Homeಮುಖಪುಟಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು

- Advertisement -
- Advertisement -

ಯಾಕೂಬ್‌ ಜ್ವರ ಮತ್ತು ವಾಂತಿಯಿಂದ ಬಳಲುತ್ತಿರುವ 24 ವರ್ಷದ ತನ್ನ ಸ್ನೇಹಿತ ಅಮೃತ್‌ನನ್ನು ತನ್ನ ತೊಡೆಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾನೆ. ಆದರೆ ಕೊರೊನಾ ಭಯದಿಂದ ಸಹಾಯ ಮಾಡಲು ಯಾರು ಮುಂದಾಗುತ್ತಿಲ್ಲ. ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿನ ಈ ಹೃದಯವಿದ್ರಾವಕ ಘಟನೆಯನ್ನು ದಾರಿಹೋಗನೊಬ್ಬ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾನೆ. ಅಮೃತ್‌ ತನ್ನ ಸ್ನೇಹಿತರ ತೊಡೆಮೇಲೆ ಮೃತಪಟ್ಟಿದ್ದಾನೆಂಬ ಈ ಫೋಟೊ ವೈರಲ್‌ ಆಗಿದೆ. ಆದರೆ ಕೊನೆಗೂ ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅನಾರೋಗ್ಯ, ಬಿಸಿಲಿನ ಝಳ ಮತ್ತು ಪ್ರಯಾಣದ ಆಯಾಸದಿಂದ ಅಮೃತ್‌ ಕೊನೆಯುಸಿರೆಳೆದಿದ್ದಾನೆ.

ಗುಜರಾತ್‌ನಿಂದ ತಮ್ಮ ಊರು ಉತ್ತರಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರ ಕಣ್ಣೀರ ಕತೆ ಇದು. ಸೂರತ್‌ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಸ್ನೇಹಿತರಿಬ್ಬರು ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಇನ್ನು ಸಾಕು ಎಂದು ಎಲ್ಲರಂತೆ ತಮ್ಮ ಊರಿಗೆ ವಾಪಸ್‌ ಹೊರಟಿದ್ದಾರೆ. ತಲಾ 4000 ರೂ ನೀಡಿ ಈಗಾಗಲೇ ತುಂಬಿಹೋಗಿದ್ದ ಟ್ರಕ್‌ವೊಂದರಲ್ಲಿ ನಿಂತುಕೊಂಡು ಹೋಗಲು ಅವಕಾಶ ಪಡೆದ ಇವರು ಪ್ರಯಾಣ ಹೊರಟಿದ್ದಾರೆ. ಈ ಮಧ್ಯೆ ಅಮೃತ್‌ಗೆ ತೀವ್ರ ಜ್ವರ ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಪ್ರಯಾಣ ಮುಂದುವರೆಸಲಾಗದೇ ಮಧ್ಯಪ್ರದೇಶದ ಶಿವಪುರಿಯಲ್ಲಿ ಇಳಿದುಕೊಂಡಿದ್ದಾನೆ. ಆಗ ಆತನ ಜೊತೆಗೆ ನಿಂತ ಏಕೈಕ ವ್ಯಕ್ತಿ ಆತನ ಸ್ನೇಹಿತ ಯಾಕೂಬ್‌.

ವೈರಲ್‌ ಚಿತ್ರದಲ್ಲಿ ಯಾಕೂಬ್‌ ತನ್ನ ಸ್ನೇಹಿತ ಅಮೃತ್‌ನಲ್ಲಿ ತೊಡಮೇಲೆ ಮಲಗಿಸಿಕೊಂಡು ಸಹಾಯಕ್ಕಾಗಿ ಮನವಿ ಮಾಡುತ್ತಿದ್ದಾನೆ. ಯಾರೂ ಅತ್ತ ಸುಳಿಯುತ್ತಿಲ್ಲ. ಅಮೃತ್‌ ತೀವ್ರ ಜ್ವರ ಮತ್ತು ವಾಂತಿಯಿಂದ ಸೊರಗಿದ್ದಾನೆ. ಆತನನ್ನು ಶಿವಪುರಿಯ ಆಸ್ಪತ್ರೆಗೆ ಸೇರಿಸಿದರೂ ಬದುಕುಳಿದಿಲ್ಲ. ಆತನ ಮತ್ತು ಯಾಕೂಬ್‌ ಇಬ್ಬರ ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಕಳಿಸಿದ್ದು ವರದಿಗಾಗಿ ಕಾಯಲಾಗುತ್ತಿದೆ. ಯಾಕೂಬ್‌ನನ್ನು ಶಿವಪುರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಸರ್ಜನ್ ಪಿ.ಕೆ ಖಾರೆ ತಿಳಿಸಿದ್ದಾರೆ.

ಲಕ್ಷಾಂತರ ವಲಸೆ ಕಾರ್ಮಿಕರು ತಾವಿದ್ದ ಸ್ಥಳ ತೊರೆದು ತಮ್ಮ ಮೂಲ ಸ್ಥಳಗಳಿಗೆ ನಡೆದುಕೊಂಡೇ ತೆರಳುತ್ತಿರುವ ಹಲವಾರು ಚಿತ್ರಗಳು ದಿನನಿತ್ಯ ಕಾಣಸಿಗುತ್ತಿವೆ. ಈಗಾಗಲೇ ಹಲವಾರು ಮಂದಿ ಈ ನಡಿಗೆಯಲ್ಲಿ ಪ್ರಾಣತೆತ್ತಿದ್ದಾರೆ. ಅವರ ಗುಂಪಿಗೆ ಅಮೃತ್‌ ಹೊಸ ಸೇರ್ಪಡೆಯಾಗಿದ್ದಾನೆ. ಇವರೆಲ್ಲರಿಗೆ ಸೂಕ್ತ ಪ್ರಯಾಣ ವ್ಯವಸ್ಥೆ ಮಾಡಲು ಆಳುವ ಸರ್ಕಾರಗಳು ಸಂರ್ಪೂಣವಾಗಿ ವಿಫಲವಾಗಿವೆ.

ಈ ಕುರಿತು ಸುಪ್ರೀಂ ಕೋರ್ಟ್‌‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಅರ್ಜಿ ಸಲ್ಲಿಸಿ “ನಡೆಯುತ್ತಿರುವ ವಲಸೆ ಕಾರ್ಮಿರಿಗೆ ಊಟ ಮತ್ತು ವಸತಿಯ ವ್ಯವಸ್ಥೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಬೇಕು” ಎಂದು ವಾದಿಸಿದ್ದಾರೆ. ಆದರೆ ಸುಪ್ರೀಂ ಕೋರ್ಟ್‌ ಮಾತ್ರ ಯಾರು ನಡೆಯುತ್ತಿದ್ದಾರೆ, ಯಾರು ನಡೆಯುತ್ತಿಲ್ಲ ಎಂದು ತಿಳಿಯಲು ಮತ್ತು ತಡೆಯಲು ಸಾಧ್ಯವಿಲ್ಲ. ಈ ಕುರಿತು ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅದನ್ನು ರಾಜ್ಯಗಳು ನಿರ್ಧರಿಸಲಿ ಎಂದು ಹೇಳಿ ಕೈತೊಳೆದಕೊಂಡಿದೆ.


ಇದನ್ನೂ ಓದಿ: ಆತ್ಮಕ್ಕೆ ಬರ ಬಿದ್ದ ಆಡಳಿತದಲ್ಲಿ ಕೊರೊನಾ ಜೊತೆ ಬದುಕುವುದಾ ಕಲಿಯಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...