Homeಮುಖಪುಟರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್!

ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್!

ಓರ್ವ ಪತ್ರಕರ್ತ ತನಗೆ ಸಿಕ್ಕ ಇಂತಹ ಅವಕಾಶದಲ್ಲಿ ಎಂತಹಾ ಅದ್ಭುತ ಪ್ರಶ್ನೆ ಕೇಳಬಹುದಿತ್ತು. ಆದರೆ, ರಂಗನಾಥ್ ಭಾರದ್ವಾಜ್ ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತೆ? ಇಲ್ಲಿದೆ ನೋಡಿ ಪೂರ್ಣ ಸಂವಾದ.

- Advertisement -
- Advertisement -

ಕನ್ನಡದ ನಂಬರ್-1 ಸುದ್ದಿ ವಾಹಿನಿಯೆಂದು ಹೇಳಿಕೊಳ್ಳುವ ಚಾನೆಲ್‌ನ ಪ್ರಧಾನ ನಿರ್ಮಾಪಕ ರಂಗನಾಥ್ ಭಾರದ್ವಾಜ್ ಇದೀಗ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದ್ದಾರೆ. ಅವರು ಇಂದು ಬೆಳಿಗ್ಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನಡೆಸಿದ ಆನ್‌ಲೈನ್‌ ಪತ್ರಿಕಾಗೋಷ್ಠಿಯಲ್ಲಿ ರಾಹುಲ್‌ ಗಟ್ಸ್‌ ಪರೀಕ್ಷಿಸಿಲು ಹೋಗಿ, ತಾವೇ ಅಪಹಾಸ್ಯಕ್ಕೊಳಗಾದ ಘಟನೆ ಜರುಗಿದೆ.

ಇಂದು ಬೆಳಗ್ಗೆಯಿಂದ ಟಿವಿ9 ಸುದ್ದಿ ವಾಹಿನಿ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಬೆಳಗ್ಗೆಯಿಂದ ಪ್ರೋಮೋ ಒಂದನ್ನು ಪ್ರಸಾರ ಮಾಡಲಾಗುತ್ತಿದೆ. ಈ ಪ್ರೋಮೋದ ಶೀರ್ಷಿಕೆ “ಟಿವಿ9 ಪ್ರಧಾನ ನಿರ್ಮಾಪಕ ರಂಗನಾಥ್ ಭಾರದ್ವಾಜ್ ಪ್ರಶ್ನೆಗೆ ತಬ್ಬಿಬ್ಬಾದ ರಾಹುಲ್ ಗಾಂಧಿ” ಎಂಬುದಾಗಿತ್ತು. ಅಲ್ಲದೇ ರಾಹುಲ್‌ಜೀ ಗಟ್ಸ್‌ ತೋರಿಸಿ ಎಂಬ ಪೋಸ್ಟರ್‌ ಸಾಕಷ್ಟು ಸಂಖ್ಯೆಯಲ್ಲಿ ವೈರಲ್‌ ಮಾಡಲಾಗಿತ್ತು.

ಅಸಲಿಗೆ ಈ ಪ್ರೋಮೋವನ್ನು ಒಮ್ಮೆ ನೋಡಿದವರು ಅಬ್ಬಬ್ಬಾ..! ಭಾರದ್ವಾಜರು ರಾಹುಲ್ ಗಾಂಧಿ ಬೆವರಿಳಿಸಿಬಿಟ್ಟಿದ್ದಾರೆ ಎಂದೇ ಅಂದುಕೊಂಡಿದ್ದರೂ ಅಚ್ಚರಿ ಇಲ್ಲ. ಆದರೆ, ಆ ಸಂದರ್ಶನದ ಇಡೀ ವಿಡಿಯೋ ಫೂಟೇಜ್ ನೋಡಿದರೆ ಮಾತ್ರ ಸುದ್ದಿ ಅಥವಾ ಘಟನೆಯೊಂದನ್ನು ತಿರುಚುವುದರಲ್ಲಿ ನಮ್ಮ ಸುದ್ದಿ ಮಿತ್ರರು ಎಷ್ಟು ನಿಷ್ಣಾತರು ಎಂಬುದು ಅರಿವಿಗೆ ಬರುತ್ತದೆ. ಅಷ್ಟೇ ಅಲ್ಲ ರಂಗನಾಥ್ ಭಾರದ್ವಾಜ್ ಮತ್ತು TV9 ಬಣ್ಣವೂ ಬಯಲಾಗುತ್ತದೆ.

