Homeಮುಖಪುಟಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು...

ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು…

- Advertisement -
- Advertisement -

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅನುಸರಿಸಲಾದ ಲಾಕ್‌ಡೌನ್ ಇಡೀ ಜಗತ್ತನ್ನು ಸ್ತಬ್ದಗೊಳಿಸಿದೆ. ಇಂಥ ಸಂದರ್ಭವನ್ನು ಆರ್ಥಿಕವಾಗಿ ಸುಸ್ಥಿರವಾಗಿರುವ ಕುಟುಂಬಗಳು ಸಣ್ಣ ಅನಿಸ್ಚಿತತೆಯಲ್ಲೇ ಕಳೆಯುತ್ತಿವೆ. ಆದರೆ ಅಂದೇ ದುಡಿದು ಬದುಕುವ ಜನರ ಜೀವನ ಅತಂತ್ರವಾಗಿದೆ! ಈ ಹೊತ್ತಿನಲ್ಲಿ ಅವರಿಗೆ ನೆರವಾಗುವ ಮೂಲಕ ಧೈರ್ಯ ತುಂಬಾ ಬೇಕಾಗಿತ್ತು ಪ್ರತಿಯೊಬ್ಬರ ಜವಾಬ್ದಾರಿಯಾಗಿತ್ತು. ಆದರೆ ಈ ಸಂದರ್ಭದಲ್ಲಿ ಉಳ್ಳವರ ಸಂವೇದನಾರಹಿತ ವರ್ತನೆ ಈ ದೇಶದ ಶತಮಾನಗಳ ತಾರತಮ್ಯವನ್ನು ಸ್ಪಷ್ಟವಾಗಿ ಎತ್ತಿ ಹಿಡಿಯಿತು.

ಜನಪ್ರಿಯ ಹಾಸ್ಯ ಕಲಾವಿದ ವರುಣ್ ಗ್ರೋವರ್ ಇತ್ತೀಚೆಗೆ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ವೈಯಕ್ತಿಕ ಅನುಭವವೊಂದನ್ನು ಹಂಚಿಕೊಂಡರು. ಲಾಕ್‌ಡೌನ್ ಸಂದರ್ಭದಲ್ಲಿ ತರಕಾರಿಕೊಳ್ಳುವಾಗ ತಮ್ಮ ಮುಂದೆ ನಿಂತಿದ್ದ ಸ್ಥಿತಿವಂತ ದಂಪತಿಗಳು 315 ರೂ.ಗಳಿಗೆ ತರಕಾರಿ ಕೊಂಡು, ವ್ಯಾಪಾರಿಗೆ 300 ಕೊಟ್ಟು, ‘ಅಷ್ಟೇ ಅಷ್ಟೇ’ ಎಂದು ಕೈಯಾಡಿಸಿ ಹೊರಟರಂತೆ. ತರಕಾರಿ ರೇಟು ಹೆಚ್ಚಿರದೇ ಇದ್ದರೂ, ಅವರು ಚೌಕಾಸಿ ಮಾಡಿದ ರೀತಿ ಬೇಸರ ಹುಟ್ಟಿಸಿತೆಂದು ಗ್ರೋವರ್ ಬರೆದುಕೊಂಡಿದ್ದರು. ಕಡೆಗೂ ವ್ಯಾಪಾರಿ ಪಟ್ಟು ಬಿಡದೇ ಇದ್ದುದಕ್ಕೆ ಬೈದುಕೊಂಡೆ 10 ರೂ. ಕೊಟ್ಟು ಹೋದರಂತೆ! ಅಂದರೆ ಇನ್ನೂ 5 ರೂ.ಗಳನ್ನು ಕೊಡದೆ ಹೋದರು!

ಇದೇ ಖರೀದಿಯನ್ನು ಅಮೆಜಾನ್, ಬಿಗ್‌ಬ್ಯಾಸ್ಕೆಟ್ ಮೂಲಕ ಮಾಡಿದ್ದರೆ, ಹೀಗೆ ಚೌಕಾಸಿ ಮಾಡುತ್ತಿದ್ದರೆ ಎಂಬ ಪ್ರಶ್ನೆ ಟ್ವೀಟ್ ಓದಿವರೆಲ್ಲಾ ಕೇಳಿದ್ದರು.

