HomeಮುಖಪುಟN-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

N-95 ಮಾಸ್ಕ್ ಕೊರತೆ ಬಗ್ಗೆ ದನಿಯೆತ್ತಿದ್ದ ವೈದ್ಯನಿಗೆ ಕೈಕಟ್ಟಿ, ಥಳಿಸಿದ ಪೊಲೀಸರು ; ತೀವ್ರ ಖಂಡನೆ

- Advertisement -
- Advertisement -

N-95 ಮಾಸ್ಕ್‌ಗಳ ಕೊರತೆ ಬಗ್ಗೆ ದನಿಯೆತ್ತಿದ್ದ ಕಾರಣಕ್ಕೆ ಅಮಾನತ್ತಾಗಿದ್ದ ವೈದ್ಯನನ್ನು ಪೊಲೀಸರು ರಸ್ತೆಯಲ್ಲಿ ಎಳೆದಾಡಿ, ಆತನ ಕೈ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ದುರ್ಘಟನೆ ಆಂಧ್ರಪ್ರದೇಶದ ವಿಶಾಖಪಟ್ನಂನಲ್ಲಿ ಜರುಗಿದೆ.

ಮುಖ್ಯರಸ್ತೆಯಲ್ಲಿ ನೂರಾರು ಸಾರ್ವಜನಿಕರ ಸಮ್ಮುಖದಲ್ಲಿಯೇ ವೈದ್ಯನ ಬಟ್ಟೆ ಬಿಚ್ಚಿಸಿ, ಕೈಕಟ್ಟಿ ಐದಾರು ಪೊಲೀಸರು ಹೊಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ, ಪೊಲೀಸರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ವೈದ್ಯ ಡಾ.ಸುಧಾಕರ್‌ ಆಗಿದ್ದು, ಅವರು ಮಾರ್ಚ್‌ ತಿಂಗಳಿನಲ್ಲಿ N-95 ಮಾಸ್ಕ್‌ಗಳ ಕೊರತೆಯಿದೆ. ಒಂದು ಮಾಸ್ಕ್‌ ಅನ್ನೇ ಹದಿನೈದು ದಿನಗಳ ಕಾಲ ಬಳಸಬೇಕಾಗಿದೆ ಎಂದು ದೂರಿದ್ದಕ್ಕಾಗಿ ಅವರನ್ನು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇಲೆ ಅಮಾನತ್ತು ಮಾಡಲಾಗಿತ್ತು.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಭಾಗಿಯಾದ, ಹಲ್ಲೆ ನಡೆಸಿದ ಪೊಲೀಸ್‌ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ವಿಶಾಖಪಟ್ನಂ ಪೊಲೀಸರ ಈ ಕೃತ್ಯವು ರಾಜಕೀಯ ಬಣ್ಣ ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷ ಟಿಡಿಪಿ, ಸಿಪಿಐ ಸೇರಿದಂತೆ ಹಲವು ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ಸಹೋದರರಲ್ಲಿ ಮನವಿ, ನೀವು ಎಷ್ಟು ಮಂದಿ ತಾಲಿ, ಥಾಲಿ ಅಥವಾ ಹೂ ದಳಗಳನ್ನು ನೆನಪಿಸಿಕೊಳ್ಳುತ್ತೀರಿ ಎಂದು ನನಗೆ ತಿಳಿದಿಲ್ಲ. ಆದರೆ ಅಧಿಕಾರಿಗಳ ನೈಜ ಮುಖವನ್ನು ಬಹಿರಂಗಪಡಿಸುವ ಡಾ.ಸುಧಾಕರ್ ಅವರ ಈ ವೀಡಿಯೊವನ್ನು ಮರೆಯಬೇಡಿ. ಅವರು ನಿಮ್ಮನ್ನು ಗೌರವಿಸುವುದಿಲ್ಲ. ಅವರ ಅಸಮರ್ಥತೆಗಾಗಿ ಬಲಿಪಶು ಮಾಡಲು ನಿಮ್ಮನ್ನು ಬಳಸಿಕೊಳ್ಳುತ್ತಾರೆ ಅಷ್ಟೇ. ನೀವು ನಿರಾಕರಿಸಿದರೆ ಈ ರೀತಿ ನಡೆಸಿಕೊಳ್ಳುತ್ತಾರೆ ಎಂದು ವೈದ್ಯರಾದ ಹರ್ಜಿತ್‌ ಸಿಂಗ್‌ ಭಟ್ಟಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ನಂ ಪೊಲೀಸ್‌ ಕಮಿಷನರ್‌ ಆರ್‌.ಕೆ ಮೀನಾ ಮಾತನಾಡಿ “ಅಕ್ಕಯ್ಯಪಾಲೇಂ ಬಳಿ ಡಾ.ಸುಧಾಕರ್‌ ಗೊಂದಲದ ವಾತಾವರಣ ಸೃಷ್ಟಿಸಿದ್ದಾರೆ. ಪೊಲೀಸರು ತಡೆಯಲು ಹೋದಾಗ ಅವರ ಮೊಬೈಲ್‌ ಕಿತ್ತು ಬಿಸಾಡಿದ್ದಾರೆ. ಆತ ಮದ್ಯಪಾನ ಮಾಡಿದ್ದು ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ವರ್ತಿಸಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗಾಗಿ ಕಿಂಗ್‌ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು” ಹೇಳಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರ ಮೇಲಿನ ಈ ಹಲ್ಲೆ ಕಂಡನಾರ್ಹ. ಈ ಪೊಲೀಸರಿಗೆ ತಕ್ಕ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....