ನಡೆದುದ್ದಾದರೂ ಏನು?

ಇಂದಿನ ರಾಹುಲ್‌ ಆನ್ಲೈನ್ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಚಾನೆಲ್‌ಗಳ ಪೈಕಿ ಟಿವಿ9 ಸಹ ಒಂದು. ಪ್ರಶ್ನೆ ಕೇಳುವ ಸರದಿ ಪತ್ರಕರ್ತ ರಂಗನಾಥ್ ಭಾರದ್ವಾಜ್ ಅವರದಿತ್ತು. ಓರ್ವ ಪತ್ರಕರ್ತ ತನಗೆ ಸಿಕ್ಕ ಇಂತಹ ಅವಕಾಶದಲ್ಲಿ ಎಂತಹಾ ಅದ್ಭುತ ಪ್ರಶ್ನೆ ಕೇಳಬಹುದಿತ್ತು. ಆದರೆ, ರಂಗನಾಥ್ ಭಾರದ್ವಾಜ್ ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತೆ? ಇಲ್ಲಿದೆ ನೋಡಿ ಪೂರ್ಣ ಸಂವಾದ.

ಭಾರದ್ವಾಜ್‌: ರಾಹುಲ್‌ ಜಿ ನಮಸ್ಕಾರ್‌, ಬ್ಲೂ ಬ್ಯಾಕ್‌ಗ್ರೌಂಡ್‌, ಬ್ಲಾಕ್‌ ಶರ್ಟ್‌ (ನೀಲಿ ಬ್ಯಾಕ್‌ಗ್ರೌಂಡ್‌ನಲ್ಲಿದ್ದು, ಕಪ್ಪು ಅಂಗಿ ಧರಿಸಿದ್ದೇನೆ ಎಂದರು.)

ರಾಹುಲ್‌; ಗೊತ್ತಾಯಿತು, ಗೊತ್ತಾಯಿತು? (ಜೂಮ್‌ನಲ್ಲಿ ಮಾತನಾಡುವವರ ವಿಡಿಯೋ ಪೂರ್ಣ ಬರುತ್ತದೆ. ಅದು ಉಳಿದವರಿಗೆಲ್ಲಾ ಕಾಣುತ್ತದೆ. ಆದರೆ ಅಷ್ಟು ಸಾಮಾನ್ಯ ಜ್ಞಾನ ಕೂಡ ರಂಗನಾಥ್‌ ಭಾರದ್ವಾಜ್‌ರವರಿಗೆ ಇಲ್ಲದಿರುವುದು ದುರಂತ)

ನಾನು ಕರ್ನಾಟಕದಿಂದ ಮಾತನಾಡುತ್ತಿದ್ದೇನೆ. ನಿಮಗೆ ಕರ್ನಾಟಕ ಗೊತ್ತಿದೆ. ನಿಮ್ಮ ತಾಯಿ ಇಲ್ಲಿಂದ ಗೆದ್ದಿದ್ದರು. ಕರ್ನಾಟಕದ ಬಳ್ಳಾರಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಹಾಗೆಯೇ ನಿಮ್ಮ ಅಜ್ಜಿ ಇಂದಿರಾ ಗಾಂಧಿಯವರು ಚಿಕ್ಕಮಗಳೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು. ನಾನು ಕೊರೊನಾ, ಕೇಂದ್ರ ಸರ್ಕಾರ ಮತ್ತು ಆರ್ಥಿಕ ಸ್ಥಿತಿಗತಿ ಬಗ್ಗೆ ಮಾತಾನಾಡುವುದಿಲ್ಲ. ನಾನು ರಾಹುಲ್‌, ರಾಜ್ಯ ಕಾಂಗ್ರೆಸ್‌ ಮತ್ತು ಒಟ್ಟಾರೆ ಕಾಂಗ್ರೆಸ್‌ನ ಸ್ಥಿತಿಗತಿ ಬಗ್ಗೆ ಮಾತನಾಡುತ್ತೇನೆ. ನನಗೆ ಯಾವುದೇ ತೊಂದರೆಯಿಲ್ಲದೆ ಮೂರು ನಿಮಿಷಗಳ ಸಂಪೂರ್ಣ ಸಮಯ ನೀಡಬೇಕು.

