Homeರಾಜಕೀಯಉಡುಪಿ-ಚಿಕ್ಕಮಗಳೂರಲ್ಲಿ ಶೋಭಾ ಸಂಚು?

ಉಡುಪಿ-ಚಿಕ್ಕಮಗಳೂರಲ್ಲಿ ಶೋಭಾ ಸಂಚು?

- Advertisement -
ಮೀನು ಮತ್ತು ಕಾಫಿ ಘಮಲಿನ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಜಕೀಯ ಬರುವ ಪಾರ್ಲಿಮೆಂಟ್ ಚುನಾವಣೆ ಹೊತ್ತಿಗೆ ಮಗ್ಗಲು ಬದಲಿಸುವುದು ಖರೆ. ಎಂಪಿ ನಿಧಿ ಸರಿಯಾಗಿ ಬಳಸದ, ಸದಾ ಕ್ಷೇತ್ರಕ್ಕೆ ನಾಟ್ ರೀಚಬಲ್ ಆಗಿರುವ ಹಾಲಿ ಸಂಸದೆ ಬೇಬಿಯಕ್ಕ ಯಾನೆ ಶೋಭಾ ಕರಂದ್ಲಾಜೆಗೆ ಜನರು ಕಂಡಲ್ಲಿ ಉಗಿಯುತ್ತಿದ್ದಾರೆ. ಶೋಭಾಗೂ ದಿಲ್ಲಿ ರಾಜಕಾರಣ ಬೋರ್ ಹೊಡೆಸಿರುವಂತಿದೆ. ರಾಜ್ಯ ರಾಜಕಾರಣದ ಯಡ್ಡಿಯಜ್ಜನನ್ನು ಬಿಟ್ಟು ಹೋಗುವ ಮನಸ್ಸು ಶೋಭಾಗೆ ಒಂಚೂರು ಇಲ್ಲ. ಹಾಗಾಗಿ ಆಕೆ ಎಂಪಿ ಟಿಕೆಟ್ ಬೇಡವೇ ಬೇಡವೆಂದು ಹಠ ಹಿಡಿದು ಕೂತಿದ್ದಾರೆ. ಈ ವಿರಹ ರಾಜಕಾರಣದ ಚಡಪಡಿಕೆ ಬಿಜೆಪಿ ಬಿಡಾರದಲ್ಲಿ ನಾನಾ ನಮೂನೆಯ ಚರ್ಚೆ-ತರ್ಕ ಎಬ್ಬಿಸಿಬಿಟ್ಟಿದೆ.
ಸಂಸದೆಯಾದ ಮರುಘಳಿಗೆಯೇ ಕ್ಷೇತ್ರ ಮರೆತ ಶೋಭಾ ಕರಾವಳಿ-ಮಲೆನಾಡು ಭಾಗದ ಒಂದೇ ಒಂದು ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ಕ್ಷೇತ್ರದ ಜನರು ದೂರು-ದುಮ್ಮಾನ ಹೇಳಿದರೂ ಉದಾಸೀನ-ಉದ್ಧಟವಾಗಿ ಮಾತಾಡಿ ಸಾಗಹಾಕಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರನ್ನೇ ಕೆರಳಿಸಿಬಿಟ್ಟಿದೆ. ತಾನೊಬ್ಬ ಇಂಟರ್‍ನ್ಯಾಷನಲ್ ರೈಟಿಸ್ಟ್  ಸರದಾರಿಣಿ ಎಂಬ ಭ್ರಮೆಯಲ್ಲಿ ದಿಲ್ಲಿ-ಬೆಂಗಳೂರಲ್ಲಿ ಹಾರಾಡಿ ಕಾಲಹರಣ ಮಾಡಿದ ಶೋಭಕ್ಕ ಹೆಣಗಳು ಉರುಳಿದ ಕಡೆಯೆಲ್ಲ ಲಾಭದ ಲೆಕ್ಕಾಚಾರ ನಡೆಸಿ ಮತಾಂಧ ಮಾತುಗಾರಿಕೆ ನಡೆಸಿದ್ದಷ್ಟೇ ಶೋಭಾ ಘನಕಾರ್ಯ. ತೀರ್ಥಹಳ್ಳಿಯ ನಂದಿತಾ ಆತ್ಮಹತ್ಯೆ ಪ್ರಕರಣದಿಂದ ಬಂಟ್ವಾಳದ ಕೋಮುಗಲಭೆಯ ತನಕ, ಅಲ್ಲಿಂದ ಹೊನ್ನಾವರದ ಪರೇಶ್ ಮೇಸ್ತನ ಸಾವಿನ ಸೂತಕದಿಂದ ಸುರತ್ಕಲ್‍ನ ದೀಪಕ್‍ರಾವ್ ಹತ್ಯೆವರೆಗಿನ ಕಮ್ಯುನಲ್ ಕರಾಮತ್ತು ನಡೆಸಿದ ಅರ್ಧದಷ್ಟಾದರು ಕ್ಷೇತ್ರದ ಅಭಿವೃದ್ಧಿಗೆ ಖರ್ಚು ಮಾಡಿದ್ದರೆ ನೊಂದವರ ಹಾರೈಕೆಯಾದರೂ ಶೋಭಾಗೆ ಸಿಗುತ್ತಿತ್ತು.
