Homeಮುಖಪುಟಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು...

ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು…

- Advertisement -
- Advertisement -

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅನುಸರಿಸಲಾದ ಲಾಕ್‌ಡೌನ್ ಇಡೀ ಜಗತ್ತನ್ನು ಸ್ತಬ್ದಗೊಳಿಸಿದೆ. ಇಂಥ ಸಂದರ್ಭವನ್ನು ಆರ್ಥಿಕವಾಗಿ ಸುಸ್ಥಿರವಾಗಿರುವ ಕುಟುಂಬಗಳು ಸಣ್ಣ ಅನಿಸ್ಚಿತತೆಯಲ್ಲೇ ಕಳೆಯುತ್ತಿವೆ. ಆದರೆ ಅಂದೇ ದುಡಿದು ಬದುಕುವ ಜನರ ಜೀವನ ಅತಂತ್ರವಾಗಿದೆ! ಈ ಹೊತ್ತಿನಲ್ಲಿ ಅವರಿಗೆ ನೆರವಾಗುವ ಮೂಲಕ ಧೈರ್ಯ ತುಂಬಾ ಬೇಕಾಗಿತ್ತು ಪ್ರತಿಯೊಬ್ಬರ ಜವಾಬ್ದಾರಿಯಾಗಿತ್ತು. ಆದರೆ ಈ ಸಂದರ್ಭದಲ್ಲಿ ಉಳ್ಳವರ ಸಂವೇದನಾರಹಿತ ವರ್ತನೆ ಈ ದೇಶದ ಶತಮಾನಗಳ ತಾರತಮ್ಯವನ್ನು ಸ್ಪಷ್ಟವಾಗಿ ಎತ್ತಿ ಹಿಡಿಯಿತು.

ಜನಪ್ರಿಯ ಹಾಸ್ಯ ಕಲಾವಿದ ವರುಣ್ ಗ್ರೋವರ್ ಇತ್ತೀಚೆಗೆ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ವೈಯಕ್ತಿಕ ಅನುಭವವೊಂದನ್ನು ಹಂಚಿಕೊಂಡರು. ಲಾಕ್‌ಡೌನ್ ಸಂದರ್ಭದಲ್ಲಿ ತರಕಾರಿಕೊಳ್ಳುವಾಗ ತಮ್ಮ ಮುಂದೆ ನಿಂತಿದ್ದ ಸ್ಥಿತಿವಂತ ದಂಪತಿಗಳು 315 ರೂ.ಗಳಿಗೆ ತರಕಾರಿ ಕೊಂಡು, ವ್ಯಾಪಾರಿಗೆ 300 ಕೊಟ್ಟು, ‘ಅಷ್ಟೇ ಅಷ್ಟೇ’ ಎಂದು ಕೈಯಾಡಿಸಿ ಹೊರಟರಂತೆ. ತರಕಾರಿ ರೇಟು ಹೆಚ್ಚಿರದೇ ಇದ್ದರೂ, ಅವರು ಚೌಕಾಸಿ ಮಾಡಿದ ರೀತಿ ಬೇಸರ ಹುಟ್ಟಿಸಿತೆಂದು ಗ್ರೋವರ್ ಬರೆದುಕೊಂಡಿದ್ದರು. ಕಡೆಗೂ ವ್ಯಾಪಾರಿ ಪಟ್ಟು ಬಿಡದೇ ಇದ್ದುದಕ್ಕೆ ಬೈದುಕೊಂಡೆ 10 ರೂ. ಕೊಟ್ಟು ಹೋದರಂತೆ! ಅಂದರೆ ಇನ್ನೂ 5 ರೂ.ಗಳನ್ನು ಕೊಡದೆ ಹೋದರು!