ರಾಹುಲ್‌: ಭಯ್ಯಾ ಇದು ಪತ್ರಿಕಾಗೋಷ್ಠಿ, ನಿಮಗೆ ಮಾತನಾಡಬೇಕಿನಿಸಿದರೆ ಆನಂತರ ನಾನು ನಿಮ್ಮೊಡನೆ ಮಾತನಾಡುತ್ತೇನೆ. ನಿಮ್ಮ ಪ್ರಶ್ನೆಗಳಿದ್ದರೆ ಕೇಳಿ.

ಭಾರದ್ವಾಜ್‌: ನಾನು ಇಂದಿರಾಗಾಂಧಿಯವರ ಒಂದು ಉದಾಹರಣೆಯೊಂದಿಗೆ ಮೂರು ನಿಮಿಷ ಮಾತನಾಡುತ್ತೇನೆ.

ರಾಹುಲ್‌ ಸಹಾಯಕ: ಸಾಧ್ಯವಿಲ್ಲ, ಇನ್ನೂ 20 ಜನ ಕಾಯುತ್ತಿದ್ದಾರೆ.

ರಾಹುಲ್‌: ತುಂಬಾ ಜನ ಕಾಯುತ್ತಿದ್ದಾರೆ. ನಿಮ್ಮ ಪ್ರಶ್ನೆ ಚಿಕ್ಕದಾಗಿ ಕೇಳಿ.

ಭಾರದ್ವಾಜ್‌; ಮೊದಲನೆಯೇದಾಗಿ ಇಂದಿರಾಗಾಂಧಿ ಬಿಹಾರದಿಂದ ಗೆದ್ದಿದ್ದರು. ಎರಡನೇದಾಗಿ 1999ರಲ್ಲಿ ಕರ್ನಾಟಕದಲ್ಲಿ ಜನತಾ ಪರಿವಾರವನ್ನು ದೂರಮಾಡಿ ಕಾಂಗ್ರೆಸ್‌ ಬಂದಿತ್ತು. ಮೂರನೇಯದಾಗಿ 2013ರಲ್ಲಿ ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದು ಎಂತಹ ಫಲಿತಾಂಶ ನೀಡಿದೆ ನಿಮಗೆ ಗೊತ್ತು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ ಲೋಕದಲ್ಲಿ… (ನಮಗೆ ಅರ್ಥ ಆಗಿಲ್ಲ) ನೀವು ಹೀರೋ ಆಗುತ್ತೀರಿ.

ನಿಮ್ಮ ಬಳಿ ದೊಡ್ಡ ಪಕ್ಷ ಇದೆ. ಪಕ್ಷಕ್ಕೆ ಇತಿಹಾಸವಿದೆ. ಇಷ್ಟೆಲ್ಲಾ ದೊಡ್ಡ ಕಾರ್ಯಕರ್ತರಿರುವಾಗ ನೀವು ಹೆಚ್ಚು ಗಟ್ಸ್‌ ತೋರಿಸಬೇಕು. ಇದು ನನ್ನ ಸಿನ್ಸಿಯರ್‌ ರಿಕ್ವೆಸ್ಟ್‌. ನಾನು ಒಂದು ಉದಾಹರಣೆ ಕೊಡುತ್ತೇನೆ. ಡಿಕೆ ಶಿವಕುಮಾರ್‌ ರವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೀರಿ. …(ನಮಗೆ ಅರ್ಥ ಆಗಿಲ್ಲ) ನನ್ನ ಸಿನ್ಸಿಯರ್‌ ರಿಕ್ವೆಸ್ಟ್‌ ನಿಮ್ಮ ಬಳಿ ಎಲ್ಲವೂ ಇದೆ. ನೀವು ನಾಯಕರಾಗಿ, ವಿರೋಧ ಪಕ್ಷದ ನಾಯಕರಾಗಿ. ಜನ ನಿಮ್ಮ ಜೊತೆಗಿರುತ್ತಾರೆ.