ಲಾಕ್‌ಡೌನ್ ಎಷ್ಟೋ ಜನರ ಬದುಕನ್ನು ಸವಾಲಿಗೆ ಒಡ್ಡಿಕೊಳ್ಳುವಂತೆ ಮಾಡಿದೆ. ಅಂತಹ ಸವಾಲಿಗೆ ಮುಖಮಾಡಿ ವ್ಯಾಪಾರಿ ಮಾಡುತ್ತಿರುವ ಸಾಮಾನ್ಯ ತರಕಾರಿ ವ್ಯಾಪಾರಿಗೆ ಇಂತಹ ಸಂಕಷ್ಟದ ಕಾಲದಲ್ಲಿ ಐದು ರೂ ಕೊಡದೇ ಹೋದದ್ದು, ಕೇವಲ ಹಣದ ವಿಷಯವಷ್ಟೇ ಅಲ್ಲ, ನಮ್ಮೊಳಗೇ ಸತ್ತು ಹೋಗಿರುವ ಸಂವೇದನೆ, ವಿವೇಚನೆ ಎಂಬ ಗುಣಗಳ ಕೊರತೆಯ ಸೂಚಕ. ತರಕಾರಿ ಕೊಂಡವರಿಗೆ ಹಣದ ಕೊರತೆಯೇನು ಇರಲಿಲ್ಲ. ಚೌಕಾಸಿ ಮಾಡಿ ಉಳಿಸಿದ್ದೂ ದೊಡ್ಡ ಮೊತ್ತವೂ ಅಲ್ಲ. ಆದರೆ ಮಾರುವ ಸಾಮಾನ್ಯನ ಬಗ್ಗೆ ಇದ್ದ ಉಪೇಕ್ಷೆಯ, ಸಂವೇದನೆಗಳಿಲ್ಲದ ಮನಸ್ಥಿತಿ.

ವರುಣ್‌ಗೆ ಸಿಕ್ಕ ಸ್ಥಿತಿವಂತ ದಂಪತಿಯಂತೇ, ಸಾರ್ವಜನಿಕ ಜೀವನದಲ್ಲಿರುವ, ತಮ್ಮ ಪ್ರತಿಭೆಗಾಗಿ ಮೆಚ್ಚುಗೆಗೆ ಪಾತ್ರರಾದ, ಅಸಂಖ್ಯ ಅಭಿಮಾನಿಗಳನ್ನು ಹೊಂದಿರುವ ಜನರ ಅಸೂಕ್ಷ್ಮ ವರ್ತನೆಯನ್ನೂ ಈ ಲಾಕ್‌ಡೌನ್ ಅನಾವರಣ ಮಾಡಿತು.

ಇವರೆಲ್ಲರೂ ದಿನವೂ ತಮ್ಮನ್ನು ಮೆಚ್ಚುವ ಜನರ ನಡುವೆ ಪ್ರತಿ ದಿನ ಒಡನಾಡುವವರು. ಯಾವುದೋ ಪಾರ್ಟಿ, ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅಲ್ಲಿನ ಕ್ಷಣಗಳನ್ನು ವಿಡಿಯೋ, ಫೋಟೋ ರೂಪದಲ್ಲಿ ಹಂಚಿಕೊಳ್ಳುವುದು, ತಮ್ಮ ವೈಭವದ ಉಡುಗೆ ತೊಡುಗೆಗಳ ಬಗ್ಗೆ ಮಾತನಾಡುವುದು, ಚೆಂದದ, ವೈಭವದ ಬದುಕನ್ನೇ ಪ್ರದರ್ಶಿಸುತ್ತಾ ಇರುವುದು ಪ್ರತಿ ನಿತ್ಯದ ವಿಧಿ.

ಇವರ ಪಾಲಿಗೆ ಈ ಲಾಕ್‌ಡೌನ್ ಒಂದು ರೀತಿಯ ಬಂಧನವಾಗಿತ್ತು. ಆದರೆ ಸೋಷಿಯಲ್ ಮೀಡಿಯಾ ಇಂಥವರ ಪಾಲಿಗೆ ಅದೃಷ್ಟದ ಕಿಟಕಿಯಾಗಿದೆ. ಹಾಗಾಗಿ ಈ ಅವಧಿಯಲ್ಲಿ ತಮ್ಮ ಖಾಸಗಿಯಾದ ಬದುಕಿನ, ತಾವು ಹಿಂದೆಂದೂ ಹಂಚಿಕೊಳ್ಳದ ಕ್ಷಣಗಳನ್ನು ಅಭಿಮಾನಿಗಳ ಮುಂದೆ ಅನಾವರಣ ಮಾಡಲಾರಂಭಿಸಿದರು. ಯಾವ ಕ್ಷಣಗಳು!? ಪಾತ್ರೆ ತೊಳೆಯುವುದು, ಕಸ ಹೊಡೆಯುವುದು, ತಮ್ಮ ದೇಹ ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವರ್ಕ್ಔಟ್ ಮಾಡುವುದು ಇಂಥದ್ದೇ ವಿಡಿಯೋಗಳು ಮತ್ತು ಫೋಟೋಗಳನ್ನು ಇನ್‌ಸ್ಟಾಗ್ರಾಮ್, ಟ್ವಿಟರ್, ಫೇಸ್‌ಬುಕ್‌ಗಳಲ್ಲಿ ಹಂಚಿಕೊಳ್ಳುತ್ತಾ, ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಕರೀನಾ ಕಪೂರ್ ಅಡುಗೆ ಮಾಡಿ ತಿಂದಿದ್ದು, ಮಲೈಕಾ ಅರೋರಾ ಬೇಸನ್ ಉಂಡೆ ಮಾಡಿದ್ದು, ವಿಕ್ಕಿ ಕೌಶಲ್ ಫ್ಯಾನ್ ಕ್ಲೀನ್ ಮಾಡಿದ್ದು, ಇವೆಲ್ಲವೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡವು!

