Homeಮುಖಪುಟಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

ಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

- Advertisement -
- Advertisement -

ಈ ದೇಶದಾಗ ಲೋಕಲ್ ಅನ್ನೋ ಶಬ್ದಕ್ಕ ಬ್ಯಾರೆ ಬ್ಯಾರೆ ಕಡೆ ಬ್ಯಾರೆ ಬ್ಯಾರೆ ಅರ್ಥ ಅದಾವು. ಹಾವೇರಿ ಒಳಗ ಲೋಕಲ್ ಅಂದರ ದ್ಯಾಮನೂರು ಮೆಣಸಿನಕಾಯಿ, ಗುಲಬರ್ಗಾದಾಗ ಲೋಕಲ್ ಅಂದರ ಸಣ್ಣ ತೊಗರಿ ಬ್ಯಾಳಿ, ಮೈಸೂರಿನ್ಯಾಗ ಲೋಕಲ್ ಅಂದರ ಬನ್ನೂರು ಕುರಿ, ಇನ್ನ ಮುಂಬಯಿದಾಗ ಲೋಕಲ್ ಅಂದರ ಟ್ರೇನು.

ಹಂಗಾರ, ಹೋದ ಮಂಗಳವಾರ ಪಂತ ಪ್ರಧಾನರು ಠೀವಿಯೊಳಗ ಹೇಳಿದ ಲೋಕಲ್ ಅಂದರೆ ಏನು? ಅವರ ಭಾಷಣ ಇನ್ನೂ ಅರ್ಧ ಆಗಿರಲಿಲ್ಲ, ಆವಾಗನ ಐಟಿ ಸೆಲ್ಲಿನವರು ನೂರಾ ಎಂಟು ಮೀಮು ಮಾಡಿದರು. ಅವನ್ನು ನೀವು ಠೀವಿ ಪರದೆ ಬಿಟ್ಟು ನಿಮ್ಮ ಅಂಗೈಯೊಳಗಿನ ಪರದೆ ಮ್ಯಾಲೆ ಕಣ್ಣು ಹಾಕೋ ಕಿಂತ ಮುಂಚೆ

ಆ ಮೀಮುಗಳು ಒಂದು ಅಕ್ಷೋಷಿಣಿ ಸಂಖ್ಯೆಯೊಳಗ ಷೇರು, ಲೈಕು, ಕಮೆಂಟು ಆಗಿ ಹೋದವು.

ಅದರಾಗ ಒಂದು ಮೀಮು ʻಬಿ ವೋಕಲ್ ಅಬೌಟ್ ಲೋಕಲ್ʼ ಅಂತ ಇತ್ತು. ಅದನ್ನು ಪಂತ ಪ್ರಧಾನರು ಹೇಳಿರದಿದ್ದರೂ ಐಟಿ ಸೆಲ್ಲಿನವರು ಹೇಳಿದರು. ಒಮ್ಮೊಮ್ಮೆ ಇವರನ್ನ ನೋಡಿ ಅವರು ಮಾತಾಡತಾರೋ ಅಥವಾ ಅವರನ್ನು ನೋಡಿ ಇವರು ಮಾತಾಡತಾರೋ ಗೊತ್ತಾಗೋದಿಲ್ಲ. ಐಟಿ ಸೆಲ್ಲಿನವರ ಭಾಷಣ ಪಂತ ಪ್ರಧಾನರು ಬರೀತಾರೋ, ಅಥವಾ ಪಂತ ಪ್ರಧಾನರ ಭಾಷಣ ಐಟಿ ಸೆಲ್ಲಿನವರು ಬರೀತಾರೋ ಗೊತ್ತಿಲ್ಲ.

ಈ ಐಟಿ ಸೆಲ್ಲಿನವರು ಹಂಗ ಇದ್ದಾರ ಅಂದರ ನಮ್ಮ ನಾಯಕರು ನಮ್ಮದು ʻಸ್ವದೇಶಿ ಸಿದ್ಧಾಂತʼ ಅಂತ ಹೇಳಿದಾಗ ನಾವು ಚಪ್ಪಾಳೆ ಹೊಡೆಯೋ ಮಾಡತಾರ. ಸ್ವದೇಶಿ ಹಳೆಯದು, ಈಗ ಬೇಕಾಗಿರೋದು ʻಮೇಕ್ ಇನ್ ಇಂಡಿಯಾʼ ಅಂದಾಗುನೂ ಮಾಡತಾರ, ಕಡೀಕೆ ʻನಾವು ಆತ್ಮ ನಿರ್ಭರರಾಗಿ ಇರಬೇಕು. ನಾವೆಲ್ಲಾ ಲೋಕಲ್ ಕಡೆ ನೋಡಬೇಕುʼ ಅಂತ ಅಂದಾಗುನೂ ನಾವು ಅವರನ್ನ ಬೆಂಬಲಿಸೋಹಂಗ ಮಾಡತಾರ. ಅದು ಹೆಂಗ ಅಂದರ ತಲಿ ಅವರದು, ತಲಿ ಬುರಡಿ ನಮ್ಮದು. ಅಷ್ಟ ಆಗೋದರಾಗ ಬುರುಡಿ ಬಿಡೋರು ಯಾರು ಅಂತ ಗೊತ್ತಾಗೋದಿಲ್ಲ.

