HomeಮುಖಪುಟN-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

N-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

- Advertisement -
- Advertisement -

N-95 ಮಾಸ್ಕ್‌ಗಳ ಕೊರತೆ ಬಗ್ಗೆ ದನಿಯೆತ್ತಿದ್ದ ಕಾರಣಕ್ಕೆ ಅಮಾನತ್ತಾಗಿದ್ದ ವೈದ್ಯನನ್ನು ಪೊಲೀಸರು ರಸ್ತೆಯಲ್ಲಿ ಎಳೆದಾಡಿ, ಆತನ ಕೈ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ದುರ್ಘಟನೆ ಆಂಧ್ರಪ್ರದೇಶದ ವಿಶಾಖಪಟ್ನಂನಲ್ಲಿ ಜರುಗಿದೆ.

ಮುಖ್ಯರಸ್ತೆಯಲ್ಲಿ ನೂರಾರು ಸಾರ್ವಜನಿಕರ ಸಮ್ಮುಖದಲ್ಲಿಯೇ ವೈದ್ಯನ ಬಟ್ಟೆ ಬಿಚ್ಚಿಸಿ, ಕೈಕಟ್ಟಿ ಐದಾರು ಪೊಲೀಸರು ಹೊಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ, ಪೊಲೀಸರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ವೈದ್ಯ ಡಾ.ಸುಧಾಕರ್‌ ಆಗಿದ್ದು, ಅವರು ಮಾರ್ಚ್‌ ತಿಂಗಳಿನಲ್ಲಿ N-95 ಮಾಸ್ಕ್‌ಗಳ ಕೊರತೆಯಿದೆ. ಒಂದು ಮಾಸ್ಕ್‌ ಅನ್ನೇ ಹದಿನೈದು ದಿನಗಳ ಕಾಲ ಬಳಸಬೇಕಾಗಿದೆ ಎಂದು ದೂರಿದ್ದಕ್ಕಾಗಿ ಅವರನ್ನು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇಲೆ ಅಮಾನತ್ತು ಮಾಡಲಾಗಿತ್ತು.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಭಾಗಿಯಾದ, ಹಲ್ಲೆ ನಡೆಸಿದ ಪೊಲೀಸ್‌ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ವಿಶಾಖಪಟ್ನಂ ಪೊಲೀಸರ ಈ ಕೃತ್ಯವು ರಾಜಕೀಯ ಬಣ್ಣ ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷ ಟಿಡಿಪಿ, ಸಿಪಿಐ ಸೇರಿದಂತೆ ಹಲವು ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ಸಹೋದರರಲ್ಲಿ ಮನವಿ, ನೀವು ಎಷ್ಟು ಮಂದಿ ತಾಲಿ, ಥಾಲಿ ಅಥವಾ ಹೂ ದಳಗಳನ್ನು ನೆನಪಿಸಿಕೊಳ್ಳುತ್ತೀರಿ ಎಂದು ನನಗೆ ತಿಳಿದಿಲ್ಲ. ಆದರೆ ಅಧಿಕಾರಿಗಳ ನೈಜ ಮುಖವನ್ನು ಬಹಿರಂಗಪಡಿಸುವ ಡಾ.ಸುಧಾಕರ್ ಅವರ ಈ ವೀಡಿಯೊವನ್ನು ಮರೆಯಬೇಡಿ. ಅವರು ನಿಮ್ಮನ್ನು ಗೌರವಿಸುವುದಿಲ್ಲ. ಅವರ ಅಸಮರ್ಥತೆಗಾಗಿ ಬಲಿಪಶು ಮಾಡಲು ನಿಮ್ಮನ್ನು ಬಳಸಿಕೊಳ್ಳುತ್ತಾರೆ ಅಷ್ಟೇ. ನೀವು ನಿರಾಕರಿಸಿದರೆ ಈ ರೀತಿ ನಡೆಸಿಕೊಳ್ಳುತ್ತಾರೆ ಎಂದು ವೈದ್ಯರಾದ ಹರ್ಜಿತ್‌ ಸಿಂಗ್‌ ಭಟ್ಟಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಮಾತನಾಡಿ “ಅಕ್ಕಯ್ಯಪಾಲೇಂ ಬಳಿ ಡಾ.ಸುಧಾಕರ್‌ ಗೊಂದಲದ ವಾತಾವರಣ ಸೃಷ್ಟಿಸಿದ್ದಾರೆ. ಪೊಲೀಸರು ತಡೆಯಲು ಹೋದಾಗ ಅವರ ಮೊಬೈಲ್‌ ಕಿತ್ತು ಬಿಸಾಡಿದ್ದಾರೆ. ಆತ ಮದ್ಯಪಾನ ಮಾಡಿದ್ದು ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ವರ್ತಿಸಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗಾಗಿ ಕಿಂಗ್‌ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು” ಹೇಳಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರ ಮೇಲಿನ ಈ ಹಲ್ಲೆ ಕಂಡನಾರ್ಹ. ಈ ಪೊಲೀಸರಿಗೆ ತಕ್ಕ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...