ಕೇವಲ ಸಿನಿಮಾ ತಾರೆಗಳಷ್ಟೇ ಅಲ್ಲ, ಸ್ಥಿತಿವಂತ, ಸೌಲಭ್ಯವುಳ್ಳ ಬಹಳಷ್ಟು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯವಾಗಿರುವ ಗಣ್ಯರು ತಮ್ಮ ಐಷಾರಾಮದ, ಆತಂಕ ರಹಿತ ಬದುಕಿನ ಕ್ಷಣಗಳನ್ನು ಹಂಚಿಕೊಂಡರು. ಸಂವೇದನೆ ಇರುವ ಯಾವುದೇ ವ್ಯಕ್ತಿ ಇಂಥ ಹೊತ್ತಲ್ಲಿ ಸಂಭ್ರಮವನ್ನು ಹಂಚಿಕೊಳ್ಳುವುದಿಲ್ಲ ಎಂಬ ಟೀಕೆಯೂ ವ್ಯಕ್ತವಾಯಿತು.

ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಜನರ ಬದುಕು ಅಂತ್ರವಾಗಿದೆ. ತಿನ್ನುವುದಕ್ಕೆ ಅನ್ನ ಇಲ್ಲದೆ, ಇರುವುದಕ್ಕೆ ನೆಲೆಯೂ ಇಲ್ಲದೆ ಕಂಗಾಲಾಗಿರುವಾಗ ಈ ವಿಡಿಯೋಗಳನ್ನು, ಫೋಟೋಗಳನ್ನು ವೈರಲ್ ಮಾಡುತ್ತಿದ್ದರು.

ತಾರೆಗಳ ಈ ವರ್ತನೆಯನ್ನು ಕಂಡ ನಿರ್ದೇಶಕ ಕರಣ್ ಜೊಹರ್ ಟ್ವೀಟ್‌ವೊಂದನ್ನು ಹಂಚಿಕೊಳ್ಳುತ್ತಾ, ನಾನೂ ಅಸೂಕ್ಷ್ಮವಾಗಿ ನಡೆದುಕೊಂಡಿರಬಹುದು ಎಂದು ಕ್ಷಮೆಯಾಚಿಸಿದರು. ಬೆನ್ನಲ್ಲೇ ನಿರ್ದೇಶಕಿ ಫಹಾ ಖಾನ್ ಕೂಡ ಖಾರವಾಗಿ ನಟ-ನಟಿಯರಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಸಾರ್ವಜನಿಕ ಆರೋಗ್ಯದ ರಕ್ಷಣೆಯ ಹಿನ್ನೆಲೆಯಲ್ಲಿ ವರ್ಕ್ಔಟ್‌ಗಳ ವಿಡಿಯೋಗಳನ್ನುಹಂಚಿಕೊಳ್ಳುವುದನ್ನು ನಿಲ್ಲಿಸಿ ಎಂದು ವಿನಮ್ರವಾಗಿ ವಿನಂತಿಸಿಕೊಳ್ಳುತ್ತೇನೆ. ನೀವೆಲ್ಲರೂ ಸೌಲಭ್ಯವುಳ್ಳವರು, ನಿಮಗೆ ಈ ಜಾಗತಿಕ ಸೋಂಕಿನ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದು ನಾನು ಬಲ್ಲೆ. ಆದರೆ ಈ ಹೊತ್ತಿನಲ್ಲಿ ಬಹಳಷ್ಟು ಜನರಿಗೆ ಸಂಕಷ್ಟಕಾಲವಾಗಿದೆ. ಹಾಗಾಗಿ ದಯವಿಟ್ಟು ವಿಡಿಯೋಗಳನ್ನು ಹಂಚಿಕೊಳ್ಳುವುದು ನಿಲ್ಲಿಸಿ. ಇಲ್ಲವಾದರೆ ನಾನು ನಿಮ್ಮನ್ನು ಅನ್‌ಫಾಲೋ ಮಾಡಿದರೆ ಬೇಸರ ಮಾಡಿಕೊಳ್ಳಬೇಡಿ’ ಎಂದು ವಿಡಿಯೋ ಹಂಚಿಕೊಂಡಿದ್ದರು.

