Homeಮುಖಪುಟಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

ಕೊರೊನಾ ಮತ್ತು ಲಾಕ್‌ಡೌನ್‌ಅನ್ನು ಅರ್ಥ ಮಾಡಿಕೊಂಡು ಸರಿಯಾದ ಯೋಜನೆಗಾಗಿ ಆಗ್ರಹಿಸುವ ಈ ಅಧ್ಯಯನದಲ್ಲಿ ನೀವೂ ಭಾಗಿಯಾಗಬಹುದು

- Advertisement -
- Advertisement -

(ಮೊದಮೊದಲು ಯಾರಿಗೂ ಈ ಕೊರೊನಾ ಎದುರಿಸುವ ನಿರ್ದಿಷ್ಟ ಬಗೆ ಗೊತ್ತಿರಲಿಲ್ಲ ಎಂಬುದು ಸರಿ. ಹಾಗಾಗಿ ಎಲ್ಲವನ್ನೂ ಪ್ರಯೋಗ ಮಾಡಿಯೇ ಕಲಿಯಬೇಕಿತ್ತು. ಆದರೆ, ಈಗ ಎಷ್ಟೋ ದೇಶಗಳ ಎಷ್ಟೋ ಬಗೆಯ ಪ್ರಯೋಗಗಳಿಂದ ಸಕಾರಾತ್ಮಕ ಮತ್ತು ನಕಾರಾತ್ಮಕ ಪಾಠಗಳು ಸಿಕ್ಕಿವೆ. ಭಾರತದ್ದೂ ಅನುಭವ ಈಗ ದಕ್ಕಿದೆ. ಈಗಲೂ ಗೊತ್ತಿರದ ಸಂಗತಿಗಳಿದ್ದಾವಾದರೂ, ಗೊತ್ತಿರುವ ಅಂಶಗಳ ಆಧಾರದ ಮೇಲೆ ಯಾವ ಅಭಿಪ್ರಾಯಗಳಿಗೆ ಬರಲಾಯಿತು ಎಂದೂ ಹೇಳಬೇಕಾದವರು ಹೇಳುತ್ತಿಲ್ಲ. ಹಾಗಾಗಿ ಈಗ ಅನುಸರಿಸಲಾಗುತ್ತಿರುವ ದಾರಿ ಎಷ್ಟು ಸರಿ ಎಷ್ಟು ತಪ್ಪು ಎಂದೂ ಹೇಳಲಾಗುತ್ತಿಲ್ಲ.)

ಈ ಹಿನ್ನೆಲೆಯಲ್ಲಿ ಪ್ರಪಂಚದ ವಿವಿಧ ಭಾಗಗಳ ಅನುಭವಗಳನ್ನು ಒಂದೆಡೆ ತಂದು, ಈ ಕುರಿತು ವಿವಿಧ ತಜ್ಞರು ಏನು ಹೇಳಿದ್ದಾರೆಂಬುದನ್ನೂ ನಿಕಷಕ್ಕೆ ಒಡ್ಡಿ ಖಚಿತವಾದ ಕೆಲವು ಅಭಿಪ್ರಾಯಗಳಿಗೆ ಬರಬೇಕಿದೆ. ಗಮನಿಸಿ: ನಾವು ನಮ್ಮ ತರ್ಕ ಬುದ್ಧಿಯನ್ನು ಒಂದಷ್ಟು ಬಳಸಬಹುದಾದರೂ ಅಂತಿಮವಾಗಿ ತಜ್ಞರ ಅನಿಸಿಕೆಗಳ ಆಧಾರದ ಮೇಲೆಯೇ ತೀರ್ಮಾನಿಸಬೇಕು. ನಮಗೆ ಇನ್ನೂ ಸ್ಪಷ್ಟವಾಗಿರದುದರ ಕುರಿತು ಕೆಲವು ಪ್ರಶ್ನೆಗಳನ್ನು ಇಲ್ಲಿ ಹಾಕಿಕೊಳ್ಳಲಾಗಿದೆ. ಈ ಅಧ್ಯಯನದಲ್ಲಿ ನೀವೂ ಭಾಗಿಯಾಗುತ್ತಾ ಹೋದರೆ, ಭಾರತವು ಕೊರೊನಾವನ್ನು ಹೇಗೆ ಎದುರಿಸಬೇಕು ಎಂಬುದು ನಿಮಗೂ ಗೊತ್ತಾಗುತ್ತದೆ. ಅಂತಿಮವಾಗಿ ಭಾರತೀಯರಾದ ನಾವು ಸಮಷ್ಟಿ ತಿಳುವಳಿಕೆಯಿಂದ ಕೊರೊನಾವನ್ನು ಎದುರಿಸಿ ಗೆಲ್ಲಲು ಸಾಧ್ಯವಾಗಬೇಕು ಎಂಬುದೇ ಈ ಅಧ್ಯಯನದ ಆಶಯ)

