Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...