Homeಮುಖಪುಟಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕಾರ್ಮಿಕ ಕಾನೂನುಗಳ ಅಮಾನತು ತಪ್ಪು ನಿರ್ಧಾರ: ಅಜೀಮ್ ಪ್ರೇಮ್‌ಜಿ

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಪ್ರತಿ ಬಡವರ ಮನೆಗೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್‌ಜಿ ಸಲಹೆ ನೀಡಿದ್ದಾರೆ.

- Advertisement -
- Advertisement -

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆಯಾಗಿದೆ ಎಂದು ವಿಪ್ರೋದ ಸಂಸ್ಥಾಪಕ ಅಜೀಮ್ ಪ್ರೇಮ್‌ಜಿ ತಿಳಿಸಿದ್ದಾರೆ. ಅವರು ಎಕನಾಮಿಕ್ಸ್ ಟೈಮ್ಸ್‌ಗೆ ಬರೆದ ಲೇಖನದಲ್ಲಿ ಇದನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವಾರ ರೈಲು ಹರಿದು ಹದಿನಾರು ವಲಸೆ ಕಾರ್ಮಿಕರ ಸಾವು ‘ಕ್ಷಮಿಸಲಾಗದ ದುರಂತ’ ಎಂದಿರುವ ಅವರು, ಈ ದುರಂತವು ದೇಶದ ದುರ್ಬಲ ಮತ್ತು ಬಡವರು ಎದುರಿಸುತ್ತಿರುವ ಭೀಕರ ದುಃಖದ ಗುರುತುಗಳಲ್ಲಿ ಒಂದಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಮಿಕರ ಕಾಯ್ದೆಗಳ ತಿದ್ದುಪಡಿ, ಕೆಲಸದ ಅವಧಿ ಹೆಚ್ಚಳ, ಕೈಗಾರಿಕಾ ವಿವಾದಗಳು, ಔದ್ಯೋಗಿಕ ಸುರಕ್ಷತೆ, ಕೆಲಸದ ಪರಿಸ್ಥಿತಿಗಳು, ಕಾರ್ಮಿಕ ಸಂಘಗಳು, ವಲಸೆ ಕಾರ್ಮಿಕರು, ಕನಿಷ್ಠ ವೇತನ ಇತ್ಯಾದಿಗಳಿಗೆ ಸಂಬಂಧಿಸಿದ ಕೆಲವು ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುದರ ಬಗ್ಗೆ ಅಜೀಮ್ ಪ್ರೇಮ್‌ಜಿ ಆಘಾತ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಕಾನೂನುಗಳನ್ನು ಅಮಾನತುಗೊಳಿಸುವುದು ತಪ್ಪು ಆಯ್ಕೆ ಎಂದಿರುವ ಅವರು, ಇದು ಕಾರ್ಮಿಕರು ಮತ್ತು ವ್ಯವಹಾರಗಳನ್ನು ಪರಸ್ಪರ ವಿರುದ್ಧವಾಗಿಸುತ್ತದೆ ಎಂದಿದ್ದಾರೆ.