ರಾಹುಲ್‌ ಗಾಂಧಿ: ಧನ್ಯವಾದಗಳು

ರಾಹುಲ್‌ ಸಹಾಯಕ: ನಿಮ್ಮ ಸಲಹೆಗೆ ಧನ್ಯವಾದಗಳು.

ಇಷ್ಟು ಮಾತನಾಡಿರುವ ಅವರ ಮೂರುವರೆ ನಿಮಿಷಗಳ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಇದರಲ್ಲಿ ಪ್ರಶ್ನೆ ಎಲ್ಲಿದೆ ಎಂದು ಟ್ರೋಲ್‌ ಮಾಡಲಾಗಿದೆ. ಅವುಗಳಲ್ಲಿ ಕೆಲವೊಂದು ಇಲ್ಲಿವೆ ನೋಡಿ.

ಒಂದು ರಾಷ್ಟ್ರೀಯ ಪಕ್ಷದ ನಾಯಕ ರೀಜನಲ್ ಮೀಡಿಯಾ ಉದ್ದೇಶಿಸಿ ಪತ್ರಿಕಾಗೋಷ್ಠಿ ಮಾಡ್ತಾರೆ ಅಂದ್ರೆ ಪತ್ರಕರ್ತನ ಪ್ರಶ್ನೆ ಹೇಗಿರಬೇಕು? ಇಂಗ್ಲಿಷ್…

Posted by Dinesh Kumar Dinoo on Sunday, May 17, 2020

 

ಭಾರದ್ವಾಜ್‌ ಇಷ್ಟಕ್ಕೆ ಸುಮ್ಮನಾಗಿದ್ದರೆ ಚನಾಗಿರ್ತಿತ್ತೇನೋ? ಆದರೆ, ಆತ ಅದನ್ನೇ ಪ್ರೋಮೋ ಮಾಡಿ ರಂಗನಾಥ್ ಭಾರದ್ವಾಜ್ ಪ್ರಶ್ನೆಗೆ ತಬ್ಬಿಬ್ಬಾದ ರಾಹುಲ್ ಗಾಂಧಿ ಎಂದು ಶೀರ್ಷಿಕೆ ನೀಡಿ ಪ್ರಸಾರ ಮಾಡಿಬಿಟ್ಟರು. ಪರಿಣಾಮ ಸಾಮಾಜಿಕ ಜಾಲತಾಣದಲ್ಲಿ ಭಾರದ್ವಾಜರನ್ನು ಮತ್ತೊಮ್ಮೆ ಟ್ರೋಲ್ ಮಾಡಲಾಗುತ್ತಿದೆ. ನೈಜ ವಿಡಿಯೋ ಫೂಟೇಜ್ ನೋಡಿದ ಹಲವು ಪತ್ರಕರ್ತರು ಅಸಲಿಗೆ ಆ ಫೂಟೇಜ್‌ನಲ್ಲಿ ಪ್ರಶ್ನೆ ಎಲ್ಲಿದೆ? ಎಂದು ಭಾರದ್ವಾಜರ ಕಾಲೆಳೆಯಲು ಮುಂದಾಗಿದ್ದಾರೆ.

ರಾಹುಲ್ ಗಾಂಧಿ ಇವತ್ತು ಭಾಗವಹಿಸಿ‌ದ ಪತ್ರಿಕಾಗೋಷ್ಠಿಯಲ್ಲಿ 'TV9ಕನ್ನಡ'ದ ರಂಗನಾಥ್ ಭಾರದ್ವಾಜ್‌ರವರ ಪ್ರಶ್ನೆ. (ಪ್ರಶ್ನೆ ಎಲ್ಲಿದೆ ಅಂತ ಕೇಳ್ಬೇಡಿ)

Posted by Yashwin Kanchan on Saturday, May 16, 2020

ಅನೇಕ ಪತ್ರಕರ್ತರು ಸಾಮಾಜಿಕ ಜಾಲತಾಣದಲ್ಲಿ ಇದೀಗ ಭಾರದ್ವಾಜರನ್ನು ತಗಲಾಕಿಕೊಂಡಿದ್ದಾರೆ. ಹೀಗೆ ಭಾರದ್ವಾಜರ ಕಾಲೆಳೆದ ಹಿರಿಯ ಪತ್ರಕರ್ತರ ಪೈಕಿ ಸಹ್ಯಾದ್ರಿ ನಾಗರಾಜ್ ಅವರ ಫೇಸ್ಬುಕ್ ವಾಲ್ನಲ್ಲಿ ಬರೆದ ಕುತೂಹಲಕಾರಿ ಬರಹ ಇಲ್ಲಿದೆ…! ಆಸಕ್ತಿಯೊಂದಿಗೆ ಓದಿಕೊಳ್ಳಿ.