ಇರಲಿ, ಲೋಕಲ್ಲು ಅನ್ನೋದರ ಅರ್ಥ ʻಸ್ಥಳೀಯʼ, ʻಮಕಾಮಿʼ, ಅಥವಾ ʻತಾಲೂಕದಾರಿʼ ಅಂತ ಆಗತದ. ಹಂಗಂದರೇನು? ಹಂಗಂದರ ಸ್ಥಳೀಯರ ದುಡ್ಡು, ಅಧಿಕಾರ, ಅವರ ಜೀವಕ್ಕ ಸಂಬಂಧ ಪಟ್ಟ ನಿರ್ಧಾರಗಳನ್ನ ಅವರೇ ತೊಗೋಬೇಕು ಅನ್ನೋದು. ಅಧಿಕಾರ ಅನ್ನೋದು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳಿಗೆ ಹರಿದು ಬರಬೇಕು, ಆಡಳಿತದೊಳಗ ಸರಿಸಮನಾದ ಭಾಗಿದಾರಿ ಇರಬೇಕು. ಇದನ್ನ ಮಾಡಲಿಕ್ಕೆ ಈ ಸರಕಾರದವರು ತಯಾರು ಇದ್ದಾರೇನು?

ಮೊದಲಿಗೆ ಆ ಕಿತ್ತಳೆ ಪಕ್ಷದವರು ಒಕ್ಕೂಟ ವ್ಯವಸ್ಥೆಯೊಳಗ ನಂಬಿಕೆ ಇಟಗೋಬೇಕು. ಅದರ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಕೊಡಬೇಕು. ನೀತಿ ನಿರೂಪಣೆಯೊಳಗ, ಕಾರ್ಯಕ್ರಮ ಜಾರಿಯೊಳಗ ಭಾಗವಹಿಸಲಿಕ್ಕೆ ರಾಜ್ಯಗಳಿಗೆ ಅವಕಾಶ ಕೊಡಬೇಕು. ಇದನ್ನ ಇವರು ಈಗಂತೂ ಮಾಡಲಿಕ್ಕೆ ಹತ್ತಿಲ್ಲ. ಇವರು ಬಂದಾಗಿನಿಂದ ಕೇಂದ್ರೀಕರಣನ ಜಾಸ್ತಿ ಆಗೇದ ಹೊರತು ವಿಕೇಂದ್ರೀಕರಣ ಇಲ್ಲ. ಯಾರು ಏಕೋಪಾಧ್ಯಾಯ ಶಾಲೆ ರೀತಿಯೊಳಗ ಏಕ ವ್ಯಕ್ತಿ ಸರಕಾರ ನಡಸತಾರೋ, ಯಾರು ಇರೋಬರೋ ಅಧಿಕಾರನ್ನೆಲ್ಲಾ ಕೇಂದ್ರದ ಮಂತ್ರಿಮಂಡಲಕ್ಕಿಂತ ಪ್ರಧಾನಿ ಕಚೇರಿಯೊಂದರ ಒಳಗ ತುರುಕಿ ಬಿಟ್ಟಾರೋ, ಅವರು ಗ್ರಾಮ ಪಂಚಾಯಿತಿ ಮಟ್ಟಕ್ಕ ಅಧಿಕಾರ ವಿಕೇಂದ್ರೀಕರಣ ಮಾಡರಿ ಅಂದರ ಕೇಳತಾರ?