ದೇಶವು ಮಾರ್ಚ್ 24ರಿಂದ ಇಲ್ಲಿಯವರೆಗೆ ಮೂರು ಸಾರಿ ವಿಸ್ತರಣೆಯಾದ ಲಾಕ್‌ಡೌನ್‌ಅನ್ನು ಅನುಭವಿಸಿದೆ. ಮೇ 17ರಂದು ಅದು ಬಹಳಷ್ಟು ಸಡಿಲವಾಗಿದೆ.  ಪ್ರಧಾನಿಗಳು ‘ಹೊಸ ನಿಯಮಗಳೊಂದಿಗೆ 4ನೇ ಬಗೆಯ ಲಾಕ್‌ಡೌನ್’ ಮುಂದುವರೆಯಲಿದೆ ಎಂದು ಹೇಳಿದಾಗ, ಮುಂದಿನ ದಿನಗಳು ಹೇಗಿರುತ್ತವೆ ಎಂಬುದು ಅಸ್ಪಷ್ಟವಾಗಿ ಇತ್ತಾದರೂ, ಈಗ ಅದು ಹೆಚ್ಚಿನಂಶ ಸಡಿಲವಾಗುವ ಲಕ್ಷಣಗಳು ಕಂಡು ಬಂದಿದೆ. ಪ್ರಪಂಚದಾದ್ಯಂತ ಹಲವು ದೇಶಗಳು ವಿವಿಧ ರೀತಿಯ ಲಾಕ್‌ಡೌನ್‌ಅನ್ನು ಜಾರಿಗೊಳಿಸಿದ್ದವು. ಅಂತಿಮವಾಗಿ ಈ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ಬೇರೆ ಬೇರೆ ಮಟ್ಟದ ಯಶಸ್ಸಿನೊಂದಿಗೆ ಲಾಕ್‌ಡೌನ್‌ನಿಂದ ಹೊರಬರುತ್ತಿವೆ.

ಭಾರತದಲ್ಲಿ ಬಹಳಷ್ಟು ಸಂಕಷ್ಟ, ಒತ್ತಡ, ಸಾವು ಮತ್ತು ಹಸಿವನ್ನು ಈ ಅವಧಿಯಲ್ಲಿ ನಾವು ನೋಡಿದೆವು. ಅವೆಲ್ಲವೂ ವೈರಸ್‌ನಿಂದ ಆಗಿರಲಿಲ್ಲ. ಸಾವುಗಳು ಹೆಚ್ಚಾಗಿ ವೈರಸ್‌ನಿಂದ ಆಗಿರಬಹುದಾದರೂ, ಸಂಕಷ್ಟ ಮತ್ತು ಹಸಿವು ಲಾಕ್‌ಡೌನ್ ಅಳವಡಿಸಿದ ರೀತಿಯಿಂದಾಗಿತ್ತು. ಹಾಗಾಗಿ ಇಲ್ಲಿ ನಾವು ಹಾಕಿಕೊಳ್ಳುತ್ತಿರುವ ಪ್ರಶ್ನೆಗಳು ಕೊರೊನಾ ಸೋಂಕಿನ ನಿರ್ವಹಣೆಯ ಜೊತೆಗೆ ಲಾಕ್‌ಡೌನ್ ಕುರಿತಾಗಿಯೂ ಇರುತ್ತದೆ.