ಶೋಭಾಗೆ ಉಡುಪಿ-ಚಿಕ್ಕಮಗಳೂರಿನಲ್ಲಿ ತನ್ನ ಬಗ್ಗೆ ಇರುವ ಈ ತಿರಸ್ಕಾರದ ಭಾವನೆ ಅರ್ಥವಾಗಿದೆ. ಬಿಜೆಪಿಗೆ ಅನುಕೂಲವಾಗಬಲ್ಲ ಹಿಂದುತ್ವದ ಅಖಾಡವಿದೆಂಬ ಸಾರ್ವತ್ರಿಕ ಅಭಿಪ್ರಾಯವಿದ್ದರೂ ಶೋಭಾಗೆ ಮಾತ್ರ ಗೆಲ್ಲುವ ಧೈರ್ಯವಿಲ್ಲ. ಆಂಟಿ-ಇನ್‍ಕಂಬೆನ್ಸಿ ಅಲೆ ಆಕೆಯ ಮುಖಕ್ಕೆ  ಅಪ್ಪಳಿಸುತ್ತಲೇ ಇದೆ. ಹಿಂದೊಮ್ಮೆ ತನಗೆ ಎಂಪಿಗಿರಿಗೆ ಸ್ಪರ್ಧಿಸುವ ಯೋಚನೆ ಇಲ್ಲವೆಂದು ಆಕೆಯೇ ಹೇಳಿದ್ದರು. ಆಗ ಯಡ್ಡಿ ಹಾಗೆಲ್ಲ ಸಾರ್ವಜನಿಕವಾಗಿ ಹಲುಗಬೇಡವೆಂದು “ಶಿಷ್ಯೆ”ಗೆ ಸಲಹೆ ನೀಡಿದ್ದರು. ಆಗಿಂದ ಶೋಭಾ ನಿರಾಕರಣೆ, ನಿರಾಸಕ್ತಿ ಮಾತು ಬಾಯಿಂದ ಹೇಳಬಾರದಂತೆ ಎಚ್ಚರವಹಿಸಿದ್ದರಾದರೂ, ಒಳಗೊಳಗೆ ಗುಲಾಮನೊಬ್ಬನನ್ನು ಬಿಜೆಪಿ ಕ್ಯಾಂಡಿಡೇಟ್ ಮಾಡುವ ಕರಾಮತ್ತು ಶುರುಹಚ್ಚಿಕೊಂಡಿದ್ದಾರೆ. ತಾನು ಹಾಕಿದ ಗೆರೆ ಮೀರದವ ಕಾಂಗ್ರೆಸ್‍ನಲ್ಲಿದ್ದರೂ ಸರಿ, ಆತನನ್ನಾದರೂ ಬಿಜೆಪಿಗೆ ಕರೆತಂದು ಅಖಾಡಕ್ಕೆ ಇಳಿಸುವ ಯೋಚನೆ ಶೋಭಕ್ಕನದು.