“ಬೃಹತ್‌ ಉದ್ಯಮದಾರರ ಒತ್ತಡಕ್ಕೆ ಮಣಿದು ಕಳೆದ ಕೆಲವು ದಶಕಗಳಲ್ಲಿ ಕಾರ್ಮಿಕ ಕಾನೂನುಗಳು ಬದಲಾಗಿವೆ. ಅದೇ ಸಮಯದಲ್ಲಿ ಸಾಮಾಜಿಕ ಭದ್ರತಾ ಕ್ರಮಗಳು ಹೆಚ್ಚಿಲ್ಲ. ಇದರಿಂದಾಗಿ ಉದ್ಯೋಗಿಗಳ ನಂಬಿಕೆ ಮತ್ತು ಸಾಮರ್ಥ್ಯ ಹದಗೆಡುತ್ತದೆ. ಈಗಾಗಲೇ ಸಡಿಲವಾಗಿರುವ ಈ ಕಾನೂನುಗಳನ್ನು ದುರ್ಬಲಗೊಳಿಸುವುದರಿಂದ ಆರ್ಥಿಕ ಚಟುವಟಿಕೆ ಹೆಚ್ಚಾಗುವುದಿಲ್ಲ, ಇದು ಕಡಿಮೆ ವೇತನ ಪಡೆಯುವವರ ಮತ್ತು ಬಡವರ ಕೆಟ್ಟ ಪರಿಸ್ಥಿತಿಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ”ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಭದ್ರತೆ ಮತ್ತು ಕಾರ್ಮಿಕರ ರಕ್ಷಣೆಯ ಕೊರತೆಯೇ ಆ ಹದಿನಾರು ಯುವಕರನ್ನು ಕೊಂದಿದೆ ಎಂದಿರುವ ಅವರು, ವಲಸೆ ಕಾರ್ಮಿಕರನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳದೆ ಇರುವುದರಿಂದಲೇ ಸಾಮೂಹಿಕ ವಲಸೆ ಆಗಿದೆ ಎಂದಿದ್ದಾರೆ.

ಆರೋಗ್ಯ ರಕ್ಷಣೆಯಲ್ಲಿ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ಮತ್ತು ಸಮಗ್ರವಾಗಿ ನಿಭಾಯಿಸಬೇಕು. ಜನರು ಮತ್ತು ಆರ್ಥಿಕತೆಯನ್ನು ಬೆಂಬಲಿಸಬೇಕು, ಸಮಾನ ಮಾನವನ ದುಃಖವನ್ನು ನಿವಾರಿಸಲು ಮತ್ತು ದೀರ್ಘಕಾಲೀನ ಹಾನಿಯನ್ನು ಕಡಿಮೆ ಮಾಡಲು ಶ್ರಮಿಸಬೇಕು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಮುಖ ಪಾತ್ರ ವಹಿಸಬೇಕು ಎಂದಿದ್ದಾರೆ.

ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಅನ್ನು ಸ್ವಾಗತಿಸುವಾಗ, ಅಜೀಮ್ ಪ್ರೇಮ್ಜಿ ಮುಂದಿನ 1-2 ವರ್ಷಗಳಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕೆಲವು ಸಲಹೆಗಳನ್ನು ನೀಡಿದರು.

ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪ್ರಧಾನಿ ಮೋದಿ ಘೋಷಿಸಿದ ಜಿಡಿಪಿಯ 10% ಪ್ಯಾಕೇಜ್‌ ಈಗಾಗಲೇ ಘೋಷಿಸಿರುವುದಕ್ಕೆ ಹೆಚ್ಚುವರಿಯಾಗಿರಬೇಕು. ಹಿಂದಿನ ಘೋಷಣೆಗಳನ್ನು ಈ ಪ್ಯಾಕೇಜ್‌ನಲ್ಲಿ ಮರು ವರ್ಗೀಕರಣವಾಗಬಾರದು ಎಂದು ಅವರು ಹೇಳಿದ್ದಾರೆ.

ಕನಿಷ್ಠ 3 ತಿಂಗಳವರೆಗೆ ತಿಂಗಳಿಗೆ 7,000 ರೂ.ಗಳ ತುರ್ತು ನಗದು ಪರಿಹಾರವನ್ನು ಬಯೋಮೆಟ್ರಿಕ್ ದೃಢೀಕರಣವಿಲ್ಲದೆ ಪ್ರತಿ ಬಡವರ ಮನೆ ಹಾಗೂ ವಲಸೆ ಕಾರ್ಮಿಕರಿಗೆ ನೀಡಬೇಕು ಎಂದು ಅಜೀಮ್ ಪ್ರೇಮ್ಜಿ ಸಲಹೆ ನೀಡಿದರು. ಲಾಕ್‌ಡೌನ್ ಅವಧಿಗೆ ಎಲ್ಲಾ ಬಡ ನಗರವಾಸಿಗಳಿಗೆ ಲಾಕ್‌ಡೌನ್ ನಂತರ ಕನಿಷ್ಠ ಎರಡು ತಿಂಗಳಾದರೂ ತಿಂಗಳಿಗೆ 25 ದಿನಗಳ ಕನಿಷ್ಠ ವೇತನವನ್ನು ಬಿಡುಗಡೆ ಮಾಡಬೇಕು ಎಂದಿದ್ದಾರೆ.


