Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...