Homeಗೌರಿ ಕಣ್ಣೋಟಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಲಿಂಗ ತಾರತಮ್ಯ ಕುರಿತು ಮೆಚ್ಚುಗೆ ಪಡೆದ ಆಸ್ಟ್ರೇಲಿಯಾದ ಪ್ರಥಮ ಮಹಿಳಾ ಪ್ರಧಾನಿ ಜೂಲಿಯಾ ಭಾಷಣ

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರಿಸುತ್ತದೆ.

- Advertisement -
- Advertisement -

ಜೂಲಿಯಾ ಗಿಲ್ಲಾರ್ಡ್ ಆಸ್ಟ್ರೇಲಿಯಾ ದೇಶದ ಪ್ರಥಮ ಮಹಿಳಾ ಪ್ರಧಾನಿ. ವಿದ್ಯಾರ್ಥಿನಿ ಆಗಿದ್ದಾಗಲೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ ಜೂಲಿಯಾ ಸಮಾಜವಾದದಲ್ಲಿ ನಂಬಿಕೆ ಇಟ್ಟವಳು. ಆ ಕಾರಣಕ್ಕೆ ಆಸ್ಟ್ರೇಲಿಯಾದ ಎಡಪಂಥೀಯ ಒಲವನ್ನು ಹೊಂದಿರುವ ಲೇಬರ್ ಪಾರ್ಟಿಯನ್ನು ಸೇರಿಕೊಂಡು ಒಂದೊAದೇ ಮೆಟ್ಟಿಲುಗಳನ್ನು ಏರುತ್ತಾ ಹೋದರು. ಹಿಂದಿನ ಪ್ರಧಾನಿ ಕೆವಿನ್ ರುಡ್ ಅವರು ತಮ್ಮ ಲೇಬರ್ ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಾಗ ಜೂಲಿಯಾ ಅವರನ್ನು ಪ್ರಧಾನಿಯಾಗಿ ಆ ಪಕ್ಷದ ಸಂಸದರು ಮನಸಿಲ್ಲದ ಮನಸ್ಸಿನೊಂದಿಗೆ ಆಯ್ಕೆ ಮಾಡಿದ್ದರು. ಅವರ ಹಿಂಜರಿಕೆಗೆ ಕಾರಣ ಜೂಲಿಯಾ ಆ ಸ್ಥಾನಕ್ಕೆ ಬೇಕಾದ ಅರ್ಹತೆಗಳನ್ನು ಹೊಂದಿದ್ದಾರೋ ಇಲ್ಲವೂ ಎಂಬುದಾಗಿರಲಿಲ್ಲ. ಬದಲಾಗಿ ಈ ಮಹಿಳೆಗಿಂತ ಸೂಕ್ತವಾದ ಪುರುಷ ತಮ್ಮ ಮುಂದೆ ಇಲ್ಲವಲ್ಲ ಎಂಬ ಲಿಂಗ ತಾರತಮ್ಯ.

ಜೂಲಿಯಾ ಅವರಿಗೆ ಈಗ 51 ವರ್ಷ ವಯಸ್ಸು. ಮದುವೆ ಆಗಿರದ ಆಕೆ ಯಾವ ಮುಚ್ಚುಮರೆ ಇಲ್ಲದೆ ತನ್ನ ಪುರುಷ ಸಂಗಾತಿಯೊಂದಿಗೆ ವಾಸಿಸುತ್ತಿದ್ದಾರೆ. ಇತರೆ ದೇಶಗಳ ಮಹಿಳೆಯರಂತೆ ಜೂಲಿಯಾ ಕೂಡ ತನ್ನ ವೃತ್ತಿ ಬದುಕಿನಲ್ಲಿ ಲಿಂಗಬೇಧವನ್ನು ಎದುರಿಸುತ್ತಲೇ ಮುಂದೆ ಬಂದವರು. ಈಗ ಅವರು ಪ್ರಧಾನಿ ಆಗಿದ್ದರೂ ಆಕೆ ಮಹಿಳೆ ಆಗಿರುವುದರಿಂದಲೇ ಆಕೆಯನ್ನು ಟೀಕೆ ಮಾಡುವವರಿಗೆ ಲೆಕ್ಕವಿಲ್ಲ. ಜೂಲಿಯಾ ಅವರ ಆತ್ಮಸ್ಥೈರ್ಯವನ್ನು ಮುರಿದು ಹಾಕಲು ಆಕೆಯ ಟೀಕಾಕಾರರು ಮಾಡಿರುವ ಪ್ರಯತ್ನಗಳಲ್ಲಿ ಹಲವು ಹೇಸಿಗೆ ಹುಟ್ಟಿಸುವಂತಹವು. ಉದಾಹರಣೆಗೆ ಜೂಲಿಯಾ ಅವರು ಮಕ್ಕಳನ್ನು ಹೆತ್ತಿಲ್ಲ. ಅದನ್ನೇ ಅಸ್ತ್ರವಾಗಿಸಿಕೊಂಡು ಕೆಲವರು ಅವರನ್ನು “ಬೇಕಂತಲೇ ಬಂಜೆ ಆಗಿರುವವಳು’’ ಎಂದು ಜರಿಯುವ ಮಟ್ಟಕ್ಕೆ ಹೋಗಿದ್ದೂ ಉಂಟು. ಜೊತೆಗೆ “Ditch the Bitch’’ (ಈ ಹಾದರಗಿತ್ತಿಯನ್ನು ತೊಲಗಿಸಿ) ಎಂಬ ಕರೆ ಕೊಟ್ಟು ಆಕೆಯ ವಿರುದ್ಧ ಚುನಾವಣಾ ಪ್ರಚಾರವನ್ನೂ ಮಾಡಲಾಗಿತ್ತು.