ಇದನ್ನೂ ಓದಿ: ಬಡವರಿಗೆ ವಾರ್ಷಿಕ 72 ಸಾವಿರ ನೀಡುವ ನ್ಯಾಯ್ ಯೋಜನೆಯನ್ನು ತನ್ನಿ: ರಾಹುಲ್ ಗಾಂಧಿ


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಗೆ 1 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಹಂಚಿಕೆ ಮಾಡಬೇಕು ಹಾಗೂ ಪ್ರತಿ ಮನೆಗೆ ಖಾತರಿಪಡಿಸಿದ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು ಮತ್ತು ದೈನಂದಿನ ವೇತನವನ್ನು ಹೆಚ್ಚಿಸಬೇಕು ಎಂದು  ಅಜೀಮ್ ಪ್ರೇಮ್‌ಜಿ ಅಭಿಪ್ರಾಯಪಟ್ಟಿದ್ದಾರೆ. ಇದರಿಂದಾಗಿ ಕೆಲಸ ಮಾಡುವ ಎಲ್ಲರಿಗೂ ಸಹಾಯವಾಗುತ್ತದೆ ಎಂದರು.

ಮಾನವೀಯ ಬಿಕ್ಕಟ್ಟನ್ನು ತಗ್ಗಿಸುವುದಕ್ಕಾಗಿ ಸಾಮಾಜಿಕ ಭದ್ರತೆ ಮತ್ತು ಆಹಾರ ಭದ್ರತೆ ನೀಡಬೇಕು ಎಂದಿದ್ದಾರೆ. “ಪಡಿತರವನ್ನು 3-6 ತಿಂಗಳುಗಳವರೆಗೆ ಸಾರ್ವತ್ರಿಕಗೊಳಿಸಬೇಕು ಮತ್ತು ದ್ವಿಗುಣಗೊಳಿಸಬೇಕು.  ಅಡುಗೆ ಎಣ್ಣೆ, ದ್ವಿದಳ ಧಾನ್ಯಗಳು, ಉಪ್ಪು, ಮಸಾಲಾ, ಸ್ಯಾನಿಟರಿ ಪ್ಯಾಡ್ ಮತ್ತು ಸಾಬೂನು ಎಲ್ಲರಿಗೂ ಮುಂಚಿತವಾಗಿ ಮನೆ ಬಾಗಿಲಿನ ಮೂಲಕ ಉಚಿತವಾಗಿ ವಿತರಿಸಬೇಕು” ಎಂದು ಅವರು ಬರೆದಿದ್ದಾರೆ.

ಸಿಕ್ಕಿಕೊಂಡ ವಲಸೆ ಕಾರ್ಮಿಕರಿಗೆ ಬಸ್ಸುಗಳು ಮತ್ತು ರೈಲುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ನರೇಗಾ ಗೆ ಹೋಲುವ ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿನ್ಯಾಸಗೊಳಿಸಬೇಕು ಹಾಗೂ ವೇತನವನ್ನು ಸಕಾಲಿಕವಾಗಿ ಪಾವತಿಸುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದ್ದಾರೆ.

ಸುಸ್ಥಿರ ಕೃಷಿ ಉಪಕ್ರಮಗಳನ್ನು ಉತ್ತೇಜಿಸಲು ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು  ಹಣವನ್ನು ಮೀಸಲಿಡಬೇಕು ಎಂದು ಪ್ರೇಮ್‌ಜಿ ಬರೆದಿದ್ದಾರೆ.


ಓದಿ: ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಕಾರ್ಮಿಕ ಕಾನೂನು ಸಲಹೆಗಾರ ಫೋನ್ ನಂಬರ್ ಮತ್ತು ವಿಳಾಸ ತಿಳಿಸಿರಿ..

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...