ಸೋಂಕು ನಿಯಂತ್ರಣದ ದೃಷ್ಟಿಯಿಂದ ಲಾಕ್‌ಡೌನ್ ಅಗತ್ಯವಾಗಿತ್ತು. ಆದರೆ ಸೌಲಭ್ಯವುಳ್ಳವರಿಗೆ ಇದು ಆತಂಕದ ವಿಷಯವಾಗಿರಲಿಲ್ಲ. ಇದನ್ನು ಒಂದು ರಜೆಯಂತೆ ಸಂಭ್ರಮಿಸುವುದಕ್ಕೆ ಅವಕಾಶವಾಗಿ ಒದಗಿಬಂತು. ಮನೆಯಲ್ಲಿ ರುಚಿ ರುಚಿಯಾಗಿ ಮಾಡಿಕೊಂಡು ತಿನ್ನುವುದು, ಕುಟುಂಬದೊಂದಿಗೆ ಆಡುವುದು ತರಹೇವಾರಿಯಾಗಿ ಕಾಲ ಕಳೆಯುವುದಕ್ಕೆ ಅವಕಾಶವೂ ಆಯಿತು. ವೈಯಕ್ತಿಕವಾದ ಈ ಬದುಕನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಅಸೂಕ್ಷ್ಮತೆಯೇ ಅನೇಕರಲ್ಲಿ ಆಕ್ರೋಶಕ್ಕೂ ಕಾರಣವಾಯಿತು. ಬೀದಿಯಲ್ಲಿ ಮನೆಯೂ ಇಲ್ಲದೆ, ತಿನ್ನುವುದಕ್ಕೆ ಅನ್ನವೂ ಇಲ್ಲದೆ ಅನಿಶ್ಚಿತತೆಯಲ್ಲಿರುವ ಲಕ್ಷಾಂತರ ಜನರ ಇರುವಾಗ, ಸಿರಿತನದ ಅಮಲಿನಲ್ಲಿರುವ ಜನ ಮೃಷ್ಟಾನ್ನದ ಕತೆಗಳನ್ನು ಹಂಚಿಕೊಳ್ಳುವುದು ಯಾವ ರೀತಿಯ ಮನುಷ್ಯತ್ವವಾಗಬಹುದು?

ಎಲ್ಟನ್ ಜಾನ್‌ನಂತಹ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಲೈವ್ ಕಾನ್ಸರ್ಟ್ಗಳನ್ನು ನಡೆಸಿ, ಹಣ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾದ ಉದಾಹರಣೆಗಳು ಇವರಾರಿಗೂ ಕಾಣದೇ ಹೋಗಿದ್ದು ಅಚ್ಚರಿ!

ಲಾಕ್‌ಡೌನ್‌ಅನ್ನು ಮುಕ್ತವಾಗಿ ಸ್ವಾಗತಿಸಿದ ಈ ಮಂದಿ ಇದರಿಂದ ಯಾರಿಗೆ ಅನಾನುಕೂಲವಾಗಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿಲ್ಲವೇನೊ! ಸೋಂಕು ನಿಯಂತ್ರಿಸುವುದಕ್ಕೆ ತಮ್ಮ ಉದ್ಯೋಗ, ಉಳಿಸಿಕೊಂಡಿದ್ದ ಹಣ, ತಮ್ಮ ಘನತೆ, ಆರೋಗ್ಯ, ಸಾಮಾಜಿಕ ಭದ್ರತೆ ಎಲ್ಲವನ್ನೂ ತ್ಯಾಗ ಮಾಡಬೇಕಾಗಿ ಬಂದದ್ದು ಬಡ ಜನರಿಗೆ. ಬದುಕು ಅಸಹನೀಯವಾಗಿದ್ದ ಕಾಲದಲ್ಲಿ ಪೊಲೀಸರಿಂದ ಒದೆ ತಿಂದಿದ್ದು, ಇದೇ ದನಿ ಎತ್ತಲಾಗದ ಜನ. ಇವರ ನೆರವಿಗೆ ನಿಲ್ಲಲಾಗದಿದ್ದರೂ, ಇವರ ಕಷ್ಟಕ್ಕೆ ನೆರವಾಗದಿದ್ದರೂ, ಕಷ್ಟಕ್ಕೆ ಮಾನವೀಯವಾಗಿ ಸ್ಪಂದಿಸದೇ ಹೋಗಿದ್ದು, ಈ ಕಾಲದ ದುರಂತ!


ಇದನ್ನೂ ಓದಿ: ಮಣಿವಣ್ಣನ್ ಔಟ್, ಎಂ.ಎಂ.ರಾವ್ ಇನ್ : ಕೊರೊನ ಕಾಲದಲ್ಲಿ ಮುಸುಕಿನ ರಾಜಕೀಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...