Homeಮುಖಪುಟಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೆಲವೇ ದಿನದ ಹಿಂದೆ ಜೊಮ್ಯಾಟೋ ಕೂಡಾ ತನ್ನ ಉದ್ಯೋಗಿಗಳ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ನಷ್ಟಕ್ಕೆ ತುತ್ತಾಗಿರುವುದರಿಂದ ಮುಂದಿನ ದಿನಗಳಲ್ಲಿ 1,100 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಆಹಾರ ವಿತರಣಾ ಕಂಪನಿ ಸ್ವಿಗ್ಗಿ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ಲಾಕ್‌ಡೌನ್‌ನ ನಾಲ್ಕನೇ ಹಂತಕ್ಕೆ ದೇಶ ಪ್ರವೇಶಿಸುತ್ತಿದ್ದಂತೆ ಸ್ವಿಗ್ಗಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವ ಸುದ್ದಿ ಬರುತ್ತಿವೆ. “ದುರದೃಷ್ಟಕರವಾಗಿ ಉದ್ಯೋಗಿಗಳನ್ನು ಕಡಿಮೆಗೊಳಿಸುವ ಒತ್ತಡ ಎದುರಿಸಬೇಕಾಗಿರುವುದರಿಂದ ಇಂದು ಸ್ವಿಗ್ಗಿಗೆ ಅತ್ಯಂತ ದುಃಖದ ದಿನವಾಗಿದೆ” ಎಂದು ಸ್ವಿಗ್ಗಿ ಸಹ-ಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೆಟಿ ಅವರು ಮೇ 18 ರಂದು ಕಂಪನಿಯ ಉದ್ಯೋಗಿಗಳಿಗೆ ಇಮೇಲ್‌ನಲ್ಲಿ ಬರೆದಿದ್ದಾರೆ ಎಂದು ಕಂಪನಿಯ ಬ್ಲಾಗ್ ವರದಿ ಮಾಡಿದೆ.

ಕೊರೊನಾ ಪ್ರಾರಂಭವಾದಾಗಿನಿಂದ ಕಂಪನಿಯು ತನ್ನ ಅಡುಗೆ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ವಜಾಗೊಳ್ಳುತ್ತಿರುವ ಸಂಖ್ಯೆಯೂ ಸ್ವಿಗ್ಗಿ ಕಂಪೆನಿಯ 14% ಸಿಬ್ಬಂದಿಗಳಷ್ಟಿದೆ.

ಕೆಲವೇ ದಿನದ ಹಿಂದೆ ಮತ್ತೊಂದು ರೆಸ್ಟೋರೆಂಟ್ ಅಗ್ರಿಗೇಟ್ ಕಂಪೆನಿ ಜೊಮ್ಯಾಟೋ ತನ್ನ ಉದ್ಯೋಗಿಗಳಲ್ಲಿ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

ಮುಂದಿನ ಕೆಲವು ದಿನಗಳಲ್ಲಿ ಕಂಪನಿಯ ಎಚ್‌ಆರ್‌ ತಂಡವು ಉದ್ಯೋಗ ಕಳೆದುಕೊಳ್ಳುವ ನೌಕರರನ್ನು ಸಂಪರ್ಕಿಸುತ್ತದೆ ಎಂದಿರುವ ಅವರು, ಉದ್ಯೋಗ ಕಳೆದುಕೊಳ್ಳುತ್ತಿರುವ ಸಿಬ್ಬಂದಿಗೆ ಸ್ವಿಗ್ಗಿ “ಉತ್ತಮ ಆರ್ಥಿಕ, ಭಾವನಾತ್ಮಕ ಮತ್ತು ವೃತ್ತಿ-ಸಂಬಂಧಿತ ಬೆಂಬಲವನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಉದ್ಯೋಗಿಗಳಿಗೆ ಸ್ವಿಗ್ಗಿ ಕನಿಷ್ಠ ಮೂರು ತಿಂಗಳ ಸಂಬಳವನ್ನು ನೀಡುತ್ತದೆ. ಇದರ ಜೊತೆಗೆ, ಇಷ್ಟು ವರ್ಷ ಕೆಲಸ ಮಾಡಿದವರಿಗೆ ವರ್ಷಕ್ಕೆ ಒಂದು ತಿಂಗಳಿನಂತೆ ಸಂಬಳ ನೀಡಲಾಗುವುದು. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ.

ಈ ಉದ್ಯೋಗಿಗಳ ಕುಟುಂಬಗಳಿಗೆ ಅಸ್ತಿತ್ವದಲ್ಲಿರುವ ವೈದ್ಯಕೀಯ ವಿಮಾ ರಕ್ಷಣೆಯನ್ನು ಡಿಸೆಂಬರ್ 31, 2020 ರವರೆಗೆ ವಿಸ್ತರಿಸಿದೆ ಎಂದು ಕಂಪನಿ ತಿಳಿಸಿದೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...