ಜೂಲಿಯಾ ಮಾಡಿದ ಭಾಷಣ ಎಲ್ಲಾ ಪುರುಷ ಪ್ರಧಾನ ಸಮಾಜಗಳಲ್ಲಿ ಲಿಂಗಭೇದ ಮತ್ತು ಸ್ರೀದ್ವೇಷಿ ಚಿಂತನೆಗಳು ಹೇಗೆ ಹಾಸುಹೊಕ್ಕಿದೆ ಎಂದು ತೋರುವುದರಿಂದ ಅವರ ಸಾರಾಂಶವನ್ನು ಇಲ್ಲಿ ನೀಡುತ್ತಿದ್ದೇನೆ.

ನಾನು ಪ್ರಧಾನಿಯಾಗಿ ಈ ಕುರ್ಚಿಯಲ್ಲಿ ಕೂರುವ ನನ್ನ ಎದುರು ವಿರೋಧ ಪಕ್ಷದ ನಾಯಕರಾಗಿ ಕೂರುವ ಈ ಮನುಷ್ಯ ಮೊದಲಿನಿಂದಲೂ ಸ್ತ್ರೀದ್ವೇಷ ನೀತಿಯನ್ನೇ ಪ್ರದರ್ಶಿಸುತ್ತಾ ಬಂದಿದ್ದಾರೆ. ಉದಾಹರಣೆಗೆ ಒಮ್ಮೆ ಈ ಸಂಸತ್ತಿನಲ್ಲಿ ಮಾತನಾಡುತ್ತಾ ನಾನು ’ಗೌರವಾರ್ಹ ಮಹಿಳೆ’ಯಂತೆ ವರ್ತಿಸಬೇಕು ಎಂದಿದ್ದರು. ನನ್ನ ಜಾಗದಲ್ಲಿ ಪುರುಷನೊಬ್ಬ ಕೂತಿದ್ದರೆ ಆತನ ಬಗ್ಗೆ ಇಂತಹ ಪದಗಳನ್ನು ಉಪಯೋಗಿಸುತ್ತಿದ್ದರೆ? ಇಲ್ಲ. ವಿರೋಧ ಪಕ್ಷದ ನಾಯಕರು ಒಮ್ಮೆ ಸಂಸತ್ತಿನ ಹೊರಗಡೆ ನನ್ನ ವಿರುದ್ಧ ’Ditch the Bitch’ ಎಂದು ಬರೆಯಲಾಗಿದ್ದ ಪೋಸ್ಟರ್ ಪಕ್ಕ ನಿಂತರು. ಹಾಗೆಯೇ ಇನ್ನೊಮ್ಮೆ ನನ್ನನ್ನು ಯಾವುದೋ ಪುರಷನ ಹಾದರಗಿತ್ತಿ ಎಂದು ಬಣ್ಣಿಸಿದ್ದ ಪೋಸ್ಟರ್ ಪಕ್ಕ ನಿಂತರು. ಅದು ಮಹಿಳಾ ದ್ವೇಷ ನಿಲುವಲ್ಲದೆ ಇನ್ನೇನು? ಪ್ರತಿದಿನ, ಪ್ರತಿಹಂತದಲ್ಲಿ, ವಿವಿಧ ತರಹದಲ್ಲಿ ನಾನು ಈ ವ್ಯಕ್ತಿಯಿಂದ ಸ್ತ್ರೀದ್ವೇಷಿ ನಿಲುವನ್ನು, ಲಿಂಗಬೇಧ ತಾರತಮ್ಯವನ್ನು ಎದುರಿಸುತ್ತಿದ್ದೇನೆ.

ಇಂತಹ ಮನುಷ್ಯ ಈ ಸಂಸತನ್ನು ಪ್ರವೇಶಿಸಿ ಆಸ್ಟ್ರೇಲಿಯಾದ ಮಹಿಳೆಯರಲ್ಲಿ ಕ್ಷಮೆ ಕೇಳಿಲ್ಲ. ನನ್ನನ್ನು ಪದೇಪದೇ ಅವಮಾನಿಸಿದ್ದಕ್ಕೆ ನನಗೆ ಸಾರಿ ಹೇಳಿಲ್ಲ. ಆದರೆ ಇವತ್ತು ರಾಜಕೀಯ ದುರುದ್ದೇಶದಿಂದ ಮಹಿಳೆಯರ ಪರ ನಿಂತಿರುವುದಾಗಿ ಪೋಸು ಕೊಡುತ್ತಿದ್ದಾರೆ. ಇಂತಹ ಇಬ್ಬಂದಿ ನೀತಿಯನ್ನು ಯಾರೂ ಸಹಿಸಕೂಡದು.

ಆಕೆಯ ಭಾಷಣ ನನಗೆ ಇಷ್ಟವಾಗಿದ್ದರಿಂದ ಅದರ ಮುಖ್ಯ ಭಾಗಗಳನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ….

– ಗೌರಿ ಲಂಕೇಶ್

ಅಕ್ಟೋಬರ್ 31, 2012


ಇದನ್ನೂ ಓದಿ: ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...