Homeಮುಖಪುಟಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೊರೊನಾ ಎಫೆಕ್ಟ್: 1,100 ಉದ್ಯೋಗಿಗಳನ್ನು ವಜಾಗೊಳಿಸಲಿರುವ ಸ್ವಿಗ್ಗಿ

ಕೆಲವೇ ದಿನದ ಹಿಂದೆ ಜೊಮ್ಯಾಟೋ ಕೂಡಾ ತನ್ನ ಉದ್ಯೋಗಿಗಳ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ನಷ್ಟಕ್ಕೆ ತುತ್ತಾಗಿರುವುದರಿಂದ ಮುಂದಿನ ದಿನಗಳಲ್ಲಿ 1,100 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಆಹಾರ ವಿತರಣಾ ಕಂಪನಿ ಸ್ವಿಗ್ಗಿ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಯಲು ಲಾಕ್‌ಡೌನ್‌ನ ನಾಲ್ಕನೇ ಹಂತಕ್ಕೆ ದೇಶ ಪ್ರವೇಶಿಸುತ್ತಿದ್ದಂತೆ ಸ್ವಿಗ್ಗಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವ ಸುದ್ದಿ ಬರುತ್ತಿವೆ. “ದುರದೃಷ್ಟಕರವಾಗಿ ಉದ್ಯೋಗಿಗಳನ್ನು ಕಡಿಮೆಗೊಳಿಸುವ ಒತ್ತಡ ಎದುರಿಸಬೇಕಾಗಿರುವುದರಿಂದ ಇಂದು ಸ್ವಿಗ್ಗಿಗೆ ಅತ್ಯಂತ ದುಃಖದ ದಿನವಾಗಿದೆ” ಎಂದು ಸ್ವಿಗ್ಗಿ ಸಹ-ಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೆಟಿ ಅವರು ಮೇ 18 ರಂದು ಕಂಪನಿಯ ಉದ್ಯೋಗಿಗಳಿಗೆ ಇಮೇಲ್‌ನಲ್ಲಿ ಬರೆದಿದ್ದಾರೆ ಎಂದು ಕಂಪನಿಯ ಬ್ಲಾಗ್ ವರದಿ ಮಾಡಿದೆ.

ಕೊರೊನಾ ಪ್ರಾರಂಭವಾದಾಗಿನಿಂದ ಕಂಪನಿಯು ತನ್ನ ಅಡುಗೆ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ವಜಾಗೊಳ್ಳುತ್ತಿರುವ ಸಂಖ್ಯೆಯೂ ಸ್ವಿಗ್ಗಿ ಕಂಪೆನಿಯ 14% ಸಿಬ್ಬಂದಿಗಳಷ್ಟಿದೆ.

ಕೆಲವೇ ದಿನದ ಹಿಂದೆ ಮತ್ತೊಂದು ರೆಸ್ಟೋರೆಂಟ್ ಅಗ್ರಿಗೇಟ್ ಕಂಪೆನಿ ಜೊಮ್ಯಾಟೋ ತನ್ನ ಉದ್ಯೋಗಿಗಳಲ್ಲಿ ಶೇಕಡಾ 13 ರಷ್ಟು ಜನರನ್ನು ವಜಾಗೊಳಿಸಿತ್ತು.

ಮುಂದಿನ ಕೆಲವು ದಿನಗಳಲ್ಲಿ ಕಂಪನಿಯ ಎಚ್‌ಆರ್‌ ತಂಡವು ಉದ್ಯೋಗ ಕಳೆದುಕೊಳ್ಳುವ ನೌಕರರನ್ನು ಸಂಪರ್ಕಿಸುತ್ತದೆ ಎಂದಿರುವ ಅವರು, ಉದ್ಯೋಗ ಕಳೆದುಕೊಳ್ಳುತ್ತಿರುವ ಸಿಬ್ಬಂದಿಗೆ ಸ್ವಿಗ್ಗಿ “ಉತ್ತಮ ಆರ್ಥಿಕ, ಭಾವನಾತ್ಮಕ ಮತ್ತು ವೃತ್ತಿ-ಸಂಬಂಧಿತ ಬೆಂಬಲವನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಉದ್ಯೋಗಿಗಳಿಗೆ ಸ್ವಿಗ್ಗಿ ಕನಿಷ್ಠ ಮೂರು ತಿಂಗಳ ಸಂಬಳವನ್ನು ನೀಡುತ್ತದೆ. ಇದರ ಜೊತೆಗೆ, ಇಷ್ಟು ವರ್ಷ ಕೆಲಸ ಮಾಡಿದವರಿಗೆ ವರ್ಷಕ್ಕೆ ಒಂದು ತಿಂಗಳಿನಂತೆ ಸಂಬಳ ನೀಡಲಾಗುವುದು. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದು ಕಂಪನಿ ತಿಳಿಸಿದೆ.

ಈ ಉದ್ಯೋಗಿಗಳ ಕುಟುಂಬಗಳಿಗೆ ಅಸ್ತಿತ್ವದಲ್ಲಿರುವ ವೈದ್ಯಕೀಯ ವಿಮಾ ರಕ್ಷಣೆಯನ್ನು ಡಿಸೆಂಬರ್ 31, 2020 ರವರೆಗೆ ವಿಸ್ತರಿಸಿದೆ ಎಂದು ಕಂಪನಿ ತಿಳಿಸಿದೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...