ಇನ್ನ ವಿಕೇಂದ್ರೀಕೃತ ಆರ್ಥಿಕತೆ. ಸರಳವಾಗಿ ಹೇಳಬೇಕಂದರ ಅದು ಹಳ್ಳೀ ಸಾಮಾನು ಹಳ್ಳಿಯೊಳಗ ಮಾರಾಟ ಆಗಬೇಕು, ಅನ್ನೂ ಸೂತ್ರದ ಮ್ಯಾಲೆ ನಿಂತಿರೋದು. ಇದರಾಗ ಇವರಿಗೆ ನಿಜವಾಗಿಯೂ ನಂಬಿಕೆ ಅದ ಏನು? ತಾವು ನೂರಾರು ವರ್ಷದಿಂದ ಹೇಳತಾ ಬಂದಿದ್ದ ಸ್ವದೇಶಿ ಸೂತ್ರವನ್ನು ಧಡಕ್ಕನೇ ಬದಲಾಯಿಸಿ ಮೇಕ್ ಇನ್ ಇಂಡಿಯಾ ತಂದವರು ಇವರು. ಭಾರತೀಯ ಕಂಪನಿಗೆ ಕಾರುಬಾರು-ಲಾಭ ಸಿಗಬೇಕು. ಅದಕ್ಕ ನೀವು ಕಾಲ್ಗೇಟು ಬಿಟ್ಟು ಉಪ್ಪಿನಿಂದ ಹಲ್ಲು ತಿಕ್ಕರಿ, ಹಾಲಿನಿಂದ ದಾಡಿ ಮಾಡಿಕೊಳ್ಳಿರಿ ಅಂತ ಹೇಳತಿದ್ದವರು ಏಕಾಏಕಿ ಯಾವ ದೇಶದ ಕಂಪನಿ ಆದರೇನು ಭಾರತದಾಗ ಕಾರಖಾನೆ ಹಾಕಿದರ ಸಾಕು ಅಂತ ಭಾರತದಲ್ಲಿ ತಯಾರಿಸಿ ಅಂತ ಫರಮಾನು ಕೊಟ್ಟರು. ಈಗ ಈ ಕೊರೋನಾದಾಗ ಅದು ಉಲ್ಟಾ ಹೊಡದಂಗ ಕಾಣೋದಕ್ಕ ಮತ್ತ ಲೋಕಲ್ಲಿಗೆ ಬಂದಾರ.

ಗ್ರಾಮ ಉದ್ಯೋಗ, ಖಾದಿ, ಹಳ್ಳಿಗಳ ಕಾಯಿಪಲ್ಯಾ ಸಂತಿ- ದನದ ಸಂತಿ, ಉತ್ಸವ- ಜಾತ್ರಿ- ತೇರು ಇವು ಈ ದೇಶದ ಆರ್ಥಿಕತೆಗೆ ಎಷ್ಟು ಕೊಡುಗೆ ಕೊಡತಿದ್ದವು ಅನ್ನೋದು ಎಲ್ಲಾರಿಗೂ ಮರತು ಹೋಗುವಂತೆ ಮಾಡಿ. ಬರೇ ಐಟಿ-ಬಿಟಿ, ಮೈನಿಂಗು, ಅದಾನಿ -ಅಂಬಾನಿ, ಮಾತ್ರ ಖರೇ. ಬ್ಯಾರೆ ಎಲ್ಲಾ ಸುಳ್ಳು ಅಂತ ನಮ್ಮನ್ನ ನಂಬಿಸಿದರು.

ಇವರು ಲೋಕಲ್ಲಿನ ಬಗ್ಗೆ ವೋಕಲ್ಲು ಆಗೋದನ್ನ ನಂಬಲಿಕ್ಕೆ ಸಾಧ್ಯ ಇಲ್ಲ.

ಹಂಗಾದರ ಇಷ್ಟು ದಿವಸ ಜಾಗತಿಕ ಮಟ್ಟದ ಯೋಚನೆ ಇಟಗೋರಿ, ಇಡೀ ಜಗತ್ತಿನ ಮಾರುಕಟ್ಟೆಯೊಳಗ ಸ್ಪರ್ಧೆ ಮಾಡೋವಂಥಾ ಉತ್ಪನ್ನ ತಯಾರು ಮಾಡ್ರಿ, ನಿಮ್ಮ ಐಟಿ, ಬಿಟಿ ಸೇವೆ ಹೆಂಗ ಇರಬೇಕು ಅಂದರ ಅದು ವಿಶ್ವದ ಇತರ ದೇಶಗಳನ್ನ ಸೋಲಿಸಿ ಮುಂಚೂಣಿಗೆ ಬರಬೇಕು, ಅಂತ ಭಾಷಣ ಕುಟ್ಟತಿದ್ದರಲ್ಲಾ ಅದು ಏನಾತು?

ʻʻಸ್ವಾತಂತ್ರ‍್ಯ ಅಂದರ ವಿಕೇಂದ್ರೀಕರಣ. ವಿಕೇಂದ್ರೀಕರಣ ಇಲ್ಲದಿದ್ದರೆ ಸ್ವಾತಂತ್ರ‍್ಯಕ್ಕೆ ಅರ್ಥ ಇಲ್ಲ.

ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಉಳಿಯದಿದ್ದರೆ ಈ ದೇಶ ಉಳಿಯೋದಿಲ್ಲʼʼ ಅಂತ ಹಿಂದೊಮ್ಮೆ ಇನ್ನೊಬ್ಬ ಗುಜರಾತಿ ನಾಯಕ ಹೇಳಿದ್ದರು. ಈ ದುರಿತ ಕಾಲದಾಗ ನಾವು ಆ ವಿಚಾರಗಳನ್ನು ನಮ್ಮ ಮುಂದ ಇಟ್ಟ ಮೋಹನದಾಸ ಗಾಂಧಿ ಅವರನ್ನು ನೆನಪು ಮಾಡಕೊಳ್ಳೋದು ನಮಗ ಸ್ವಲ್ಪವಾದರೂ ಸಮಾಧಾನ ತರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....