ಬಿಜೆಪಿಯಿಂದ ಸಂಸದನಾಗುವ ಕನಸು ಕಾಣುತ್ತಿರುವ ಬಂಟರ ಜಯಪ್ರಕಾಶ್ ಹೆಗ್ಡೆಯೆಂದರೆ ಅರೆಭಾಷೆ ಒಕ್ಕಲಿಗರ ಶೋಭಕ್ಕನಿಗೆ ಅಷ್ಟಕಷ್ಟೇ. ರಾಜಕಾರಣದಲ್ಲಿ ಪಳಗಿದ ಜಯಪ್ರಕಾಶ್ ಹೆಗ್ಡೆ ಕುಂದಾಪುರದ ಅಖಂಡ ಬ್ರಹ್ಮಚಾರಿ ಶಾಸಕ ಹಾಲಾಡಿ ಶ್ರೀನಿವಾಸ್‍ಶೆಟ್ಟಿಯನ್ನು ಎದುರು ಹಾಕಿಕೊಂಡಿದ್ದಾರೆ. ಇದು ಬಂಟರ ಒಳರಾಜಕೀಯ. ಈ ಹಾಲಾಡಿ ಮತ್ತು ಕುಮಾರಿ ಶೋಭಾ ಕರಂದ್ಲಾಜೆ ಪರಮಾಪ್ತರು. ಹಾಲಾಡಿ ಹೇಗಾದರೂ ಮಾಡಿ ಜಯಪ್ರಕಾಶ್‍ಗೆ ಬಿಜೆಪಿ ಟಿಕೆಟ್ ಸಿಗದಂತೆ ಮಾಡಲು ಶೋಭಕ್ಕನ ಮೂಲಕ ಆಟ ಆಡುತ್ತಿದ್ದಾರೆ. ಶೋಭಕ್ಕನಿಗೂ ಚಾಲಾಕಿ ಜಯಪ್ರಕಾಶ್  ಬಿಜೆಪಿಯ ಎಂಪಿಯಾಗೋದು ಬೇಕಾಗಿಲ್ಲ. ಬಿಜೆಪಿಯ ಉಡುಪಿ ಜಿಲ್ಲಾಧ್ಯಕ್ಷರ ರತ್ನಾಕರ ಹೆಗ್ಡೆ, ರಾಜ್ಯ ಬಿಜೆಪಿ ಕಾರ್ಯದರ್ಶಿ ಕಂ ದಿವಂಗತ ಭೂಗತ ದೊರೆ ಶರತ್ ಶೆಟ್ಟಿಯ ನೆಂಟ ವಿಕ್ರಮಾರ್ಜುನ ಹೆಗ್ಡೆಗಳಿಗೆ ಎಂಪಿಯಾಗುವ ಅರ್ಹತೆ ಇರಲಿ, ಬಿಜೆಪಿ ಟಿಕೆಟ್ ತರುವ ಪ್ರಭಾವವೂ ಇಲ್ಲ.
ಹೀಗಾಗಿ ಶೋಭಕ್ಕ ಒಂದು ಹಂತದಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸೋತು ಸುಣ್ಣವಾಗಿರುವ ಮಾಜಿ ಶಾಸಕ ಜೀವರಾಜ್‍ರನ್ನು ಅಭ್ಯರ್ಥಿ ಮಾಡಿದರೆ ಹೇಗೆಂದು ಚಿಂತನೆ ನಡೆಸಿದ್ದರು. ಆದರೆ ಇದಕ್ಕೆ ಸೀಟಿ ರವಿ ಒಪ್ಪುತ್ತಿಲ್ಲ. ತಾನು ಮತ್ತೊಮ್ಮೆ ಶಾಸಕನಾಗುವ ಭಾಗ್ಯ ಕಾಣಲು ಜಯಪ್ರಕಾಶ್ ಹೆಗ್ಡೆ ಹೆಲ್ಪ್ ಕಾರಣವೆಂದು ನಂಬಿರುವ ಉಡುಪಿಯ ರಂಗೀಲಾ ಶಾಸಕ ರಘುಪತಿ ಭಟ್ಟ, ಸಿ.ಟಿ.ರವಿ ಮತ್ತು ಕಾರ್ಕಳದ ಅರೆ ಬಿಲ್ಲವ-ಅರೆ ಬ್ರಾಹ್ಮಣ ಸುನೀಲ್ ಕುಮಾರ್ ಎಂಬ ಶೋಭಾನ ಈ ತ್ರಿಮೂರ್ತಿ ಶತ್ರುಗಳು ಜಯಪ್ರಕಾಶ್ ಹೆಗ್ಡೆಯೇ ಯೋಗ್ಯ ಹುರಿಯಾಳೆಂದು ಹೈಕಮಾಂಡ್ ಎದುರು ವಾದಿಸುತ್ತಲೇ ಇದ್ದಾರೆ. ಜಯಪ್ರಕಾಶ್ ಸಂಸದನಾದರೆ ಪಾರ್ಟಿಯಲ್ಲಿ ತನ್ನ ವಿರೋಧಿ ಗ್ಯಾಂಗ್ ಬಲಗೊಳ್ಳುತ್ತದೆಂಬ ಆತಂಕದಿಂದ ಶೋಭಾ ಉಡುಪಿ ಚಿಕ್ಕಮಗಳೂರಿಗೆ ಮೀನುಗಾರ ಸಮುದಾಯದ ಕÁ್ಯಂಡಿಡೇಟ್ ನಿಲ್ಲಿಸಿದರೆ ಗೆಲುವು ಸುಲಭವೆಂದು ತರ್ಕ ಮಾಡುತ್ತಿದ್ದಾರೆ.