ನಾವು ಹಾಕಿಕೊಂಡಿರುವ ಪ್ರಶ್ನೆಗಳು ಇವು……

1. ಭಾರತವು ಸಾಕಷ್ಟು ಮುಂಚೆ ಸಮಯಸ್ಫೂರ್ತಿಯಿಂದ ಮಧ್ಯಪ್ರವೇಶಿಸಿತೇ?

2. ಕೋವಿಡ್ 19ಅನ್ನು ಭಾರತದಲ್ಲಿ ನಿಗ್ರಹಿಸಲು ಲಾಕ್‌ಡೌನ್ ಅತ್ಯುತ್ತಮ ವಿಧಾನವಾಗಿತ್ತೇ?

3. ಒಂದು ವೇಳೆ ಲಾಕ್‌ಡೌನೇ ಅಂದಿನ ಸಂದರ್ಭದಲ್ಲಿ ಸೂಕ್ತವಾಗಿತ್ತು ಎನ್ನುವುದಾದರೆ, ಭಾರತವು ಅದಕ್ಕೆ ಸೂಕ್ತವಾದ ಯೋಜನೆ ಮಾಡಿಕೊಂಡಿತ್ತೇ?

4. ಸಾಂಕ್ರಾಮಿಕವನ್ನು ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರಿಯಾಗಿತ್ತೇ?

5. ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಪರೀಕ್ಷೆಗಳ (ಟೆಸ್ಟ್) ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಾಯಿತೇ?

6. ಲಾಕ್‌ಡೌನ್ ಸಡಿಲಿಸಿದಾಗ ದಿಢೀರನೆ ಹೆಚ್ಚಾಗುವ ಕೊರೊನಾ ಕೇಸುಗಳನ್ನು ಎದುರಿಸಲು ವೈದ್ಯಕೀಯ ವ್ಯವಸ್ಥೆ ಸಜ್ಜಾಗಿದೆಯೇ? ಆಗಿದ್ದರೆ ಎಷ್ಟರಮಟ್ಟಿಗೆ ಆಗಿದೆ?

7. ವೈದ್ಯಕೀಯ ವ್ಯವಸ್ಥೆಯ ಸಿದ್ಧತೆಯ ವಿಚಾರದಲ್ಲಿ ಕರ್ನಾಟಕ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ?

8. ಟೆಸ್ಟ್‌ಗಳನ್ನು ಮಾಡುವ ವಿಚಾರದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಹೇಗಿದೆ?

9. ಕರ್ನಾಟಕವು ಸಾಂಕ್ರಾಮಿಕವನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಒಟ್ಟಾರೆ ಕ್ರಮಗಳು ಯಾವ ಪ್ರಮಾಣದ ಯಶಸ್ಸನ್ನು ತಂದಿದೆ?

10. ಇವೆಲ್ಲದರ ಆಧಾರದ ಮೇಲೆ ನಾವು ಯಾವ ಶಿಫಾರಸ್ಸುಗಳನ್ನು ಸರ್ಕಾರದ ಮುಂದಿಡಬಹುದು?

ಇವೆಲ್ಲಕ್ಕೂ ಸ್ಪಷ್ಟವಾದ ವೈಜ್ಞಾನಿಕವಾದ (ಅಂದರೆ ಅಧ್ಯಯನ ಮತ್ತು ನಿರ್ದಿಷ್ಟ ಅನುಭವದಿಂದ ಸಿದ್ಧವಾದ) ಸಂಗತಿಗಳ ಮೇಲೆಯೇ ತೀರ್ಮಾನಕ್ಕೆ ಬರಬೇಕು. ಅಂತಹ ಅಧ್ಯಯನವು ಈಗಾಗಲೇ ಆರಂಭವಾಗಿದ್ದು, ಇದರಲ್ಲಿ ಕೈ ಜೋಡಿಸಬಹುದಾದವರೆಲ್ಲರಿಗೆ ಸ್ವಾಗತ.

ಆಸಕ್ತರು [email protected], [email protected] ಈ ಇಮೇಲ್‌ಗಳನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...