನ ಎಲ್ಲಾ ನೌಕರರ ವಾರ್ಷಿಕ ಸಂಬಳವನ್ನು ಹೆಚ್ಚಿಸಿದೆ. ಎಲ್ಲರಿಗು ಉಚಿತ ವೈದ್ಯಕೀಯ ವಿಮೆ ಮಾಡಿಸಲು ಮುಂದಾಗಿದೆ. ತನ್ನ ಅಂಗಡಿಗಳ ನೈರ್ಮಲ್ಯೀಕರಣ ಜವಾಬ್ದಾರಿ ಹೊತ್ತಿದೆ. ಈಗಾಗಲೇ ತನ್ನ ಗುತ್ತಿಗೆದಾರರ ಖಾತೆಗೆ 40 ಕೋಟಿ ರೂಗಳನ್ನು ವರ್ಗಾಹಿಸಿದೆ. ಅಲ್ಲದೇ ಕಂಪನಿಯಿಂದ ಪಾವತಿಗಳಿಗೆ 45 ದಿನಗಳ ವಿಸ್ತರಣೆ ಮತ್ತು 45 ದಿನಗಳಲ್ಲಿ ಪಾವತಿ ಮಾಡಿದರೆ 2 ಪ್ರತಿಶತ ರಿಯಾಯಿತಿಯನ್ನು ಘೋಷಿಸಿದೆ.

ನಮ್ಮದು ಉತ್ತಮ ನಾಯಕತ್ವ ಹೊಂದಿರುವ ಮತ್ತು ನಮ್ಮ ಎಲ್ಲಾ ಪಾಲುದಾರರನ್ನು ನೋಡಿಕೊಳ್ಳುವ ಮಾದರಿ ಸಂಸ್ಥೆಯಾಗಿರಬೇಕು. ಇಂತಹ ಎಲ್ಲಾ ಉಪಕ್ರಮಗಳ ಬಗ್ಗೆ ನಾನು ನಿಯಮಿತವಾಗಿ ಮಂಡಳಿಯೊಂದಿಗೆ ಚರ್ಚಿಸಿ ಅವರ ಅನುಮೋದನೆಯನ್ನು ಪಡೆದುಕೊಂಡಿದ್ದೇನೆ. “ನಮ್ಮ ಪ್ರತಿಯೊಬ್ಬ ಉದ್ಯೋಗಿಯೊಂದಿಗೆ ಹೆಜ್ಜೆ ಹಾಕಲು, ಸಂವಹನ ನಡೆಸಲು ಮತ್ತು ಅನಿಶ್ಚಿತ ಮಾರುಕಟ್ಟೆಯಲ್ಲಿ ಅವರ ಕಳವಳಗಳನ್ನು ಹೋಗಲಾಡಿಸಲು ಇದು ಒಂದು ದೊಡ್ಡ ಅವಕಾಶವೆಂದು ನಾನು ನೋಡುತ್ತೇನೆ. ಪ್ರಬುದ್ಧ ಬ್ರಾಂಡ್ ಆಗಿ ಕೆಲಸಕ್ಕೆ ತೆಗೆದುಕೊಳ್ಳುವ/ಕೈಬಿಡುವುದು (Hire and Fire) ಏಷ್ಯನ್ ಪೇಂಟ್ಸ್ ಸಂಸ್ಕೃತಿಯಲ್ಲ. ಬದಲಿಗೆ ಉದ್ಯೋಗಿಗಳಿಗೆ ಭರವಸೆ ನೀಡಿದ್ದೇವೆ” ಎಂದು ಕಂಪನಿಯ ಸಿಇಒ ಅಮಿತ್ ಸಿಂಗಲ್ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟು ಮಾತ್ರವಲ್ಲದೇ ಕಂಪನಿಯೂ ಕೋವಿಡ್‌ ಪರಿಹಾರ ನಿಧಿಗೆ (ಮಹಾರಾಷ್ಟ್ರ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ) 35 ಕೋಟಿ ರೂಗಳ ದೇಣಿಗೆ ನೀಡಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ತಯಾರಿಸಿ ವಿತರಿಸಿದೆ.

ಏಷ್ಯನ್‌ ಪೇಂಟ್ಸ್‌ ಕಂಪನಿಯ ಮೊದಲ ತ್ರೈಮಾಸಿಕದ ಸಮಯದಲ್ಲಿ ಯಾವುದೇ ಲಾಭ ದೊರೆಯುವುದಿಲ್ಲ ಎಂದು ಕಂಪನಿಗೆ ನಿಚ್ಚಳವಾಗಿ ತಿಳಿದಿದೆ. ಆದರು ಅದು ತತ್‌ಕ್ಷಣದ ಲಾಭ ನಷ್ಟದ ಬಗ್ಗೆ ಯೋಚಿಸದೇ ದೂರಗಾಮಿ ಪರಿಣಾಮಗಳ ಬಗ್ಗೆ ಚಿಂತಿಸುತ್ತಿದೆ.

ಈ ಹಂತಗಳು ಕಂಪನಿಗೆ ತಕ್ಷಣದ ಹಣಕಾಸಿನ ಪ್ರಯೋಜನಗಳಿಗೆ ಕಾರಣವಾಗದಿದ್ದರೂ, ಉದ್ಯೋಗಿಗಳು ಮತ್ತು ಪಾಲುದಾರರಂತಹ ಪ್ರಮುಖ ಪಾಲುದಾರರೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಅವು ಖಂಡಿತವಾಗಿಯೂ ಕಂಪನಿಗೆ ಒಳ್ಳೆಯ ಹೆಸರು ತಂದುಕೊಡುವುದರ ಜೊತೆಗೆ ತನ್ನ ನೌಕರರು ಮತ್ತು ಗುತ್ತಿಗೆದಾರರಲ್ಲಿ ಮಾತ್ರವಲ್ಲದೇ ಗ್ರಾಹಕರಲ್ಲಿಯೂ ಸಹ ನಂಬಿಕೆಯನ್ನು ಹುಟ್ಟಿಸುತ್ತದೆ.

ಒಟ್ಟಿನಲ್ಲಿ ಕಂಪನಿ ನಷ್ಟದಲ್ಲಿದೆ ಎಂದು ಹಲವಾರು ಉದ್ಯಮಿಗಳು ತನ್ನ ಉದ್ಯೋಗಿಗಳನ್ನು ಕ್ಷಣಮಾತ್ರದಲ್ಲಿ ಕಿತ್ತೊಗೆಯುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರವು ಅವರ ಪರ ನಿಲ್ಲಬೇಕು. ಇದಕ್ಕೆ ಏಷ್ಯನ್‌ ಪೇಂಟ್ಸ್‌ ಉತ್ತಮ ಮಾದರಿಯಾಗಿದೆ.


ಇದನ್ನೂ ಓದಿ: ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಏಶಿಯನ್ ಪೆಯಿಂಟ್ಸ್ ಮಾಲೀಕರಿಗೊಂದು ಸಲಾಂ. ಇವರ ನೀತಿ ಅನುಕರಣೆಗೆ ಅರ್ಹವಾಗಿದೆ.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...