Homeನೂರರ ನೋಟಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

ಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

- Advertisement -
- Advertisement -

ಮೋದಿ ಷಾ ಅವರ ಮಟ್ಟಿಗೆ ಕೊರೋನಾ ಒಂದು ವರವಾಗಿ ಪರಿಣಮಿಸಿತು. ಅವರ ಮೇಲಿನ ಹೋರಾಟ ಮುಂದಕ್ಕೆ ಹೋಯಿತು. ಮುಂದಕ್ಕೆ ಹೋಯಿತೇ ಹೊರತು ನಿಲ್ಲುವುದಲ್ಲ. ಕೊರೋನಾ ಬರದಿದ್ದರೆ ಈ ವೇಳೆಗೆ ಮೋದಿ ಮತ್ತು ಷಾ ಜನಗಣತಿ ಆರಂಭಿಸುತ್ತಿದ್ದರು. ಯಾರು ಯಾರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬಹುದೆಂದು home work ಆರಂಭಿಸುತ್ತಿದ್ದರು. ಇದರ ಜೊತೆಜೊತೆಗೇ ಮೋದಿ ಸರ್ಕಾರದ ವಿರುದ್ಧ ಘರ್ಷಣೆ ಆರಂಭವಾಗುತ್ತಿತ್ತು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಇತ್ಯಾದಿಗಳನ್ನು ಹಿಂಪಡೆಯಿರಿ ಎಂದು ದಲಿತರು, ಅದಿವಾಸಿಗಳು, ಮುಸ್ಲಿಮರು ದೇಶವ್ಯಾಪ್ತಿ ಚಳುವಳಿ ಆರಂಭಿಸುತ್ತಿದ್ದರು. ಕೊರೋನಾ ಸೈತಾನನ ಸಲುವಾಗಿ ಹಿಂದುತ್ವ ಮಂತಾಧರ ವಿರುದ್ಧ, ನಿಷ್ಕ್ರಿಯ ಸರ್ಕಾರದ ವಿರುದ್ಧ ನಡೆಯಬೇಕಿದ್ದ ಧರ್ಮಯುದ್ದವನ್ನು ಮುಂದೂಡಬೇಕಾದ ಅನಿವಾರ್ಯ ಸೃಷ್ಟಿಯಾಯಿತು.

ಮೋದಿ ಷಾ ನಮಗೆಲ್ಲ 5, 5 ಸಾವಿರ ಕೊಟ್ಟರು ಎಂದು ಜನ ಅಂದುಕೊಂಡಾರು ಎಂಬ ಬ್ರಾಂತಿ ಮೋದಿ-ಷಾಗಳಿಗಿದೆ. ಕೊರೋನಾ ನಮ್ಮ ಅನ್ನ ಕಿತ್ತುಕೊಂಡಿತು, ನಮ್ಮ ಉದ್ಯೋಗ ಕಿತ್ತು ಕೊಂಡಿತು, ನಾವು ನಮ್ಮೂರಿಗೆ ಹೋಗುತ್ತೇವೆ ಎಂದು ವಲಸೆ ಬಂದ ಕಾರ್ಮಿಕರು, ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಈ ಸಂದರ್ಭದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳನ್ನು ಈ ಜನ್ಮದಲ್ಲಿ ಅವರು ಮರೆಯುವುದಿಲ್ಲ. ಸರ್ಕಾರ ಇವರಿಗೆ ಅಷ್ಟೊ ಇಷ್ಟೋ ಹಣ ನೀಡಿದ್ದರೆ ಅದು ಸರ್ಕಾರದ ಹಣವೇ ಹೊರತು ಅವರ ಔದಾರ್ಯವಲ್ಲ. ಸರ್ಕಾರ ತಾನು ಎರಚಿದ ಪುಡಿಕಾಸಿನ ನೆರವನ್ನು ಮತಗಳಿಕೆಯ ಸಾಧನವನ್ನಾಗಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ. ಆದರೆ ಈ ಬಗೆಯ ನೆರವು ನೀಡಿದ ಸರ್ಕಾರ ಶಿಸ್ತುಬದ್ಧನಾಗಿ ಎಲ್ಲ ತರದ ಬಡವರಿಗು ಹಂಚಿದ್ದರೆ ಭೇಷ್ ಅನ್ನಬಹುದಾಗಿತ್ತು. ಮೋದಿಯವರು ನಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಣ ಹಂಚಿದಾರಾದರೂ ಅದು ಬಕಾಸುರನ ಬಾಯಿಗೆ ಅರೆ ಮಜ್ಜಿಗೆ ಸುರಿದಂತೆ ಎಲ್ಲ ಜನಕ್ಕೂ ತಲುಪಲಿಲ್ಲ.