ಶೋಭಾ ಮನಸ್ಸಿನಲ್ಲಿರುವ ಮೀನುಗಾರ(ಮೊಗವೀರ) ಬೇರಾರು ಅಲ್ಲ,  ಕಾಂಗ್ರೆಸ್ಸಿನ ಮಾಜಿ ಮಂತ್ರಿ ಪ್ರಮೋದ್ ಮಧ್ವರಾಜ್!! ಶುದ್ಧ ಸಮಯ ಸಾಧಕತನವನ್ನೇ ಸಿದ್ಧಾಂತ ಮಾಡಿಕೊಂಡಿರುವ ಪ್ರಮೋದ್ ಮಧ್ವರಾವ್ ಕಾಂಗ್ರೆಸ್‍ನ ಮಾಜಿ ಸಚಿವೆ, ಬಿಜೆಪಿಯ ಮಾಜಿ ಸಂಸದೆ ಮನೋರಮಾ ಮಧ್ವರಾಜ್‍ಗೆ ತಕ್ಕ ಮಗ. ಮಮೋರಮಾ ರಾಜಕಾರಣದ ಕೊನೆತನಕವೂ ತನ್ನ ಏಳಿಗೆಗೆ ಕಾರಣರಾದವರಿಗೆ ಋಣಿಯಾಗಿರಲಿಲ್ಲ. ಮಗ ಪ್ರಮೋದ್‍ನೂ ಅಷ್ಟೇ ಕೃತಘ್ನ ರಾಜಕೀಯ ಮೈಗೂಡಿಸಿಕೊಂಡು ಮುನ್ನಡೆದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಈತ ಬಿಜೆಪಿ ಪಾಲಾಗಲು ಹವಣಿಸಿದ್ದ. ಈತ ನಡೆಸುವ ಮೀನು ಉದ್ಯಮದ ಫ್ಯಾಕ್ಟರಿ, ಪೆಟ್ರೋಲ್ ಬಂಕ್‍ನ ಲಫಡಾ, ಬ್ಯಾಂಕ್ ಸಾಲದ ಸೂತ್ರ ಹಿಡಿದು ಸಾಕ್ಷ್ಯಾತ್ ಅಮಿತ್ ಶಾ ಈತನಿಗೆ ಬ್ಲ್ಯಾಕ್‍ಮೇಲ್ ಮಾಡಿದ್ದರೆಂಬ ವದಂತಿಗಳಿವೆ. ತನ್ನ ಉದ್ಯಮಗಳ ಉಳಿವಿಗಾಗಿ ಲಾಂಗ್‍ಜಂಪ್‍ಗೆ ರೆಡಿಯಾಗಿದ್ದ ಪ್ರಮೋದ್‍ಗೆ ಅಡ್ಡಗಾಲು ಹಾಕಿದ್ದು ಬಿಜೆಪಿಯ ಜಯಪ್ರಕಾಶ್ ಹೆಗ್ಡೆ ಮತ್ತು ರಘುಪತಿ ಭಟ್ಟ!