ಕನ್ನಡ ಸುದ್ದಿವಾಹಿನಿ ಟಿವಿ9ನ ಪ್ರಧಾನ ನಿರ್ಮಾಪಕ (ನಾವೆಲ್ಲ ಸಂಪಾದಕ ಅಂದ್ಕೊಂಡಿದ್ವಿ ಮರ್ರೆ!) ರಂಗನಾಥ್ ಭಾರದ್ವಾಜ್, ರಾಜಕಾರಣಿ ರಾಹುಲ್ ಗಾಂಧಿ ಜೊತೆ ನಡೆಸಿದ ಕೊರೊನಾ ಪತ್ರಿಕಾಗೋಷ್ಠಿಯ ಮಾತುಕತೆ ವೈರಲ್ ಆಗಿದೆ. ಈ ಮಾತುಕತೆ ಒಳ್ಳೆಯ ಮನರಂಜನಾ ಸರಕಾಗಿಯೂ ಹೆಸರು ಪಡೆದುಕೊಳ್ಳುತ್ತಿದ್ದು, ರಾಷ್ಟ್ರಮಟ್ಟದಲ್ಲಿ ‘ಟಿವಿ9 ಕರ್ನಾಟಕ’ ವಾಹಿನಿಯ ಮಾನ ಯಶಸ್ವಿಯಾಗಿ ಹರಾಜಾಗುತ್ತಿದೆ. ಈ ಘಟನೆಯಿಂದ ಗ್ರಹಿಸಬಹುದಾದ ನಾಲ್ಕು ಸರಳ ಸಂಗತಿಗಳು ಇಲ್ಲಿವೆ.

#ಒಂದು: ‘ಪತ್ರಿಕಾಗೋಷ್ಠಿ’ ಎಂದರೇನು ಎಂಬುದೇ ಈ ವಾಹಿನಿಯ ‘ಪ್ರಧಾನ ನಿರ್ಮಾಪಕ’ನಿಗೆ ಗೊತ್ತಿಲ್ಲ.

#ಎರಡು: ರಾಷ್ಟ್ರೀಯ ಪಕ್ಷವೊಂದರ ರಾಜಕಾರಣಿಯೊಬ್ಬ ‘ಪತ್ರಿಕಾಗೋಷ್ಠಿ’ಯಲ್ಲಿ ಮಾತಿಗೆ ಎದುರಾದಾಗ ಎಷ್ಟು ನಿಷ್ಠುರವಾಗಿ, ಎಷ್ಟು ಹರಿತವಾಗಿ ಕೇಳ್ವಿಯ ಚಾಟಿ ಬೀಸಬೇಕು, ಎಂತಹ ಪ್ರಶ್ನೆಯಿಂದ ಕಟ್ಟಿಹಾಕಿ ಹೇಗೆ ರುಬ್ಬಬಹುದೆಂದು ಒಬ್ಬ ಸಾಮಾನ್ಯ ಪತ್ರಕರ್ತನಿಗೆ ಇರಬಹುದಾದ ಬೇಸಿಕ್ ಕಾಮನ್‌ಸೆನ್ಸ್, ನಾಲೆಡ್ಜ್, ಟೆಕ್ನಿಕ್, ತಹತಹ ಮತ್ತು ಕನಿಷ್ಠ ವೃತ್ತಿ ಪ್ರಾಮಾಣಿಕತೆ ಕೂಡ ಈ ನಿರ್ಮಾಪಕನಿಗೆ ಖಂಡಿತ ಇಲ್ಲ.

