Homeನೂರರ ನೋಟಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

ಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

- Advertisement -
- Advertisement -

ಮೋದಿ ಷಾ ಅವರ ಮಟ್ಟಿಗೆ ಕೊರೋನಾ ಒಂದು ವರವಾಗಿ ಪರಿಣಮಿಸಿತು. ಅವರ ಮೇಲಿನ ಹೋರಾಟ ಮುಂದಕ್ಕೆ ಹೋಯಿತು. ಮುಂದಕ್ಕೆ ಹೋಯಿತೇ ಹೊರತು ನಿಲ್ಲುವುದಲ್ಲ. ಕೊರೋನಾ ಬರದಿದ್ದರೆ ಈ ವೇಳೆಗೆ ಮೋದಿ ಮತ್ತು ಷಾ ಜನಗಣತಿ ಆರಂಭಿಸುತ್ತಿದ್ದರು. ಯಾರು ಯಾರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬಹುದೆಂದು home work ಆರಂಭಿಸುತ್ತಿದ್ದರು. ಇದರ ಜೊತೆಜೊತೆಗೇ ಮೋದಿ ಸರ್ಕಾರದ ವಿರುದ್ಧ ಘರ್ಷಣೆ ಆರಂಭವಾಗುತ್ತಿತ್ತು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಇತ್ಯಾದಿಗಳನ್ನು ಹಿಂಪಡೆಯಿರಿ ಎಂದು ದಲಿತರು, ಅದಿವಾಸಿಗಳು, ಮುಸ್ಲಿಮರು ದೇಶವ್ಯಾಪ್ತಿ ಚಳುವಳಿ ಆರಂಭಿಸುತ್ತಿದ್ದರು. ಕೊರೋನಾ ಸೈತಾನನ ಸಲುವಾಗಿ ಹಿಂದುತ್ವ ಮಂತಾಧರ ವಿರುದ್ಧ, ನಿಷ್ಕ್ರಿಯ ಸರ್ಕಾರದ ವಿರುದ್ಧ ನಡೆಯಬೇಕಿದ್ದ ಧರ್ಮಯುದ್ದವನ್ನು ಮುಂದೂಡಬೇಕಾದ ಅನಿವಾರ್ಯ ಸೃಷ್ಟಿಯಾಯಿತು.

ಮೋದಿ ಷಾ ನಮಗೆಲ್ಲ 5, 5 ಸಾವಿರ ಕೊಟ್ಟರು ಎಂದು ಜನ ಅಂದುಕೊಂಡಾರು ಎಂಬ ಬ್ರಾಂತಿ ಮೋದಿ-ಷಾಗಳಿಗಿದೆ. ಕೊರೋನಾ ನಮ್ಮ ಅನ್ನ ಕಿತ್ತುಕೊಂಡಿತು, ನಮ್ಮ ಉದ್ಯೋಗ ಕಿತ್ತು ಕೊಂಡಿತು, ನಾವು ನಮ್ಮೂರಿಗೆ ಹೋಗುತ್ತೇವೆ ಎಂದು ವಲಸೆ ಬಂದ ಕಾರ್ಮಿಕರು, ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಈ ಸಂದರ್ಭದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳನ್ನು ಈ ಜನ್ಮದಲ್ಲಿ ಅವರು ಮರೆಯುವುದಿಲ್ಲ. ಸರ್ಕಾರ ಇವರಿಗೆ ಅಷ್ಟೊ ಇಷ್ಟೋ ಹಣ ನೀಡಿದ್ದರೆ ಅದು ಸರ್ಕಾರದ ಹಣವೇ ಹೊರತು ಅವರ ಔದಾರ್ಯವಲ್ಲ. ಸರ್ಕಾರ ತಾನು ಎರಚಿದ ಪುಡಿಕಾಸಿನ ನೆರವನ್ನು ಮತಗಳಿಕೆಯ ಸಾಧನವನ್ನಾಗಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ. ಆದರೆ ಈ ಬಗೆಯ ನೆರವು ನೀಡಿದ ಸರ್ಕಾರ ಶಿಸ್ತುಬದ್ಧನಾಗಿ ಎಲ್ಲ ತರದ ಬಡವರಿಗು ಹಂಚಿದ್ದರೆ ಭೇಷ್ ಅನ್ನಬಹುದಾಗಿತ್ತು. ಮೋದಿಯವರು ನಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಣ ಹಂಚಿದಾರಾದರೂ ಅದು ಬಕಾಸುರನ ಬಾಯಿಗೆ ಅರೆ ಮಜ್ಜಿಗೆ ಸುರಿದಂತೆ ಎಲ್ಲ ಜನಕ್ಕೂ ತಲುಪಲಿಲ್ಲ.