ಒಂದೇ ಅವಧಿಯಲ್ಲಿ ಪ್ರಮೋದ್ ನಾಲ್ಕು ನಾಲ್ಕು ಪ್ರಮೋಷನ್ ಪಡೆದರೂ ಕಾಂಗ್ರೆಸ್ಸಿಗೆ ನಿಷ್ಠನಾಗಿರುವಂತೆ ನಡೆದುಕೊಂಡಿಲ್ಲ. ಧನಬಲದ ಅಹಂಕಾರದಲ್ಲಿ ಪಕ್ಷದ ಕಾರ್ಯಕರ್ತರನ್ನೂ ಕಡೆಗಣಿಸಿದ್ದರು. ಯಾವುದೋ ಪೊಕ್ಕು ಸರ್ವೆಯವನ ಬಂಡಲ್ ಸಮೀಕ್ಷಾ ವರದಿ ನಂಬಿ ತಾನು ಮತ್ತೆ ಗೆಲ್ತೀನೆಂಬ ಭ್ರಮೆಗೆ ಬಿದ್ದಿದ್ದ ಪ್ರಮೋದ್, ಈಗ ಮತ್ತೆ ಜ್ಯೋತಿಷ್ಯ ಮಾರ್ತಾಂಡನ ಢೋಂಗಿ ಶಾಸ್ತ್ರ ನಂಬಿ ಕೇಂದ್ರ ರಕ್ಷಣಾ ಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ!
ರಕ್ಷಣಾ ಮಂತ್ರಿಯಾಗಲು ಮೊದಲು ಎಂಪಿಯಾಗಬೇಕಲ್ಲವಾ? ಕಾಂಗ್ರೆಸ್ಸಿನ ದೊಡ್ಡವರು ಪ್ರಮೋದ್‍ಗೆ ಎಂಪಿ ಟಿಕೆಟ್ ಕೊಡಲು ರೆಡಿಯಿದ್ದಾರೆ. ಆದರೆ ಕಾಂಗ್ರೆಸ್‍ನಿಂದ ಸಂಸದ ಮತ್ತು ರಕ್ಷಣಾ ಮಂತ್ರಿ ಎರಡೂ ಆಗುವ ಭರವಸೆ ಆತನಿಗಿಲ್ಲ. ಹೀಗಾಗಿ ಬಿಜೆಪಿಯತ್ತ ಕಣ್ಣು ಮಿಟುಕಿಸತೊಡಗಿದ್ದಾರೆ. ಯಥಾ ಪ್ರಕಾರ ಜಯಪ್ರಕಾಶ್ ಹೆಗ್ಡೆ ಅಂಡ್ ತ್ರಿಮೂತ್ರಿ ಗ್ಯಾಂಗ್ ಪ್ರಮೋದ್‍ರ ಬಿಜೆಪಿ ಗೃಹಪ್ರವೇಶಕ್ಕೆ ಪ್ರಬಲ ಪ್ರತಿರೋಧ ಒಡ್ಡುತ್ತಿದ್ದಾರಂತೆ.
ಆದರೆ ಶೋಭಾ-ಹಾಲಾಡಿ ಶ್ರೀನಿವಾಸ್ ಮತ್ತವರ ಬಾಸ್ ಯಡ್ಡಿ ವ್ಯವಸ್ಥಿತವಾಗಿ ಪ್ರಮೋದ್ ಪರ ಲಾಬಿ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್ ಅಮಿತ್‍ಶಾಗೂ ಪ್ರಮೋದ್ ಎಂದರೆ ಅದೊಂಥರ ಸೆಳೆತವಿದೆ. ರಘುಪತಿ ಭಟ್ಟರ ತಂಡ ಪಳಗಿಸಲು ದಿಲ್ಲಿಯಿಂದ ಪೇಜಾವರ ಸ್ವಾಮಿಗೆ ಸಂದೇಶವೂ ಬಂದಿದೆಯೆಂಬ ಸುದ್ದಿಯೀಗ ಉಡುಪಿ ರಥಬೀದಿಯಲ್ಲಿ ಹಬ್ಬಿದೆ. ಪ್ರಮೋದ್ ಮತ್ತು ರಘುಪತಿ ಭಟ್ಟ-ರವಿ-ಸುನಿಲ್ ತಂಡದ ನಡುವೆ ರಾಜಿ ಮಾಡಲು ಕಾವಿ ಕಸರತ್ತು ನಡೆಯುತ್ತಿದೆ. ಪ್ರಮೋದ್ ಬಿಜೆಪಿ ಸೇರಿದರೆ ಉಡುಪಿ-ಚಿಕ್ಕಮಗಳೂರಿಗೆ ಬಿಜೆಪಿಯಲ್ಲಷ್ಟೇ ಅಲ್ಲ ಕಾಂಗ್ರೆಸ್‍ನಲ್ಲೂ ಪಲ್ಲಟ, ತಲ್ಲಣಗಳಾಗೋದು ಗ್ಯಾರಂಟಿ. ಆಗ ಜಯಪ್ರಕಾಶ್ ಹೆಗ್ಡೆ ಮರಳಿ ಕಾಂಗ್ರೆಸ್‍ಗೆ ಸೇರುತ್ತಾರೆಂಬ ಮಾತುಗಳು ಕೇಳಿಬರಲಾರಂಭಿಸಿದೆ.