ಇದೇ ಖರೀದಿಯನ್ನು ಅಮೆಜಾನ್, ಬಿಗ್‌ಬ್ಯಾಸ್ಕೆಟ್ ಮೂಲಕ ಮಾಡಿದ್ದರೆ, ಹೀಗೆ ಚೌಕಾಸಿ ಮಾಡುತ್ತಿದ್ದರೆ ಎಂಬ ಪ್ರಶ್ನೆ ಟ್ವೀಟ್ ಓದಿವರೆಲ್ಲಾ ಕೇಳಿದ್ದರು.

ಲಾಕ್‌ಡೌನ್ ಎಷ್ಟೋ ಜನರ ಬದುಕನ್ನು ಸವಾಲಿಗೆ ಒಡ್ಡಿಕೊಳ್ಳುವಂತೆ ಮಾಡಿದೆ. ಅಂತಹ ಸವಾಲಿಗೆ ಮುಖಮಾಡಿ ವ್ಯಾಪಾರಿ ಮಾಡುತ್ತಿರುವ ಸಾಮಾನ್ಯ ತರಕಾರಿ ವ್ಯಾಪಾರಿಗೆ ಇಂತಹ ಸಂಕಷ್ಟದ ಕಾಲದಲ್ಲಿ ಐದು ರೂ ಕೊಡದೇ ಹೋದದ್ದು, ಕೇವಲ ಹಣದ ವಿಷಯವಷ್ಟೇ ಅಲ್ಲ, ನಮ್ಮೊಳಗೇ ಸತ್ತು ಹೋಗಿರುವ ಸಂವೇದನೆ, ವಿವೇಚನೆ ಎಂಬ ಗುಣಗಳ ಕೊರತೆಯ ಸೂಚಕ. ತರಕಾರಿ ಕೊಂಡವರಿಗೆ ಹಣದ ಕೊರತೆಯೇನು ಇರಲಿಲ್ಲ. ಚೌಕಾಸಿ ಮಾಡಿ ಉಳಿಸಿದ್ದೂ ದೊಡ್ಡ ಮೊತ್ತವೂ ಅಲ್ಲ. ಆದರೆ ಮಾರುವ ಸಾಮಾನ್ಯನ ಬಗ್ಗೆ ಇದ್ದ ಉಪೇಕ್ಷೆಯ, ಸಂವೇದನೆಗಳಿಲ್ಲದ ಮನಸ್ಥಿತಿ.

ವರುಣ್‌ಗೆ ಸಿಕ್ಕ ಸ್ಥಿತಿವಂತ ದಂಪತಿಯಂತೇ, ಸಾರ್ವಜನಿಕ ಜೀವನದಲ್ಲಿರುವ, ತಮ್ಮ ಪ್ರತಿಭೆಗಾಗಿ ಮೆಚ್ಚುಗೆಗೆ ಪಾತ್ರರಾದ, ಅಸಂಖ್ಯ ಅಭಿಮಾನಿಗಳನ್ನು ಹೊಂದಿರುವ ಜನರ ಅಸೂಕ್ಷ್ಮ ವರ್ತನೆಯನ್ನೂ ಈ ಲಾಕ್‌ಡೌನ್ ಅನಾವರಣ ಮಾಡಿತು.

ಇವರೆಲ್ಲರೂ ದಿನವೂ ತಮ್ಮನ್ನು ಮೆಚ್ಚುವ ಜನರ ನಡುವೆ ಪ್ರತಿ ದಿನ ಒಡನಾಡುವವರು. ಯಾವುದೋ ಪಾರ್ಟಿ, ಯಾವುದೋ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಅಲ್ಲಿನ ಕ್ಷಣಗಳನ್ನು ವಿಡಿಯೋ, ಫೋಟೋ ರೂಪದಲ್ಲಿ ಹಂಚಿಕೊಳ್ಳುವುದು, ತಮ್ಮ ವೈಭವದ ಉಡುಗೆ ತೊಡುಗೆಗಳ ಬಗ್ಗೆ ಮಾತನಾಡುವುದು, ಚೆಂದದ, ವೈಭವದ ಬದುಕನ್ನೇ ಪ್ರದರ್ಶಿಸುತ್ತಾ ಇರುವುದು ಪ್ರತಿ ನಿತ್ಯದ ವಿಧಿ.