#ಮೂರು: ತನ್ನ ಕಾರ್ಯಕ್ರಮಗಳಲ್ಲಿ ಹಾಗೂ ಸುದ್ದಿ ಆಯ್ಕೆ ಮತ್ತು ಪ್ರಸ್ತುತಿಯಲ್ಲಿ ಕದ್ದುಮುಚ್ಚಿ ರಾಷ್ಟ್ರೀಯವಾದವನ್ನು ಪ್ರತಿಪಾದಿಸುವ ಹಾಗೂ ರಾಷ್ಟ್ರೀಯವಾದವನ್ನೇ ಉಸಿರಾಡುತ್ತಿರುವ ಬಿಜೆಪಿ ಪರ, ಆ ಪಕ್ಷದ ಪ್ರಧಾನಿ ನರೇಂದ್ರ ಮೋದಿ ಪರ ‘ಪ್ಯಾಕೇಜ್ ಕ್ಯಾಂಪೇನ್’ ನಡೆಸುವ ಸುದ್ದಿವಾಹಿನಿಯೊಂದರ ಪ್ರಧಾನ ನಿರ್ಮಾಪಕನಿಗೆ, ಅದೇ ರಾಷ್ಟ್ರೀಯವಾದಿಗಳು ಮತ್ತು ಭಾರತೀಯ ಜನತಾ ಪಾರ್ಟಿಯು ‘ರಾಷ್ಟ್ರಭಾಷೆ’ ಎಂದು ಪ್ರತಿಪಾದಿಸುವ ಹಿಂದಿಯನ್ನು ತಪ್ಪಿಲ್ಲದೆ ಎರಡು ನಿಮಿಷ ಮಾತಾಡಲು ಬರುವುದಿಲ್ಲ.

#ನಾಲ್ಕು: ವಾಹಿನಿಯ ಮುಖ್ಯಸ್ಥನೊಬ್ಬ ಇಷ್ಟೆಲ್ಲ ಕಳಪೆಯಾಗಿ, ಅಪ್ರಾಮಾಣಿಕವಾಗಿ, ಪೆದ್ದುಪೆದ್ದಾಗಿ, ತಪ್ಪುತಪ್ಪಾಗಿ ಮಾತಾಡಿದ ಫೂಟೇಜನ್ನು ಕೂಡ ಯಾವುದೇ ನಾಚಿಕೆ ಇಲ್ಲದೆ ಪ್ರಸಾರ ಮಾಡುವ ಟಿವಿ9 ಎಂಬ ಸುದ್ದಿವಾಹಿನಿಗೆ ರವಷ್ಟೂ ಮಾನ, ಮರ್ಯಾದೆ ಇಲ್ಲ ಎಂದು ಸಹ್ಯಾದ್ರಿ ನಾಗರಾಜ್‌ ಬರೆದಿದ್ದಾರೆ.

ವಾಸ್ತವದಲ್ಲಿ ಕೊರೋನಾ ಇಡೀ ಭಾರತವನ್ನು ಕಿತ್ತು ತಿನ್ನುತ್ತಿದೆ. ಸಮಾಜದಲ್ಲಿ ನಮ್ಮ ನಡುವೆ ಇರುವ ಕಾರ್ಮಿಕ ಮತ್ತು ಕೆಳ ವರ್ಗದ ಜನರ ಬದುಕು ಮತ್ತು ಜೀವ ಕಂತುಗಳಲ್ಲಿ ಕಳೆದುಹೋಗುತ್ತಿದೆ. ನೂರಾರು ಮೈಲಿಗಳನ್ನು ನಡೆದು ನಡೆದೇ ಜನ ಕೊನೆಯುಸಿರೆಳೆಯುತ್ತಿದ್ದಾರೆ. ಆದರೆ, ಸರಿಯಾಗಿ 8 ಗಂಟೆಗೆ ಟೀವಿಯಲ್ಲಿ ಕಾಣಿಸಿಕೊಂಡು ಚಪ್ಪಾಳೆ ತಟ್ಟಿ, ದೀಪ ಹಚ್ಚಿ, ಹೂ ಸುರಿಯಿರಿ ಎಂದು ಹೇಳುವ ಪ್ರಧಾನಿ ಕಾರ್ಮಿಕರ ಸಮಸ್ಯೆಗೆ ಈವರೆಗೆ ಒಂದು ಪರಿಹಾರ ನೀಡುವಂತೆ ಕಾಣುತ್ತಿಲ್ಲ. ಕನಿಷ್ಟ ಈ ಜನರ ಕುರಿತು ಒಂದು ಪದವನ್ನೂ ಬಳಸಲು ಅವರು ಸಿದ್ದರಿಲ್ಲ.