ಸರ್ಕಾರದ ವಿಚಾರದಲ್ಲಿ ಬಡಜನರ ಆಕ್ರೋಶ ಇದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿರುವುದು ಇಡೀ ಸಮಾಜಕ್ಕೆ ಗೊತ್ತಾಗಿದೆ. ವಿವಿಧ ರಾಜ್ಯಗಳಿಂದ ಬಂದ ಅಸಂಘಟಿತ ಲಕ್ಷಾಂತರ ಕಾರ್ಮಿಕರು ತಮ್ಮ ಸಂಪಾದನೆ ನಿಂತುಹೋದ ಕಾರಣದಿಂದ ನಮ್ಮನ್ನು ನಮ್ಮ ಊರುಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದರು. ಕೊರೋನಾ ಆರಂಭವಾದ ಹೊತ್ತಿನಲ್ಲೆ ಪ್ರಾರ್ಥಿಸಿದರೂ ಸರ್ಕಾರ ಅವರಿಗೆ ಹೋಗಲು ತಡೆಹಾಕಿತು. ಕೊನೆಯ ಪಕ್ಷ ಕೊರೋನಾ ಸೋಂಕಿಲ್ಲದವರನ್ನಾದರು ಕಳುಹಿಸಬೇಕಾಗಿತ್ತು. ಸರ್ಕಾರ ಅವರನ್ನೆಲ್ಲ ಇಲ್ಲೆ ಬಂಧನದಲ್ಲಿಟ್ಟಂತೆ ಇಟ್ಟು ಅವರಿಗೆ ಅತ್ತ ಕೂಲಿಯೂ ಇಲ್ಲ ಇತ್ತ ಪರಿಹಾರವೂ ಇಲ್ಲ ಎಂದು ಸರ್ಕಾರ ಕೈಚೆಲ್ಲಿತು. ಇವರಲ್ಲಿ ಕೆಲವರಿಗೆ ಪರಹಾರ ಸಿಕ್ಕಿರುವುದೂ ಕೊರೋನಾ ಅಮರಿಕೊಂಡ 2-3 ತಿಂಗಳ ಮೇಲೆ? ಅವರು ಅರೆಜೀವ, ಕೊರೆಜೀವ ಇಟ್ಟುಕೊಂಡೆ ಆ ದಿನಗಳನ್ನು ಕಳೆದರು.

ಆನಂತರ 2 ತಿಂಗಳ ಮೇಲೆ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿರ್ಧಾರಕ್ಕೆ ಸರ್ಕಾರ ಬಂತು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡಬಲ್ ಛಾರ್ಜ್ ವಸೂಲಿ ಮಾಡಿ ಎಂದು ಸರ್ಕಾರ ಹೇಳಿತು. ಅದಕ್ಕೆ ಪ್ರತಿಭಟನೆ ಬಂತು. ಆಗ ಸರ್ಕಾರ ಹೋಗುವ ಚಾರ್ಜ್ ಕೊಟ್ಟರೆ ಸಾಕು ಎಂದಿತು. ಕಾರ್ಮಿಕರು ನಾವೆಲ್ಲಿಂದ ತರೋಣ ಹಣ ಎಂದರು. ಸರ್ಕಾರ ತನ್ನ ಪಟ್ಟು ಬಿಡಲಿಲ್ಲ. ಆಗ ಕಾಂಗ್ರೆಸ್ ಸಂಸ್ಥೆಯವರು ನಾವು ಒಂದು ಕೋಟಿ ಚೆಕ್ ನೀಡುತ್ತೇವೆ ಅವರಿಂದ ಹಣ ವಸೂಲಿ ಮಾಡದೆ ಮರ್ಯಾದೆಯಿಂದ ಕಳುಹಿಸಿಕೊಡಿ ಎಂದು ಸವಾಲೊಡ್ಡಿತು. ಸರ್ಕಾರಕ್ಕೆ ಪೀಕಲಾಟ ಬಂತು.

ಟಿಕೆಟ್ ಹಣ ವಸೂಲಿ ಮಾಡದಿದ್ದರೆ ಕಾಂಗ್ರೆಸ್ಸಿನ ಒತ್ತಡಕ್ಕೆ ಸಿಲುಕಿದಂತಾಗುತ್ತದೆ. ವಸೂಲಿ ಮಾಡಿದರೆ ಆ ಜನ ಶಾಪ ಹಾಕುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಮತ ಹಾಕದೆಯೂ ಇರಬಹುದು. ಇತ್ತ ಪುಲಿ ಅತ್ತ ದರಿ ಎನ್ನುವ ಸನ್ನಿವೇಶಕ್ಕೆ ಕಾಂಗ್ರೆಸ್ ನಮ್ಮನ್ನು ದೂಡಿದೆ. ಇದರ ಫಲವಾಗಿ ಕಾರ್ಮಿಕ ವರ್ಗ ಚುನಾವಣೆ ವೇಳೆಯಲ್ಲಿ ನಮ್ಮ ಎದುರು ಬಿದ್ದರೆ ಗತಿ ಏನು? ಎಂದು ಯೋಚಿಸಿ ಉಚಿತವಾಗಿ ಅವರನ್ನು ಸಾಗಿಸುವುದೇ ಬುದ್ಧಿವಂತಿಕೆ ಎಂಬ ತೀರ್ಮಾನಕ್ಕೆ ಬಂದರು. ಕಾಂಗ್ರೆಸ್ ಈ ಸಂದರ್ಭದಲ್ಲಿ ಟ್ರಂಪ್‌ಕಾರ್ಡ್ ಹಾಕಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಲ್ಲದೆ ಕಾರ್ಮಿಕರ ಕೃತಜ್ಞತೆಗೂ ಪಾತ್ರವಾಯಿತು.

ಕೊರೋನಾ ಆದಷ್ಟು ಬೇಗ ಮುಕ್ತಾಯಗೊಳ್ಳಲಿ ನಮ್ಮ ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ ಎಂದು ಆಶಿಸುತ್ತೇನೆ.


ಇದನ್ನೂ ಓದಿ: ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...