ಇವರ ಪಾಲಿಗೆ ಈ ಲಾಕ್‌ಡೌನ್ ಒಂದು ರೀತಿಯ ಬಂಧನವಾಗಿತ್ತು. ಆದರೆ ಸೋಷಿಯಲ್ ಮೀಡಿಯಾ ಇಂಥವರ ಪಾಲಿಗೆ ಅದೃಷ್ಟದ ಕಿಟಕಿಯಾಗಿದೆ. ಹಾಗಾಗಿ ಈ ಅವಧಿಯಲ್ಲಿ ತಮ್ಮ ಖಾಸಗಿಯಾದ ಬದುಕಿನ, ತಾವು ಹಿಂದೆಂದೂ ಹಂಚಿಕೊಳ್ಳದ ಕ್ಷಣಗಳನ್ನು ಅಭಿಮಾನಿಗಳ ಮುಂದೆ ಅನಾವರಣ ಮಾಡಲಾರಂಭಿಸಿದರು. ಯಾವ ಕ್ಷಣಗಳು!? ಪಾತ್ರೆ ತೊಳೆಯುವುದು, ಕಸ ಹೊಡೆಯುವುದು, ತಮ್ಮ ದೇಹ ಸೌಂದರ್ಯವನ್ನು ಕಾಪಾಡಿಕೊಳ್ಳುವುದಕ್ಕೆ ವರ್ಕ್ಔಟ್ ಮಾಡುವುದು ಇಂಥದ್ದೇ ವಿಡಿಯೋಗಳು ಮತ್ತು ಫೋಟೋಗಳನ್ನು ಇನ್‌ಸ್ಟಾಗ್ರಾಮ್, ಟ್ವಿಟರ್, ಫೇಸ್‌ಬುಕ್‌ಗಳಲ್ಲಿ ಹಂಚಿಕೊಳ್ಳುತ್ತಾ, ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಕರೀನಾ ಕಪೂರ್ ಅಡುಗೆ ಮಾಡಿ ತಿಂದಿದ್ದು, ಮಲೈಕಾ ಅರೋರಾ ಬೇಸನ್ ಉಂಡೆ ಮಾಡಿದ್ದು, ವಿಕ್ಕಿ ಕೌಶಲ್ ಫ್ಯಾನ್ ಕ್ಲೀನ್ ಮಾಡಿದ್ದು, ಇವೆಲ್ಲವೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡವು!

ಕೇವಲ ಸಿನಿಮಾ ತಾರೆಗಳಷ್ಟೇ ಅಲ್ಲ, ಸ್ಥಿತಿವಂತ, ಸೌಲಭ್ಯವುಳ್ಳ ಬಹಳಷ್ಟು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯವಾಗಿರುವ ಗಣ್ಯರು ತಮ್ಮ ಐಷಾರಾಮದ, ಆತಂಕ ರಹಿತ ಬದುಕಿನ ಕ್ಷಣಗಳನ್ನು ಹಂಚಿಕೊಂಡರು. ಸಂವೇದನೆ ಇರುವ ಯಾವುದೇ ವ್ಯಕ್ತಿ ಇಂಥ ಹೊತ್ತಲ್ಲಿ ಸಂಭ್ರಮವನ್ನು ಹಂಚಿಕೊಳ್ಳುವುದಿಲ್ಲ ಎಂಬ ಟೀಕೆಯೂ ವ್ಯಕ್ತವಾಯಿತು.

ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಜನರ ಬದುಕು ಅಂತ್ರವಾಗಿದೆ. ತಿನ್ನುವುದಕ್ಕೆ ಅನ್ನ ಇಲ್ಲದೆ, ಇರುವುದಕ್ಕೆ ನೆಲೆಯೂ ಇಲ್ಲದೆ ಕಂಗಾಲಾಗಿರುವಾಗ ಈ ವಿಡಿಯೋಗಳನ್ನು, ಫೋಟೋಗಳನ್ನು ವೈರಲ್ ಮಾಡುತ್ತಿದ್ದರು.

ತಾರೆಗಳ ಈ ವರ್ತನೆಯನ್ನು ಕಂಡ ನಿರ್ದೇಶಕ ಕರಣ್ ಜೊಹರ್ ಟ್ವೀಟ್‌ವೊಂದನ್ನು ಹಂಚಿಕೊಳ್ಳುತ್ತಾ, ನಾನೂ ಅಸೂಕ್ಷ್ಮವಾಗಿ ನಡೆದುಕೊಂಡಿರಬಹುದು ಎಂದು ಕ್ಷಮೆಯಾಚಿಸಿದರು. ಬೆನ್ನಲ್ಲೇ ನಿರ್ದೇಶಕಿ ಫಹಾ ಖಾನ್ ಕೂಡ ಖಾರವಾಗಿ ನಟ-ನಟಿಯರಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಸಾರ್ವಜನಿಕ ಆರೋಗ್ಯದ ರಕ್ಷಣೆಯ ಹಿನ್ನೆಲೆಯಲ್ಲಿ ವರ್ಕ್ಔಟ್‌ಗಳ ವಿಡಿಯೋಗಳನ್ನುಹಂಚಿಕೊಳ್ಳುವುದನ್ನು ನಿಲ್ಲಿಸಿ ಎಂದು ವಿನಮ್ರವಾಗಿ ವಿನಂತಿಸಿಕೊಳ್ಳುತ್ತೇನೆ. ನೀವೆಲ್ಲರೂ ಸೌಲಭ್ಯವುಳ್ಳವರು, ನಿಮಗೆ ಈ ಜಾಗತಿಕ ಸೋಂಕಿನ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದು ನಾನು ಬಲ್ಲೆ. ಆದರೆ ಈ ಹೊತ್ತಿನಲ್ಲಿ ಬಹಳಷ್ಟು ಜನರಿಗೆ ಸಂಕಷ್ಟಕಾಲವಾಗಿದೆ. ಹಾಗಾಗಿ ದಯವಿಟ್ಟು ವಿಡಿಯೋಗಳನ್ನು ಹಂಚಿಕೊಳ್ಳುವುದು ನಿಲ್ಲಿಸಿ. ಇಲ್ಲವಾದರೆ ನಾನು ನಿಮ್ಮನ್ನು ಅನ್‌ಫಾಲೋ ಮಾಡಿದರೆ ಬೇಸರ ಮಾಡಿಕೊಳ್ಳಬೇಡಿ’ ಎಂದು ವಿಡಿಯೋ ಹಂಚಿಕೊಂಡಿದ್ದರು.