ಎಐಸಿಸಿ ಮಾಂಡಲೀಕ ಆಸ್ಕರ್ ಫರ್ನಾಂಡಿಸ್ ಜತೆ ಜಗಳ ಮಾಡಿಕೊಂಡು ಬಿಜೆಪಿಗೆ ಹೋಗಿದ್ದ ಜಯಪ್ರಕಾಶ್ ಈಗ ಅಂತರ್ ಪಿಶಾಚಿಯಂತಾಗಿದ್ದಾರೆ. ಬಿಜೆಪಿಯ ಮತೀಯ ರಾಜಕಾರಣದ ಚಕ್ರವ್ಯೂಹದಲ್ಲಿ ಸಿಕ್ಕಿಬಿದ್ದಿರುವ ಜನಪರ ಅನುಭವಿ ಕೆಲಸಗಾರ ಜಯಪ್ರಕಾಶ್‍ಗೆ ಬೇರುಮಟ್ಟದ ಜನ ಸಂಪರ್ಕವಿದೆ. ಹಾಗಾಗಿ ಆಸ್ಕರ್ ಫರ್ನಾಂಡಿಸ್ ಸುಮ್ಮನಿರಿಸಿ ಜಯಪ್ರಕಾಶ್ ಹೆಗ್ಡೆಯನ್ನು ಕಾಂಗ್ರೆಸ್‍ಗೆ ತರುವ ಸಾಧ್ಯತೆ ಕಾಣಿಸುತ್ತಿದೆ. ವಯಸ್ಸಿನ ಕಿರಿಕಿರಿ-ಅನಾರೋಗ್ಯದಿಂದ ಎಐಸಿಸಿ ಮಟ್ಟದಲ್ಲಿ ಚಲಾವಣೆ ಕಳೆದುಕೊಳ್ಳುತ್ತಿರುವ ಆಸ್ಕರ್ ಫರ್ನಾಂಡಿಸ್ ಹಠಬಿಟ್ಟು ಜಯಪ್ರಕಾಶ್ ಸೇರ್ಪಡೆಗೆ ಒಪ್ಪುತ್ತಾರೆಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳಾಗುತ್ತಿದೆ. ಒಂದಂತೂ ಖರೆ, ಹೆಗ್ಡೆ ಅವಸರಕ್ಕೆ ಬೀಳದೆ ಒಂಚೂರು ಆಸ್ಕರ್-ಪ್ರಕಾಶ್‍ಚಂದ್ರಾ ಶೆಟ್ಟಿ ಜತೆ ಹೊಂದಿಕೊಂಡು ಹೋಗಿದ್ದರೆ ಇವತ್ತು ನಿರಾಯಾಸವಾಗಿ ಕಾಂಗ್ರೆಸ್ ಕ್ಯಾಂಡಿಡೇಟ್ ಆಗುತ್ತಿದ್ದರು, ಗೆದ್ದೂ ಬಿಡುತ್ತಿದ್ದರು.!
ಕೆಲವೇ ದಿನದಲ್ಲಿ ಉಡುಪಿ-ಚಿಕ್ಕಮಗಳೂರು ರಾಜಕೀಯ ಪಡಸಾಲೆಯಲ್ಲಿ ಅದಲು-ಬದಲು-ಕಂಚೀ ಕದಲು ಆಟ ಖಂಡಿತ.
– ಶುದ್ಧೋಧನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...