Homeಮುಖಪುಟಪ್ಯಾಕೇಜ್ ಹಣವನ್ನು ಲಾಕ್‌ಡೌನ್‌ನಿಂದ ಬಳಲುವ ಜನರ ಖಾತೆಗೆ ಹಾಕಿ: ರಾಹುಲ್ ಗಾಂಧಿ

ಪ್ಯಾಕೇಜ್ ಹಣವನ್ನು ಲಾಕ್‌ಡೌನ್‌ನಿಂದ ಬಳಲುವ ಜನರ ಖಾತೆಗೆ ಹಾಕಿ: ರಾಹುಲ್ ಗಾಂಧಿ

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗಳಲ್ಲಿ ತಮ್ಮ ಪಕ್ಷವು ಪ್ರಸ್ತಾಪಿಸಿದ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅದೇ ರೀತಿಯ ಯೋಜನೆಯನ್ನು ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ನಿಂದಾಗಿ ಪೀಡಿತವಾಗಿದ್ದ ಆರ್ಥಿಕತೆಯನ್ನು ಮೇಲೆತ್ತಲು ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಅನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅದನ್ನು ಕೊರೊನಾ ಹಾಗೂ ಲಾಕ್‌ಡೌನ್‌ ಕೆಟ್ಟ ಪರಿಣಾಮದಿಂದ ಬಳಲುತ್ತಿರುವ ಜನರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಹಾಕದಿದ್ದರೆ “ಘೋರವಾದ ಸಮಸ್ಯೆ” ಉಂಟಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜೂಮ್ ವಿಡಿಯೋ ಕರೆಯ ಮೂಲಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಸಾಲಗಳ ಪ್ಯಾಕೇಜ್” ಎಂದು ಅವರು ಹೇಳಿದ್ದ ಘೋಷಣೆಯೂ ರೈತರು ಮತ್ತು ವಲಸಿಗರಿಗೆ ತಕ್ಷಣದ ನೆರವು ನೀಡುವುದಿಲ್ಲ ಎಂದು ಹೇಳಿದ್ದಾರೆ.

“ನಮ್ಮ ಜನರಿಗೆ ಹಣ ಬೇಕು. ಪ್ರಧಾನಿ ಈ ಪ್ಯಾಕೇಜ್ ಅನ್ನು ಮರುಪರಿಶೀಲಿಸಿ, ನೇರ ನಗದು ವರ್ಗಾವಣೆಯ ಬಗ್ಗೆ ಯೋಚಿಸಬೇಕು. ನರೇಗಾ ಅಡಿಯಲ್ಲಿ 200 ಕೆಲಸದ ದಿನಗಳು, ರೈತರಿಗೆ ಹಣ ನೀಡಬೇಕು. ಯಾಕೆಂದರೆ ಅವರು ಭಾರತದ ಭವಿಷ್ಯ” ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಚಾರ ಮಾಡುವಾಗ ತಮ್ಮ ಪಕ್ಷವು ಪ್ರಣಾಳಿಕೆಯಲ್ಲಿ ಸೇರಿಸಿದ್ದ ನ್ಯಾಯ್ ಯೋಜನೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅದೇ ರೀತಿಯ ಯೋಜನೆಯನ್ನು ತರಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನ್ಯಾಯ್ ಯೋಜನೆಯೂ ಸಮಾಜದ ಬಡ ವರ್ಗಗಳಿಗೆ ವಾರ್ಷಿಕ 72,000 ರೂ. ಆದಾಯದ ಬೆಂಬಲವನ್ನು ನೀಡುವುದಾಗಿ ಹೇಳುತ್ತದೆ.

“ಬೀದಿಯಲ್ಲಿ ನಡೆಯುವ ವಲಸೆ ಕಾರ್ಮಿಕನಿಗೆ ಹಣ ಬೇಕು, ಸಾಲವಲ್ಲ. ಬಳಲುತ್ತಿರುವ ರೈತನಿಗೆ ಹಣ ಬೇಕು, ಸಾಲವಲ್ಲ. ಇದನ್ನು ಮಾಡದಿದ್ದರೆ ಘೋರವಾದ ಸಮಸ್ಯೆಯಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಈ ತಿಂಗಳ ಆರಂಭದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ರಾಹುಲ್ ಗಾಂಧಿ ಅವರೊಂದಿಗಿನ ಚರ್ಚೆಯಲ್ಲಿ ಈ ವಿಷಯವನ್ನು ತಿಳಿಸಿದ್ದರು. “ಜನಸಂಖ್ಯೆಯ ಶೇಕಡಾ 60 ರಷ್ಟು ಜನರಿಗೆ ನಾವು  ಸ್ವಲ್ಪ ಹಣವನ್ನು ನೀಡಿದರೆ, ಕೆಟ್ಟದ್ದೇನೂ ಆಗುವುದಿಲ್ಲ, ಇದೇ ರೀತಿಯ ಅಭ್ಯಾಸವನ್ನು ಅಮೆರಿಕಾ ಕೂಡಾ ಅನುಸರಿಸುತ್ತಿದೆ” ಎಂದು ಹೇಳಿದ್ದರು.

ಭಾರತದಲ್ಲಿ ಇದುವರೆಗೂ ಸುಮಾರು 86,000 ಕೊರೊನಾ ಪ್ರಕರಣಗಳನ್ನು ವರದಿಯಾಗಿವೆ. ಅದಲ್ಲದೆ ಸೋಂಕಿನಿಂದ 2,700 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. ಇಷ್ಟೇ ಅಲ್ಲದೆ ಕೊರೊನಾ ಹರಡುವಿಕೆಯನ್ನು ತಡೆಯಲು ದೇಶಾದ್ಯಂತ ಘೋಷಿಸಿದ್ದ ಲಾಕ್‌ಡೌನ್ ನಿಂದಾಗಿ ಲಕ್ಷಾಂತರ ಜನರ ದುಡಿಮೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ, ಅದರಲ್ಲೂ ವಲಸೆ ಕಾರ್ಮಿಕರು ಮತ್ತು ದಿನಗೂಲಿ ಕಾರ್ಮಿಕರು ಹೆಚ್ಚು ಹಾನಿಗೊಳಗಾಗಿದ್ದಾರೆ.


ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು


ಸದ್ದು…ಈ ಸುದ್ದಿಯೇನಾಗಿದೆ ? ವಿಶೇಷ ಕಾರ್ಯಕ್ರಮದ ಸರಣಿ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...