ಸೋಂಕು ನಿಯಂತ್ರಣದ ದೃಷ್ಟಿಯಿಂದ ಲಾಕ್‌ಡೌನ್ ಅಗತ್ಯವಾಗಿತ್ತು. ಆದರೆ ಸೌಲಭ್ಯವುಳ್ಳವರಿಗೆ ಇದು ಆತಂಕದ ವಿಷಯವಾಗಿರಲಿಲ್ಲ. ಇದನ್ನು ಒಂದು ರಜೆಯಂತೆ ಸಂಭ್ರಮಿಸುವುದಕ್ಕೆ ಅವಕಾಶವಾಗಿ ಒದಗಿಬಂತು. ಮನೆಯಲ್ಲಿ ರುಚಿ ರುಚಿಯಾಗಿ ಮಾಡಿಕೊಂಡು ತಿನ್ನುವುದು, ಕುಟುಂಬದೊಂದಿಗೆ ಆಡುವುದು ತರಹೇವಾರಿಯಾಗಿ ಕಾಲ ಕಳೆಯುವುದಕ್ಕೆ ಅವಕಾಶವೂ ಆಯಿತು. ವೈಯಕ್ತಿಕವಾದ ಈ ಬದುಕನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಅಸೂಕ್ಷ್ಮತೆಯೇ ಅನೇಕರಲ್ಲಿ ಆಕ್ರೋಶಕ್ಕೂ ಕಾರಣವಾಯಿತು. ಬೀದಿಯಲ್ಲಿ ಮನೆಯೂ ಇಲ್ಲದೆ, ತಿನ್ನುವುದಕ್ಕೆ ಅನ್ನವೂ ಇಲ್ಲದೆ ಅನಿಶ್ಚಿತತೆಯಲ್ಲಿರುವ ಲಕ್ಷಾಂತರ ಜನರ ಇರುವಾಗ, ಸಿರಿತನದ ಅಮಲಿನಲ್ಲಿರುವ ಜನ ಮೃಷ್ಟಾನ್ನದ ಕತೆಗಳನ್ನು ಹಂಚಿಕೊಳ್ಳುವುದು ಯಾವ ರೀತಿಯ ಮನುಷ್ಯತ್ವವಾಗಬಹುದು?

ಎಲ್ಟನ್ ಜಾನ್‌ನಂತಹ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಲೈವ್ ಕಾನ್ಸರ್ಟ್ಗಳನ್ನು ನಡೆಸಿ, ಹಣ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾದ ಉದಾಹರಣೆಗಳು ಇವರಾರಿಗೂ ಕಾಣದೇ ಹೋಗಿದ್ದು ಅಚ್ಚರಿ!

ಲಾಕ್‌ಡೌನ್‌ಅನ್ನು ಮುಕ್ತವಾಗಿ ಸ್ವಾಗತಿಸಿದ ಈ ಮಂದಿ ಇದರಿಂದ ಯಾರಿಗೆ ಅನಾನುಕೂಲವಾಗಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿಲ್ಲವೇನೊ! ಸೋಂಕು ನಿಯಂತ್ರಿಸುವುದಕ್ಕೆ ತಮ್ಮ ಉದ್ಯೋಗ, ಉಳಿಸಿಕೊಂಡಿದ್ದ ಹಣ, ತಮ್ಮ ಘನತೆ, ಆರೋಗ್ಯ, ಸಾಮಾಜಿಕ ಭದ್ರತೆ ಎಲ್ಲವನ್ನೂ ತ್ಯಾಗ ಮಾಡಬೇಕಾಗಿ ಬಂದದ್ದು ಬಡ ಜನರಿಗೆ. ಬದುಕು ಅಸಹನೀಯವಾಗಿದ್ದ ಕಾಲದಲ್ಲಿ ಪೊಲೀಸರಿಂದ ಒದೆ ತಿಂದಿದ್ದು, ಇದೇ ದನಿ ಎತ್ತಲಾಗದ ಜನ. ಇವರ ನೆರವಿಗೆ ನಿಲ್ಲಲಾಗದಿದ್ದರೂ, ಇವರ ಕಷ್ಟಕ್ಕೆ ನೆರವಾಗದಿದ್ದರೂ, ಕಷ್ಟಕ್ಕೆ ಮಾನವೀಯವಾಗಿ ಸ್ಪಂದಿಸದೇ ಹೋಗಿದ್ದು, ಈ ಕಾಲದ ದುರಂತ!


ಇದನ್ನೂ ಓದಿ: ಮಣಿವಣ್ಣನ್ ಔಟ್, ಎಂ.ಎಂ.ರಾವ್ ಇನ್ : ಕೊರೊನ ಕಾಲದಲ್ಲಿ ಮುಸುಕಿನ ರಾಜಕೀಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...