Homeಮುಖಪುಟಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ

ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ

- Advertisement -
- Advertisement -

ಇಂದು ಉತ್ತರ ಪ್ರದೇಶದ ಔರಿಯಾ ಬಳಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟ್ರಕ್ ಮತ್ತೊಂದು ಟ್ರಕ್‌ಗೆ ಢಿಕ್ಕಿ ಹೊಡೆದು ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.

ದುರಂತವೂ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. 15-20 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಔರಿಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ “ಹೆಚ್ಚಿನವರು ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದವರು” ಎಂದು ಹೇಳಿದ್ದಾರೆ.

ಇವರೆಲ್ಲರೂ ರಾಜಸ್ಥಾನದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಳೆದ ತಿಂಗಳು ದೇಶದಾದ್ಯಂತ ಘೋಷಿಸಿದ್ದ ಲಾಕ್‌ಡೌನ್ ನಿಂದಾಗಿ ಲಕ್ಷಾಂತರ ಕಾರ್ಮಿಕರು ತಮ್ಮ ಮನೆಗೆ ಮಹಾವಲಸೆಯನ್ನು ಪ್ರಾರಂಭಿಸಿದ್ದರು. ಈ ಸಮಯದಲ್ಲಿ ನೂರಾರು ಮಂದಿ ಅಫಘಾತ ಹಾಗೂ ಬಳಲಿಕೆಯಿಂದ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಎರಡೂ ಲಾರಿಗಳನ್ನು ವಶಪಡಿಸಿ ಟ್ರಕ್ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪ್ರಧಾನ ಮಂತ್ರಿ ಮೋದಿ ಸಂತಾಪ

ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ಉತ್ತರ ಪ್ರದೇಶದ ಔರಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತ ಬಹಳ ದುರಂತ. ಪರಿಹಾರ ಕಾರ್ಯಗಳಲ್ಲಿ ಸರ್ಕಾರ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ, ಹಾಗೆಯೇ ಗಾಯಾಳುಗಳು ಆದಷ್ಟು ಬೇಗ ಚೇತರಿಕೆ ಹೊಂದಲಿ ಎಂದು ಹಾರೈಸುತ್ತೇನೆ.” ಎಂದು ಹೇಳಿದ್ದಾರೆ.

“ಔರಿಯಾ ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದ ವಲಸೆ ಕಾರ್ಮಿಕರ ಸಾವು ದುರದೃಷ್ಟಕರ ಮತ್ತು ದುಃಖಕರವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರಿಗೆ ಪರಿಹಾರ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆಗಳನ್ನು ನೀಡಲಾಗಿದೆ. ತನಿಖೆಗೆ ಸಹ ಆದೇಶಿಸಲಾಗಿದೆ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಘಟನೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಕೂಡ ಸಂತಾಪ ಸೂಚಿಸಿದ್ದಾರೆ. “ಉತ್ತರ ಪ್ರದೇಶದ ಔರಿಯಾದಲ್ಲಿ ರಸ್ತೆ ಅಪಘಾತದಿಂದ ಹಲವಾರು ಕಾರ್ಮಿಕರು ಸಾವನ್ನಪ್ಪಿದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಲ್ಲದೆ, ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಉತ್ತರ ಬಿಎಸ್ಪಿ ನಾಯಕಿ ಮಾಯಾವತಿ ಮಾತನಾಡಿ, “ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಅಪಘಾತದಲ್ಲಿ ಮೃತಪಟ್ಟ ಅಥವಾ ಗಾಯಗೊಂಡವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕು. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.” ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರಿಗೆ ಆಹಾರ, ನೀರು ಒದಗಿಸಲು ಕೇಂದ್ರಕ್ಕೆ ಆದೇಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ವಜಾಗೊಳಿಸಿದೆ.

“ನ್ಯಾಯಾಲಯ ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದಿತ್ತಲ್ಲದೆ, “ಈ ಬಗ್ಗೆ ರಾಜ್ಯ ತೀರ್ಮಾನಿಸಲಿ. ನ್ಯಾಯಾಲಯ ಯಾಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇನ್ನಷ್ಟು ಓದಿ: ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...