ಸರ್ಕಾರದ ವಿಚಾರದಲ್ಲಿ ಬಡಜನರ ಆಕ್ರೋಶ ಇದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿರುವುದು ಇಡೀ ಸಮಾಜಕ್ಕೆ ಗೊತ್ತಾಗಿದೆ. ವಿವಿಧ ರಾಜ್ಯಗಳಿಂದ ಬಂದ ಅಸಂಘಟಿತ ಲಕ್ಷಾಂತರ ಕಾರ್ಮಿಕರು ತಮ್ಮ ಸಂಪಾದನೆ ನಿಂತುಹೋದ ಕಾರಣದಿಂದ ನಮ್ಮನ್ನು ನಮ್ಮ ಊರುಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದರು. ಕೊರೋನಾ ಆರಂಭವಾದ ಹೊತ್ತಿನಲ್ಲೆ ಪ್ರಾರ್ಥಿಸಿದರೂ ಸರ್ಕಾರ ಅವರಿಗೆ ಹೋಗಲು ತಡೆಹಾಕಿತು. ಕೊನೆಯ ಪಕ್ಷ ಕೊರೋನಾ ಸೋಂಕಿಲ್ಲದವರನ್ನಾದರು ಕಳುಹಿಸಬೇಕಾಗಿತ್ತು. ಸರ್ಕಾರ ಅವರನ್ನೆಲ್ಲ ಇಲ್ಲೆ ಬಂಧನದಲ್ಲಿಟ್ಟಂತೆ ಇಟ್ಟು ಅವರಿಗೆ ಅತ್ತ ಕೂಲಿಯೂ ಇಲ್ಲ ಇತ್ತ ಪರಿಹಾರವೂ ಇಲ್ಲ ಎಂದು ಸರ್ಕಾರ ಕೈಚೆಲ್ಲಿತು. ಇವರಲ್ಲಿ ಕೆಲವರಿಗೆ ಪರಹಾರ ಸಿಕ್ಕಿರುವುದೂ ಕೊರೋನಾ ಅಮರಿಕೊಂಡ 2-3 ತಿಂಗಳ ಮೇಲೆ? ಅವರು ಅರೆಜೀವ, ಕೊರೆಜೀವ ಇಟ್ಟುಕೊಂಡೆ ಆ ದಿನಗಳನ್ನು ಕಳೆದರು.

ಆನಂತರ 2 ತಿಂಗಳ ಮೇಲೆ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿರ್ಧಾರಕ್ಕೆ ಸರ್ಕಾರ ಬಂತು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡಬಲ್ ಛಾರ್ಜ್ ವಸೂಲಿ ಮಾಡಿ ಎಂದು ಸರ್ಕಾರ ಹೇಳಿತು. ಅದಕ್ಕೆ ಪ್ರತಿಭಟನೆ ಬಂತು. ಆಗ ಸರ್ಕಾರ ಹೋಗುವ ಚಾರ್ಜ್ ಕೊಟ್ಟರೆ ಸಾಕು ಎಂದಿತು. ಕಾರ್ಮಿಕರು ನಾವೆಲ್ಲಿಂದ ತರೋಣ ಹಣ ಎಂದರು. ಸರ್ಕಾರ ತನ್ನ ಪಟ್ಟು ಬಿಡಲಿಲ್ಲ. ಆಗ ಕಾಂಗ್ರೆಸ್ ಸಂಸ್ಥೆಯವರು ನಾವು ಒಂದು ಕೋಟಿ ಚೆಕ್ ನೀಡುತ್ತೇವೆ ಅವರಿಂದ ಹಣ ವಸೂಲಿ ಮಾಡದೆ ಮರ್ಯಾದೆಯಿಂದ ಕಳುಹಿಸಿಕೊಡಿ ಎಂದು ಸವಾಲೊಡ್ಡಿತು. ಸರ್ಕಾರಕ್ಕೆ ಪೀಕಲಾಟ ಬಂತು.

ಟಿಕೆಟ್ ಹಣ ವಸೂಲಿ ಮಾಡದಿದ್ದರೆ ಕಾಂಗ್ರೆಸ್ಸಿನ ಒತ್ತಡಕ್ಕೆ ಸಿಲುಕಿದಂತಾಗುತ್ತದೆ. ವಸೂಲಿ ಮಾಡಿದರೆ ಆ ಜನ ಶಾಪ ಹಾಕುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಮತ ಹಾಕದೆಯೂ ಇರಬಹುದು. ಇತ್ತ ಪುಲಿ ಅತ್ತ ದರಿ ಎನ್ನುವ ಸನ್ನಿವೇಶಕ್ಕೆ ಕಾಂಗ್ರೆಸ್ ನಮ್ಮನ್ನು ದೂಡಿದೆ. ಇದರ ಫಲವಾಗಿ ಕಾರ್ಮಿಕ ವರ್ಗ ಚುನಾವಣೆ ವೇಳೆಯಲ್ಲಿ ನಮ್ಮ ಎದುರು ಬಿದ್ದರೆ ಗತಿ ಏನು? ಎಂದು ಯೋಚಿಸಿ ಉಚಿತವಾಗಿ ಅವರನ್ನು ಸಾಗಿಸುವುದೇ ಬುದ್ಧಿವಂತಿಕೆ ಎಂಬ ತೀರ್ಮಾನಕ್ಕೆ ಬಂದರು. ಕಾಂಗ್ರೆಸ್ ಈ ಸಂದರ್ಭದಲ್ಲಿ ಟ್ರಂಪ್‌ಕಾರ್ಡ್ ಹಾಕಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಲ್ಲದೆ ಕಾರ್ಮಿಕರ ಕೃತಜ್ಞತೆಗೂ ಪಾತ್ರವಾಯಿತು.

ಕೊರೋನಾ ಆದಷ್ಟು ಬೇಗ ಮುಕ್ತಾಯಗೊಳ್ಳಲಿ ನಮ್ಮ ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ ಎಂದು ಆಶಿಸುತ್ತೇನೆ.


ಇದನ್ನೂ ಓದಿ: ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...