Homeಎಕಾನಮಿಸರ್ಕಾರ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದೆ: ಕೋವಿಡ್‌ ಪ್ಯಾಕೇಜ್‌ ಟೀಕಿಸಿದ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್

ಸರ್ಕಾರ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದೆ: ಕೋವಿಡ್‌ ಪ್ಯಾಕೇಜ್‌ ಟೀಕಿಸಿದ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್

- Advertisement -
- Advertisement -

8 ವಲಯಗಳಲ್ಲಿನ ಕಾರ್ಪೋರೇಟಿಕರಣ ಮತ್ತು ಖಾಸಗೀಕರಣದ ಕುರಿತ ನಿರ್ಮಲಾ ಸೀತಾರಾಮನ್‌ರವರ ಪ್ರಕಟಣೆಗಳಿಗೆ ಆರ್‌ಎಸ್‌ಎಸ್ ಅಂಗಸಂಸ್ಥೆ ಬಿಎಂಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರವು ಕಾರ್ಮಿಕ ಸಂಘಗಳೊಂದಿಗೆ ಸಮಾಲೋಚಿಸುವುದರಿಂದ ದೂರ ಸರಿಯುತ್ತಿದೆ ಎಂದು ಅದು ಆರೋಪಿಸಿದೆ.

ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಘೋಷಿಸಿದ ಆರ್ಥಿಕ ಪ್ಯಾಕೇಜ್‌ನ ನಾಲ್ಕನೇ ಹಂತದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಮಜ್ದೂರ್ ಸಂಘವು ಸರ್ಕಾರವು ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ವಿಚಾರಗಳ ಕೊರತೆ ಎದುರಿಸುತ್ತಿದೆ ಎಂದು ಹೇಳಿದೆ.

ರಕ್ಷಣಾ ಉತ್ಪಾದನೆಯಲ್ಲಿ ವಿದೇಶಿ ನೇರ ಹೂಡಿಕೆಯ ಮಿತಿಗಳನ್ನು ಸಡಿಲಿಸುವುದು, ಆರು ವಿಮಾನ ನಿಲ್ದಾಣಗಳ ಖಾಸಗೀಕರಣ, ವಿಮಾನಯಾಗಳಲ್ಲಿ ಖಾಸಗಿಯವರಿಗೆ ಹೆಚ್ಚಿನ ಅವಕಾಶ ಮತ್ತು ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಖಾಸಗಿ ವಲಯಕ್ಕೆ ಅವಕಾಶ ನೀಡುವುದು ಸೇರಿದಂತೆ ಮುಂತಾದ ಕ್ರಮಗಳನ್ನು ಕೇಂದ್ರ ಸಚಿವೆ ಶನಿವಾರ ಪ್ರಕಟಿಸಿದ್ದರು. ಕರೋನವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್‌ನ ನಾಲ್ಕನೇ ಹಂತದ ವಿವರಗಳನ್ನು ಹಂಚಿಕೊಳ್ಳುವಾಗ ಅವರು ಈ ಪ್ರಕಟಣೆಗಳನ್ನು ಮಾಡಿದ್ದಾರೆ.

ಪ್ರಕಟಣೆಗಳಿಗೆ ಪ್ರತಿಕ್ರಿಯಿಸಿದ ಬಿಎಂಎಸ್, ಕಾರ್ಪೋರೇಟಿಕರಣ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ)ವು ಖಾಸಗೀಕರಣ ಮತ್ತು “ವಿದೇಶೀಕರಣ” ದ ಮಾರ್ಗಗಳಾಗಿವೆ ಎಂದು ಹೇಳಿದೆ.

ಬಿಕ್ಕಟ್ಟಿನ ಸಮಯದಲ್ಲಿ ಆರ್ಥಿಕ ಪುನರುಜ್ಜೀವನದ ಕುರಿತ ಆಲೋಚನೆಗಳ ಕೊರತೆಯನ್ನು ಸರ್ಕಾರ ಹೊಂದಿದೆ ಎಂದು ಇದು ತೋರಿಸುತ್ತದೆ ಎಂದು ಆರ್‌ಎಸ್‌ಎಸ್ ಬೆಂಬಲಿತ ಸಂಸ್ಥೆ ಆರೋಪಿಸಿದೆ.

ಎಂಟು ಕ್ಷೇತ್ರಗಳಲ್ಲಿನ ಕಾರ್ಪೋರೇಟಿಕರಣ ಮತ್ತು ಖಾಸಗೀಕರಣದ ಕುರಿತ ಪ್ರಕಟಣೆಗಳನ್ನು ಬಿಎಂಎಸ್ ಬಲವಾಗಿ ಆಕ್ಷೇಪಿಸುತ್ತದೆ ಎಂದು ಟ್ರೇಡ್ ಯೂನಿಯನ್ ಹೇಳಿಕೆಯಲ್ಲಿ ತಿಳಿಸಿದೆ.

ಖಾಸಗೀಕರಣ ಎಂದರೆ ಉದ್ಯೋಗಿಗಳಿಗೆ ಭಾರಿ ಉದ್ಯೋಗ ನಷ್ಟ, ಕಳಪೆ ಗುಣಮಟ್ಟದ ಉದ್ಯೋಗ, ಲಾಭ ಮತ್ತು ಶೋಷಣೆಯ ನಿಯಮವಾಗಿರುತ್ತದೆ ಎಂದು ಬಿಎಂಎಸ್ ಹೇಳಿದೆ.

ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ ಖಾಸಗಿ ಕಂಪನಿಗಳು ಮತ್ತು ಮಾರುಕಟ್ಟೆ ಸಂಕಷ್ಟಕ್ಕೊಳಗಾದಾಗ  “ಸಾರ್ವಜನಿಕ ವಲಯವು ನಿರ್ಣಾಯಕ ಪಾತ್ರ ವಹಿಸಿದೆ” ಎಂದು ಬಿಎಂಎಸ್‌ ಪ್ರತಿಪಾದಿಸಿದೆ.

ಕಾರ್ಮಿಕ ಸಂಘಗಳು, ಸಾಮಾಜಿಕ ಪ್ರತಿನಿಧಿಗಳು ಮತ್ತು ಭಾದ್ಯಸ್ಥರೊಂದಿಗೆ ಸಮಾಲೋಚಿಸುವುದರಿಂದ ಸರ್ಕಾರ ದೂರ ಸರಿಯುತ್ತಿದೆ ಎಂದು ಅದು ಹೇಳಿದೆ.

ಆದಾಗ್ಯೂ, ಹಣಕಾಸು ಸಚಿವರು ಘೋಷಿಸಿದ ಪ್ಯಾಕೇಜಿನ ಮೊದಲ ಮೂರು ಹಂತದ ಬಗ್ಗೆ ಬಿಎಂಎಸ್ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು.


ಇದನ್ನೂ ಓದಿ: ಸ್ನೇಹಿತನ ತೊಡೆಮೇಲೆ ಪ್ರಾಣಬಿಟ್ಟ ಯುವಕ : ನಿಲ್ಲದ ವಲಸೆ ಕಾರ್ಮಿಕರ ಕಣ್ಣೀರ ಕಥೆಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...