ಪ್ರಧಾನಿಯಾಗಿ 6 ವರ್ಷ ಕಳೆದಿದೆ ಈವರೆಗೆ ಒಂದು ಪತ್ರಿಕಾಗೋಷ್ಠಿಯನ್ನೂ ಸಹ ನಡೆಸಿದವರಲ್ಲ ನಮ್ಮ ಪ್ರಧಾನಿ ನರೇಂದ್ರ ಮೋದಿ. ಆದರೆ ಈ ಸಮಸ್ಯೆ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಾದೇಶಿಕ ಸುದ್ದಿ ವಾಹಿನಿಗಳ ಸಂಪಾದಕರ ಜೊತೆಗೆ ಆನ್ಲೈನ್‌ನಲ್ಲೊಂದು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿದ್ದರು. ಒಂದು ಉತ್ತಮ ಸಂವಾದಕ್ಕೆ ನಾಂದಿ ಹಾಡಿದ್ದರು. ಆದರೆ ಕನ್ನಡ ಸುದ್ದಿವಾಹಿನಿಗಳು ಅದನ್ನೂ ಸರಿಯಾಗಿ ಬಳಸಿಕೊಳ್ಳಲಿಲ್ಲ.

ಈ ಹಿಂದೆ ಟಿವಿ9 ಸುದ್ದಿವಾಹಿನಿಯಲ್ಲಿ ಭಗವಾನ್ ಜೊತೆಗೆ ಚರ್ಚೆ ಮತ್ತು ನಾಗೇಂದ್ರಾಚಾರ್ಯ ಎಂಬ ಅನಾಮಿಕ ಆಸಾಮಿಗೆ ಬಾಯಿಗೆ ಬಂದಂತೆ ಬೈದು ನಂತರ ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರಿಂದ ಛೀಮಾರಿ ಹಾಕಿಸಿಕೊಂಡ ನಂತರ ಇದೀಗ ಮತ್ತೆ ಜನರಿಂದ ಛೀಮಾರಿ ಹಾಕಿಸಿಕೊಳ್ಳುವ ಸರದಿಗೆ ಬಂದು ನಿಂತಿದ್ದಾರೆ.


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮಹಾನ್ ಪತ್ರಕರ್ತ ರಂಗನಾಥ ಭಾರದ್ವಾಜ್ ಗೆ ಪತ್ರಕರ್ತನ ವೃತ್ತಿಯ ಪ್ರಾಥಮಿಕ ಜ್ಞಾನವೂ ಇಲ್ಲ ಎಂಬುದು ಸಾಬೀತಾಗಿದೆ.

  2. ನಾಯಿಯ ಥರ ನೀ ಬೊಗಳ ಬೇಡ .. ನೀನು ನಾಯಿಗೂ ಸಮನಲ್ಲ ..
    ನಾನು ಸಿಂಹ ಎಂದು ತಿಳಿದು ಗರ್ಜಿಸಿ ಬೇಡ .. ನೀನು ಅದರ ಉಗುರಿಗೂ ಸಮನಲ್ಲ ..
    ಮೊದಲು ನೀ ಯಾರೆಂದು ತಿಳಿಯೋ ರಂಗನಾಥ…
    ಮೊದಲು ಬಿಟ್ಟು ಬಿಡು ನಿನ್ನ ಮಂಗನಾಟ.. ನೀವು ತುಂಬಾ ದೊಡ್ಡ ಮಾತುಗಾರರು ನಿಮ್ಮ ಮಂಗ ನಾಟವನ್ನು ಬಿಟ್ಟರೆ ನಿಮಗೆ ಒಳ್ಳೆಯ ಭವಿಷ್ಯ ಇದೆ …
    ಹೆಸರು ಮಾಡಲು ಹೋಗಿ ಕೆಸರಲ್ಲಿ ಬಿದ್ದಲೊ ರಂಗನಾಥ… Very bad luck…

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...